Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ಕಾರಿ ಶಾಲೆಯ ಮಕ್ಕಳೇ ಪ್ರತಿಭಾವಂತರು :ಸಚಿವ ಶಿವಾನಂದ
(ರಾಜ್ಯ ) ಜಿಲ್ಲೆ

ಸರ್ಕಾರಿ ಶಾಲೆಯ ಮಕ್ಕಳೇ ಪ್ರತಿಭಾವಂತರು :ಸಚಿವ ಶಿವಾನಂದ

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಸರ್ಕಾರಿ ಶಾಲೆಗಳಲ್ಲಿ ಕಲಿಯುವಂತಹ ಮಕ್ಕಳು ಸಹ ಪ್ರತಿಭಾವಂತರು ಇರುವದನ್ನು ಕಾಣುತ್ತೇವೆ. ಈಚೆಗೆ ಹೆಣ್ಣುಮಕ್ಕಳಿಗೆ ಶಿಕ್ಷಣ ಕಲಿಯಲು ಹೆಚ್ಚು ಅವಕಾಶ ನೀಡಿದ್ದರಿಂದಾಗಿ ಶೇ.೭೦ ರಷ್ಟು ವಿದ್ಯಾರ್ಥಿನಿಯರು ಹೆಚ್ಚು ಉತ್ತೀರ್ಣರಾಗುವದನ್ನು ಕಾಣುತ್ತೇವೆ. ಇದೊಂದು ಉತ್ತಮ ಬೆಳವಣಿಗೆಯಾಗಿದೆ ಎಂದು ಸಕ್ಕರೆ, ಜವಳಿ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ಪಟ್ಟಣದ ಬಸವೇಶ್ವರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿರುವ ಭಾರತ ಸೇವಾದಳದ ಸಭಾಂಗಣದಲ್ಲಿ ಲಾಡ್ಲಿ ಫೌಂಡೇಶನ್ ಟ್ರಸ್ಟ್ ಶುಕ್ರವಾರ ಹಮ್ಮಿಕೊಂಡಿದ್ದ ಬಸವೇಶ್ವರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಿಟ್ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣಕ್ಕೆ ಸಿಗುವ ಶೇ.೧೦೦ ರಷ್ಟು ಅನುದಾನದಲ್ಲಿ ಶೇ.೬೦ ರಷ್ಟು ಶಿಕ್ಷಕರ ವೇತನ, ಇತರೇ ಅಧಿಕಾರಿಗಳ ವೇತನಕ್ಕೆ ಹೋಗುತ್ತದೆ. ಉಳಿದ ಶೇ. ೪೦ ರಷ್ಟು ಅನುದಾನದಲ್ಲಿ ಶಾಲೆಗಳ ಕಟ್ಟಡ ನಿರ್ಮಾಣ ಸೇರಿದಂತೆ ಶಾಲೆಗಳಿಗೆ ಎಲ್ಲ ಸೌಲಭ್ಯ ಒದಗಿಸಲು ಬಳಕೆ ಮಾಡಬೇಕಿದೆ. ಸರ್ಕಾರದ ಸರ್ಕಾರಿ ಶಾಲೆಗಳನ್ನು ಉಳಿಸಿಕೊಂಡು ಹೋಗುವ ಜವಾಬ್ದಾರಿಯಿದೆ. ಈ ಮೊದಲು ಖಾಸಗಿ ಶಾಲೆಗಳು ಶಿಕ್ಷಣವನ್ನು ಪರೋಪಕಾರದ ಕಾಯಕದ ರೀತಿಯಲ್ಲಿ ನೀಡುತ್ತಿದ್ದವು. ಇಂದು ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯಬಹುದು. ಆದರೆ ಇಂದು ಖಾಸಗಿ ಶಾಲೆಗಳು ಲಾಭ ಮಾಡಿಕೊಳ್ಳಲು ಭರದಲ್ಲಿ ಶೋಷಣೆ ಆಗುತ್ತಿರುವುದು ವಿಷಾದಕರ ಸಂಗತಿ. ಅದೇ ಸರ್ಕಾರಿ ಶಾಲೆಗಳಲ್ಲಿ ಹಣ ತೆಗೆದುಕೊಳ್ಳುತ್ತಿಲ್ಲ. ಇಲ್ಲಿಯೂ ಉತ್ತಮ ಶಿಕ್ಷಣವನ್ನು ನೀಡಲಾಗುತ್ತಿದೆ. ಈ ಶಾಲೆಗಳಲ್ಲಿಯೂ ಕಲಿಯುವ ವಿದ್ಯಾರ್ಥಿಗಳು ಪ್ರತಿಭಾವಂತರಾಗಿರುವದನ್ನು ಕಾಣುತ್ತೇವೆ ಎಂದರು.
ಲಾಡ್ಲಿ ಫೌಂಡೇಶನ್ ಟ್ರಸ್ಟ್ ಬಸವನಬಾಗೇವಾಡಿ ತಾಲೂಕಿನಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣ ಮಾಡುವದು ಸೇರಿದಂತೆ ಸರ್ಕಾರಿ ಶಾಲೆಗೆ ಮಕ್ಕಳು ಹೆಚ್ಚು ಬರುವಂತಾಗುವ ಉದ್ದೇಶದಿಂದ ಶೈಕ್ಷಣಿಕ ಕಿಟ್ ವಿತರಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ. ನಮ್ಮ ತಾಲೂಕಿಗೆ ಈ ಟ್ರಸ್ಟ್ ಹೆಚ್ಚು ಒತ್ತು ನೀಡಿದೆ. ಈ ಟ್ರಸ್ಟ್ ನಿರ್ಮಿಸುವ ಶೌಚಾಲಯವನ್ನು ಹುಡುಗಿಯರು ವಿಶೇಷವಾಗಿ ಸದುಪಯೋಗ ಪಡೆದುಕೊಳ್ಳಬೇಕು. ಶೌಚಾಲಯಗಳನ್ನು ವಿದ್ಯಾರ್ಥಿಗಳು, ಶಿಕ್ಷಕ ಬಾಂಧವರು ಸ್ಪಚ್ಛವಾಗಿಟ್ಟುಕೊಳ್ಳುವಂತಾಗಬೇಕು. ಸ್ವಚ್ಛತೆಯೇ ದೇವರು ಎಂಬುವದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕಿದೆ. ದೇವರನ್ನು ನಾವು ಸ್ವಚ್ಛ ಜಾಗೆಯಲ್ಲಿ ಇಟ್ಟು ಜಾಗೃತ ಮಾಡಿ ಹಾರ ಹಾಕಿ ಪೂಜೆ ಸಲ್ಲಿಸಿದಾಗ ಮಾತ್ರ ನಾವು ಜಾಗೃತರಾಗಲು ಸಾಧ್ಯವಿದೆ ಎಂಬುದನ್ನು ನಾವೆಲ್ಲರೂ ಅರಿತುಕೊಳ್ಳಬೇಕಿದೆ ಎಂದರು.
ರಾಷ್ಟ್ರಪ್ರಶಸ್ತಿ ವಿಜೇತ ಡಾ.ಜಾವೀದ ಜಮಾದಾರ ಮಾತನಾಡಿ, ಲಾಡ್ಲಿ ಫೌಂಡೇಶನ್ ಲಾಭರಹಿತ ಸಂಸ್ಥೆಯಾಗಿದೆ. ದೇಶದಲ್ಲಿಯೇ ಪ್ರಥಮ ಬಾರಿಗೆ ಸರ್ಕಾರಿ ಶಾಲೆಗಳಲ್ಲಿ ರೂ.೧೩ ಲಕ್ಷ ವೆಚ್ಚದಲ್ಲಿ ಹೈಟೆಕ್ ಶೌಚಾಲಯವನ್ನು ಸರ್ಕಾರಿ ಶಾಲೆಗಳಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಈ ಅತ್ಯಾಧುನಿಕ ಶೌಚಾಲಯಗಳನ್ನು ಬಳಕೆ ಮಾಡುವಾಗ ಸ್ವಚ್ಛತೆ ಕಾಪಾಡದೇ ಹೋದರೆ ನಮ್ಮ ಸಂಸ್ಥೆಗೆ ಮೇಸೇಜ್ ಬರುತ್ತದೆ. ಶೌಚಾಲಯಗಳು ಸದುಪಯೋಗವಾಗುವಂತೆ ಫೌಂಡೇಶನ್ ಸದಾ ನಿಗಾವಹಿಸುತ್ತದೆ. ಈ ಶೌಚಾಲಯ ವಿಶೇಷವಾಗಿ ಹುಡುಗಿಯರಿಗೆ ಸದುಪಯೋಗವಾಗುತ್ತದೆ. ಗುಜರಾತ, ರಾಜಸ್ತಾನ, ಜಮ್ಮು-ಕಾಶ್ಮೀರ ರಾಜ್ಯಗಳಲ್ಲಿ ಇಂತಹ ಶೌಚಾಲಯಗಳನ್ನು ಈ ಫೌಂಡೇಶನ್ ನಿರ್ಮಿಸಿದೆ. ಇದನ್ನು ಗಮನಿಸಿ ಉತ್ತರಪ್ರದೇಶ ರಾಜ್ಯ ಸರ್ಕಾರ ರೂ. ೫೦ ಕೋಟಿ ವೆಚ್ಚದ ಯೋಜನೆಯನ್ನು ಈ ಫೌಂಡೇಶನಗೆ ನೀಡಿದೆ ಎಂದರು.
ಜಿಲ್ಲೆಯಲ್ಲಿ ೨೨ ಸರ್ಕಾರಿ ಶಾಲೆಗಳಲ್ಲಿ ಅತ್ಯಾಧುನಿಕ ಶೌಚಾಲಯ ನಿರ್ಮಿಸುವ ಕಾರ್ಯ ಮಾಡಲಾಗುತ್ತಿದೆ. ಈ ಶಾಲೆಯಲ್ಲಿಯೂ ಒಂದು ಶೌಚಾಲಯ ನಿರ್ಮಾಣವಾಗುತ್ತಿದೆ. ಇದು ಕೊನೆ ಹಂತದಲ್ಲಿದೆ. ಶೀಘ್ರವೇ ಇದು ವಿದ್ಯಾರ್ಥಿಗಳ ಉಪಯೋಗಕ್ಕೆ ಲಭ್ಯವಾಗಲಿದೆ. ಈ ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ನಮ್ಮ ಸಂಸ್ಥೆಯ ಒದಗಿಸಲು ಮುಂದಾಗಿದೆ. ಬಸವನಬಾಗೇವಾಡಿ, ಮನಗೂಳಿ, ಉಕ್ಕಲಿ ಗ್ರಾಮದಲ್ಲಿರುವ ಸರ್ಕಾರಿ ಶಾಲೆಗಳಲ್ಲಿರುವ ಶೌಚಾಲಯಗಳನ್ನು ರಿಪೇರಿ ಮಾಡಲಾಗುತ್ತದೆ. ಕೂಡಗಿ ಎನ್‌ಟಿಪಿಸಿಯ ಸಿಆರ್‌ಎಸ್ ಅನುದಾನ ಬೇರೆಡೆ ಹೋಗುತ್ತಿದೆ. ಈ ಅನುದಾನ ಮತಕ್ಷೇತ್ರ ಬಿಟ್ಟು ಬೇರೆಡೆ ಹೋಗದಂತೆ ಸಚಿವ ಶಿವಾನಂದ ಪಾಟೀಲರು ಗಮನಹರಿಸಬೇಕೆಂದು ಮನವಿ ಮಾಡಿಕೊಂಡರು.
ಬಸವೇಶ್ವರ ಸರ್ಕಾರಿ ಪಪೂ ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯಶಿಕ್ಷಕ ರಮೇಶ ಪೂಜಾರಿ ಮಾತನಾಡಿ, ೧೯೪೬ ರಲ್ಲಿ ಆರಂಭವಾದ ಈ ಶಾಲೆಯ ಕಟ್ಟಡಗಳು ಬಹಳ ಶಿಥಿಲಾವಸ್ಥೆಯಲ್ಲಿದ್ದವು.ಇದೀಗ ರೂ. ೫೬ ಲಕ್ಷ ವೆಚ್ಚದಲ್ಲಿ ಸಚಿವ ಶಿವಾನಂದ ಪಾಟೀಲರು ಎಲ್ಲ ಕೋಣೆಗಳು ದುರಸ್ತಿ ಮಾಡುವ ಕಾಮಗಾರಿ ಹಮ್ಮಿಕೊಂಡಿದ್ದಾರೆ. ಈ ಕಾಲೇಜು ೪೨ ಕೋಣೆಗಳನ್ನು ಹೊಂದಿದೆ. ಬಹುತೇಕ ಎಲ್ಲ ಕಾರ್ಯಕ್ರಮಗಳು ಕಾಲೇಜಿನ ಆವರಣದಲ್ಲಿ ಜರುಗುವದರಿಂದಾಗಿ ಸಭಾಮಂಟಪದ ಅಗತ್ಯವಿದೆ. ಸಚಿವರು ಇದನ್ನು ನಿರ್ಮಿಸಬೇಕೆಂದು ಮನವಿ ಮಾಡಿಕೊಂಡರು.
ಲಾಡ್ಲಿ ಫೌಂಡೇಶನ್ ಟ್ರಸ್ಟ್‌ರಾಯಭಾರಿ ಶಿಪಾ ಜಮಾದಾರ ಅವರು ಪ್ರಾಸ್ತವಿಕವಾಗಿ ಮಾತನಾಡಿದ ಅವರು, ನೀರು, ನೈರ್ಮಲ್ಯ ಮತ್ತು ಆರೋಗ್ಯ ಈ ಮೂರು ವಿಷಯಗಳು ನಮ್ಮನ್ನು ಪ್ರತಿದಿನ ಆರೋಗ್ಯವಾಗಿರಿಸಲು ಸಹಾಯ ಮಾಡುತ್ತವೆ. ಶೌಚಾಲಯ ಬಳಕೆ ಮಾಡುವಂತಾಗಬೇಕು. ಅದನ್ನು ಬಳಸಿದ ನಂತರ ಯಾವಾಗಲೂ ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು. ಕೈಗಳನ್ನು ಯಾವಾಗಲೂ ಸ್ವಚ್ಛವಾಗಿಟ್ಟುಕೊಳ್ಳಬೇಕು. ಪ್ರತಿಯೊಬ್ಬರೂ ಆರೋಗ್ಯಕರ ಜೀವನ ಕಳೆಯುವಂತಾಗಬೇಕೆಂದರು.
ಅಧ್ಯಕ್ಷತೆಯನ್ನು ಕಾಲೇಜಿನ ಎಸ್‌ಡಿಎಂಸಿ ಉಪಾಧ್ಯಕ್ಷ ಶೇಖರ ಗೊಳಸಂಗಿ ವಹಿಸಿದ್ದರು. ವೇದಿಕೆಯಲ್ಲಿ ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ, ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ, ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ ಇತರರು ಇದ್ದರು. ಸರಿತಾ ಚಕ್ರಸಾಲಿ ಸ್ವಾಗತಿಸಿ,ನಿರೂಪಿಸಿದರು. ಇದೇ ಸಂದರ್ಭದಲ್ಲಿ ಸಾಂಕೇತಿಕವಾಗಿ ಸಚಿವರು ವಿದ್ಯಾರ್ಥಿಗಳಿಗೆ ಲಾಡ್ಲಿ ಫೌಂಡೇಶನ್ ಟ್ರಸ್ಟ್‌ದ ಶೈಕ್ಷಣಿಕ ಕಿಟ್ ಬ್ಯಾಗ್ ವಿತರಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.