Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 31, 2026

ಜೆಡಿಎಸ್ ಗೆಲ್ಲಲು ಕಾಂಗ್ರೆಸ್ ಬಿಡುವುದಿಲ್ಲ :ಬಿ.ವಿ.ಬಸವರಾಜು

ಬಿ.ಎಲ್.ಡಿ.ಇ ಡೀಮ್ಡ್ ವಿವಿಯಲ್ಲಿ ಭಗವಾನ್ ಮಹಾವೀರ ಜಯಂತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪತ್ರಿಕೋದ್ಯಮ ಒಂದು ಸಮೃದ್ಧ ಹಾಗೂ ಪ್ರಭಾವಶಾಲಿ ಕ್ಷೇತ್ರ
(ರಾಜ್ಯ ) ಜಿಲ್ಲೆ

ಪತ್ರಿಕೋದ್ಯಮ ಒಂದು ಸಮೃದ್ಧ ಹಾಗೂ ಪ್ರಭಾವಶಾಲಿ ಕ್ಷೇತ್ರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ’ಆರಂಭ ೨೦೨೫’ ಉದ್ಘಾಟಿಸಿದ ಹಿರಿಯ ಪತ್ರಕರ್ತ ಬಸವರಾಜ ಸಂಪಳ್ಳಿ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪತ್ರಿಕಾರಂಗದಲ್ಲಿ ಯಶಸ್ಸು ಸಾಧಿಸಲು ಕೇವಲ ಪದವಿಯೇ ಸಾಲದು, ಅದರ ಜೊತೆಗೆ ಕೌಶಲ್ಯಗಳನ್ನು ಬೆಳಸಿಕೊಳ್ಳಬೇಕು ಎಂದು ವಿಜಯಪುರದ ಪ್ರಜಾವಾಣಿ ಪತ್ರಿಕೆಯ ಹಿರಿಯ ಜಿಲ್ಲಾ ವರದಿಗಾರ ಬಸವರಾಜ ಸಂಪಳ್ಳಿ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿನಿಯರಿಗಾಗಿ ಸೋಮವಾರ ಆಯೋಜಿಸಿದ್ದ ‘ಆರಂಭ ೨೦೨೫’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹೊಸ ತಂತ್ರಜ್ಞಾನ, ಸಾಮಾಜಿಕ ಮಾಧ್ಯಮದ ಬಳಕೆ, ಮತ್ತು ಹೊಸ ಆವಿಷ್ಕಾರಗಳೊಂದಿಗೆ ನಿಮ್ಮ ಸಾಮರ್ಥ್ಯವನ್ನು ಹೆಚ್ಚಿಸಬೇಕು. ನಿರಂತರ ಅಧ್ಯಯನ, ಹೊಸತನವನ್ನು ಅಳವಡಿಸಿಕೊಳ್ಳುವ ಮನೋಭಾವ, ಮತ್ತು ಕಠಿಣ ಪರಿಶ್ರಮದಿಂದ ಈ ರಂಗದಲ್ಲಿ ಯಶಸ್ಸು ಪಡೆಯುವುದು ಸಂಪೂರ್ಣ ಸಾಧ್ಯ. ಪತ್ರಿಕೋದ್ಯಮ ಒಂದು ಸಮೃದ್ಧ ಹಾಗೂ ಪ್ರಭಾವಶಾಲಿ ಕ್ಷೇತ್ರವಾಗಿದ್ದು, ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತದೆ. ಈ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಭಾಷಾ ಪ್ರಾವೀಣ್ಯತೆಯು ಅತ್ಯಂತ ಅಗತ್ಯ. ಕೇವಲ ದಿನಪತ್ರಿಕೆಗಳಲ್ಲಿ ಸುದ್ಧಿ ಓದುವುದಲ್ಲದೇ ಇದರ ಜೊತೆಗೆ ಸಂಪಾದಕೀಯ, ಅಂಕಣ, ಸಾಹಿತ್ಯದ ಅಧ್ಯಯನ ನಡೆಸುವುದರಿಂದ ಭಾಷಾ ಸಾಮರ್ಥ್ಯವನ್ನು ವೃದ್ಧಿ ಮಾಡಿಕೊಳ್ಳಬಹುದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಮಹಿಳಾ ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ ಓಂಕಾರ ಕಾಕಡೆ ಮಾತನಾಡಿದರು.
ಇದೇ ಸಂದರ್ಭದಲ್ಲಿ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ತಹಮೀನಾ ಕೋಲಾರ ಮತ್ತು ಸಂದೀಪ್ ನಾಯಕ ಮಾತನಾಡಿದರು.
ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಸಂಶೋಧನಾ ವಿದ್ಯಾರ್ಥಿನಿಯರು ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರಾದ ಸುನಂದ ಪಟ್ಟಣಶೆಟ್ಟಿ ಸ್ವಾಗತಿಸಿದರು. ಶಿಲ್ಪಾ ಪವಾರ ಅತಿಥಿಗಳನ್ನು ಪರಿಚಯಿಸಿದರು. ಅಸ್ಮಾ ಪಾಲ್ಟನ ನಿರೂಪಿಸಿದರು. ರತ್ನಾಂಜಲಿ ವಾಲಿಕಾರ ವಂದಿಸಿದರು.

“ರಾಜ್ಯದಲ್ಲೇ ಅತ್ಯಂತ ಮುಂಚೂಣಿಯಲ್ಲಿರುವ ಮಾಧ್ಯಮ ಅಧ್ಯಯನ ವಿಭಾಗ ಎಂದರೆ ಅದು ನಮ್ಮ ಮಾಧ್ಯಮ ಅರ್ಧಯಯನ ವಿಭಾಗ. ನಿರಂತರ ಹೊಸತನ್ನು ಕಲಿಯಲು ಮತ್ತು ಎಲ್ಲ ಕೌಶಲಗಳನ್ನು ತಮ್ಮದಾಗಿಸಲು ಅನೇಕ ಅವಕಾಶಗಳನ್ನು ಒದಗಿಸುತ್ತದೆ. ಈ ರಂಗದಲ್ಲಿ ಎಲ್ಲ ಕೌಶಲ್ಯಗಳನ್ನು ರೂಢಿಸಿಕೊಂಡು, ನೈತಿಕತೆ, ಶಿಸ್ತು, ಮತ್ತು ಕ್ರಿಯಾಶೀಲತೆಯನ್ನು ಹೊಂದಬೇಕು. ನಿರಂತರ ಅಭ್ಯಾಸ, ಹೊಸ ತಂತ್ರಜ್ಞಾನಗಳ ಅರಿವು, ಮತ್ತು ಸಮರ್ಥ ನಿರ್ವಹಣೆಯ ಮೂಲಕ ಯಶಸ್ಸು ಕಾಣಬೇಕು.”

– ಪ್ರೊ.ಓಂಕಾರ ಕಾಕಡೆ
ಮುಖ್ಯಸ್ಥರು, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ

BIJAPUR NEWS public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 31, 2026

ಜೆಡಿಎಸ್ ಗೆಲ್ಲಲು ಕಾಂಗ್ರೆಸ್ ಬಿಡುವುದಿಲ್ಲ :ಬಿ.ವಿ.ಬಸವರಾಜು

ಬಿ.ಎಲ್.ಡಿ.ಇ ಡೀಮ್ಡ್ ವಿವಿಯಲ್ಲಿ ಭಗವಾನ್ ಮಹಾವೀರ ಜಯಂತಿ

ಭಗವಾನ್ ಮಹಾವೀರರ ಸಂದೇಶ-ತತ್ವಾದರ್ಶ ಅರ್ಥೈಸಿಕೊಳ್ಳಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 31, 2026
    In ದಿನಪತ್ರಿಕೆ
  • ಜೆಡಿಎಸ್ ಗೆಲ್ಲಲು ಕಾಂಗ್ರೆಸ್ ಬಿಡುವುದಿಲ್ಲ :ಬಿ.ವಿ.ಬಸವರಾಜು
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಡೀಮ್ಡ್ ವಿವಿಯಲ್ಲಿ ಭಗವಾನ್ ಮಹಾವೀರ ಜಯಂತಿ
    In (ರಾಜ್ಯ ) ಜಿಲ್ಲೆ
  • ಭಗವಾನ್ ಮಹಾವೀರರ ಸಂದೇಶ-ತತ್ವಾದರ್ಶ ಅರ್ಥೈಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಗ್ರಾಪಂ ಪುನರ್ರಚನೆಗೊಳಿಸಿ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ
    In (ರಾಜ್ಯ ) ಜಿಲ್ಲೆ
  • ಅಕ್ಷರ ಜಾತ್ರೆಯಲ್ಲಿ ಆರಕ್ಷಕರಿಗೂ ಅವಕಾಶ ನೀಡಿ:ಮೌಲಾಲಿ
    In (ರಾಜ್ಯ ) ಜಿಲ್ಲೆ
  • ಸಂಘಟನಾ ಕಾರ್ಯದರ್ಶಿಯಾಗಿ ಸಿಪಾಯಿ ನೇಮಕ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಕೇಂದ್ರಗಳ ವ್ಯವಸ್ಥೆಗೆ ವಿದ್ಯಾರ್ಥಿಗಳಿಂದ ಹಣ ವಸೂಲಿ ಆರೋಪ!
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮನಿಯಾರ ಅವಿರೋಧವಾಗಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಎ.೨೭-೨೮ ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.