Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪಿಎಲ್‌ಡಿಇ ಬ್ಯಾಂಕಿಗೆ ಪಟ್ಟಣಶೆಟ್ಟಿ ಮರುಆಯ್ಕೆ :ವಿಜಯೋತ್ಸವ
(ರಾಜ್ಯ ) ಜಿಲ್ಲೆ

ಪಿಎಲ್‌ಡಿಇ ಬ್ಯಾಂಕಿಗೆ ಪಟ್ಟಣಶೆಟ್ಟಿ ಮರುಆಯ್ಕೆ :ವಿಜಯೋತ್ಸವ

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪಟ್ಟಣದ ತಾಲೂಕು ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ಆಡಳಿತ ಮಂಡಳಿಯ ಐದು ಸ್ಥಾನಗಳಿಗೆ ಮಂಗಳವಾರ ಜರುಗಿದ ಚುನಾವಣೆಯಲ್ಲಿ ಬಿನ್ ಸಾಲಗಾರ ಸಾಮಾನ್ಯ ಭಾಗ-೧೨ ಕ್ಷೇತ್ರದಿಂದ ಈರಣ್ಣ ಚನ್ನಬಸಪ್ಪ ಪಟ್ಟಣಶೆಟ್ಟಿ (೪೯ಮತ), ಸಾತಿಹಾಳ ಸಾಲಗಾರ ಪರಿಶಿಷ್ಟ ಪಂಗಡ ಭಾಗ-೫ ಕ್ಷೇತ್ರದಿಂದ ಅಯ್ಯಪ್ಪ ತಿಪ್ಪಣ್ಣ ನಂದಿಹಾಳ (೨೩ಮತ), ಯಾಳವಾರ ಸಾಲಗಾರ ಸಾಮಾನ್ಯ ಭಾಗ-೬ ಕ್ಷೇತ್ರದಿಂದ ಸಾಹೇಬಗೌಡ ಶಾಂತಪ್ಪ ಉತ್ನಾಳ(೧೩ಮತ), ಹೂವಿನಹಿಪ್ಪರಗಿ ಸಾಲಗಾರ ಸಾಮಾನ್ಯ ಭಾಗ-೩ ಕ್ಷೇತ್ರದಿಂದ ಗಿರೀಶ ಬಸಣ್ಣ ಚಿಮ್ಮಲಗಿ(೨೬ಮತ), ಕುದರಿಸಾಲವಾಡಗಿ ಸಾಲಗಾರ ಮಹಿಳಾ ಭಾಗ-೪ ಕ್ಷೇತ್ರದಿಂದ ಶಂಕ್ರೆಮ್ಮ ಶಶಿಕಾಂತ ಗೌಡರ(೧೮ಮತ) ಪಡೆದುಕೊಂಡಿದ್ದು. ಬಿನ್ ಸಾಲಗಾರ ಸಾಮಾನ್ಯ ಭಾಗ-೧೨ ಇದರ ಫಲಿತಾಂಶವನ್ನು ಕಲಬುರಗಿ ಉಚ್ಛನ್ಯಾಯಾಲಯದ ಪೀಠದಲ್ಲಿ ದಾಖಲಾಗಿರುವ ಪ್ರಕರಣದ ಮುಂದಿನ ಆದೇಶಕ್ಕೆ ಒಳಪಟ್ಟು ಘೋಷಣೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಹಾಗೂ ಸಹಕಾರ ಸಂಘಗಳ ಸಹಾಯಕ ನಿಬಂಧಕ ಚೇತನ್ ಭಾವಿಕಟ್ಟಿ ಘೋಷಿಸಿದರು.
ತಾಲೂಕು ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿಗೆ ೧೩ ಆಡಳಿತ ಮಂಡಳಿ ಸದಸ್ಯ ಬಲ ಹೊಂದಿದೆ. ೧೩ ಸದಸ್ಯ ಬಲದಲ್ಲಿ ೮ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದರು. ಉಳಿದ ೫ ಸ್ಥಾನಗಳಿಗೆ ಸ್ಪರ್ಧೆ ನಡೆದ ಹಿನ್ನೆಲೆಯಲ್ಲಿ ೫ ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿತ್ತು.
ಅವಿರೋಧ ಆಯ್ಕೆಯಾದ ಅಭ್ಯರ್ಥಿಗಳ ವಿವರಃ ಬಸವನಬಾಗೇವಾಡಿ ಪರಿಶಿಷ್ಟ ಜಾತಿ ಸಾಲಗಾರ ಭಾಗ-೧ ಕ್ಷೇತ್ರದಿಂದ ಬಾಬು ಸೀತಾರಾಮ ಲಮಾಣಿ, ನರಸಲಗಿ ಸಾಲಗಾರ ಹಿಂದುಳಿದ ವರ್ಗ ಅ ಭಾಗ-೨ ಕ್ಷೇತ್ರದಿಂದ ಬಸಪ್ಪ ಚಂದಪ್ಪ ರಡ್ಡಿ, ಇಂಗಳೇಶ್ವರ ಸಾಲಗಾರ ಸಾಮಾನ್ಯ ಭಾಗ-೭ ಕ್ಷೇತ್ರದಿಂದ ಸಿದ್ರಾಮಪ್ಪ ಸಂಗಪ್ಪ ಎಮ್ಮಿ, ಮನಗೂಳಿ ಸಾಲಗಾರ ಮಹಿಳಾ ಭಾಗ-೮ ಕ್ಷೇತ್ರದಿಂದ ಉಮಾಬಾಯಿ ಗಿರಿಮಲ್ಪ ವಿವೇಕಿ, ಮುಳವಾಡ ಸಾಲಗಾರ ಸಾಮಾನ್ಯ ಭಾಗ-೯ ಕ್ಷೇತ್ರದಿಂದ ಅಣ್ಣಾಸಾಹೇಬ ಅಪ್ಪಾಸಾಹೇಬ ಬಿರಾದಾರ, ಕೂಡಗಿ ಸಾಲಗಾರ ಹಿಂದುಳಿದ ವರ್ಗ ಬ ಭಾಗ-೧೦ ಕ್ಷೇತ್ರದಿಂದ ಹುಚ್ಚಪ್ಪ ಸಂಗಪ್ಪ ಬಾಟಿ, ಹೆಬ್ಬಾಳ ಸಾಲಗಾರ ಸಾಮಾನ್ಯ ಭಾಗ-೧೧ ಕ್ಷೇತ್ರದಿಂದ ರಾಮನಗೌಡ ಭೀಮನಗೌಡ ಪಾಟೀಲ, ಗೊಳಸಂಗಿ ಸಾಲಗಾರ ಸಾಮಾನ್ಯ ಭಾಗ-೧೩ ಕ್ಷೇತ್ರದಿಂದ ದಯಾನಂದ ಮಲ್ಲಪ್ಪ ಹೆಬ್ಬಾಳ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಿನ್ ಸಾಲಗಾರ ಸಾಮಾನ್ಯ ಭಾಗ-೧೨ ಕ್ಷೇತ್ರಕ್ಕೆ ಪ್ರಬಲ ಸ್ಪರ್ಧೆ ಏರ್ಪಟ್ಟಿತ್ತು. ಈ ಕ್ಷೇತ್ರದಿಂದ ಈರಣ್ಣ ಪಟ್ಟಣಶೆಟ್ಟಿ, ಮಲ್ಲಪ್ಪ ಹಾರಿವಾಳ ಅವರು ಸ್ಪರ್ಧೆ ಮಾಡಿದ್ದರು. ಇದರಲ್ಲಿ ಹಿಂದಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿದ್ದ ಈರಣ್ಣ ಪಟ್ಟಣಶೆಟ್ಟಿ ೪೯ ಮತಗಳನ್ನು ಪಡೆದು ಮೂರನೇ ಬಾರಿಗೆ ಮರುಆಯ್ಕೆಯಾಗುವ ಮೂಲಕ ಹ್ಯಾಟ್ರಿಕ್ ವಿಜಯ ಸಾಧಿಸಿದರು. ಮಲ್ಲಪ್ಪ ಹಾರಿವಾಳ ೩೧ ಮತಗಳನ್ನು ಪಡೆದು ಪರಾಭವ ಗೊಂಡರು.
ವಿಜಯೋತ್ಸವ: ಹಿಂದಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿದ್ದ ಈರಣ್ಣ ಪಟ್ಟಣಶೆಟ್ಟಿ ಅವರು ಮರುಆಯ್ಕೆಯಾಗುತ್ತಿದ್ದಂತೆ ಅವರ ಅಭಿಮಾನಿಗಳು, ಹಿತೈಷಿಗಳು, ಮುಖಂಡರು, ಕಾರ್ಯಕರ್ತರು ಸೇರಿದಂತೆ ಅಪಾರ ಸಂಖ್ಯೆಯ ಜನರು ಪರಸ್ಪರ ಗುಲಾಲು ಎರಚಿ ಪಟಾಕ್ಷಿ ಸಿಡಿಸಿ ಅವರನ್ನು ಮೆರವಣಿಗೆ ಮಾಡುವ ಮೂಲಕ ವಿಜಯೋತ್ಸವ ಆಚರಿಸಿ ಸಂಭ್ರಮಿಸಿದ್ದು ಕಂಡುಬಂದಿತ್ತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿಜಯೋತ್ಸವ ಜರುಗಿತು.
ಈರಣ್ಣ ಪಟ್ಟಣಶೆಟ್ಟಿ ಅವರನ್ನು ಸುದ್ದಿಗಾರರು ಮಾತನಾಡಿಸಿದಾಗ, ಕಳೆದ ೨೦ ವರ್ಷಗಳಿಂದ ರೈತ ಬಾಂಧವರ ನಿಸ್ವಾರ್ಥ ಸೇವೆ ಮಾಡಿದ ಪ್ರತಿಫಲವಾಗಿ ರೈತರು ಪಿಎಲ್‌ಡಿಇ ಬ್ಯಾಂಕಿಗೆ ಮೂರನೇ ಅವಧಿಗೆ ಆಯ್ಕೆ ಮಾಡಿರುವುದು ಸಂತಸ ತಂದಿದೆ. ನಾನು ಈ ಚುನಾವಣೆಯಲ್ಲಿ ಯಾರ ಮುಂದೆಯೂ ಮತ ನೀಡುವಂತೆ ಹೇಳದೇ ಇದ್ದರೂ ನನ್ನ ಸೇವೆ ಗುರುತಿಸಿ ಮತಬಾಂಧವರು ಮರು ಆಯ್ಕೆ ಮಾಡಿರುವದು ನನಗೆ ಸಂತೃಪ್ತಿ ತಂದಿದೆ. ಮುಂಬರುವ ದಿನಗಳಲ್ಲಿ ರೈತರಿಗೆ ಹೆಚ್ಚಿನ ಸೇವೆ ಸಲ್ಲಿಸಲು ಸದಾ ಬದ್ಧ. ಉಳಿದ ೧೨ ಸ್ಥಾನಗಳಿಗೂ ನಮ್ಮವರೇ ಆಯ್ಕೆಯಾಗಿದ್ದಾರೆ. ಕಲಬುರಗಿ ಉಚ್ಛನ್ಯಾಯಾಲಯದ ಪೀಠಕ್ಕೆ ಹೋದ ಪ್ರಕರಣದ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅದರ ಮತಎಣಿಕೆ ಬಂದರೂ ಯಾವುದೇ ಪರಿಣಾಮ ಬೀರದು. ನಮ್ಮ ವಿಜಯ ನಿಶ್ಚಿತವೆಂದರು.
ವಿಜಯೋತ್ಸವದಲ್ಲಿ ಮುಖಂಡರಾದ ಸಂಗಣ್ಣ ಕಲ್ಲೂರ, ಶಂಕರಗೌಡ ಬಿರಾದಾರ, ಲೋಕನಾಥ ಅಗರವಾಲ, ರವಿ ಪಟ್ಟಣಶೆಟ್ಟಿ, ಮಹಾಂತೇಶ ಆದಿಗೊಂಡ, ಸಂಕನಗೌಡ ಪಾಟೀಲ, ಸಿ.ಎಸ್.ಪಾಟೀಲ, ಎಂ.ಬಿ.ತೋಟದ, ಸುರೇಶಗೌಡ ಪಾಟೀಲ, ಹರೀಶ ಅಗರವಾಲ, ರವಿ ರಾಠೋಡ, ಕಾಶೀನಾಥ ರಾಠೋಡ, ವ್ಹಿ.ಬಿ.ಮರ್ತುರ,ಸಾಹೇಬಗೌಡ ಉತ್ನಾಳ, ರಮಜಾನ ಮುಜಾವರ,ಗುರುನಗೌಡ ಪಾಟೀಲ, ಸಿದ್ರಾಮಪ್ಪ ಪಾತ್ರೋಟಿ, ಸಂಗಯ್ಯ ಕಾಳಹಸ್ತೇಶ್ವರಮಠ, ಅಶೋಕ ಗುಳೇದ, ಮಲ್ಲು ಒಡೆಯರ, ಶ್ರೀಕಾಂತ ಪಟ್ಟಣಶೆಟ್ಟಿ, ಪ್ರಕಾಶ ಪಡಶೆಟ್ಟಿ, ಶಾಂತು ಪಡಶೆಟ್ಟಿ, ದಸ್ತಗೀರ ವಜ್ಜಲ, ಮನ್ನಾನ ಶಾಬಾದಿ, ಸಂಗಮೇಶ ಜಾಲಗೇರಿ, ಸಂಗನಗೌಡ ಚಿಕ್ಕೊಂಡ ಸೇರಿದಂತೆ ಅಪಾರ ಸಂಖ್ಯೆಯ ಜನರು ಭಾಗವಹಿಸಿದ್ದರು.

ಬಾಕ್ಸ್

ತಾಲೂಕು ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ಬಿನ್ ಸಾಲಗಾರ ಸಾಮಾನ್ಯ ಭಾಗ-೧೨ ಕ್ಷೇತ್ರದಲ್ಲಿ ಒಟ್ಟು ೮೯ ಮತದಾರರು ಇದ್ದರು. ಮತದಾನದ ಹಕ್ಕಿನಿಂದ ವಂಚಿತರಾದ ೨೦ ಜನ ಮತದಾರರು ಕಲಬುರಗಿ ಉಚ್ಛನ್ಯಾಯಾಲಯದ ಪೀಠಕ್ಕೆ ಅರ್ಜಿ ಸಲ್ಲಿಸಿ ೨೦ ಜನರು ಜ.೬ ರಂದು ಮತದಾನದ ಹಕ್ಕು ಪಡೆದುಕೊಂಡ ಆದೇಶ ಪಡೆದುಕೊಂಡ ಹಿನ್ನೆಲೆಯಲ್ಲಿ ಈ ೨೦ ಮತದಾರರಿಗೆ ಪ್ರತ್ಯೇಕವಾದ ಮತಪೆಟ್ಟಿಗೆಯಲ್ಲಿ ಅವರು ಮತ ಚಲಾಯಿಸಲು ಚುನಾವಣಾಧಿಕಾರಿ ವ್ಯವಸ್ಥೆ ಮಾಡಿದ್ದರು.
ಮತದಾನ ಹಕ್ಕು ಪಡೆದ ೨೦ ಮತದಾರರ ಪೈಕಿ ೧೮ ಮತದಾರರು ಇಂದು ಜರುಗಿದ ಚುನಾವಣೆಯಲ್ಲಿ ತಮ್ಮ ಮತ ಚಲಾಯಿಸಿದರು. ಚುನಾವಣಾಧಿಕಾರಿಗಳು ಕಲಬುರಗಿ ಉಚ್ಛನ್ಯಾಯಾಲಯ ಪೀಠದ ಮುಂದಿನ ಆದೇಶ ಬರುವರೆಗೂ ಈ ಪ್ರತ್ಯೇಕ ಮತಪೆಟ್ಟಿಗೆಯನ್ನು ಎಣಿಕೆ ಮಾಡದೇ ಇದನ್ನು ಭದ್ರವಾಗಿ ಪಟ್ಟಣದ ಖಜಾನೆ ಇಲಾಖೆಯಲ್ಲಿ ಇಟ್ಟು ಬರಲಾಗಿದೆ. ಮುಂದಿನ ನ್ಯಾಯಾಲಯದ ಆದೇಶದಂತೆ ಮುಂದಿನ ಕ್ರಮವಹಿಸುವುದಾಗಿ ಚುನಾವಣಾಧಿಕಾರಿ ಚೇತನ್ ಭಾವಿಕಟ್ಟಿ ಸುದ್ದಿಗಾರರಿಗೆ ಮಾಹಿತಿ ನೀಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026

ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ

ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ

ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 29, 2026
    In ದಿನಪತ್ರಿಕೆ
  • ಹಿರಿಯ ಪತ್ರಕರ್ತ ಟಿ.ಕೆ.ಮಲಗೊಂಡಗೆ ಸನ್ಮಾನಿಸಿದ ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಕಳೆದುಹೋದ ೧೧೦ ಮೊಬೈಲ್‌ಗಳು ವಾರಸುದಾರರ ವಶಕ್ಕೆ
    In (ರಾಜ್ಯ ) ಜಿಲ್ಲೆ
  • ಏ.15 ರಿಂದ ಬಸವ ಜಯಂತಿ ಕಾರ್ಯಕ್ರಮ & ಓಲೆಮಠದ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.