ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸ್ನಾತಕೋತ್ತರ ಗಣಕ ವಿಜ್ಞಾನ ವಿಭಾಗದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕೇಂದ್ರದಲ್ಲಿ ಸರ್ಕಾರ ಕೋಟಾದಡಿ ಖಾಲಿ ಉಳಿದಿರುವ ವಿಜಯಪುರದ ಎಂ.ಸಿಎ ಕೋರ್ಸಿನ ಸೀಟುಗಳ ಭರ್ತಿಗಾಗಿ ವಿಶ್ವವಿದ್ಯಾಲಯದ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಜನವರಿ ೨೧ ಆಯಾ ಕೇಂದ್ರದಲ್ಲಿ ನಡೆಸಲಾಗುವುದು.
ಅರ್ಹ ಅಭ್ಯರ್ಥಿಗಳು UUಅಒS ತಂತ್ರಾಂಶದಲ್ಲಿ ಜನವರಿ ೧೦ ರಿಂದ ಜ.೧೮ರ ವರೆಗೆ ಅರ್ಜಿ ಸಲ್ಲಿಸಬಹುದು. ಸಲ್ಲಿಸಿದ ಅರ್ಜಿಯೊಂದಿಗೆ ನಿಗಧಿತ ಶುಲ್ಕ ಭರಿಸಿ, ಧೃಡಿಕೃತ ಅಗತ್ಯ ದಾಖಲೆಗಳನ್ನು ಲಗತ್ತಿಸಿ ೨೦-೦೧-೨೦೨೫ ರ ಸಾಯಂಕಾಲ ೫ ಗಂಟೆಯ ಒಳಗಾಗಿ ಸ್ನಾತಕೋತ್ತರ ಕೇಂದ್ರದ ಗಣಕ ವಿಜ್ಞಾನ ವಿಭಾಗದಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ವಿಶ್ವವಿದ್ಯಾಲಯದ ಜಾಲತಾಣ www.rcub.ac.inಹಾಗೂ ದೂರವಾಣಿ ಸಂಖ್ಯೆ ೦೮೩೧-೨೫೬೫೨೪೪ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯು ತಿಳಿಸಿದೆ.
