Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೈತರ ಬದುಕು ಹಸನಾಗಿಸಲು ಜೆಡಿಎಸ್‌ ಬೆಂಬಲಿಸಿ :ಎಚ್‌ಡಿಕೆ
(ರಾಜ್ಯ ) ಜಿಲ್ಲೆ

ರೈತರ ಬದುಕು ಹಸನಾಗಿಸಲು ಜೆಡಿಎಸ್‌ ಬೆಂಬಲಿಸಿ :ಎಚ್‌ಡಿಕೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಡಚಣ:ನಾಗಠಾಣ ಮತಕ್ಷೇತ್ರ ಎಲ್ಲಾ ನೀರಾವರಿ ಯೋಜನೆಗಳನ್ನುಅನುಷ್ಠಾನಗೊಳಿಸಿ, ರೈತರನ್ನು ಸ್ವಾವಲಂಬಿಗಳನ್ನಾಗಿಸಿ ಅವರ ಬದುಕು ಹಸನಾಗಿಸಲು ನಮ್ಮ ಪಕ್ಷ ಬದ್ಧವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರ ಸ್ವಾಮಿ ಹೇಳಿದರು.

ಪಟ್ಟಣದಲ್ಲಿ ಸೋಮವಾರ ಆಯೋಜಿಸಲಾದ ನಾಗಠಾಣ ಮತಕ್ಷೇತ್ರದ ಜೆಡಿಎಸ್‌ ಪಕ್ಷದ ಅಭ್ಯರ್ಥಿ ದೇವಾನಂದ ಚವ್ಹಾಣ ಪರ ಆಯೋಜಿಸಲಾದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ನಮ್ಮ ಪಂಚರತ್ನ ಯೋಜನೆಯ ಉದ್ದೇಶ ಬಡವರಿಗೆ,ರೈತರ ಮಕ್ಕಳು ,ಹಾಗೂ ಕೂಲಿ ಕಾರ್ಮಿಕ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವದು,ಭೂ ರಹಿತ ಕೂಲಿ ಕಾರ್ಮಿಕರಿಗೆ ಮಾಸಿಕ 2 ಸಾವಿರ ಸಹಾಯ ಧನ, ಬಿತ್ತನೆ ಸಮಯದಲ್ಲಿ ರೈತರಿಗೆ ಪ್ರತಿ ಏಕರೆ ಪ್ರದೇಶಕ್ಕೆ 10 ಸಾವಿರ ಸಹಾಯಧನ, ಬಾಣಂತಿಯರಿಗೆ ಉತ್ತಮ ಗುಣಮಟ್ಟದ ಆಹಾರಕ್ಕಾಗಿ ಆರು ತಿಂಗಳುಗಳ ವರೆಗೆ ಪ್ರತಿ ತಿಂಗಳು 6 ಸಾವಿರ ಸಹಾಯಧನ, ಅಂಗವಿಕಲರು, ವಿಧವೆಯರಿಗೆ ಪ್ರತಿ ತಿಂಗಳು 2 ಸಾವಿರ, ವೃದ್ಧಾಪ್ಯ ವೇತನದಾರರಿಗೆ ಮಾಸಿಕ 5 ಸಾವಿರ ಗೌರವಧನ ಹೆಚ್ಚಿಸುವದು, ಬಡವರಿಗೆ ವಾರ್ಷಿಕ 5 ಸಿಲಿಂಡರ ಉಚಿತವಾಗಿ ನೀಡುವದಲ್ಲದೆ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ರೈತರ ಹಾಗೂ ಸ್ವ ಸಹಾಯ ಗುಂಪುಗಳ ಸಾಲ ಮನ್ನಾ ಮಾಡುವದು, ಕಬ್ಬು ಬೆಳೆಗಾರರಿಗೆ ಉತ್ತಮ ಬೆಲೆ ನೀಡುವದು, ಬಂಜಾರ ಸಮಾಜದ ಅಭೀವೃದ್ಧಿ, ಮಹದಾಯಿ ಯೋಜನೆಯ ಅನುಷ್ಠಾನಗಳಂತಹ ಯೋಜನೆಗಳನ್ನು ಹಮ್ಮಿಕೊಂಡು, ಸಮಾಜದ ಪ್ರತಿಯೊಬ್ಬರ ಬದುಕು ಹಸನಾಗಿಸಲು ನಮ್ಮ ಪಕ್ಷ ಬದ್ಧವಾಗಿದೆ. ಅದಕ್ಕಾಗಿ ಒಂದು ಬಾರಿ ಜೆಡಿಎಸ್‌ ಪಕ್ಷ ಸ್ವತಂತ್ರವಾಗಿ ಸರ್ಕಾರ ರಚಿಸಲು ನಾಗಠಾಣ ಮತಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಡಾ.ದೇವಾನಂದ ಚವ್ಹಾಣ ಅವರನ್ನು ಬೆಂಬಲಿಸಿ, ಎಂದು ಮನವಿ ಮಾಡಿದರು.
ಪ್ರಸ್ತಾವಿಕವಾಗಿ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಪಂಚಪ್ಪ ಕಲಬುರ್ಗಿ ಮಾತನಾಡಿ, ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳು ರೈತರಿಗೆ, ಬಡವರಿಗೆ ಹಾಗೂ ಹಿಂದುಳಿದವರಿಗೆ ಸುಳ್ಳು ಭರವಸೆ ನೀಡುತ್ತ ಮೋಸಮಾಡುತ್ತಿವೆ. ರೈತರ ಹಿತ ಹಾಗೂ ನೀರಾವರಿ ಯೋಜನೆಗಳ ಅನುಷ್ಠಾನಕ್ಕಾಗಿ ಜೆಡಿಎಸ್‌ ಅಭ್ಯರ್ಥಿ ದೇವಾನಂದ ಚವ್ಹಾಣ ಅವರನ್ನು ಬೆಂಬಲಿಸಿ ಎಂದರು.
ಅಭ್ಯರ್ಥಿ ಡಾ.ದೇವಾನಂದ ಚವ್ಹಾಣ ಮಾತನಾಡಿ, ಸಮಾಜ ಸೇವೆಗಾಗಿ ಇನ್ನೊಂದು ಬಾರಿ ತಮಗೆ ಬೆಂಬಲಿಸುವಂತೆ ಮತದಾರರಲ್ಲಿ ಶಿರಬಾಗಿ ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ವಿವಿಧ ಪಕ್ಷಗಳನ್ನು ತೊರೆದು ಸಹಸ್ರಾರು ಸಂಖ್ಯೆಯ ಮುಖಂಡರು ಜೆಡಿಎಸ್‌ ಪಕ್ಷ ಸೇರಿದರು.
ವೇದಿಕೆಯ ಮೇಲೆ ವಿಧಾನ ಪರಿಷತ್‌ ಮಾಜಿ ಸದಸ್ಯ ಬಿ.ಜಿ.ಪಾಟೀಲ ಹಲಸಂಗಿ, ಮುಖಂಡರಾದ ಬಾಬುಗೌಡ ಪಾಟೀಲ, ವಿಠ್ಠಲ ವಡಗಾಂವ, ಸುನೀತಾ ಚವ್ಹಾಣ, ರವಿ ಚವ್ಹಾಣ, ಯೂನೂಸ್‌ ಅಲಿ ಮಕಾನದಾರ, ಚಂದ್ರಶೇಖರ ನಿರಾಳೆ, ಭಿಮಾಶಂಕರ ವಾಳಿಖಿಂಡಿ, ಬಾಬು ಚವ್ಹಾಣ, ಇಮಾಮ ಪಟೇಲ, ಜೆಡಿಎಸ್‌ ತಾಲ್ಲೂಕು ಅಧ್ಯಕ್ಷ ಅಮಸಿದ್ದ ಬಳಗಾನೂರ. ಧೂಳೇಶ ಚವ್ಹಾಣ, ನಿಂಗನಗೌಡ ಸೋಲಾಪೂರ, ರಾಮ ಮಾಲಾಪೂರ, ಪ್ರವೀಣ ಕಲ್ಯಾಣಶೆಟ್ಟಿ, ಸತೀಶ ಬಂಡಿ, ಮುರ್ತುಜಾ ನದಾಫ, ಸಿಕಂದರ ಸಾವಳಸಂಗ, ಸಿದ್ದು ಸೋಲಾಪೂರ, ಸಚಿನ್‌ ವಾಲಿ, ಪ್ರವೀಣ ಪಾಟೀಲ, ದೀಪಕ್‌ ಕದಂ , ವಿನೋದ,ಮಹಾದೇವ ಶಿಂಧೆ, ರವಿ ಶಿಂಧೆ, ಗುರುಬಾಳ ಗಿಡವೀರ, ರಾಜಶೇಖರ ಡೋಣಗಾಂವ ಸೇರಿದಂತೆ ಹಲವರು ಇದ್ದರು.

CHADACHAN jds kumarswami udaya rashmi
Share. Facebook Twitter Pinterest Email Telegram WhatsApp
  • Website

Related Posts

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!
    In (ರಾಜ್ಯ ) ಜಿಲ್ಲೆ
  • ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ
    In (ರಾಜ್ಯ ) ಜಿಲ್ಲೆ
  • ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೀಳು ಮಟ್ಟದ ರಾಜಕೀಯಕ್ಕೆ ನಾಂದಿ ಹಾಡಿದ ಭೂಸನೂರ
    In (ರಾಜ್ಯ ) ಜಿಲ್ಲೆ
  • ಭಾರತ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿದ ಪ್ರಶಿಕ್ಷಣಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ನೆಚ್ಚಿನ ಶಿಕ್ಷಕಿಯ ವರ್ಗಾವಣೆಗೆ ಕಣ್ಣೀರಿಟ್ಟ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ರೈತರ ಬೇಡಿಕೆಯಂತೆ ಪರಿಹಾರ ದರ ನಿಗದಿಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಯಲ್ಲಿ ಮತ್ತೆ ಹೆಚ್ಚಾದ ಒಳ ಹರಿವು
    In (ರಾಜ್ಯ ) ಜಿಲ್ಲೆ
  • ಹಳ್ಳ ದಾಟಲು ಹರಸಾಹಸ ಪಟ್ಟ ಶಿಕ್ಷಕರು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.