ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತ್ಯೋತ್ಸವವನ್ನು ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಅಶೋಕ ಮನಗೂಳಿ ಅಭಿಮತ
ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ೧೨ನೇ ಶತಮಾನದಲ್ಲಿನ ಸಾಮಾಜಿಕ ಕ್ರಾಂತಿಗೆ ಶಿವಯೋಗಿ ಸಿದ್ದರಾಮೇಶ್ವರರ ಕೊಡುಗೆ ಅನನ್ಯ. ಅವರು ಅಸಮಾನತೆ, ವರ್ಣ, ಜಾತಿ, ಲಿಂಗಭೇದವನ್ನು ತೊಡೆದು ಹಾಕುವ ಕೆಲಸವನ್ನು ವಚನಗಳ ಮೂಲಕ ಮಾಡಿದವರು. ಅಂತವರ ತತ್ವಾದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡಾಗ ಮಾತ್ರ ಜಯಂತಿ ಆಚರಣೆ ಮಾಡಿದಕ್ಕೆ ಸಾರ್ಥಕವಾಗುತ್ತದೆ ಎಂದು ಎಚ್.ಜಿ.ಕಾಲೇಜಿನ ಉಪನ್ಯಾಸಕ ಸಿದ್ದಲಿಂಗ ಕಿಣಗಿ ಹೇಳಿದರು.
ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ೮೫೩ನೇ ಜಯಂತ್ಯೋತ್ಸವ ಸಮಾರಂಭದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಅವರು, ಹನ್ನೆರಡನೇ ಶತಮಾನದ ಜಗಜ್ಯೋತಿ ಬಸವೇಶ್ವರರು ಹಾಗೂ ಸಿದ್ದರಾಮೇಶ್ವರರು ಕಾಯಕಯೋಗಿ ಶ್ರೇಷ್ಠ ವಚನಕಾರರಾಗಿದ್ದರು. ಹಾಗೆಯೇ ಎಲ್ಲ ಶರಣರು ಅವರನ್ನು ಅಪ್ಪಿಕೊಂಡಿದ್ದರು. ಬುದ್ಧ ಬಸವ ಡಾ. ಅಂಬೇಡ್ಕರರು, ಅಲ್ಲಮಪ್ರಭು, ಚೆನ್ನಬಸವ, ಅಕ್ಕ ಮಹಾದೇವಿ ಸೇರಿದಂತೆ ಅನೇಕ ಶರಣರು ಸಮ ಸಮಾಜದ ನಿರ್ಮಾಣಕ್ಕೆ ಎಲ್ಲ ಸಮಾಜದ ಸಮಾನತೆಯಲ್ಲಿ ಬೆಳಕು ಚೆಲ್ಲಿದ್ದಾರೆ. ಅವರಂತೆ ಸಿದ್ದರಾಮೇಶ್ವರರು ಸಮಾಜ ಸೇವೆಯಲ್ಲಿ ತೃಪ್ತಿಪಡುತ್ತಿದ್ದರು. ಬಸವಣ್ಣನವರ ಅನುಭವ ಮಂಟಪದಲ್ಲಿ ಚೆನ್ನಬಸವಣ್ಣನವರ ನಂತರ ಅದ್ಯಕ್ಷರಾಗಿ ಕಾರ್ಯನಿರ್ವಹಿಸಿ ಸೊನ್ನಲಗಿ ಸಿದ್ದರಾಮೇಶ್ವರರು ಸಮಾಜದಲ್ಲಿ ಜಾಡುಗಟ್ಟಿದ ಕಂದಾಚಾರ, ಮೂಡನಂಬಿಕೆ, ಅನಾಚಾರಗಳನ್ನು ಹೊಡೆದೊಡಿಸಲು ವಚನಗಳ ಮೂಲಕ ಸಮಾಜವನ್ನು ತಿದ್ದುವ ಕಾರ್ಯ ಮಾಡಿ ಶಿವಯೋಗಿ ಸಿದ್ದರಾಮ ಎನಿಸಿಕೊಂಡಿದ್ದಾರೆ. ಅದಕ್ಕೆ ಭೋವಿ ವಡ್ಡರ ಸಮಾಜದವರು ಹೆಚ್ಚು ಕೆಲಸಕ್ಕೆ ಒತ್ತು ಕೊಡದೇ ಶಿಕ್ಷಣಕ್ಕೆ ಮಹತ್ವ ನೀಡಬೇಕು ಎಂದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಶಾಸಕ ಅಶೋಕ ಮನಗೂಳಿ ಮಾತನಾಡಿ, ಬಸವಣ್ಣನವರ ಅನುಭವ ಮಂಟಪದಲ್ಲಿ ಮೂರನೇ ಪೀಠಾಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಮನುಕುಲಕ್ಕೆ ಉದ್ದಾರ ಮಾಡದೇ ಪ್ರಾಣಿ, ಪಶು, ಪಕ್ಷಿಗಳಿಗಾಗಿ ನೀರಾವರಿ ಯೋಜನೆಗಳಂತಹ ಅರವಟ್ಟಿಗಳನ್ನು ನಿರ್ಮಿಸಿ ಚೆನ್ನಬಸವಣ್ಣನವರ ಪರಮ ಶಿಶ್ಯರಾಗಿ ಸಾಮಾಜಿಕವಾಗಿ ವಚನಗಳ ಮೂಲಕ ಉದ್ಧಾರ ಮಾಡಿದ್ದಾರೆ. ಸಿದ್ದರಾಮೇಶ್ವರರು ಕಾಯಕಯೋಗಿಗಳು, ಕರ್ಮಯೋಗಿಗಳು ಅವರಂತೆ ಅವರ ಸಮುದಾಯದ ಯುವ ಪೀಳಿಗೆ ಇತಿಹಾಸವನ್ನು ಅರಿತು ಜೀವನ ನಡೆಸಬೇಕು ಎಂದು ಹೇಳಿದ ಅವರು, ಭೂ ದಾಖಲೆಗಳನ್ನು ತ್ವರಿತಗತಿಯಲ್ಲಿ ಸಿಗುವ ನಿಟ್ಟಿನಲ್ಲಿ ಗಣಕೀಕರಣ ಮಾಡುವ ಮೂಲಕ ಭೂ ಸುರಕ್ಷಾ ಕೇಂದ್ರಗಳನ್ನು ಸ್ಥಾಪಿಸಿ ಸರಕಾರದ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಕಾರ್ಯಕ್ಕೆ ಮುಂದಾದ ಮುಖ್ಯಮಂತ್ರಿಗಳಿಗೆ, ಕಂದಾಯ ಸಚಿವ ಕೃಷ್ಣಾ ಬೈರೆಗೌಡ ಅವರಿಗೆ ಅಭಿನಂದನೆ ಸಲ್ಲಿಸಿದರು.
ಕಾರ್ಯಕ್ರಮದ ಸಾನಿಧ್ಯ ವಹಿಸಿದ ಹಿಕ್ಕನಗುತ್ತಿ ಲಿಂಗಾಯತ ಮಹಾಮಠದ ಪ್ರಭುಲಿಂಗ ಶರಣರು ಆಶೀವರ್ಚನ ನೀಡಿದರು. ವೇದಿಕೆಯ ಮೇಲೆ ತಾಪಂ ಇಒ ರಾಮು ಅಗ್ನಿ, ಗ್ರೇಡ್ ೨ ತಹಶೀಲ್ದಾರ ಇಂದ್ರಾಬಾಯಿ ಬಳಗಾನೂರ, ಬಸವ ಸಮಿತಿ ಸದಸ್ಯ ಶಿವಾನಂದ ಕಲಬುರ್ಗಿ, ಸರಕಾರಿ ನೌಕರರ ಸಂಘದ ತಾಲೂಕಾದ್ಯಕ್ಷ ಅಶೋಕ ತೆಲ್ಲೂರ, ಭೋವಿ ಸಮಾಜದ ತಾಲೂಕಾದ್ಯಕ್ಷ ಪಂಡಿತ ಯಂಪೂರೆ ಇದ್ದರು.
ಈ ವೇಳೆ ಕಂದಾಯ ನಿರೀಕ್ಷಕ ಐ.ಎ.ಮಕಾಂದಾರ, ಚಂದ್ರಶೇಖರ ನಾಗರಬೆಟ್ಟ, ಕಸಾಪ ಮಾಜಿ ಅಧ್ಯಕ್ಷ ಚಂದ್ರಶೇಖರ ದೇವರೆಡ್ಡಿ, ರಾಜಶೇಖರ ಚೌರ, ಅಶೋಕ ಅಲ್ಲಾಪುರ, ಎಂ.ಎಂ.ಹಂಗರಗಿ, ನಿಖಿಲ ಖಾನಾಪುರ, ಶಬ್ಬೀರಪಟೇಲ್ ಬಿರಾದಾರ, ಮಲ್ಲನಗೌಡ ಪಾಟೀಲ ಇಬ್ರಾಹಿಂಪುರ, ಕಸಾಪ ಅಧ್ಯಕ್ಷ ಶಿವಾನಂದ ಬಡಾನೂರ, ಸುನಂದಾ ಯಂಪುರೆ, ಸಾಬಿಯಾ ಮರ್ತುರ, ರಾಜಶೇಖರ ನರಗೋದಿ, ಎಂ.ಎ.ಗೊಟಗುಣಕಿ, ಪ್ರವೀಣ ಹಾಲಹಳ್ಳಿ, ಶೈಲಜಾ ಸ್ಥಾವರಮಠ, ಜಗದೀಶ ಕಲಬುರ್ಗಿ, ಶ್ರೀಶೈಲ ಯಳಮೇಲಿ, ಮಹಾನಂದ ಬಮ್ಮಣ್ಣಿ, ಸೇರಿದಂತೆ ಭೋವಿ ಸಮಾಜದ ಮುಖಂಡರು ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು. ಎಚ್.ಜಿ.ಕನ್ಯಾ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ತಹಶೀಲ್ದಾರ ಪ್ರದೀಪಕುಮಾರ ಹಿರೇಮಠ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕ ಬಸವರಾಜ ಸೋಂಪುರ ನಿರೂಪಿಸಿದರು. ಬಿಇಓ ಮಹಾಂತೇಶ ಯಡ್ರಾಮಿ ವಂದಿಸಿದರು.

