Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೈಕಮಾಂಡ್ ನಿರ್ಧರಿಸಿದರೆ 5 ವರ್ಷ ನಾನೇ ಮುಖ್ಯಮಂತ್ರಿ

ರಸ್ತೆ ಮೇಲೆ ಕೊಳಚೆ ನೀರು: ಸುಗಮ ಸಂಚಾರಕ್ಕೆ ಅಡ್ಡಿ

ಕಷ್ಟದ ಸಮಯದಲ್ಲಿ ಜೀವ ವಿಮೆ ಸಹಕಾರಿ :ಶಾಸಕ ಗುಡಗುಂಟಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿಜೆಪಿಯಿಂದ ಬಂಜಾರ ಸಮುದಾಯದ ಬೆನ್ನಿಗೆ ಚೂರಿ :ರಾಠೋಡ
(ರಾಜ್ಯ ) ಜಿಲ್ಲೆ

ಬಿಜೆಪಿಯಿಂದ ಬಂಜಾರ ಸಮುದಾಯದ ಬೆನ್ನಿಗೆ ಚೂರಿ :ರಾಠೋಡ

By No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಮೀಸಲಾತಿ ವಿಚಾರದಲ್ಲಿ ಬಿಜೆಪಿ ಬಂಜಾರ ಸಮುದಾಯದ ಬೆನ್ನಿಗೆ ಚೂರಿ ಹಾಕಿದ್ದು, ಈ ಚುನಾವಣೆಯಲ್ಲಿ ಸಮುದಾಯ ತಕ್ಕ ಪಾಠ ಕಲಿಸಲಿದೆ ಎಂದು ವಿಧಾನ ಪರಿಷತ ಪ್ರತಿಪಕ್ಷದ ಮುಖ್ಯ ಸಚೇತಕ ಪ್ರಕಾಶ ರಾಠೋಡ ಹೇಳಿದ್ದಾರೆ.

ತಿಕೋಟಾ ತಾಲೂಕಿನ ಟಕ್ಕಳಕಿ ಎಲ್.ಟಿ.1 ರಲ್ಲಿ ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಪರ ಪ್ರಚಾರ ಕೈಗೊಂಡು ಅವರು ಮಾತನಾಡಿದರು.

1978ರಲ್ಲಿ ಇಂದಿರಾಗಾಂಧಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ದೇವರಾಜ ಅರಸ ಅವರು ಮುಖ್ಯಮಂತ್ರಿಯಾಗಿದ್ದಾಗ ನಮ್ಮ ತಂದೆ ಕೆ.ಟಿ.ರಾಠೋಡ ಸಚಿವರು ಹಾಗೂ ಮತ್ತು ಎಲ್.ಆರ್.ನಾಯಕ ರಾಜ್ಯಸಭೆ ಸದಸ್ಯರಾಗಿ ಮಾಡಿದ ಮನವಿಗೆ ಸ್ಪಂದಿಸಿ ಕಾಂಗ್ರೆಸ್ ಬಂಜಾರ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಿತ್ತು. ಈಗ 40 ವರ್ಷಗಳ ನಂತರವೂ ನಮ್ಮ ಸಮಾಜ ಇನ್ನೂ ಬಡತನ ರೇಖೆಗಿಂತಲೂ ಕೆಳಗಿದೆ. ಸಮುದಾಯದ ಶೇ.90 ರಷ್ಟು ಜನ ಈಗಲೂ ಗುಳೆ ಹೋಗುತ್ತಾರೆ. ಅವರ ರಕ್ಷಣೆ ಮಾಡುವ ಬದಲು ಶ್ರೀಮಂತರ ಪಕ್ಷ ಬಿಜೆಪಿ ಒಳಮಿಸಲಾತಿ ನೆಪದಲ್ಲಿ ನಮಗೆ ಅನ್ಯಾಯ ಮಾಡಿದೆ. 341ರ ಅನುಚ್ಛೇದ ಅಡಿ ನಮ್ಮನ್ನು ಪರಿಶಿಷ್ಟ ಜಾತಿಯ ಪಟ್ಟಿಯಿಂದ ತೆಗೆಯಲು ಹುನ್ನಾರ ನಡೆಸಿದೆ ಎಂದು ಅವರು ಹೇಳಿದರು.

ಒಳಮೀಸಲಾತಿ ಘೋಷಣೆಗೂ ಮುಂಚೆ ಸರ್ವ ಪಕ್ಷದ ಸಭೆ ಕರೆಯಲಾಗುವುದು. ಸದನದಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಮತ್ತು ಸಚಿವರು ಭರವಸೆ ನೀಡಿದ್ದರು. ಆದರೆ, ಕೊಟ್ಟ ಮಾತಿನಂತೆ ನಡೆದುಕೊಳ್ಳದೇ ಸಿ.ಬಂಜಾರಾ ಮತ್ತು ಬಿಜೆಪಿ ನಾಯಕರು ವಚನ ಭ್ರಷ್ಠರಾಗಿದ್ದಾರೆ. ಆದರೂ ಬಿಜೆಪಿಯಲ್ಲಿರುವ ಯಾವೊಬ್ಬ ಸಚಿವ, ಸಂಸದ ಮತ್ತು ಶಾಸಕರು ಒಳಮೀಸಲಾತಿಯನ್ನು ವಿರೋಧಿಸಿ ಒಂದು ಹೇಳಿಕೆಯನ್ನು ನೀಡಿಲ್ಲ. ಸ್ವಾಭಿಮಾನಕ್ಕೆ ಹೆಸರಾದ ಬಂಜಾರ ಸಮಾಜ ರಾಜ್ಯಾದ್ಯಂತ ಬಿಜೆಪಿಯನ್ನು ತಿರಸ್ಕರಿಸಲಿದೆ. ಶ್ರಮಜೀವಿಗಳಾದ ನಮಗೆ ಅನ್ಯಾಯ ಮಾಡಿರುವ ಬಿಜೆಪಿಗೆ ನಾವೆಲ್ಲರೂ ಮತದಾನದ ಮೂಲಕ ತಕ್ಕ ಪಾಠ ಕಲಿಸಲಿದ್ದೇವೆ ಎಂದು ಅವರು ಹೇಳಿದರು.

ಈ ಚುನಾವಣೆಯಲ್ಲಿ ಬಂಜಾರ ಸಮುದಾಯದ ಎಲ್ಲರೂ ಶೇ.100 ರಷ್ಟು ಮತದಾನ ಮಾಡಬೇಕು. ಇಡೀ ದೇಶದಲ್ಲಿಯೇ ಯಾವೊಬ್ಬ ಸಚಿವರೂ ಮಾಡದಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿರುವ ಎಂ. ಬಿ. ಪಾಟೀಲರನ್ನು ಎಲ್ಲರೂ ಬೆಂಬಲಿಸಬೇಕು. ಕಾಂಗ್ರೆಸ್ 150 ಸೀಟುಗಳಲ್ಲಿ ಜಯಗಳಿಸಿ ಅಧಿಕಾರಿಕ್ಕೆ ಬರಲಿದೆ. ನಂತರ ಈಗ ನಿಗದಿಪಡಿಸಿರುವ ಮೀಸಲಾತಿ ಪ್ರಮಾಣವನ್ನು 50 ರಿಂದ 75ಕ್ಕೆ ಹೆಚ್ಚಿಸಿ ಅನ್ಯಾಯ ಸರಿಪಡಿಸಲಿದೆ ಎಂದು ಪ್ರಕಾಶ ರಾಠೊಡ ಹೇಳಿದರು.

ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಮಾತನಾಡಿ, ಮತಕ್ಷೇತ್ರದ ಎಲ್ಲ ತಾಂಡಾಗಳಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇನೆ. ವಿಜಯಪುರದಲ್ಲಿ ಹಾಮುಲಾಲ ದೇವಸ್ಥಾನ ನಿರ್ಮಾಣಕ್ಕೆ ನಿವೇಶನ ಮತ್ತು ಮಂದಿರ ನಿರ್ಮಿಸಲು ಅನುದಾನ ನೀಡಿದ್ದೇನೆ. ಸಮುದಾಯ ಭವನಕ್ಕೆ ನನ್ನ ಬದಲು ರಾಮರಾವ ಮಹಾರಾಜರ ಹೆಸರು ಇಟ್ಟಿದ್ದೇವೆ. ಅಥಣಿಯಲ್ಲಿರುವ ಹಾಮುಲಾಲರ ಗದ್ದುಗೆ ಸ್ಥಳದ ಅಭಿವೃದ್ಧಿಗೆ ರೂ. 2.50 ಕೋ. ಅನುದಾನ ನೀಡಿದ್ದೇನೆ. ರಾಜ್ಯ ಮತ್ತು ಕೇಂದ್ರಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ನಿಜವಾದ ಅಚ್ಛೆದಿನ ಆರಂಭವಾಗಲಿವೆ ಎಂದು ಹೇಳಿದರು.

ಜಿ. ಪಂ. ಮಾಜಿ ಅಧ್ಯಕ್ಷ ಅರ್ಜುನ ರಾಠೋಡ ಮಾತನಾಡಿ, ನಮ್ಮ ಸಮಾಜದವರೇ ಶಾಸಕರಾಗಿದ್ದರೂ ಮಾಡದಷ್ಟು ಅಭಿವೃದ್ಧಿ ಕೆಲಸಗಳನ್ನು ಎಂ. ಬಿ. ಪಾಟೀಲರು ಲಂಬಾಣಿ ತಾಂಡಾಗಳಲ್ಲಿ ಮಾಡಿದ್ದಾರೆ. ನೀರಾವರಿ ಮಾತ್ರವಲ್ಲ, ರಸ್ತೆ, ಶಾಲೆ, ದೇವಸ್ಥಾನ ಹಾಗೂ ಸಮುದಾಯ ಭವನಗಳು ಸೇರಿದಂತೆ ಎಲ್ಲ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ವಿಜಯಪುರದಲ್ಲಿ ಹಾಮುಲಾಲ ದೇವಸ್ಥಾನ ನಿರ್ಮಾಣಕ್ಕೆ ರೂ.10 ಕೋ. ನಿವೇಶನ ನೀಡಿ ಮಂದಿರ ನಿರ್ಮಿಸಲು ರೂ. 3.50 ಕೋ. ಅನುದಾನ ನೀಡಿದ್ದಾರೆ. ಮೀಸಲಾತಿಯಲ್ಲಿ ಅನ್ಯಾಯ ಮಾಡಿರುವ ಬಿಜೆಪಿಗೆ ಯಾರೋಬ್ಬರೂ ಮತ ಹಾಕಬಾರದು. ಅವರು ಮಾಡಿರುವ ಅನ್ಯಾಯ ಕುರಿತು ಪ್ರತಿಯೊಬ್ಬರು ತಾಂಡಾ, ವಸ್ತಿ ಮತ್ತು ದೊಡ್ಡಿಗಳಿಗೆ ತೆರಳಿ ಮತದಾರರಲ್ಲಿ ಜಾಗೃತಿ ಮೂಡಿಸಬೇಕು. ಈ ಚುನಾವಣೆ ನಂತರ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ಎಂ. ಬಿ. ಪಾಟೀಲರು ಉನ್ನತ ಸ್ಥಾನಕ್ಕೆ ಏರಲಿದ್ದಾರೆ. ಎಲ್ಲರೂ ಶೇ. 100 ರಷ್ಟು ಮತದಾನ ಮಾಡುವ ಮೂಲಕ ಅವರನ್ನು ಪ್ರಚಂಡ ಬಹುಮತದಿಂದ ಆಯ್ಕೆ ಮಾಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ವಕ್ತಾರ ಸಂಗಮೇಶ ಬಬಲೇಶ್ವರ, ಜಿ. ಪಂ. ಮಾಜಿ ಅಧ್ಯಕ್ಷ ಸೋಮನಾಥ ಬಾಗಲಕೋಟ, ಸದಾಶಿವ ಬುಟಾಳೆ, ಮಧುಕರ ಜಾಧವ, ಪ್ರಶಾಂತ ಝಂಡೆ, ಟಾಂಕು ಪೂಜಾರಿ, ಸಂಜು ಪವಾರ, ಮೇಘು ರಾಠೋಡ, ಸುರೇಶ ಪವಾರ, ಬಾಳು ರಾಠೋಡ, ರಘುನಾಥ ಚೌದರಿ, ಎಂ. ಎಸ್. ನಾಯಕ, ಅಶೋಕ ರಾಠೋಡ, ಕೃμÁ್ಣ ಜಾಧವ, ಶಿವಪ್ಪ ಚಲವಾದಿ, ವಿಠ್ಠಲ ಪೂಜಾರಿ, ಶಿವಾಜಿ ಲಮಾಣಿ, ಅಪ್ಪು ಸೂರ್ಯವಂಶಿ, ಉತ್ತಮ ಝಂಡೆ, ಲಕ್ಷ್ಮಣ ಚಾಪಲೂ ಪವಾರ, ಶಿವಾಜಿ ಧೊಂಡಿರಾಮ ಕಾರಬಾರಿ ಮುಂತಾದವರು ಉಪಸ್ಥಿತರಿದ್ದರು.

ಇದಕ್ಕೂ ಮೊದಲು ತಾಂಡಕ್ಕೆ ಆಗಮಿಸಿದ ಎಂ. ಬಿ. ಪಾಟೀಲ, ಪ್ರಕಾಶ ರಾಠೋಡ ಮುಂತಾದ ಮುಖಂಡರನ್ನು ತಾಂಡಾದ ಮಹಿಳೆಯರು ಹೃತ್ಪೂರ್ವಕವಾಗಿ ಸ್ವಾಗತಿಸಿ ಆಶೀರ್ವದಿಸಿದರು.

bijapur congress m b patil public udaya rashmi
Share. Facebook Twitter Pinterest Email Telegram WhatsApp
  • Website

Related Posts

ಹೈಕಮಾಂಡ್ ನಿರ್ಧರಿಸಿದರೆ 5 ವರ್ಷ ನಾನೇ ಮುಖ್ಯಮಂತ್ರಿ

ರಸ್ತೆ ಮೇಲೆ ಕೊಳಚೆ ನೀರು: ಸುಗಮ ಸಂಚಾರಕ್ಕೆ ಅಡ್ಡಿ

ಕಷ್ಟದ ಸಮಯದಲ್ಲಿ ಜೀವ ವಿಮೆ ಸಹಕಾರಿ :ಶಾಸಕ ಗುಡಗುಂಟಿ

ಎಂಎಲ್ಸಿ ಸುನೀಲಗೌಡ ಜನ್ಮದಿನ ಆಚರಿಸಿಕೊಳ್ಳದಿರಲು ನಿರ್ಧಾರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೈಕಮಾಂಡ್ ನಿರ್ಧರಿಸಿದರೆ 5 ವರ್ಷ ನಾನೇ ಮುಖ್ಯಮಂತ್ರಿ
    In (ರಾಜ್ಯ ) ಜಿಲ್ಲೆ
  • ರಸ್ತೆ ಮೇಲೆ ಕೊಳಚೆ ನೀರು: ಸುಗಮ ಸಂಚಾರಕ್ಕೆ ಅಡ್ಡಿ
    In (ರಾಜ್ಯ ) ಜಿಲ್ಲೆ
  • ಕಷ್ಟದ ಸಮಯದಲ್ಲಿ ಜೀವ ವಿಮೆ ಸಹಕಾರಿ :ಶಾಸಕ ಗುಡಗುಂಟಿ
    In (ರಾಜ್ಯ ) ಜಿಲ್ಲೆ
  • ಎಂಎಲ್ಸಿ ಸುನೀಲಗೌಡ ಜನ್ಮದಿನ ಆಚರಿಸಿಕೊಳ್ಳದಿರಲು ನಿರ್ಧಾರ
    In (ರಾಜ್ಯ ) ಜಿಲ್ಲೆ
  • ದೇಶದ ಸಹಕಾರಿ ರಂಗದಲ್ಲೇ ಕರ್ನಾಟಕ ಬೆಸ್ಟ್ :ಸಚಿವ ಶಿವಾನಂದ
    In (ರಾಜ್ಯ ) ಜಿಲ್ಲೆ
  • ರೈತರು ಒಂದುಗೂಡಿ ಕಾರ್ಖಾನೆಯವರಿಗೆ ಪಾಠ ಕಲಿಸಬೇಕಿದೆ :ಹಗೇದಾಳ
    In (ರಾಜ್ಯ ) ಜಿಲ್ಲೆ
  • ಉಪ್ಪಾರ ಕುಲಶಾಸ್ತ್ರ ಅಧ್ಯಯನಕ್ಕೆ ಸಂಪುಟದಲ್ಲಿ ಚರ್ಚೆ :ಸಚಿವ ಶಿವಾನಂದ
    In (ರಾಜ್ಯ ) ಜಿಲ್ಲೆ
  • ವಿಜಯಪುರದಿಂದ ಪಣಜಿಗೆ ಬಸ್ ಸೇವೆ ಆರಂಭ
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಕನ್ನಡ ನಾಮಫಲಕ ಅಳವಡಿಕೆ ಜಾಗೃತಿ ಅಭಿಯಾನ
    In (ರಾಜ್ಯ ) ಜಿಲ್ಲೆ
  • ನ್ಯಾಯಾಲಯದ ಆದೇಶ ಉಲ್ಲಂಘನೆ: ಯುಕೆಪಿ ಜೀಪ್, ಕಂಪ್ಯೂಟರ್ ಜಪ್ತಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.