Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ

ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ

ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೆಪಿಸಿಸಿಗೆ ಶೀಘ್ರವೇ ಹೊಸ ಅಧ್ಯಕ್ಷರ ನೇಮಕವಾಗಲಿ
(ರಾಜ್ಯ ) ಜಿಲ್ಲೆ

ಕೆಪಿಸಿಸಿಗೆ ಶೀಘ್ರವೇ ಹೊಸ ಅಧ್ಯಕ್ಷರ ನೇಮಕವಾಗಲಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವರ್ಚಸ್ಸು ಇರುವ ಪೂರ್ಣಪ್ರಮಾಣದ ಹೊಸ ಅಧ್ಯಕ್ಷರು ಬೇಕು | ಸಚಿವ ಸತೀಶ್ ಜಾರಕಿಹೊಳಿ ಆಗ್ರಹ

ಬೆಂಗಳೂರು: ಆದಷ್ಟು ಶೀಘ್ರವೇ ಕೆಪಿಸಿಸಿಗೆ ಹೊಸ ಅಧ್ಯಕ್ಷರ ನೇಮಕ ಮಾಡಿ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿ ಮಾಡಿ ಬೇಡಿಕೆ ಇಟ್ಟಿದ್ದೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾತ್ರಿ ಸುರ್ಜೆವಾಲಾರನ್ನು ಭೇಟಿ ಮಾಡಿದ್ದೇನೆ. ಪಕ್ಷದ ಆಗು ಹೋಗುಗಳು ಹಾಗೂ ಸಂಘಟನೆ ಬಗ್ಗೆ ಚರ್ಚೆ ಮಾಡಿದೆ. ಆದಷ್ಟು ಬೇಗ ಹೊಸ ಅಧ್ಯಕ್ಷರ ನೇಮಕ ಆಗಬೇಕು ಎಂದು ಹೇಳಿದ್ದೇನೆ ಎಂದರು.
ಸದ್ಯ ಡಿಕೆ ಶಿವಕಮಾರ್ ಅವರು ಅಧ್ಯಕ್ಷರಾಗಿದ್ದು, ಇವರನ್ನೇ ಮುಂದುವರಿಸುವುದಾದರೆ ಅದನ್ನು ಸ್ಪಷ್ಟಪಡಿಸಿ ಅಂತ ಹೇಳಿದ್ದೇನೆ. ನಮಗೆ ಪೂರ್ಣಪ್ರಮಾಣದ ಅಧ್ಯಕ್ಷರು ಬೇಕು. ಮತ ಸೆಳೆಯುವವರನ್ನು ಹಾಗೂ ವರ್ಚಸ್ಸು ಇರುವವರನ್ನು ಅಧ್ಯಕ್ಷರನ್ನಾಗಿ ಮಾಡಿ ಅಂತ ಹೇಳಿದ್ದೇನೆ ಎಂದರು.
ನನ್ನನ್ನು ಅಧ್ಯಕ್ಷ ಮಾಡಿ ಅಂತ ಕೇಳಿಲ್ಲ. ಆದರೆ ಪೂರ್ಣ ಪ್ರಮಾಣದ ಅಧ್ಯಕ್ಷರನ್ನು ಮಾಡಿ ಎಂದು ಹೇಳಿದ್ದೇನೆ. ಇವರು ಇರಬೇಕು ಬೇಡ ಎಂಬ ಬಗ್ಗೆ ಗೊಂದಲಗಳಿವೆ. ಹೀಗಾಗಿ ಎಲ್ಲ ಗೊಂದಲ ಗಳಿಗೆ ಇತಿಶ್ರಿ ಹಾಡಿ ಎಂದು ಸುರ್ಜೆವಾಲಾಗೆ ಹೇಳಿದ್ದೇನೆ. ಡಿಕೆಶಿ ಅವರೇ ಮುಂದುವರಿಬೇಕಾ ಬೇಡ್ವಾ ಎನ್ನೋದನ್ನು ಹೈಕಮಾಂಡ್ ಹೇಳಲಿ ಎಂದರು.
ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಇರಬೇಕಾ ಬೇಡವಾ ಎಂಬುದು ಪಕ್ಷದ ಮೇಲ್ಮಟ್ಟದಲ್ಲಿ ಚರ್ಚೆ ಆಗಬೇಕು. ಬೇರೆಯವರು ಅಧ್ಯಕ್ಷ ಆಗಬೇಕಾ ಬೇಡ್ವಾ ಎಂಬುದನ್ನು ಹೈಕಮಾಂಡ್ ನಿರ್ಧಾರ ಮಾಡಲಿ. ನಾವೆಲ್ಲ ಇಲಾಖೆಗಳ ಮಂತ್ರಿಗಳಾದ ಮೇಲೆ ಪಕ್ಷಕ್ಕೆ ಟೈಮ್ ಕೊಡುವವರ ಸಂಖ್ಯೆ ಕಡಿಮೆ ಆಗಿದೆ ಎಂದರು ತಿಳಿಸಿದರು.
ಪಕ್ಷದ ಸಂಘಟನೆಯ ದೃಷ್ಟಿಯಿಂದ 2023 ರಲ್ಲಿ ಇದ್ದ ವೇಗ ಕುಂಠಿತವಾಗಿದೆ. ಲೋಕಸಭೆ ಚುನಾವಣೆ ಆದಮೇಲೆ ಅಧ್ಯಕ್ಷರನ್ನು ಬದಲಾವಣೆ ಮಾಡ್ತೀವಿ ಎಂಬುದು ಎಐಸಿಸಿ ನೋಟ್ ಇದೆ. ಕೆಸಿ ವೇಣುಗೋಪಾಲ್ ಅವರೇ ಬರೆದ ನೋಟ್ ಇದೆ. ಲೋಕಸಭೆ ಚುನಾವಣೆ ಮುಗಿದು ಆರು ತಿಂಗಳ ಮೇಲಾಯಿತು. ಅದನ್ನು ಜಾರಿಗೆ ಅನುಷ್ಟಾನಕ್ಕೆ ತರಬೇಕಲ್ವಾ? ಎಂದು ಸತೀಶ್ ಜಾರಕಿಹೊಳಿ ಪ್ರಶ್ನಿಸಿದರು.

ಕೆಪಿಸಿಸಿ ಅಧ್ಯಕ್ಷ ಹುದ್ದೆ ಖಾಲಿ ಇಲ್ಲ :ಡಿ.ಕೆ ಸುರೇಶ್

ಬೆಂಗಳೂರು: ಸದ್ಯಕ್ಕೆ ಕೆಪಿಸಿಸಿಯಲ್ಲಿ ಯಾವುದೇ ಹುದ್ದೆ ಖಾಲಿ ಇಲ್ಲ. ಅಧ್ಯಕ್ಷ ಸ್ಥಾನಕ್ಕೆ ಆಸೆ, ದುರಾಸೆ ನನ್ನಲ್ಲಿಲ್ಲ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಿಮ್ಮ ಹೆಸರು ಕೇಳಿಬರುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸುರೇಶ್, ಒಂದಷ್ಟು ಜನರು ನನ್ನನ್ನು ಖುಷಿಪಡಿಸಲು, ಮತ್ತೆ ಕೆಲವರು ಇನ್ನೊಬ್ಬರನ್ನು ಖುಷಿ ಪಡಿಸಲು ಹಾಗೂ ತಮ್ಮ ಅನುಕೂಲಕ್ಕಾಗಿ ಈ ರೀತಿ ಹೆಸರುಗಳನ್ನು ಹೇಳುತ್ತಿರುತ್ತಾರೆ. ನಾನು ಪ್ರಸ್ತುತ ವಿಶ್ರಾಂತಿಯಲ್ಲಿದ್ದೇನೆ. ಜನರು ಕೊಟ್ಟ ತೀರ್ಪನ್ನು ಪ್ರಸಾದ ಎಂದು ಸ್ವೀಕರಿಸಿ ಕೆಲಸ ಮಾಡುವವನು ನಾನು. ಯಾವುದೇ ಸ್ಥಾನ ಸಿಗಬೇಕು ಅಂತಾದರೆ ಸಿಕ್ಕೇ ಸಿಗುತ್ತದೆ. ಇಲ್ಲದಿದ್ದರೆ ಸಿಗುವುದಿಲ್ಲ. ಯಾವುದೂ ಇಲ್ಲಿ ಸ್ವಂತ ಸ್ವತ್ತಲ್ಲ. ಸಾರ್ವಜನಿಕವಾದ ಹುದ್ದೆಗಳಿವು” ಎಂದು ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ

ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ

ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ

ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಲಾಶ್ರೀ ಚವ್ಹಾಣ ಗೆ ಅಭಿನಂದಿಸಿದ ಡಾ.ಸುರೇಖಾ
    In (ರಾಜ್ಯ ) ಜಿಲ್ಲೆ
  • ಸಚಿವ ಎಂ. ಬಿ. ಪಾಟೀಲ ಅವರ ಪ್ರವಾಸ ವಿವರ
    In (ರಾಜ್ಯ ) ಜಿಲ್ಲೆ
  • ನ್ಯಾಯ ವ್ಯವಸ್ಥೆಯಲ್ಲಿ ಮಹತ್ವದ ಪಾತ್ರ ವಹಿಸುವ ನಿಖರ ತನಿಖೆ & ದೃಢ ಸಾಕ್ಷಿ
    In (ರಾಜ್ಯ ) ಜಿಲ್ಲೆ
  • ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾದಪೊಲೀಸ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • ಯಡ್ರಾಮಿ ಬಸವೇಶ್ವರ ಜಾತ್ರೆಯ ಅದ್ದೂರಿ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಪ್ರಕ್ರಿಯೆಯ ಪ್ರತಿ ಹಂತ ವೀಕ್ಷಿಸಿದ ಜಿ.ಪಂ. ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
  • ಗುರುದೇವಿ ಹಳ್ಳೂರ ಗೆ ಪಿ.ಎಚ್.ಡಿ. ಪ್ರದಾನ
    In (ರಾಜ್ಯ ) ಜಿಲ್ಲೆ
  • ಹಿಂದಿ ವಿಷಯದಲ್ಲಿ ನಿರ್ಧಾರ ಮರು ಪರಿಶೀಲಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಬಿರುಗಾಳಿ ಮಳೆಗೆ ನೆಲಕ್ಕೊರಗಿದ ಜೋಳದ ಬೆಳೆ
    In (ರಾಜ್ಯ ) ಜಿಲ್ಲೆ
  • ಚಿದಂಬರ ಸೇವಾ ಸಮಿತಿ ಪದಾಧಿಕಾರಿಗಳ ಆಯ್ಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.