Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು

ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ

ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜನರ‌ ನಿದ್ದೆಗೆಡಿಸಿದ್ದ ಡಕಾಯಿತರ ಗ್ಯಾಂಗ್ ಮೇಲೆ ಗುಂಡಿನ ದಾಳಿ!
(ರಾಜ್ಯ ) ಜಿಲ್ಲೆ

ಜನರ‌ ನಿದ್ದೆಗೆಡಿಸಿದ್ದ ಡಕಾಯಿತರ ಗ್ಯಾಂಗ್ ಮೇಲೆ ಗುಂಡಿನ ದಾಳಿ!

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಓರ್ವನ ಕಾಲಿಗೆ ಗುಂಡು | ಗಾಯಾಳು ವಶಕ್ಕೆ | ಮೂವರು ಪರಾರಿ | ನಗರವಾಸಿಗಳಲ್ಲಿ ಮುಂದುವರೆದ ಆತಂಕ | ಪೊಲೀಸರ ಸಾಹಸಕ್ಕೆ ನಾಗರಿಕರ ಪ್ರಶಂಸೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದಲ್ಲಿ ಶುಕ್ರವಾರ ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಪೊಲೀಸರ ಗುಂಡಿನ ಮೊರೆತ ಕೇಳಿದೆ. ಕಳೆದ ಐದು ದಿನಗಳಿಂದ ಜಿಲ್ಲೆಯ ಜನರ‌ ನಿದ್ದೆಗೆಡಿಸಿದ್ದ ಡಕಾಯಿತರ ಗ್ಯಾಂಗ್ ಮೇಲೆ ಗುಂಡಿನ ದಾಳಿ ಮಾಡಲಾಗಿದೆ. ಓರ್ವ ದುರುಳನ ಕಾಲಿಗೆ ಗುಂಡು ತಗುಲಿ ಆಸ್ಪತ್ರೆ ಪಾಲಾಗಿದ್ದು, ಇನ್ನು ಮೂವರು ಪರಾರಿಯಾಗಿದ್ದಾರೆ. ರಾತ್ರಿ ಇಡೀ ಕಾರ್ಯಾಚರಣೆ ನಡೆಸಿದ ಪೊಲೀಸರು ಕೊನೆಗೂ ಓರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವಿಜಯಪುರ ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ದರೋಡೆಕೋರರ ತಂಡ ಪ್ರತಿದಿನ ಒಂದೊಂದು ಪ್ರದೇಶದಲ್ಲಿ ದಾಳಿ ಮಾಡಿ ಚಿನ್ನಾಭರಣ ದೋಚುತ್ತಿತ್ತು.‌‌ ವಿಜಯಪುರ ಪೊಲೀಸರಿಗೆ ಸವಾಲಾಗಿದ್ದ, ಈ ಗ್ಯಾಂಗ್ ಬಂಧನಕ್ಕೆ ಕಾರ್ಯಾಚರಣೆ ನಡೆಸಿದ ಪೊಲೀಸರು ಗುಂಡಿನ ದಾಳಿ ಮಾಡಿ ಆರೋಪಿಯನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವಿಜಯಪುರ ನಗರದ ಟೋಲ ನಾಕಾ ಬಳಿ ಬೆಳಗಿನ ಜಾವ 3 ಗಂಟೆಗೆ ಪರಾರಿಯಾಗುತ್ತಿದ್ದ ದರೋಡೆಕೋರ ಮೇಲೆ ಗುಂಡು ಹಾರಿಸಲಾಗಿದೆ. ವಿಜಯಪುರದ ಕನಕದಾಸ ಬಡಾವಣೆಯಲ್ಲಿ ಮನೆ ದರೋಡೆಗೆ ಬಂದಿದ್ದ ಬಗ್ಗೆ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಆರಕ್ಷಕರು ಖದೀಮರನ್ನ ಬೆನ್ನಟ್ಟಿದ್ದು, ನಗರದ ಹೊರವಲಯದ ಟೋಲ್ ನಾಕಾ ಬಳಿ ಪರಾರಿಯಾಗುವ ವೇಳೆ ಗುಂಡೇಟು ನೀಡಲಾಗಿದ್ದು, ಮಧ್ಯಪ್ರದೇಶ ಮೂಲದ ಮಹೇಶ್ ಎಂಬಾತನಿಗೆ ಗುಂಡು ತಗುಲಿವೆ. ಉಳಿದ ಮೂವರು ಪರಾರಿಯಾಗಿದ್ದು, ಅವರ ಶೋಧಕ್ಕಾಗಿ ತಂಡಗಳನ್ನ ರಚನೆ ಮಾಡಲಾಗಿದೆ.
ತೊಗರಿ ಹೊಲದಲ್ಲಿ ಓಡಿ ಹೋಗುತ್ತಿದ್ದ ಆರೋಪಿಗಳ ಮೇಲೆ ಫೈರಿಂಗ್ ಮಾಡುವ ವೇಳೆ ಕತ್ತಲಾಗಿದ್ದ ಕಾರಣ, ಗುಂಡೇಟು ತಿಂದವನು ಕಂಡಿರಲಿಲ್ಲ. ಬೆಳಿಗ್ಗೆ ಅದೇ ಜಾಗದಲ್ಲಿ ಮತ್ತೆ ಹುಡುಕಾಟ ನಡೆಸಿದಾಗ ಗುಂಡೇಟು ಬಿದ್ದ ಆರೋಪಿಯು ಅಲ್ಲೆ ಕುಸಿದು ಬಿದಿದ್ದ‌. ಬಳಿಕ ಆತನನ್ನು ವಶಕ್ಕೆ ಪಡೆದ ಪೋಲೀಸರು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ.
ಸದ್ಯ ಓರ್ವ ಪೊಲೀಸರಿಗೆ ತಗಲಾಕೊಂಡಿದ್ದು, ಉಳಿದವರನ್ನ ಆದಷ್ಟು ಬೇಗ ಬಂಧಿಸಬೇಕಾಗಿದೆ. ಜನರಿಗೆ ಖದೀಮರ ಬಗ್ಗೆ ಇರುವ ಭಯ ಹೋಗಲಾಡಿಸಬೇಕಿದೆ.
ಜಿಲ್ಲಾ ಎಸ್ಪಿ ಲಕ್ಷ್ಮಣ ನಿಂಬರಗಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದು, ತನಿಖೆ ಮುಂದುವರೆದಿದೆ.

ಗಸ್ತು ಹೆಚ್ಚು ಮಾಡಲು ಮನವಿ

ಕಳೆದ ರಾತ್ರಿ ವಿಜಯಪುರದ ಜೈನಾಪುರ ಲೇಔಟ್ ನಲ್ಲಿ ಸಂತೋಷ ಎನ್ನುವವರ ಮನೆಗೆ ದಾಳಿ ಮಾಡಿದ್ದ ಖದೀಮರು ಅವರಿಗೆ ಚಾಕು ಇರಿದು ಅವರ ಪತ್ನಿ ಬಳಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು.
ಈ ಪ್ರಕರಣ ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿತ್ತು. ಹೀಗಾಗಿ ಅತ್ಯಂತ ಕಠಿಣ ಚಾಲೆಂಜ್ ಸ್ವೀಕರಿಸಿದ ಪೊಲೀಸರು ಖದೀಮರ ಬಂಧನಕ್ಕಾಗಿ ವಿಶೇಷ ತಂಡ ರಚನೆ ಮಾಡಿದ್ದರು. ಕಾರ್ಯಾಚರಣೆ ನಡೆಸಿದ ಸಿಪಿಐ ಮಲ್ಲಯ್ಯ ಮಠಪತಿ
ಕೊನೆಗೂ ಆರೋಪಿಗಳಿಗೆ ಗುಂಡೇಟು ನೀಡಿದ್ದಾರೆ.‌ ಇನ್ನು ದರೋಡೆಕೋರರು ಉಳಿದವರು ಪರಾರಿಯಾಗಿದ್ದರ ಬಗ್ಗೆ ನಗರದ ಜನರಲ್ಲಿ ಆತಂಕ ಮುಂದುವರೆದಿದ್ದು, ಗಸ್ತು ಹೆಚ್ಚು ಮಾಡುವಂತೆ ಮನವಿ ಮಾಡಿದ್ದಾರೆ.

“ತಪ್ಪಿಸಿಕೊಳ್ಳುತ್ತಿದ್ದ ಮುಸುಕುಧಾರಿಗಳ ಮೇಲೆ ಐದು ಸುತ್ತು ಗುಂಡಿನ ದಾಳಿ ನಡೆಸಲಾಗಿದೆ. ಓರ್ವನ ಕಾಲಿಗೆ ಮೂರು ಗುಂಡು ತಗುಲಿವೆ. ಮುಸುಕುಧಾರಿ ಗ್ಯಾಂಗ್ ಸಂಬಂಧ ಈವರೆಗೆ ಮೂರು ಪ್ರಕರಣಗಳು ದಾಖಲಾಗಿದ್ದವು. ಹೀಗಾಗಿ ದರೋಡೆಕೋರರ ಬಂಧನಕ್ಕೆ ತಂಡಗಳ ರಚನೆ ಮಾಡಿದ್ವಿ. ಗೋಳಗುಮ್ಮಟ ಸಿಪಿಐ ಮಲ್ಲಯ್ಯ ಮಠಪತಿ ಗುಂಡು ಹಾರಿಸಿ ಓರ್ವ ದರೋಡೆಕೋರನನ್ನು ಬಂಧಿಸಿದ್ದಾರೆ. ಮಹೇಶ ಎಂಬ ವ್ಯಕ್ತಿ ಬಂಧಿತ ಆರೋಪಿಯಾಗಿದ್ದು, ಮಧ್ಯಪ್ರದೇಶ ಮೂಲದವರು ಎಂದು ತಿಳಿದುಬಂದಿದೆ. ಉಳಿದ ದರೋಡೆಕೋರರ ಪತ್ತೆಗೆ ಬಲೆ ಬೀಸಿದ್ದೇವೆ.”

– ಲಕ್ಷ್ಮಣ ನಿಂಬರಗಿ
ಎಸ್ಪಿ ವಿಜಯಪುರ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು

ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ

ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ

ಗಡಿ ರಕ್ಷಿಸುತ್ತಿರುವ ಸೈನಿಕರು ನಿಜ ಹೀರೋಗಳು :ಹಂಚಲಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು
    In (ರಾಜ್ಯ ) ಜಿಲ್ಲೆ
  • ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ
    In ವಿಶೇಷ ಲೇಖನ
  • ಗಡಿ ರಕ್ಷಿಸುತ್ತಿರುವ ಸೈನಿಕರು ನಿಜ ಹೀರೋಗಳು :ಹಂಚಲಿ
    In (ರಾಜ್ಯ ) ಜಿಲ್ಲೆ
  • ವಿಧಾನಸಭೆಯಲ್ಲಿ ಡಿಸಿಎಂ ಡಿಕೆಶಿ ವರ್ತನೆ ಸರಿಯಲ್ಲ :ಯತ್ನಾಳ
    In (ರಾಜ್ಯ ) ಜಿಲ್ಲೆ
  • ಒಲವಿನ ಪೂಜೆಯಲಿ ಒಂದಾಗೋಣ
    In ವಿಶೇಷ ಲೇಖನ
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.