ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಪ.ಜಾತಿ/
ಪ.ಪಂಗಡದವರಿಗಾಗಿ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ೨೦೨೪-೨೫ನೇ ಸಾಲಿನ ವಿಶೇಷ ಘಟಕ ಯೋಜನೆ/ ಗಿರಿಜನ ಉಪ ಯೋಜನೆಯಡಿ ಜವಳಿ ಕ್ಷೇತ್ರಕ್ಕೆ ಸಂಬಂಧಿಸಿದ ಸಣ್ಣ ಮತ್ತು ಅತಿ ಸಣ್ಣ ಎಸ್.ಎಮ್.ಇ ಘಟಕ ಸ್ಥಾಪನೆಗೆ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಿದೆ.
ವಿಜಯಪುರ ಜಿಲ್ಲೆಗೆ ವಿಶೇಷ ಯೋಜನೆಯಡಿ ಭೌತಿಕ-೦೫ ಹಾಗೂ ಗಿರಿಜನ ಉಪ ಯೋಜನೆಯಡಿ ಭೌತಿಕ-೩ ಗುರಿ ನಿಗದಿಪಡಿಸಲಾಗಿದೆ. ಆಸಕ್ತರು ಜ.೨೪ರ ಒಳಗಾಗಿ ಜಿಲ್ಲಾ ಪಂಚಾಯತ್ ಕೈಮಗ್ಗ ಮತ್ತು ಜವಳಿ ಇಲಾಖೆಗೆ ಅರ್ಜಿ ಸಲ್ಲಿಸಬಹುದು. ಮೊದಲು ಅರ್ಜಿ ಸಲ್ಲಿಸಿದವರಿಗೆ ಆದ್ಯತೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕೈಮಗ್ಗ ಮತ್ತು ಜವಳಿ ಇಲಾಖೆಯ ಕಛೇರಿಗೆ ಭೇಟಿ ನೀಡಬಹುದು ಅಥವಾ ಮೊ.ಸಂ: ೯೯೦೨೫೬೧೪೪೧/ ೯೫೩೮೧೧೪೪೩೪ಗೆ ಸಂಪರ್ಕಿಸಬಹುದು ಎಂದು ಸಹಾಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
