ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ವಿಶ್ವ ದಾಸೋಹ ದಿನಾಚರಣೆಯ ಅಂಗವಾಗಿ ಜ.೨೧ ರಂದು ಬೆಳಿಗ್ಗೆ ೧೦:೩೦ ಕ್ಕೆ ಪಟ್ಟಣದ ಹುಡ್ಕೋ ಬಡಾವಣೆಯಲ್ಲಿರುವ ಹೇಮರೆಡ್ಡಿ ಮಲ್ಲಮ್ಮ ವೃತ್ತದ ಬಳಿಯ ಗಾರ್ಡನ್ ಜಾಗೆಯಲ್ಲಿ ಲಿಂ.ಹಾನಗಲ್ಲ ಕುಮಾರೇಶ್ವರ ಮಹಾಸ್ವಾಮಿಗಳು, ಸಿದ್ಧಗಂಗಾ ಮಠದ ಲಿಂ.ಶಿವಕುಮಾರ ಮಹಾಸ್ವಾಮಿಗಳು ಮತ್ತು ತಾಲೂಕಿನ ಮಡಿಕೇಶ್ವರ ಗ್ರಾಮದ ಲಿಂ.ಚನ್ನಣ್ಣ ದೇಸಾಯಿ ಅವರ ಪುಣ್ಯ ಸ್ಮರಣೋತ್ಸವ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಸಾನಿಧ್ಯವನ್ನು ಕಪ್ಪತ್ತಗುಡ್ಡದ ನಂದಿವೇರಿ ಮಠದ ಶಿವಕುಮಾರ ಮಹಾಸ್ವಾಮಿಗಳು, ಕಮತಗಿಯ ಹೊಳೆಹುಚ್ಚೇಶ್ವರ ಸಂಸ್ಥಾನ ಮಠದ ಹುಚ್ಚೇಶ್ವರ ಮಹಾಸ್ವಾಮಿಗಳು, ಮಸೂತಿಯ ಪ್ರಭುಕುಮಾರೇಶ್ವರ ಮಠದ ಪ್ರಭುಕುಮಾರ ಶಿವಾಚಾರ್ಯ ಮಹಾಸ್ವಾಮಿಗಳು, ಗುಳೆದಗುಡ್ಡ ಮುರುಘಾ ಮಠದ ಕಾಶೀನಾಥ ಮಹಾಸ್ವಾಮಿಗಳು, ಗುಳೇದಗುಡ್ಡ ಮರಡಿ ಮಠದ ಖಾಡಸಿದ್ದೇಶ್ವರ ಮಹಾಸ್ವಾಮಿಗಳು, ಕುಂಟೋಜಿ ಸಂಸ್ಥಾನ ಭಾವೈಕ್ಯತಾ ಹಿರೇಮಠದ ಡಾ.ಚನ್ನವೀರ ಶಿವಾಚಾರ್ಯರು ವಹಿಸುವರು. ಮುಖ್ಯ ಅತಿಥಿಗಳಾಗಿ ಕಸಾಪ ನಿಕಟಪೂರ್ವ ಅಧ್ಯಕ್ಷ ಎಂ.ಬಿ.ನಾವದಗಿ, ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ಆಗಮಿಸಲಿದ್ದಾರೆ. ಸಮಾರಂಭದ ಬಳಿಕ ಅನ್ನಸಂತರ್ಪಣೆ ಇರಲಿದೆ. ಎಲ್ಲ ಮಾತೆಯರು ಮತ್ತು ಮಹನೀಯರು ಆಗಮಿಸುವಂತೆ ಜಿಲ್ಲಾ ಪಂಚಾಯತ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ವೀರಶೈವ ಲಿಂಗಾಯತ ಸಮಾಜ ಮತ್ತು ಜೆಸಿ ಗೆಳೆಯರ ಬಳಗ ಪ್ರಕಟಣೆಯ ಮೂಲಕ ಕೋರಿದ್ದಾರೆ.
ಪುಣ್ಯ ಸ್ಮರಣೋತ್ಸವ ನೆನಪಿನಲ್ಲಿ ಜ೨೦ ರಿಂದ ಜ೨೨ ರವರೆಗೆ ಮೂರು ದಿನಗಳ ಕಾಲ ಸಾಣೇಹಳ್ಳಿ ಶಿವಸಂಚಾರ ನಾಟಕೋತ್ಸವದ ವತಿಯಿಂದ ಬಂಗಾರದ ಮನುಷ್ಯ, ತುಲಾಭಾರ ಮತ್ತು ಕೋಳೂರ ಕೊಡಗೂಸು ಎಂಬ ನಾಟಕವನ್ನು ಇಲ್ಲಿನ ಹುಡ್ಕೋ ಬಡಾವಣೆಯ ಗವಿಸಿದ್ದೇಶ್ವರ ವೇದಿಕೆಯಲ್ಲಿ ಪ್ರತಿದಿನ ನಂಜೆ ೬ಗಂಟೆಗೆ ನಡೆಸಿಕೊಡಲಿದ್ದಾರೆ.
