Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು

ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ

ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಂಬಿಗರ ಚೌಡಯ್ಯನವರ ವಿಚಾರಧಾರೆ ಅಳವಡಿಸಿಕೊಳ್ಳಿ :ಮಠ
(ರಾಜ್ಯ ) ಜಿಲ್ಲೆ

ಅಂಬಿಗರ ಚೌಡಯ್ಯನವರ ವಿಚಾರಧಾರೆ ಅಳವಡಿಸಿಕೊಳ್ಳಿ :ಮಠ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಧುಮಕನಾಳದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ನೂತನ ಮೂರ್ತಿ ಪ್ರತಿಷ್ಠಾಪನೆ ಹಾಗೂ ಅನಾವರಣ

ಉದಯರಶ್ಮಿ ದಿನಪತ್ರಿಕೆ

ಚಡಚಣ: ಕಾಯಕ ನಿಷ್ಠೆಯ, ನೇರ, ನಿಷ್ಠುರ, ಸಮಾಜದಲ್ಲಿನ ಮೂಡ ನಂಬಿಕೆಗಳನ್ನು ಹೋಗಲಾಡಿಸಲು ಶ್ರಮಿಸಿದ ಮಹಾನ್ ವಚನಕಾರ ನಿಜಶರಣ ಅಂಬಿಗರ ಚೌಡಯ್ಯನವರ ವಿಚಾರಧಾರೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತಾಗಬೇಕು ಎಂದು ವೇದಮೂರ್ತಿ ಸಂಗಯ್ಯ ಮಠ ಹೇಳಿದರು.
ಸಮೀಪದ ಧುಮಕನಾಳ ಗ್ರಾಮದಲ್ಲಿ ನೂತನ ಮೂರ್ತಿ ಪ್ರತಿಷ್ಥಾಪನೆ ಹಾಗೂ ಅನಾವರಣ ಹಾಗೂ ಜಯಂತಿ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ ಮಾತನಾಡಿದ ಅವರು, ೧೨ ನೇ ಶತಮಾನದ ಮಹಾನ್ ಚೇತನ, ಖ್ಯಾತ ವಚನಕಾರರು ಸಮಾಜದಲ್ಲಿನ ಅನಿಷ್ಠ ಪದ್ದತಿಗಳನ್ನು ತಮ್ಮ ವಚನಗಳ ಮೂಲಕ ತಿದ್ದುವ ಕಾರ್ಯ ಮಾಡಿದ್ದಾರೆ. ಅಂತಹ ಮಹಾನ್ ಶರಣದ ವಿಚಾರಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ತಾ.ಪಂ ಸದಸ್ಯ ರಾಜಶೇಖರ ಝಳಕಿ ದ್ವಜಾರೋಹಣ ನೆರವೇರಿಸಿ ಮಾತನಾಡಿ, ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವ ಕಾರ್ಯ ಮಾಡಿದ್ದಾರೆ ಅಂತಹ ಮಹಾನ್ ನಿಜಶರಣ ಅಂಬಿಗರ ಚೌಡಯ್ಯ ರವರ ಪುತ್ಥಳಿ ನಿರ್ಮಾಣ ಮಾಡಿದ್ದೀರಿ ನಿಜಕ್ಕೂ ಶ್ಲಾಘನೀಯ ಎಂದು ಹೇಳಿದರು. ಅಂಬಿಗರ ಚೌಡಯ್ಯನವರು ೧೨ ನೇ ಶತಮಾನದ ಅನೇಕ ಶರಣರಂತೆ ಅಂಬಿಗರ ಚೌಡಯ್ಯನವರು ಪ್ರಮುಖ ವಚನಕಾರರಲ್ಲಿ ಒಬ್ಬರಾಗಿದ್ದಾರೆ. ಅತ್ಯಂತ ನಿಷ್ಠುರ, ದಾರ್ಶನಿಕ, ನೇರ ವ್ಯಕ್ತಿತ್ವ ತಮ್ಮ ಕಾಯಕ ಅಂಬಿಗ ವೃತಿಯೊಂದಿಗೆ ಸಮಾಜವನ್ನು ತಿದ್ದುವ ಕಾರ್ಯ ಮಾಡಿದ್ದಾರೆ. ಹಲವಾರು ವಚನಗಳನ್ನು ಸೃಷ್ಟಿಸಿ ಸಮಾಜ ಸರಿದಾರಿಯಲ್ಲಿ ಮುನ್ನಡೆಯಲು ಪ್ರಮುಖರಾಗಿದ್ದಾರೆ. ಸಮಾಜದಲ್ಲಿನ ಮೂಡನಂಬಿಕಗಳನ್ನು ಹೋಗಲಾಡಿಸಲು ತಮ್ಮನ್ನು ತಾವು ತೊಡಗಿಸಿಕೊಂಡವರು ಅದು ಅಂಬಿಗರ ಚೌಡಯ್ಯನವರಾಗಿದ್ದಾರೆ ಎಂದು ಹೇಳಿದರು.
ಈ ವೇಳೆ ನಂದರಗಿ ಗ್ರಾಮ ಪಂಚಾಯತ ಸದಸ್ಯ ಪ್ರಕಾಶಗೌಡ ಮಾತನಾಡಿ, ನಿಜ ಶರಣ ಅಂಬಿಗರ ಚೌಡಯ್ಯ ತತ್ವಸಿದ್ದಾಂತಗಳನ್ನು ಪಸರಿಸಲು ಗ್ರಾಮದ ಅಂಬಿಗ ಸಮಾಜದ ಮುಖಂಡರು ಇಂತಹ ಪುತ್ಥಳಿ ನಿರ್ಮಾಣ ಲಯಗೊಂಡಿರುವ ಕಾರ್ಯ ಮೆಚ್ಚುವಂಥದ್ದು ಇದರೊಂದಿಗೆ ಅವರ ತತ್ವ ಸಿದ್ದಾಂತಗಳನ್ನು ನಮ್ಮಲ್ಲಿ ಅಳವಡಿಸಿಕೊಳ್ಳುವದರೊಂದಿಗೆ ನಮ್ಮ ಜೀವನ ಸಾರ್ಥಕ ಪಡಿಸಿಕೊಳ್ಳಬೇಕು ಎಂದು ಹೇಳಿದರು.
ಕೆ ಎಂ ಎಫ್ ನಿರ್ದೇಶಕ ಸಂತೋಷಗೌಡ ಪಾಟೀಲ ಮಾತನಾಡಿದರು.
ಸೋಮವಾರದಂದು ಹತ್ತಳ್ಳಿಯ ಶ್ರೀ ಷ ಬ್ರ ಗುರುಪಾದೇಶ್ವರ ಶಿವಾಚಾರ್ಯರ ಅಮೃತ ಹಸ್ತದಿಂದ ನಿಜ ಶರಣ ಅಂಬಿಗರ ಚೌಡಯ್ಯ ನೂತನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಜರುಗಿತು ಅಂದು ರಾತ್ರಿ ತದ್ದೇವಾಡಿಯ ಚಂದ್ರಶೇಖರ ಶಿವಾಚಾರ್ಯರಿಂದ ವಿಶೇಷ ಪ್ರವಚನ ಕಾರ್ಯಕ್ರಮ ಜರುಗಿತು.
ಈ ಸಂದರ್ಭದಲ್ಲಿ ಬಸಯ್ಯ ಮಠ, ಗ್ರಾಮದ ಮುಖಂಡರಾದ ಶೇಕುಗೌಡ ಪಾಟೀಲ, ಸಂತೋಷಗೌಡ ಪಾಟೀಲ, ಚಂದ್ರಶೇಖರ ಪೂಜಾರಿ, ಸಾಹೇಬಗೌಡ ಬಿರಾದಾರ, ಮಾಜಿ ಸೈನಿಕರಾದ ವಿಜಯಕುಮಾರ ಪಾಟೀಲ, ಕಾಶಿನಾಥ ಬಿರಾದಾರ, ಬರಡೋಲ ಮಾಜಿ ಗ್ರಾ.ಪಂ ಸದಸ್ಯರು ತುಕಾರಾಮ ಶಿಂಧೆ, ನಂದರಗಿ ಗ್ರಾಮ ಪಂಚಾಯತಿ ಸದಸ್ಯರು ಅಪ್ಪುಗೌಡ ಪಾಟೀಲ, ಶ್ರೀಶೈಲ ಬಿರಾದಾರ, ಪ್ರಭುಲಿಂಗ ಪ್ರಧಾನಿ,ಅಬುಸಾಬ ದೊಡಮನಿ, ಚಂದ್ರಕಾಂತ ನಂದಗೊಂಡ, ಚಂದು ಡೆಂಗಿ,ಪಾಂಡುರಂಗ ನಂದಗೊಂಡ, ಸತೀಶ ದೇವಕತೆ, ಚಡಚಣ ತಾ ಪಂಚಮಸಾಲಿ ಅಧ್ಯಕ್ಷ ಭೀಮನಗೌಡ ಪಾಟೀಲ, ಬಸವರಾಜ ಕೋಳಿ, ನೀಲಕಂಠ ಪಾಟೀಲ, ರಾಜಕುಮಾರ ಜಾಧವ, ಪ್ರಭಾಕರ ಪಾಟೀಲ, ಮಲಿಕ್ ಜಮಾದಾರ, ರಮೇಶ ಕೋಳಿ, ಧರೆಪ್ಪ ಕೋಳಿ, ಘೇನು ಕೋಳಿ, ರಾಜಕುಮಾರ ಹೋಳ್ಕರ, ದಿಲಿಪ ಪಾಟೀಲ, ಲಾಲಸಾಬ ಜಮಾದಾರ, ಅಣ್ಣಾರಾಯಗೌಡ ಪಾಟೀಲ, ತುಳಜಪ್ಪ ಕೋಳಿ, ಭಾಗಣ್ಣ ಕೋಳಿ, ಸಮಸ್ತ ತಳವಾರ ಸಮಾಜದ ಮುಖಂಡರು, ಸುತ್ತಮುತ್ತಲಿನ ಗ್ರಾಮದ ಜನರು ಸೇರಿದಂತೆ ಉಪಸ್ಥಿತರಿದ್ದರು. ಸುರೇಶ ಬಂಡಿ ಕಾರ್ಯಕ್ರಮ ನಿರೂಪಿಸಿದರು.

” ೧೨ ನೇ ಶತಮಾನದ ಶ್ರೇಷ್ಠ ನಿಜ ಶರಣ ಅಂಬಿಗರ ಚೌಡಯ್ಯನವರು ಇಂದಿನ ಸಮಾಜಕ್ಕೆ ಎಂದೆಂದಿಗೂ ಆದರ್ಶಪ್ರಾಯರು.ಅವರ ವಿಚಾರಧಾರೆಗಳನ್ನು ನಮ್ಮಲ್ಲಿ ಜೀವಂತವಾಗಿಸಬೇಕಾಗಿದೆ ಆದ್ದರಿಂದ ಇಂದು ಅವರ ಮೂರ್ತಿ ಪ್ರತಿಷ್ಠಾಪನೆಯಿಂದ ಬಹು ದಿನಗಳ ಕನಸು ಇಂದು ಈಡೇರಿದಂತಾಗಿದೆ.”

– ದಯಾನಂದ ಕೋಳಿ
ತಳವಾರ ಸಮಾಜದ ಮುಖಂಡ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು

ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ

ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ

ಗಡಿ ರಕ್ಷಿಸುತ್ತಿರುವ ಸೈನಿಕರು ನಿಜ ಹೀರೋಗಳು :ಹಂಚಲಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಮೀಣ ಮಟ್ಟದಲ್ಲಿ ಮಧ್ಯಸ್ಥಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು
    In (ರಾಜ್ಯ ) ಜಿಲ್ಲೆ
  • ರೋಣಿಹಾಳ 110 ಕೆವಿ ಮಾರ್ಗ ನಿರ್ವಹಣೆ: ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಹೊಸ ತಲೆಮಾರಿನ ಕ್ರಾಂತಿಕಾರಕ ಸಾಹಿತಿ ಪಿ.ಲಂಕೇಶ
    In ವಿಶೇಷ ಲೇಖನ
  • ಗಡಿ ರಕ್ಷಿಸುತ್ತಿರುವ ಸೈನಿಕರು ನಿಜ ಹೀರೋಗಳು :ಹಂಚಲಿ
    In (ರಾಜ್ಯ ) ಜಿಲ್ಲೆ
  • ವಿಧಾನಸಭೆಯಲ್ಲಿ ಡಿಸಿಎಂ ಡಿಕೆಶಿ ವರ್ತನೆ ಸರಿಯಲ್ಲ :ಯತ್ನಾಳ
    In (ರಾಜ್ಯ ) ಜಿಲ್ಲೆ
  • ಒಲವಿನ ಪೂಜೆಯಲಿ ಒಂದಾಗೋಣ
    In ವಿಶೇಷ ಲೇಖನ
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.