ನಿಜ ಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿದ ಅಪರ ಜಿಲ್ಲಾಧಿಕಾರಿ ಸೊಮಲಿಂಗ ಗೆಣ್ಣೂರು ಅಭಿಮತ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸಮಾಜಕ್ಕೆ ಅಂಟಿಕೊಂಡಂತಹ ರೋಗಗಳ ನಾಶಕ್ಕೆ ಅಂಬಿಗರ ಚೌಡಯ್ಯರ ವಚನಗಳು ಮದ್ದುಗಳಾಗಿದ್ದವು ಎಂದು ಅಪರ ಜಿಲ್ಲಾಧಿಕಾರಿ ಸೊಮ್ಮಲಿಂಗ ಗೆಣ್ಣೂರು ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ನಿಜ ಶರಣ ಅಂಬಿಗರ ಚೌಡಯ್ಯ ಅವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದ ಅಂಕುಡೊಂಕುಗಳನ್ನು ನೇರ, ನಿಷ್ಠುರವಾಗಿ ತಮ್ಮ ವಚನಗಳಲ್ಲಿ ಅಂಬಿಗರ ಚೌಡಯ್ಯನವರು ಹೇಳಿ ಸಮಾಜಕ್ಕೆ ಬೆಳಕಾಗಿದ್ದಾರೆ. ಮೂಡನಂಬಿಕೆಗಳು ಸಮಾಜಕ್ಕೆ ಆಘಾತಕಾರಿ ಅಂತಹ ಮೂಡನಂಬಿಕೆಗಳ ವಿರುದ್ಧ ನೇರವಾಗಿ ಮಾತನಾಡಿದ ಶಿವಶರಣ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಂದಿನ ಸಮಾಜದಲ್ಲಿನ ಮೌಢ್ಯಗಳ ನಿರ್ಮೂಲನೆಗಾಗಿ ಶ್ರಮಿಸಿದವರು. ಮಹಿಳೆಯರು ಮತ್ತು ಪುರುಷ ಸಮಾನರೆಂದು ಪ್ರತಿಪಾದಿಸಿದ ತತ್ವನಿಷ್ಟ ಶ್ರೇಷ್ಟ ತತ್ವಜ್ಞಾನಿ, ವಚನಕಾರರಾಗಿದ್ದರು. ಅವರ ವಚನಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಅವರು ಹೇಳಿದರು.
ನಿಜ ಶರಣ ಅಂಬಿಗರ ಚೌಡಯ್ಯ ಅವರ ಕುರಿತು ಸಾಹಿತಿ ಸತ್ಯಣ್ಣ ಹಡಪದ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ನಿಜ ಶರಣ ಅಂಬಿಗರ ಚೌಡಯ್ಯನವರ ಸಂಘದ ಜಿಲ್ಲಾಧ್ಯಕ್ಷ ಸಾಹೇಬ್ಗೌಡ ಬಿರಾದಾರ ಮಾತನಾಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಬೋವಿ ಸ್ವಾಗತಿಸಿದರು. ಸುಭಾಸ ಕನ್ನೂರ ನಿರೂಪಿಸಿ, ವಂದಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಾಧಿಕಾರಿ ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಪಂಚಾಯತ ಯೋಜನಾ ಅಂದಾಜು ಮತ್ತು ಮೌಲ್ಯಮಾಪನ ಅಧಿಕಾರಿ ಎ.ಬಿ.ಅಲ್ಲಾಪುರ, ಸಮಾಜ ಮುಖಂಡರಾದ ಭರತ ಕೋಳಿ, ಶಿವಾನಂದ ಅಂಬಿಗರ, ಗುರುನಾಥ್ ವಾಲಿಕರ್, ಮಹಾದೇವ ಗದ್ಯಾಳ, ಅಶೋಕ ಅಂಬಿಗರ, ಅಪ್ಪು ಕೊಲಕಾರ, ಪ್ರವೀಣ ಗಣಿ, ದಾನಮ್ಮ ಕೋಳಿ, ರೇಣುಕಾ ಮಣ್ಣಿಕೆರಿ, ಪೂಜಾ ಕೋಳಿ, ಹನಮಂತ ನಾಯ್ಕೊಡಿ, ರೂಪಾ, ಕವಿತಾ ತಳವಾರ, ಅಣಪೂರ್ಣಾ ಕೋಳಿ, ಸಂತೋಷ ತಟಗಾರ, ಹಣುಮಂತ ಜಕಣ್ಣವರ, ಪರಶುರಾಮ ಅಳಗುಂಡಿ, ಸೋಮಣಗೌಡ ಕಲ್ಲೂರು, ಭೀಮರಾಯ ಜಿಗಜೀನಗಿ, ದೇವೆಂದ್ರ ಮಿರೇಕರ, ಲಕ್ಷ್ಮಣ್ ಜಾವಡಗಿ, ಸಿ.ಎಸ್.ಕಮತಗಿ, ಪಿ.ಕೆ. ಚೌದರಿ, ಜಿಲ್ಲಾಧಿಕಾರಿಗಳ ಕಛೇರಿ ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.