Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬ್ಯಾಂಕುಗಳಲ್ಲಿ ಎಲ್ಲ ರೀತಿಯ ಸುರಕ್ಷಾ ಕ್ರಮ ಪಾಲನೆ ಮಾಡಿ :ಪಿಎಸೈ
(ರಾಜ್ಯ ) ಜಿಲ್ಲೆ

ಬ್ಯಾಂಕುಗಳಲ್ಲಿ ಎಲ್ಲ ರೀತಿಯ ಸುರಕ್ಷಾ ಕ್ರಮ ಪಾಲನೆ ಮಾಡಿ :ಪಿಎಸೈ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ನಿಗದಿಪಡಿಸಿದ ಪ್ರಮಾಣಕ್ಕಿಂತ ಹೆಚ್ಚಿನ ಹಣವನ್ನು ಯಾವುದೇ ಕಾರಣಕ್ಕೂ ಬ್ಯಾಂಕುಗಳಲ್ಲಿ ಇಟ್ಟುಕೊಳ್ಳಬಾರದು. ಬ್ಯಾಂಕುಗಳ ಒಳ ಹಾಗೂ ಹೊರ ಆವರಣಗಳಲ್ಲಿ ಬ್ಯಾಂಕ್ ವ್ಯವಹಾರ ಮಾಡಲು ಬಂದಿರದೇ ಇರುವ ವ್ಯಕ್ತಿಗಳು, ಸಂಶಯಾಸ್ಪದ ರೀತಿಯಲ್ಲಿ ಬ್ಯಾಂಕ್ ಸಿಬ್ಬಂದಿ ಅಥವಾ ಗ್ರಾಹಕರನ್ನು ಗಮನಿಸುತ್ತಿರುವಂತಹವರ ಮೇಲೆ ತೀವ್ರ ನಿಗಾವಹಿಸಬೇಕು ಎಂದು ಪಿಎಸ್ಐ ಎಂ.ಬಿ. ಬಿರಾದಾರ ಹೇಳಿದರು.
ಪಟ್ಟಣ ವ್ಯಾಪ್ತಿಯಲ್ಲಿ ಬರುವ ವಿವಿಧ ಬ್ಯಾಂಕ್​​ ಮತ್ತು ಹಣಕಾಸು ಸಂಸ್ಥೆಗಳ ಅಧಿಕಾರಿಗಳ ಜೊತೆ ಪೊಲೀಸ ಠಾಣೆಯಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ಎಟಿಎಂ ಗಳಿಗೆ ಹಣ ಹಾಕಲು ಹೋಗುವಂತಹ ವಾಹನಗಳೊಂದಿಗೆ ಆಯುಧಗಳನ್ನು ಹೊಂದಿರುವ ಭದ್ರತಾ ಸಿಬ್ಬಂಧಿಯವರು ಕಡ್ಡಾಯವಾಗಿ ಇರುವಂತೆ ಜೊತೆಗೆ ಇತರೇ ಎಲ್ಲ ರೀತಿಯ ಸುರಕ್ಷಾ ಕ್ರಮಗಳನ್ನು ಪಾಲನೆ ಮಾಡುವುದು. ಎಟಿಎಂ ಗಳಿಗೆ ಹಗಲು ರಾತ್ರಿ ಸೂಕ್ತ ರೀತಿಯಲ್ಲಿ ಭದ್ರತಾ ವ್ಯವಸ್ಥೆ, ಕಡ್ಡಾಯವಾಗಿ ಸೆಕ್ಯೂರಿಟಿ ಗಾರ್ಡ್, ಉತ್ತಮ ಸಿಸಿ ಟಿವಿ ಅಳವಡಿಕೆ ಇರುವಂತೆ ಕ್ರಮ ಕೈಗೊಳ್ಳುವುದು, ಎಟಿಎಂ ಗಳಿಗೆ ಹಣ ತುಂಬುವ ಸಿಬ್ಬಂದಿ, ವಾಹನ ಚಾಲಕ, ಆಯುಧ ಹೊಂದಿದ ಭದ್ರತಾ ಸಿಬ್ಬಂದಿಯವರಿಗೆ ನೇಮಿಸಿಕೊಳ್ಳುವ ಮೊದಲು ಅವರುಗಳ ಪೂರ್ವಾಪರಗಳನ್ನು ತಿಳಿದುಕೊಳ್ಳಬೇಕು ಎಂದರು.
ಬ್ಯಾಂಕ್​​ ಮತ್ತು ಹಣಕಾಸು ಸಂಸ್ಥೆಗಳ ಜೊತೆ ಸುರಕ್ಷತಾ ಕ್ರಮ ಹಾಗೂ ಸೈಬರ್ ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ ತೆಗೆದುಕೊಳ್ಳುವ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಅಲ್ಲದೆ ಬ್ಯಾಂಕ್‌ಗಳಿಗೆ ಆಯುಧ ಹೊಂದಿದ ಸದೃಢ ಚುರುಕಾಗಿರುವ ಭದ್ರತಾ ಸಿಬ್ಬಂದಿಯನ್ನು ಕಡ್ಡಾಯವಾಗಿ ನೇಮಿಸಿಕೊಳ್ಳಬೇಕು, ಅಹಿತಕರ ಘಟನೆ ಸಂಭವಿಸುವ ಸಾಧ್ಯತೆಗಳು ಕಂಡುಬಂದರೆ ಸೆಕ್ಯೂರಿಟಿ ಗಾರ್ಡ್ ಹತ್ತಿರ ಎಲ್ಲಾ ಸಿಬ್ಬಂದಿಯವರಿಗೆ ಸುಲಭವಾಗಿ ನಿಲುಕುವಂತೆ ಎಮರ್ಜೇನ್ಸಿ ಸೈರನ್ ಸಿಸ್ಟಮ್ ಸ್ವಿಚ್‌ಗಳನ್ನು ಅಳವಡಿಸಬೇಕು. ಬ್ಯಾಂಕ್‌ಗಳಲ್ಲಿ ಸೆಕ್ಯೂರಿಟಿ ಗಾರ್ಡ್‌ಗಳನ್ನು ಭದ್ರತೆಯ ಸಲುವಾಗಿ ಮಾತ್ರ ಉಪಯೋಗಿಸಿಕೊಳ್ಳದೇ ಬೇರೆ ಬೇರೆ ಕೆಲಸಗಳಿಗೆ ಉಪಯೋಗಿಸುತ್ತಿರುವುದು ಕಂಡುಬಂದಿರುತ್ತದೆ. ಸದರಿ ಗಾರ್ಡ್‌ನವರು ರೈಫಲಗಳನ್ನು ಒಂದು ಕೋಣೆಯಲ್ಲಿಟ್ಟು ಇತರೇ ಕೆಲಸಗಳನ್ನು ಮಾಡುತ್ತಿರುವುದನ್ನು ನಮ್ಮ ಗಮನಕ್ಕೆ ಬಂದಿದ್ದು ಈ ರೀತಿ ಮಾಡಕೂಡದು. ಸೆಕ್ಯೂರಿಟಿ ಗಾರ್ಡ್ ಯಾವತ್ತೂ ಬ್ಯಾಂಕಿನ ಬಾಗಿಲಲ್ಲಿ ನಿಂತು ಹೊರ ಹೋಗುವ ಒಳ ಬರುವ ವ್ಯಕ್ತಿಗಳ ಮೇಲೆ ನಿಗಾವಹಿಸಿ ಸಂಶಯಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಅಂತಹವರನ್ನು ವಿಚಾರಣೆ ಮಾಡಬೇಕು.
ಬ್ಯಾಂಕ್‌ಗಳಿಂದ ಎಟಿಎಂ ಗಳಿಗೆ ಹಣ ತುಂಬಲು, ಹಣ ತೆಗೆದುಕೊಂಡು ಹೋಗುವ ಏಜನ್ಸಿಯವರು ಕಡ್ಡಾಯವಾಗಿ ಸೆಕ್ಯೂರಿಟಿ ಗಾರ್ಡ್ ಇಲ್ಲದೇ ಹಣ ತೆಗೆದುಕೊಂಡು ಹೋಗಲು ಬ್ಯಾಂಕ್‌ ಗಳಿಗೆ ಬರುವಂತಿಲ್ಲ, ಈ ಬಗ್ಗೆ ನೀವು ಏಜನ್ಸಿಯವರಿಗೆ ಸೂಕ್ತ ತಾಕೀತು ಮಾಡುವುದು ಮತ್ತು ಸೆಕ್ಯೂರಿಟಿ ಗಾರ್ಡ್ ಇಲ್ಲದೇ ಇರುವುದು ನಿಮಗೆ ಕಂಡುಬಂದ ಕೂಡಲೇ ನೀವು ಯಾವುದೇ ಕಾರಣಕ್ಕೂ ಹಣ ಅವರಿಗೆ ಕೊಡಕೂಡದು ಇತರೆ ಮುಂಜಾಗ್ರತಾ ಕ್ರಮದ ಕುರಿತು ಬ್ಯಾಂಕ ಅಧಿಕಾರಿಗಳಿಗೆ ಪಿಎಸ್ಐ ತಿಳಿಹೇಳಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಅಂತರಂಗದ ಅರಿವು ಜಾಗೃತಗೊಳಿಸುವ ಪ್ರಕ್ರಿಯೆ ಲಿಂಗದೀಕ್ಷೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.