ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ಭಾರತದ ಸಂವಿಧಾನ ಶ್ರೇಷ್ಠವಾಗಿದೆ. ಇದು ಎಲ್ಲ ಜಾತಿ, ಮತ, ಪಂಥಗಳ ಧರ್ಮಗ್ರಂಥವೇನಿಸಿದೆ ಎಂದು ಶಾಸಕ ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ) ಹೇಳಿದರು.
ಪಟ್ಟಣದ ಶಾಸಕರ ಮಾದರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಭಾನುವಾರ ಜರುಗಿದ ೭೬ನೇ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಶ್ವದಲ್ಲಿಯೇ ವಿಶೇಷವಾದ ನಮ್ಮ ಸಂವಿಧಾನದ ಮಹತ್ವ, ಧ್ಯೆಯೋದ್ಧೇಶಗಳನ್ನು ನಾವುಗಳೆಲ್ಲಾ ಅರಿಯಬೇಕಾಗಿದೆ ಎಂದರು.
ತಹಶೀಲ್ದಾರ್ ಪ್ರಕಾಶ ಸಿಂದಗಿ ಧ್ವಜಾರೋಹಣ ನೆರವೇರಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ನಂತರ ತಾಲ್ಲೂಕಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳು, ಸಾಧಕರು ಹಾಗೂ ಶಿಕ್ಷಕಿಯರನ್ನು ಸನ್ಮಾನಿಸಲಾಯಿತು. ನಂತರ ವಿವಿಧ ಶಾಲೆಗಳ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಶ್ರೀ ದೇವಣಗಾಂವ, ಉಪಾಧ್ಯಕ್ಷ ರಮೇಶ ಮಸಬಿನಾಳ, ಮುಖ್ಯಾಧಿಕಾರಿ ಎಸ್.ಎಸ್.ಬಾಗಲಕೋಟ ಪಿಎಸೈ ಬಸವರಾಜ ತಿಪರಡ್ಡಿ, ತಾಲ್ಲೂಕು ಪಂಚಾಯಿತಿ ಇಓ ಭಾರತಿ ಚಲುವಯ್ಯ, ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಅಶೋಕ ಹೆಗಡೆ, ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ರಿಯಾಜ್ ಯಲಗಾರ, ಸಿಆರ್ಪಿ ವಿಜಯಲಕ್ಷ್ಮಿ ನವಲಿ, ಪಟ್ಟಣ ಪಂಚಾಯಿತಿ ಸದಸ್ಯರಾದ ಕಾಸುಗೌಡ ಬಿರಾದಾರ, ಕಾಶೀನಾಥ ಬಜಂತ್ರಿ, ಬಶೀರ್ಅಹ್ಮದ್ ಬೇಪಾರಿ, ಶಾಂತಯ್ಯ ಜಡಿಮಠ, ಸುಮಂಗಲಾ ಸೇಬೆನವರ, ಕಾಶೀನಾಥ ಜಮಾದಾರ, ಕಸಾಪ ತಾಲ್ಲೂಕು ಅಧ್ಯಕ್ಷ ಜಿ.ಪಿ.ಬಿರಾದಾರ, ಎಸ್ಡಿಎಮ್ಸಿ ಅಧ್ಯಕ್ಷ ಸಂಪತ್ ಜಮಾದಾರ, ಕಾಲೇಜು ಅಧೀಕ್ಷಕ ಜಗನ್ನಾಥ ಸಜ್ಜನ, ಉಪತಹಶೀಲ್ದಾರ ಸುರೇಶ ಮ್ಯಾಗೇರಿ ಸೇರಿದಂತೆ ೧೨ ಕ್ಕೂ ಹೆಚ್ಚು ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಶಿಕ್ಷಕರು, ಪಟ್ಟಣ ಪಂಚಾಯಿತಿ ಸಿಬ್ಬಂದಿ ಇದ್ದರು.

