Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಚನ ಸಾಹಿತ್ಯದಲ್ಲಿ ಜೀವನದ ಮೌಲ್ಯಗಳಿವೆ :ಡಾ.ಯಂಕನಗೌಡ
(ರಾಜ್ಯ ) ಜಿಲ್ಲೆ

ವಚನ ಸಾಹಿತ್ಯದಲ್ಲಿ ಜೀವನದ ಮೌಲ್ಯಗಳಿವೆ :ಡಾ.ಯಂಕನಗೌಡ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೆಂಭಾವಿ: ವಿದ್ಯಾರ್ಥಿಗಳು ಶಾಲಾ, ಕಾಲೇಜು ಹಂತದಲ್ಲಿ ನಾಡು, ನುಡಿ, ಸಂಸ್ಕೃತಿ, ಕಲೆ, ಸಾಹಿತ್ಯ, ಸಂಗೀತದ ಆಸಕ್ತಿ ಮತ್ತು ಅಭಿರುಚಿ ಅಳವಡಿಸಿಕೊಳ್ಳಿ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯರು ಹಾಗೂ ಹಿರಿಯ ಸಾಹಿತಿ ಸಿದ್ದರಾಮ ಹೊನ್ಕಲ್ ಹೇಳಿದರು.
ಪಟ್ಟಣದ ಮಹಾ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು, ವಲಯ ಕನ್ನಡ ಸಾಹಿತ್ಯ ಪರಿಷತ್ತು, ಸಹೋದರಿ ನಿವೇದಿತಾ ಸಹಕಾರಿ ಸಂಘ (ನಿ) ಸಹಯೋಗದಲ್ಲಿ ಚಕೋರ ಸಾಹಿತ್ಯ ವಿಚಾರ ವೇದಿಕೆ ವತಿಯಿಂದ ರವಿವಾರ ಹಮ್ಮಿಕೊಂಡಿರುವ ವಿಶೇಷ ಉಪನ್ಯಾಸ ಹಾಗೂ ಕವಿಗೋಷ್ಠಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ವಿಶೇಷ ಉಪನ್ಯಾಸ ನೀಡಿದ ಡಾ. ಯಂಕನಗೌಡ ಎಸ್ ಪಾಟೀಲ್, ವಚನ ಸಾಹಿತ್ಯದಲ್ಲಿ ಜೀವನದ ಮೌಲ್ಯಗಳು ಅಡಗಿವೆ, ಅವು ಸಾರ್ವಕಾಲಿಕ ಸತ್ಯವಾದವುಗಳು, ಪರಸ್ಪರ ಪ್ರೀತಿ, ವಿಶ್ವಾಸ, ಸಹಕಾರ, ಸಹಬಾಳ್ವೆ, ಸಮನ್ವಯತೆ, ಸಹೋದರತ್ವ, ಶಾಂತಿ, ಪರಿಕಲ್ಪನೆಯೇ ಸೌಹಾರ್ದತೆ ಮತ್ತು ಸಮಾನತೆ ಎಂದವರು, ಬಸವಾದಿ ಶರಣರು ಸ್ಥಾಪಿಸಿದ ಅನುಭವ ಮಂಟಪವೇ ಇಂದು ದೆಹಲಿಯಲ್ಲಿ ಕಂಗೊಳಿಸುವ ಪಾರ್ಲಿಮೆಂಟ್ ಎಂದರು.
ಹಿರೇಮಠ ಸಂಸ್ಥಾನದ ಪೀಠಾಧಿಪತಿ ಚನ್ನಬಸವ ಶಿವಾಚಾರ್ಯರು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಇದೇ ವೇಳೆ ಪಿಎಲ್ ಡಿ ಬ್ಯಾಂಕ್ ನಿರ್ದೇಶಕ ವಾಮನರಾವ್ ದೇಶಪಾಂಡೆ, ಆಶ್ರಯ ಕಮಿಟಿ ಅಧ್ಯಕ್ಷ ಶರಣಬಸವ ಡಿಗ್ಗಾವಿ, ತಾಲೂಕು ಕಸಾಪ ವರ್ಷದ ವ್ಯಕ್ತಿ ನಿಂಗನಗೌಡ ದೇಸಾಯಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶರಣಕುಮಾರ ಯಾಳಗಿ, ಉಪನ್ಯಾಸಕ ಬಸನಗೌಡ ಯಾಳಗಿ ಇವರಿಗೆ ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಪತ್ರಕರ್ತ ಸಂಜೀವರಾವ್ ಕುಲ್ಕರ್ಣಿ, ಶಿವನಗೌಡ ಮಾಲಿ ಪಾಟೀಲ್, ಸುಮಿತ್ರಪ್ಪ ಸಾಹುಕಾರ ಅಂಗಡಿ, ಮಹಿಪಾಲರಡ್ಡಿ ಡಿಗ್ಗಾವಿ, ವಲಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಡಿವಾಳಪ್ಪಗೌಡ ಪಾಟೀಲ ಹೆಗ್ಗನದೊಡ್ಡಿ ಪ್ರಾಸ್ತಾವಿಕ ಮಾತನಾಡಿದರು.
ನಿಂಗನಗೌಡ ದೇಸಾಯಿ, ವಿಠ್ಠಲ ಚೌವ್ಹಾಣ್, ವೀರಣ್ಣ ಕಲಿಕೇರಿ, ಶ್ರೀಶೈಲ ಹದಗಲ್, ದೇವಿಂದ್ರಪ್ಪ ಕರಡಕಲ್, ಮಹ್ಮದ್ ದಲಾಯತ್, ಜೆಟ್ಟೇಪ್ಪ ನಡಕೂರ, ಪ್ರಕಾಶ ವಜ್ಜಲ್, ಬಸನಗೌಡ ಯಾಳಗಿ, ಮೀನಾಕ್ಷಿ ಸಾವಳಿಗಿ, ಸೇರಿದಂತೆ ಅನೇಕರು ಕವನ ವಾಚನ ಮಾಡಿದರು.
ಕವಿಗೋಷ್ಠಿ ಅಧ್ಯಕ್ಷತೆ ವಹಿಸಿ ಪಾರ್ವತಿ ಎಸ್ ಬುದೂರ ಮಾತನಾಡಿದರು.
ಬಂದೇನವಾಜ್ ನಾಲತವಾಡ ನಿರೂಪಿಸಿ, ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.29ರಿಂದ ಕೊಲ್ಹಾರದಲ್ಲಿ ವಿಶೇಷ ಪ್ರಶಿಕ್ಷಣ ವರ್ಗ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 28, 2026
    In ದಿನಪತ್ರಿಕೆ
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಅಂತರಂಗದ ಅರಿವು ಜಾಗೃತಗೊಳಿಸುವ ಪ್ರಕ್ರಿಯೆ ಲಿಂಗದೀಕ್ಷೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.