ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಪಟ್ಟಣದ ನ್ಯಾಯಾಲಯದಲ್ಲಿ ಸಂಭ್ರಮ ಸಡಗರದಿಂದ ೭೬ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ರವೀಂದ್ರಕುಮಾರ ಕಟ್ಟಿಮನಿ ಅವರು ಮಹಾತ್ಮಾ ಗಾಂಧಿ ಮತ್ತು ಸಂವಿಧಾನ ಶಿಲ್ಪಿ ಡಾ.ಬಿಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಧ್ವಜಾರೋಹಣವನ್ನು ನೆರವೇರಿಸಿದರು.
ಈ ವೇಳೆ ಮಾತನಾಡಿದ ಅವರು ನಮ್ಮಲ್ಲಿ ಶೀಘ್ರದಲ್ಲಿ ಜಿಲ್ಲಾ ನ್ಯಾಯಾಲಯ ಪ್ರಾರಂಭವಾಗುತ್ತಿದ್ದು ಸಂತಸದ ವಿಷಯ. ಕಿರಿಯ ನ್ಯಾಯವಾದಿಗಳು ಹಿರಿಯ ನ್ಯಾಯವಾದಿಗಳ ಮಾರ್ಗದರ್ಶನ ಪಡೆದು ಪ್ರಕರಣಗಳ ಶೀಘ್ರ ವಿಲೇವಾರಿಗೆ ಸಹಕರಿಸುವಂತೆ ತಿಳಿಸಿದರು.
ಈ ವೇಳೆ ಕಿರಿಯ ಶ್ರೇಣಿ ಸಹಾಯಕ ಸರ್ಕಾರಿ ಅಭಿಯೋಜಕ ಬಸವರಾಜ ಆಹೇರಿ ಮಾತನಾಡಿದರು. ಬಳಿಕ ನ್ಯಾಯವಾದಿಗಳ ಸಂಘದ ವತಿಯಿಂದ ಸಂಘದ ಅಧ್ಯಕ್ಷ ಎಸ್.ಎಸ್.ಮಾಲಗತ್ತಿ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು. ಪಕ್ಷಗಾರ ಅಮರಯ್ಯ ಅಸಂತಾಪೂರಮಠ ದೇಶಭಕ್ತಿ ಗೀತೆ ಹಾಡುವ ಮೂಲಕ ಗಮನ ಸೆಳೆದರು.
ಈ ವೇಳೆ ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ಸಂಪತ್ತಕುಮಾರ ಬಳೂಲಗಿಡದ, ಹಿರಿಯ ನ್ಯಾಯವಾದಿಗಳಾದ ಜೆ.ಎ.ಚಿನಿವಾರ, ಎಂ.ಎಚ್.ಹಾಲಣ್ಣವರ, ಎಂ.ಎ.ಮುದ್ದೇಬಿಹಾಳ, ಎಂ.ಎಚ್.ಕ್ವಾರಿ, ಆರ್.ಬಿ.ಪಾಟೀಲ, ಬಿ.ಆರ್.ನಾಡಗೌಡರ ಸಂಘದ ಉಪಾಧ್ಯಕ್ಷ ಎಚ್.ಜಿ.ನಾಗೋಡ, ಪ್ರ.ಕಾರ್ಯದರ್ಶಿ ಪಿ.ಬಿ.ಗೌಡರ, ನ್ಯಾಯವಾದಿಗಳಾದ ಚೇತನ ಶಿವಶಿಂಪಿ, ಮಾಂತಗೌಡ ಪಾಟೀಲ, ಆರ್.ವಾಯ್.ನಾಲತವಾಡ, ಎಚ್.ವಾಯ್.ಪಾಟೀಲ, ಎಚ್.ಟಿ.ಪೂಜಾರಿ, ಎನ್.ಬಿ.ಮುದ್ನಾಳ, ಬಸನಗೌಡ ಮುಂದಿನಮನಿ, ಎಂ.ಆರ್.ಪಾಟೀಲ, ಸಾಬಣ್ಣ ಚಳ್ಳಗಿ ಸೇರಿದಂತೆ ಇತರ ನ್ಯಾಯವಾದಿಗಳು ನ್ಯಾಯಾಲಯದ ಸಿಬ್ಬಂದಿಗಳು ಭಾಗಿಯಾಗಿದ್ದರು.

