Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವೈದ್ಯರು & ಅರೇ ವೈದ್ಯಕೀಯ ಹುದ್ದೆ ನೇಮಕಾತಿಗೆ ನೇರ ಸಂದರ್ಶನಕ್ಕೆ ಆಹ್ವಾನ

ನಾವೆಲ್ಲರೂ ಸೇರಿ ಕನ್ನಡ ಭಾಷೆ ಬೆಳವಣಿಗೆಗೆ ಶ್ರಮಿಸೋಣ

ಪಾಲಕರೆ ನಿಮ್ಮಮಕ್ಕಳಿಗೆ ಹೆದರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮತ ಏಣಿಕೆ ಕಾರ್ಯಕ್ಕೆ ಸಕಲ ಸಿದ್ಧತೆ :ಡಿಸಿ ದಾನಮ್ಮನವರ
(ರಾಜ್ಯ ) ಜಿಲ್ಲೆ

ಮತ ಏಣಿಕೆ ಕಾರ್ಯಕ್ಕೆ ಸಕಲ ಸಿದ್ಧತೆ :ಡಿಸಿ ದಾನಮ್ಮನವರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ವಿಜಯಪುರ ಜಿಲ್ಲೆಯ ೮ ವಿಧಾನಸಭಾ ಮತಕ್ಷೇತ್ರಗಳ ವ್ಯಾಪ್ತಿಯಲ್ಲಿ ಮೇ.೧೦ ರಂದು ಜರುಗುವ ಮತದಾನ ಹಾಗೂ ಮೇ. ೧೩ ರಂದು ನಡೆಯುವ ಮತ ಏಣಿಕೆ ಕಾರ್ಯಕ್ಕೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ತಿಳಿಸಿದರು.

ಜಿಲ್ಲಾ ಪಂಚಾಯತ್ ಕಟ್ಟಡದಲ್ಲಿರುವ ಎನ್‌ಐಸಿ ಕೇಂದ್ರದಲ್ಲಿ ಚುನಾವಣಾ ಆಯೋಗದೊಂದಿಗೆ ವಿಜಯಪುರ ಜಿಲ್ಲೆಯ ಸಿದ್ಧತೆಗಳ ಕುರಿತು ವಿಡಿಯೋ ಕಾನ್ಫರೆನ್ಸ್ನಲ್ಲಿ ಮಾಹಿತಿ ನೀಡಿದ ಅವರು, ಜಿಲ್ಲೆಯ ೮ ವಿಧಾನಸಭಾ ಮತಕ್ಷೇತ್ರಗಳಲ್ಲಿ ೯೬೬೫೩೫ ಪುರುಷ, ೯೨೬೦೯೬ ಮಹಿಳಾ ಮತದಾರರು, ೨೨೧ ಇತರರು ಸೇರಿದಂತೆ ಒಟ್ಟು ೧೮,೯೨,೮೫೨ ಮತದಾರರಿದ್ದು, ಜಿಲ್ಲೆಯಾದ್ಯಂತೆ ೨೦೭೨ ಹಾಗೂ ಹೆಚ್ಚುವರಿಯಾಗಿ ೬ ಮತಗಟ್ಟೆಗಳು ಸೇರಿದಂತೆ ೨೦೭೮ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ೧,೪೭,೫೫೪ ಎಪಿಕ್ ಕಾರ್ಡ್ಗಳನ್ನು ಪೂರ್ಣ ಪ್ರಮಾಣದಲ್ಲಿ ವಿತರಿಸಲಾಗಿದೆ. ಮತದಾರರಿಗೆ ಓಟರ್ ಸ್ಲೀಪ್‌ಗಳನ್ನು ತಲುಪಿಸಲಾಗುತ್ತಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಸ್ಥಾಪಿಸಲಾದ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳಾದ ವಿಶ್ರಾಂತಿ ಕೊಠಡಿ, ಶಾಮಿಯಾನಾ, ಆಸನ, ಕುಡಿಯುವ ನೀರು, ಶೌಚಾಲಯಗಳನ್ನು ಸ್ಥಾಪಿಸಲಾಗಿದೆ. ಮತಗಟ್ಟೆ ಮುಂದೆ ಸರತಿ ಸಾಲು ನಿಲ್ಲುವುದನ್ನು ತಪ್ಪಿಸಲು ಅವಶ್ಯಕ ಕ್ರಮ ವಹಿಸಲಾಗಿದೆ. ಮತದಾನ ಸಂದರ್ಭದಲ್ಲಿ ಜನಸಂದಣಿ ಉಂಟಾಗದAತೆ ನೋಡಿಕೊಳ್ಳಲು ಬ್ಯಾರಿಕೇಡ್ ವ್ಯವಸ್ಥೆ, ಎನ್‌ಎಸ್‌ಎಸ್ ಸ್ವಯಂ ಸೇವಕರ ಸೇವೆಯನ್ನು ಪಡೆಯಲಾಗುತ್ತಿದೆ ಎಂದು ಹೇಳಿದರು.

ಮನೆಯಿಂದ ಅಂಚೆ ಪತ್ರದ ಮೂಲಕ ಮತದಾನ ಮಾಡುವ ೮೦ ವರ್ಷ ಮೇಲ್ಪಟ್ಟ ಹಾಗೂ ವಿಶೇಷಚೇತನ ಮತದಾರರ ಮತದಾನ ಪ್ರಕ್ರಿಯೆ ಜಿಲ್ಲೆಯ ೮ ವಿಧಾನಸಭಾ ಮತಕ್ಷೇತ್ರಗಳಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಪಾರದರ್ಶಕ, ನ್ಯಾಯಸಮ್ಮತ ಚುನಾವಣೆ ನಡೆಸಲು ಚುನಾವಣಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿಗಳಿಗೆ ಎರಡು ಹಂತದ ತರಬೇತಿ ಯಶಸ್ವಿಯಾಗಿ ನೀಡಲಾಗಿದೆ. ಈಗಾಗಲೇ ಸಾಮಾನ್ಯ ವೀಕ್ಷಕರ ಜೊತೆ ಮತ ಏಣಿಕೆ ಕೇಂದ್ರವಾದ ಸೈನಿಕ್ ಶಾಲೆಗೆ ಭೇಟಿ ನೀಡಿ ಅಗತ್ಯ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಲಾಗಿದ್ದು, ಅಗತ್ಯ ಪೋಲಿಸ್ ಸಿಬ್ಬಂದಿ ವ್ಯವಸ್ಥೆ ಸೇರಿದಂತೆ ಯಾವುದೇ ಗೊಂದಲವಿಲ್ಲದೇ ಮತ ಏಣಿಕೆ ಕಾರ್ಯಕ್ಕೆ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರೂ ಆದ ಸಾಮಾಜಿಕ ಜಾಲತಾಣ ಪರಿಶೀಲನಾ ಕೋಶದ ನೋಡಲ್ ಅಧಿಕಾರಿ ರಾಮನಗೌಡ ಕನ್ನೊಳ್ಳಿ, ಅಬಕಾರಿ ಉಪ ಆಯುಕ್ತ ಶಿವಲಿಂಗಪ್ಪ ಬನ್ನೆಟ್ಟಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಸಿದ್ಧರಾಮ ಬರಗಿಮಠ, ಚುನಾವಣಾ ತಹಶೀಲ್ದಾರ ಸುರೇಶ ಅಂಕಲಗಿ ಉಪಸ್ಥಿತರಿದ್ದರು.

dc danammanavar election udaya rashmi
Share. Facebook Twitter Pinterest Email Telegram WhatsApp
  • Website

Related Posts

ವೈದ್ಯರು & ಅರೇ ವೈದ್ಯಕೀಯ ಹುದ್ದೆ ನೇಮಕಾತಿಗೆ ನೇರ ಸಂದರ್ಶನಕ್ಕೆ ಆಹ್ವಾನ

ನಾವೆಲ್ಲರೂ ಸೇರಿ ಕನ್ನಡ ಭಾಷೆ ಬೆಳವಣಿಗೆಗೆ ಶ್ರಮಿಸೋಣ

ಪಾಲಕರೆ ನಿಮ್ಮಮಕ್ಕಳಿಗೆ ಹೆದರಿ

ಈರುಳ್ಳಿ, ಹತ್ತಿ ಮೆಕ್ಕೆಜೋಳ ಬೆಳೆಗೆ ಬೆಂಬಲ ಬೆಲೆಗೆ ಆಗ್ರಹಿಸಿ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವೈದ್ಯರು & ಅರೇ ವೈದ್ಯಕೀಯ ಹುದ್ದೆ ನೇಮಕಾತಿಗೆ ನೇರ ಸಂದರ್ಶನಕ್ಕೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಾವೆಲ್ಲರೂ ಸೇರಿ ಕನ್ನಡ ಭಾಷೆ ಬೆಳವಣಿಗೆಗೆ ಶ್ರಮಿಸೋಣ
    In (ರಾಜ್ಯ ) ಜಿಲ್ಲೆ
  • ಪಾಲಕರೆ ನಿಮ್ಮಮಕ್ಕಳಿಗೆ ಹೆದರಿ
    In ವಿಶೇಷ ಲೇಖನ
  • ಈರುಳ್ಳಿ, ಹತ್ತಿ ಮೆಕ್ಕೆಜೋಳ ಬೆಳೆಗೆ ಬೆಂಬಲ ಬೆಲೆಗೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಕ್ರೀಡೆಯಲ್ಲಿ ಮಕ್ಕಳ ಆರೋಗ್ಯ ಅಡಗಿದೆ :ಎಸ್.ಕೆ.ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಮೆಡಿಕಲ್ ಕಾಲೇಜ್ ಹೋರಾಟ: ಡಿ.೧ ರಂದು ಬೃಹತ್ ಹೋರಾಟಕ್ಕೆ ಕರೆ
    In (ರಾಜ್ಯ ) ಜಿಲ್ಲೆ
  • ಹಿರಿಯರನ್ನು ಗೌರವಿಸುವುದು ಯುವಪೀಳಿಗೆ ಜವಾಬ್ದಾರಿ :ಪ್ರೊ.ಹಿರೇಮಠ
    In (ರಾಜ್ಯ ) ಜಿಲ್ಲೆ
  • ಡಾ.ಸರೋಜನಿ ಮಹಿಷಿ ವರದಿ ಜಾರಿಗೆ ಕದಂಬ ಸೈನ್ಯ ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿದೇಶಕ್ಕೆ ಹೊರಟ ಗ್ರಾಮೀಣ ಪ್ರತಿಭೆ ಪ್ರೀತಿ ಆನೆಗುಂದಿ
    In (ರಾಜ್ಯ ) ಜಿಲ್ಲೆ
  • ನಬಿರೋಶನ್ ಪ್ರಕಾಶನದಿಂದ ಮಹಾಂತೇಶ ಅವರಿಗೆ ನುಡಿ ನಮನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.