ವಿಜ್ಷಾನ ವಸ್ತು ಪ್ರದರ್ಶನದಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಚಾರ್ಯ ಉಮಾದೇವಿ ಸೊನ್ನದ ಅಬಿಮತ
ಉದಯರಶ್ಮಿ ದಿನಪತ್ರಿಕೆ
ಚಡಚಣ: ವೈಜ್ಞಾನಿಕ ಮನೋಭಾವ, ಸತ್ಯಾನ್ವೇಷಣೆ ಗುಣ ವಿದ್ಯಾರ್ಥಿಗಳು ಬೆಳಿಸಿಕೊಳ್ಳಲು ವಿಜ್ಞಾನ ವಸ್ತು ಪ್ರದರ್ಶನ ಸಹಕಾರಿಯಾಗಲಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಚಾರ್ಯ ಉಮಾದೇವಿ ಸೊನ್ನದ ಹೇಳಿದರು.
ತಾಲೂಕಿನ ಲೋಣಿ(ಬಿ.ಕೆ) ಗ್ರಾಮದ ಶ್ರೀ ಸಿದ್ದೇಶ್ವರ ಪ್ರೌಢಶಾಲೆಯಲ್ಲಿ ಆಯೋಜಿಸಲಾದ ವಿಜ್ಞಾನ ಹಬ್ಬ ಹಾಗೂ ವಸ್ತು ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ತಾಂತ್ರಿಕವಾಗಿ ಬೆಳೆಯುತ್ತಿರುವ ಇಂದಿನ ಯುಗವನ್ನು ಜ್ಞಾನದ ಯುಗ. ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಅಕ್ಷ ರಾಭ್ಯಾಸ ಇದ್ದರೆ ಸಾಕಾಗಾದು. ಜತೆಗೆ ಜ್ಞಾನದ ಅವಶ್ಯಕತೆ ಇಂದಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಅದರಲ್ಲೂ ಪ್ರಾಥಮಿಕ ಹಾಗೂ ಪ್ರೌಢಶಾಲೆ ಹಂತದಲ್ಲೇ ಮಕ್ಕಳಿಗೆ ವಿಜ್ಞಾನ ಶಿಕ್ಷ ಣದ ಬಗ್ಗೆ ಅಭಿರುಚಿ ಬೆಳೆಸುವುದು ಅತ್ಯವಶ್ಯಕವಾಗುತ್ತದೆ. ಈ ನಿಟ್ಟಿನಲ್ಲಿ ಆಯೋಜಿಸಿದ್ದ ಶಾಲಾ ಮಟ್ಟದ ವಸ್ತು ಪ್ರದರ್ಶನ ಮಕ್ಕಳ ಪ್ರತಿಭೆ ಅನಾವರಣಕ್ಕೊಂದು ಉತ್ತಮ ವೇದಿಕೆಯಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬಿ ಎಂ ಕೋರೆ ಮಾತನಾಡಿ, ಚಿಂತನೆ, ವಿಚಾರ ವಿಮರ್ಶೆಯಿಂದ ಕ್ರಿಯಾಶೀಲತೆ ಬೆಳೆದು ಸಂಪಾದಿಸಿದ ಜ್ಞಾನವು ಕೌಶಲ್ಯವಾಗಿ ಪರಿವರ್ತನೆಯಾಗುತ್ತದೆ ಎಂದ ಅವರು, ಕ್ರಿಯಾಶೀಲ ಶಿಕ್ಷಕರಿಂದ ಮಾತ್ರ ಕ್ರೀಯಾಶೀಲ ವಿದ್ಯಾರ್ಥಿಗಳನ್ನು ಕಾಣಬಹುದು ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಕೋಲಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಸುಜಾತಾ ಹೂನ್ನೂರ ಅವರು, ವಿದ್ಯಾರ್ಥಿಗಳು ತಯಾರಿಸಿದ ವಿವಿಧ ಪ್ರಯೋಗಗಳು, ವಸ್ತು ಪ್ರದರ್ಶನವನ್ನು ವೀಕ್ಷಿಸಿ ಮಕ್ಕಳಿಗೆ ಹಾಗೂ ಈ ಪ್ರಯೋಗಗಳನ್ನು ತಯಾರಿಸಿಲು ಪ್ರೋತ್ಸಾಹಿಸಿದ ಶಿಕ್ಷಕರಿಗೆ ಅಬಿನಂದಿಸಿದರು.
ಈ ಸಂದರ್ಭದಲ್ಲಿ ಡಯಟಿ ಉಪನ್ಯಾಸಕಿ ರೇಣುಕಾ ಕಲಬುರ್ಗಿ, ಕೆ ಎಸ್ ಹಕೀಮ, ಮುಖಂಡರಾದ ಶ್ರೀನಿವಾಸ್ ಕುಲಕರ್ಣಿ, ಬಾಪುರಾಯ ಲೋಣಿ, ಶಶಿಧರ ಕಲ್ಯಾಣಶೆಟ್ಟಿ, ಶಶಿಧರ ಹೊನ್ನಳ್ಳಿ, ರಾಠೋಡ ಮುಖ್ಯಶಿಕ್ಷಕ ಎಸ್ ಆರ್ ಮಾಳಿ ವೇದಿಕೆ ಮೇಲೆ ಉಪಸ್ಥಿತರಿದ್ದರು.
ಕಾರ್ಯಕ್ರಮ ಶಿಕ್ಷಕ ಧರ್ಮಪ್ಪ ನಿರೂಪಿಸಿದರೆ, ಗುರುಸಿದ್ದಪ್ಪ ಕೋರಿ ವಂದಿಸಿದರು.

