Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅರಸ ಮೇಲಲ್ಲ, ಅಗಸ ಕೀಳಲ್ಲ ಎಲ್ಲರೂ ಸಮಾನ
(ರಾಜ್ಯ ) ಜಿಲ್ಲೆ

ಅರಸ ಮೇಲಲ್ಲ, ಅಗಸ ಕೀಳಲ್ಲ ಎಲ್ಲರೂ ಸಮಾನ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಡಿವಾಳ ಮಾಚಿದೇವ ಜಯಂತಿಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ್ ಮಾರಿಹಾಳ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮಹಾನ ವ್ಯಕ್ತಿಗಳ ಸಿದ್ದಾಂತ ಹಾಗೂ ತತ್ವಗಳನ್ನು ಯುವ ಪೀಳಿಗೆ ಕೇವಲ ಜಯಂತಿ ದಿನದಂದೇ ನೆನೆಯದೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ್ ಮಾರಿಹಾಳ ಹೇಳಿದರು.
ಶನಿವಾರ ನಗರದ ಕಂದಗಲ್ಲ ಶ್ರೀ ಹನಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಆಧ್ಯಾತ್ಮಿಕ ಕ್ಷೇತ್ರದಲ್ಲಿ ಸತ್ಯದ ಮಾರ್ಗ ತೋರಿಸಲು ಮಡಿವಾಳ ಮಾಚಿದೇವರು ತಮ್ಮ ವಚನಗಳ ಮೂಲಕ ಕ್ರಾಂತಿ ನಡೆಸಿದರು ಎಂದು ತಿಳಿಸಿದರು.
ಅರಸ ಮೇಲಲ್ಲ ಅಗಸ ಕೀಳಲ್ಲ ಎಲ್ಲರೂ ಸರಿಸಮಾನವಾಗಿ ಜೀವನ ಸಾಗಿಸಬೇಕೆಂಬ ಸಂದೇಶವನ್ನು ಮಡಿವಾಳ ಮಾಚಿದೇವರು ೧೨ನೇ ಶತಮಾನದಲ್ಲಿಯೇ ಸಾರಿದರು ಎಂದು ಹೇಳಿದರು.
ಬಸವಣ್ಣರ ವಚನಗಳನ್ನು ಕಾಪಾಡಿ ಬೆಳಕಿಗೆ ತಂದ ಮಹಾನ್ ಶರಣರು ಮಡಿವಾಳ ಮಾಚಿದೇವರು. ಅವರ ಆದರ್ಶ, ತತ್ವಗಳು ಇಂದಿನ ಯುವಪೀಳಿಗೆಗಳಿಗೆ ಪ್ರಸ್ತುತವಾಗಿವೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಡಿವಾಳ ಮಾಚಿದೇವರ ಕುರಿತು ಉಪನ್ಯಾಸಕ ನೀಡಿದ ವಿಶ್ರಾಂತ ಕುಲಪತಿ ಬಿ.ಎನ್. ಪಾಟೀಲ ಮಾತನಾಡಿ ಸಮಾಜದಲ್ಲಿರುವ ಮೂಡನಂಬಿಕೆ, ಗೊಡ್ಡಸಂಪ್ರದಾಯ ವಿರೋಧಿಸಿ ಅನಿಷ್ಟ ಪದ್ಧರಿಗಳ ಕುರಿತು ಹೋರಾಡಿದ ಮಹಾನ್ ಶಿವಶರಣರಾಗಿದ್ದರು. ಕಲ್ಯಾಣಕ್ರಾಂತಿಗೆ ಮಹತ್ವ ಪಡೆಯಲು ಕಾರಣರಾದವರಲ್ಲಿ ಇವರು ಒಬ್ಬರು ಹಾಗೂ ಕಾಯಕ ನಿಷ್ಠೆ ಉಳ್ಳವರಾಗಿದ್ದರು. ಕಾಯಕ ನಿಷ್ಠ ಹಾಗೂ ಬಸವಣ್ಣರ ಹತ್ತಿರದವರಾಗಿ ಗುರುತಿಸಿಕೊಂಡಿದ್ದರು.
ಉಪ ವಿಭಾಗಾಧಿಕಾರಿ ಗುರುನಾಥ್ ದಡ್ಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ೧೨ನೇ ಶತಮಾನದ ಶಿವಶರಣರು ಅನುಭವ ಮಂಟಪದಲ್ಲಿ ವಚನಗಳ ಮೂಲಕ ಅಸ್ಪೃಶತೆ ಕುರಿತು ಜನಜಾಗೃತಿ ಮೂಡಿಸಿ ಎಲ್ಲರು ಸಮನರು ಎಂದು ಸಾರಿ ಹೇಳೀದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಡಿವಾಳ ಸಮಾಜದ ಅಧ್ಯಕ್ಷರಾದ ಸಾಯಬಣ್ಣ ಮಡಿವಾಳ ಮಾತನಾಡಿದರು.
ಗಾಯಕಿ ಹಾಗೂ ಸಂಗಡಿಗರು ವಿಶಾಲಾಕ್ಷಿ ಬಡಿಗೇರ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರು ಅವರು ಬೆಳಗ್ಗೆ ಶ್ರೀ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿ ಮಡವಾಳ ಮಾಚಿದೇವ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಮುಖ್ಯಯೋಜನಾಧಿಕಾರಿ ನಿಂಗಪ್ಪ ಗೋಠೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯನ ನೀರ್ದೇಶಕ ಸಂತೋಷ ಭೋವಿ, ಸಮಾಜ ಮುಖಡರಾದ ಬಾಬು ಬಳ್ಳಾರಿ, ಶಿವಪ್ಪ ಹುಬ್ಬಳ್ಳಿ, ಪ್ರಭು ಮಡಿವಾಳ, ಶಿವಕುಮಾರ್ ಪರೀಟ್, ಬೋರವ್ವ ಇಂಡಿಕರ, ದೇವಮ್ಮ ಬಳ್ಳಾರಿ, ಭೀಮರಾಯ ಜಿಗಜಿಣಗಿ, ದೇವೆಂದ್ರ ಮೀರೆಕರ, ಸೋಮನಗೌಡ ಕಲ್ಲೂರು ಹಾಗೂ ಇತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ

ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು

ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ

ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಬದುಕಿನಲ್ಲಿ ಪಾಲಕರ ಆಕರ್ಷಣೆ
    In ವಿಶೇಷ ಲೇಖನ
  • ಮಹಿಳೆಯರಿಂದ ನಂಜಿಕೆ ತಿನಿಸು ತಯಾರಿಕೆ ಈಗ ಬಲು ಜೋರು
    In (ರಾಜ್ಯ ) ಜಿಲ್ಲೆ
  • ಜಾನುವಾರುಗಳ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ದುಡಿದು ತಿನ್ನದವರು ಗಂಡಸರಲ್ಲ :ದಿಂಗಾಲೇಶ್ವರ ಶ್ರೀ
    In (ರಾಜ್ಯ ) ಜಿಲ್ಲೆ
  • ಅಂತರಂಗದ ಅರಿವು ಜಾಗೃತಗೊಳಿಸುವ ಪ್ರಕ್ರಿಯೆ ಲಿಂಗದೀಕ್ಷೆ
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ಜಯಂತಿಯಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ಮಡಿವಾಳ ಮಾಚಿದೇವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಮಾ.೩೦ರಂದು ಭಗವಾನ್ ಶ್ರೀ ಮಹಾವೀರ ಜಯಂತಿ
    In (ರಾಜ್ಯ ) ಜಿಲ್ಲೆ
  • ಎಇಇ ಮೇಲೆ ಶಿಸ್ತುಕ್ರಮಕ್ಕೆ ದಲಿತ ಸ್ವರಾಜ್ಯ ಸೇನೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.