Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಫಡ್ನವೀಸ್ ಟೀಕೆ ಹಾಸ್ಯಾಸ್ಪದ :ಎಂ.ಬಿ.ಪಾಟೀಲ
(ರಾಜ್ಯ ) ಜಿಲ್ಲೆ

ಫಡ್ನವೀಸ್ ಟೀಕೆ ಹಾಸ್ಯಾಸ್ಪದ :ಎಂ.ಬಿ.ಪಾಟೀಲ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್ ತಮ್ಮ ರಾಜ್ಯದಲ್ಲಿ ನೀರಾವರಿ ಮಾಡುವುದನ್ನು ಬಿಟ್ಟು ನಮ್ಮ ಕೆಲಸಗಳ ಬಗ್ಗೆ ಟೀಕಿಸುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಹೇಳಿದ್ದಾರೆ.

ತಿಕೋಟಾ ತಾಲೂಕಿನ ಕನಮಡಿಯಲ್ಲಿ ಪ್ರಚಾರ ಕೈಗೊಂಡು ಮಾತನಾಡಿದ ಅವರು, ಫಡ್ನವೀಸ್ ಇತ್ತಿಚೆಗೆ ಕನಮಡಿಯಲ್ಲಿ ಇಲ್ಲಸಲ್ಲದ ಮಾತುಗಳನ್ನು ಹೇಳಿದ್ದಾರೆ. ಅವರದೇ ರಾಜ್ಯದ ಮೈಶಾಳ ನೀರಾವರಿ ಯೋಜನೆಯನ್ನು 45 ವರ್ಷ ಕಳೆದರೂ ಕೈಗೆತ್ತಿಕೊಳ್ಳದೇ ಜತ ತಾಲೂಕಿನ ಜನರಿಗೆ ಅನ್ಯಾಯ ಮಾಡಿದ್ದಾರೆ. ಪಾನಿ ಏಣಾರ ಆಹೇ(ನೀರು ಬರಲಿದೆ) ಎಂದು ಸುಳ್ಳು ಹೇಳುತ್ತ ಕಾಲಹರಣ ಮಾಡುತ್ತಿದ್ದಾರೆ. ಆದರೆ ನಾನು ಜಲಸಂಪನ್ಮೂಲ ಸಚಿವನಾಗಿದ್ದಾಗ ಮಾಡಿರುವ ನೀರಾವರಿ ಯೋಜನೆಗಳ ಫಲವಾಗಿ ಜತ ತಾಲೂಕಿನ 42 ಗ್ರಾಮಗಳಿಗೆ ಮತ್ತು 9 ಕೆರೆಗಳಿಗೆ ನೀರು ಬಂದಿದೆ. ಈ ಹಿನ್ನಲೆಯಲ್ಲಿ ಆ ಗ್ರಾಮಗಳ ಜನ ತಮ್ಮನ್ನು ಕರ್ನಾಟಕಕ್ಕೆ ಸೇರಿಸಿಕೊಳ್ಳಿ ಎಂದು ಹೋರಾಟ ನಡೆಸಿದ್ದಾರೆ. ಇದರ ಅರಿವು ಫಡ್ನವೀಸ್ ಅವರಿಗೆ ಇಲ್ಲ. ಬಾಕಿ ಕಾಮಗಾರಿಗಳು ಪೂರ್ಣಗೊಂಡ ನಂತರ ಈ ಭಾಗ ಮತ್ತಷ್ಟು ಅಭಿವೃದ್ಧಿಯಾಗಲಿದೆ ಎಂದು ಅವರು ಹೇಳಿದರು.

ಇದೇ ರೀತಿ ಲಕ್ಷ್ಮಣ ಸವದಿಯವರು ಅಥಣಿ ಭಾಗದಲ್ಲಿ ನೀರಾವರಿ ಮಾಡಿದ್ದಾರೆ. ನಾವೀಬ್ಬರೂ ಸೇರಿಕೊಂಡು ಜೋಡೆತ್ತಿನಂತೆ ದುಡಿಯುತ್ತೇವೆ. ನಾನು ತಮ್ಮಗೆಲ್ಲರಿಗೂ ನೀರು ಕೊಟ್ಟಿದ್ದೇನೆ. ತಾವೆಲ್ಲರೂ ನನಗೆ ಮತ ಹಾಕಿ ದುಡಿದ್ದೇನೆ ನನಗೆ ಪಗಾರ ಕೊಡಿ. ಅದೇ ರೀತಿ ಅಥಣಿ ಮತಕ್ಷೇತ್ರದಲ್ಲಿ ಲಕ್ಷ್ಮಣ ಸವದಿಯವರನ್ನು ಗೆಲ್ಲಿಸಬೇಕು ಎಂದು ಎಂ. ಬಿ. ಪಾಟೀಲ ಹೇಳಿದರು.

ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಮಾತನಾಡಿ, ಎಂ. ಬಿ. ಪಾಟೀಲರನ್ನು ಆಯ್ಕೆ ಮಾಡಲು ಈಗಾಗಲೇ ನಿರ್ಧರಿಸಿದ್ದಾರೆ. ಇನ್ನೂ ಬಾಕಿ ಇರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಆಧುನಿಕ ಭಗೀರಥ ಎಂ. ಬಿ. ಪಾಟೀಲರನ್ನು 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಹೇಳಿದರು.

ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ ಕನಸಿನಂತೆ ನಾವು ನೀರಾವರಿ ಮಾಡಿದ ಬಳಿಕ ಈ ಭಾಗದ ರೈತರು ತಮ್ಮ ಕಾಲ ಮೇಲೆ ತಾವು ನಿಂತಿದ್ದಾರೆ. ಸ್ವಾವಲಂಬಿ ಬದುಕು ಕಟ್ಟಿಕೊಂಡಿದ್ದಾರೆ. ಗುಳೆ ಹೋಗುವುದನ್ನು ಬಿಟ್ಟಿದ್ದಾರೆ. ನಾವಿಬ್ಬರು ಈ ಮುಂಚೆ ರಾಜಕೀಯವಾಗಿ ವಿರೋಧಿಗಳಾಗಿದ್ದೇವು ಆದರೆ, ಈಗ ಒಂದೇ ಪಕ್ಷದಲ್ಲಿದ್ದು ಒಗ್ಗಟ್ಟಾಗಿದ್ದೇವೆ. ಬಬಲೇಶ್ವರ ಮತ್ತು ಅಥಣಿ ಮತಕ್ಷೇತ್ರಗಳನ್ನು ಜಂಟಿಯಾಗಿ ಅಭಿವೃದ್ಧಿ ಮಾಡುತ್ತೇವೆ ಎಂದು ಹೇಳಿದರು.

ಈ ಮುಂಚೆ ಬಿಜೆಪಿ ತತ್ವ ಮತ್ತು ಸಿದ್ದಾಂತಗಳು ಬೇರೆಯಾಗಿದ್ದವು ಈಗ ಬಿಜೆಪಿಯಲ್ಲಿ ವ್ಯಾಪಾರೀಕರಣ ಪ್ರಾರಂಭವಾಗಿದೆ. ರಾಜರು ವ್ಯಾಪಾರಕ್ಕೆ ನಿಂತರೆ ಪ್ರಜೆಗಳು ಬಿಕ್ಷುಕರಾಗುತ್ತಾರೆ ಎಂಬ ಮಾತಿನಂತೆ ಬಿಜೆಪಿಯಲ್ಲಿ ವ್ಯಾಪಾರೀಕಣರ ನಡೆಯುತ್ತಿದೆ. ಪಕ್ಷ ವಿರೋಧಿಗಳು, ಪಕ್ಷದ ಅಭ್ಯರ್ಥಿಗಳನ್ನು ಸೋಲಿಸುವವರನ್ನು, ವ್ಯಭಿಚಾರದಲ್ಲಿ ತೊಡಗಿರುವವರು, ಭ್ರಷ್ಟಾಚಾರದಲ್ಲಿ ಮುಳುಗಿರುವವರಿಗೆ ಬಿಜೆಪಿಯಲ್ಲಿ ಮಾನ್ಯತೆ ಕೊಡಲಾಗುತ್ತಿದೆ. ಇಂಥ ಸಂದರ್ಭದಲ್ಲಿ ಬಿಜೆಪಿ ತೊರೆಯಲು ನಿರ್ಧರಿಸಿದಾಗ ಎಂ. ಬಿ. ಪಾಟೀಲರು ನನಗೆ ಬೆಂಬಲ ನೀಡಿ ಕಾಂಗ್ರೆಸ್ ಸೇರಲು ಸ್ಪೂರ್ತಿಯಾಗಿದ್ದಾರೆ. ಈಗ ನಾವಿಬ್ಬರೂ ಕೂಡಿ ಅಭಿವೃದ್ಧಿ ಪರ್ವಕ್ಕೆ ನಾಂದಿ ಹಾಡುತ್ತಿದ್ದೇವೆ. ಬಬಲೇಶ್ವರ ಮತ್ತು ಅಥಣಿ ಮತದಾರರು ನಮ್ಮಿಬ್ಬರನ್ನು ಗೆಲ್ಲಿಸಬೇಕು ಎಂದು ಲಕ್ಷ್ಮಣ ಸವದಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಗಜಾನನ ಮಂಗಸೂಳಿ, ಶಂಕರಗೌಡ ಬಿರಾದಾರ, ಶಿವಪುತ್ರ ಅವಟಿ, ಎ.ಡಿ.ಮುಲ್ಲಾ, ಬಾಬುಗೌಡ ಬಿರಾದಾರ, ಸೋಮಣ್ಣ ಅಗ್ರಾಣಿ, ಸುರೇಶ ಬಾಬಾನಗರ, ಗಾಂಧಿಬಾಯಿ ಗಡಾಲೊಟ್ಟಿ, ಪ್ರಕಾಶಗೌಡ ಬಿರಾದಾರ, ಅಶೋಕಗೌಡ ಬಿರಾದಾರ, ಧರೆಪ್ಪ ಬಿರಾದಾರ, ಮಲ್ಲಪ್ಪ ಕೊಂಡಿ, ಬಾಳು ಜಗದಿ, ಸದಾಶಿವ ಬುಟಾಳೆ, ಬಸವರಾಜ ದೇಸಾಯಿ, ವಿ.ಎಸ್.ಪಾಟೀಲ, ಚನ್ನಪ್ಪ ಕೊಪ್ಪದ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS congress m b patil udaya rashmi
Share. Facebook Twitter Pinterest Email Telegram WhatsApp
  • Website

Related Posts

ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ

ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ

ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ

ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಚ್ಚಾರಿತ್ರ್ಯದ ಸನ್ಮಾರ್ಗವೇ ಶಿಕ್ಷಣ :ಡಾ.ಯಂಕನಗೌಡ
    In (ರಾಜ್ಯ ) ಜಿಲ್ಲೆ
  • ಗುರು ರಾಘವೇಂದ್ರ ಸೇವಾ ಸಮಿತಿಯಿಂದ ದಾಸೋಹ ಸೇವೆ
    In (ರಾಜ್ಯ ) ಜಿಲ್ಲೆ
  • ಕ್ರಿಯಾಶೀಲ ಸಮೀತಿಯಿಂದ ವಿದ್ಯಾಲಯದ ಪ್ರಗತಿ ಸಾಧ್ಯ :ಬಟಕುರ್ಕಿ
    In (ರಾಜ್ಯ ) ಜಿಲ್ಲೆ
  • ಜ.29 ರಂದು ಬ್ರಹತ್ ಹಿಂದೂ ಸಮಾಜೋತ್ಸವ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಭಾನುವಾರ ಅಮವಾಸ್ಯೆ: ದೇವಸ್ಥಾನಕ್ಕೆ ಹೆಚ್ಚಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಮಿತಿ ರಚನೆ
    In (ರಾಜ್ಯ ) ಜಿಲ್ಲೆ
  • ಹಾಡುಹಗಲೇ ಬೀಗ ಮುರಿದು ಮನೆ ದೋಚಿದ ಖದೀಮರು
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಸಂಸ್ಕಾರಯುತ ಮನೋಭಾವ ಬೆಳೆಸಿ :ಶಹಾಪುರ
    In (ರಾಜ್ಯ ) ಜಿಲ್ಲೆ
  • ಬಸವ ತತ್ವದಂತೆ ಬದುಕು ನಡೆಸಿದ ಡಾ.ಭೀಮಣ್ಣ ಖಂಡ್ರೆ
    In (ರಾಜ್ಯ ) ಜಿಲ್ಲೆ
  • ಧಾರ್ಮಿಕ ಸಭಾ ಕಾರ್ಯಕ್ರಮ ಯಶಸ್ವಿಗೊಳಿಸಿ :ವಿಶ್ವನಾಥ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.