ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಸಮಾಜದಲ್ಲಿ ಮಕ್ಕಳಿಗೆ ನೈತಿಕ ಶಿಕ್ಷಣ ನೀಡುವುದು ಅವಶ್ಯಕವಾಗಿದ್ದು, ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಕುಟುಂಬದಿAದಲೇ ನೀಡಬೇಕು ಎಂದು ವಿಜಯಪುರದ ರಾಮಕೃಷ್ಣ ಆಶ್ರಮದ ಸ್ವಾಮಿ ನರೇಶಾನಂದರು ಹೇಳಿದರು.
ಸಿಂದಗಿ ಪಟ್ಟಣದ ಬಂದಾಳ ರಸ್ತೆಯಲ್ಲಿರುವ ವಿವೇಕ್ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ ವಿವೇಕ ಸಿರಿ ಸಂಭ್ರಮ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು
ಇಂದಿನ ಮಕ್ಕಳು ಬೌದ್ಧಿಕವಾಗಿ ಚುರುಕಾಗಿದ್ದಾರೆ. ಆದರೆ ನೈತಿಕವಾಗಿ ಕುಸಿಯುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.
ಮುಖ್ಯ ಅತಿಥಿಗಳಾಗಿದ್ದ ಬಿ.ಎಲ್.ಡಿ ಸಂಸ್ಥೆಯ ಬಿ.ಎಮ್.ಪಾಟೀಲ್ ವೈದ್ಯಕೀಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ರವಿಕುಮಾರ್ ಮತ್ತು ನಾನು ಶಾಲೆಯಲ್ಲಿ ಓದಿದ್ದೇವೆ. ಈ ಶಾಲೆಯ ಬಗ್ಗೆ ನನಗೆ ಹೆಮ್ಮೆ ಇದೆ ಎಂದರು.
ಈ ವೇಳೆ ಅಧ್ಯಕ್ಷೀಯ ನುಡಿಗಳನ್ನಾಡಿದ ಎಚ್.ಜಿ.ಪಪೂ ಕಾಲೇಜಿನ ಪ್ರಾಚಾರ್ಯ ಎ.ಆರ್.ಹೆಗ್ಗನದೊಡ್ಡಿ ಮಾತನಾಡಿ, ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಚಾಲಕ, ಬಾಲಕ ಮತ್ತು ಪಾಲಕರ ಪಾತ್ರ ಪ್ರಮುಖವಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಶಾಲೆಯ ಪ್ರಾಚಾರ್ಯ ಶ್ರೀಮತಿ ಶಾಹಿಮೂಲ್ ಟಿ. ರಾಬಿನ್ ಶಾಲೆಯ ಶೈಕ್ಷಣಿಕ ವರದಿ ವಾಚನ ಮಾಡಿದರು. ಕಾರ್ಯಕ್ರಮದಲ್ಲಿ ಆಡಳಿತಾಧಿಕಾರಿ ಟೆ.ನಿ.ರಾಬಿನ್, ಸಂಸ್ಥೆಯ ಅಧ್ಯಕ್ಷೆ ನೀಲಮ್ಮ ಹೆಗ್ಗನದೊಡ್ಡಿ, ಡಾ. ಸುಷ್ಮಾ, ಡಾ.ಅಮಿತ್, ವಿದ್ಯಾರ್ಥಿ ಪ್ರತಿನಿಧಿ ಪೃತ್ವಿ ಪಿ.ಲೋಣಿ ಸೇರಿದಂತೆ ಶಾಲೆಯ ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕಿ ಪ್ರೀಯಾ ನಿರೂಪಿಸಿದರು, ವಿದ್ಯಾರ್ಥಿನಿ ಪ್ರತಿನಿಧಿ ಶ್ರೀನಿಧಿ ಕುಲಕರ್ಣಿ ವಂದಿಸಿದರು.