ದೇವರಹಿಪ್ಪರಗಿ: ಬಂಜಾರ ಸಮುದಾಯ ಹಿಂದಿನಿAದಲೂ ಕಾಂಗ್ರೆಸ್ ಪರವಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಸುಣಗಾರ ಹೇಳಿದರು.
ಮತಕ್ಷೇತ್ರದ ಹುಣಶ್ಯಾಳ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕೆರೂಟಗಿ ತಾಂಡಾದ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು, ಬಂಜಾರ ಸಮುದಾಯಕ್ಕೆ ಕಾಂಗ್ರೆಸ್ ಎಲ್ಲ ರೀತಿಯ ಕೊಡುಗೆಗಳನ್ನು ನೀಡಿ ಉತ್ತಮ ಜೀವನ ನಡೆಸಲು ಅನುಕೂಲ ಮಾಡಿಕೊಟ್ಟಿz. ಜೊತೆಗೆೆ ಬಂಜಾರ ಸಮುದಾಯ ಶ್ರಮಿಕ ಹಾಗೂ ನಿಷ್ಠೆಯಿಂದ ಕಾರ್ಯನಿರ್ವಹಿಸುತ್ತಿದ್ದು ಸದಾ ಕಾಂಗ್ರೆಸ್ ಪರವಾಗಿದೆ. ಅದರಂತೆ ಈ ಬಾರಿ ಚುನಾವಣೆಯಲ್ಲಿ ಒಮ್ಮತದಿಂದ ಬೆಂಬಲಿಸಿ ನನಗೆ ಆಶೀರ್ವಾದ ಮಾಡಬೇಕೆಂದು ಮನವಿ ಮಾಡಿದರು.
ಗಡಿ ಅಭಿವೃದ್ಧಿ ಪ್ರಾಧಿಕಾರದ ಮಾಜಿಅಧ್ಯಕ್ಷ ಸುಭಾಷ ಛಾಯಾಗೊಳ ಮಾತನಾಡಿ, ಕಾಂಗ್ರೆಸ್ ಸದಾ ಸಾಮಾಜಿಕ ನ್ಯಾಯದ ಅಡಿಯಲ್ಲಿ ರಾಜಕೀಯ ಮಾಡುತ್ತಿದೆ. ಪ್ರತಿಯೊಂದು ಸಮಾಜವನ್ನು ಗುರುತಿಸಿ ಗೌರವಿಸಿ ಸಮಾನ ಸ್ಥಾನಮಾನ ನೀಡುತ್ತಿದೆ ಅದಕ್ಕಾಗಿ ಎಲ್ಲರೂ ಕಾಂಗ್ರೆಸ್ ಬೆಂಬಲಿಸಬೇಕೆAದು ಕೋರಿದರು.
ದೇವರಹಿಪ್ಪರಗಿ ತಾಲೂಕು ಪಂಚಾಯತಿ ಮಾಜಿ ಅಧ್ಯಕ್ಷೆ, ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಲಲಿತಾ ದೊಡಮನಿ ಮಾತನಾಡಿ, ಸರ್ವ ಸಮುದಾಯ ನೆಮ್ಮದಿಯಿಂದ ಇರಬೇಕಾದರೆ ಕಾಂಗ್ರೆಸ್ಗೆ ನಾವೆಲ್ಲ ಬೆಂಬಲಿಸೋಣ. ಈ ನಿಟ್ಟಿನಲ್ಲಿ ಅಭ್ಯರ್ಥಿ ಶರಣಪ್ಪ ಸುಣಗಾರ ಅವರಿಗೆ ಬೆಂಬಲಿಸಿ ಆಶೀರ್ವದಿಸಬೇಕೆಂದು ಮನವಿ ಮಾಡಿದರು.
ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ನಿಂಗನಗೌಡ ಪಾಟೀಲ, ದೇವರಹಿಪ್ಪರಗಿ ಬ್ಲಾಕ ಅಧ್ಯಕ್ಷ ಬಶೀರಅಹಮ್ಮದ ಬೇಪಾರಿ, ಹೂವಿನಹಿಪ್ಪರಗಿ ಬ್ಲಾಕ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ರಮೀಜಾ ನದಾಫ, ಕೋರವಾರ ಪಿಕೆಪಿಎಸ್ ಅಧ್ಯಕ್ಷ ಸಂಗಮೇಶ ಛಾಯಾಗೋಳ, ಮಾದೇವ ರಾಠೋಡ, ಬಾಬುರಾವ ಚವ್ಹಾಣ, ಸೇರಿದಂತೆ ಪಕ್ಷದ ಪ್ರಮುಖರು ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ತಾಂಡಾದ ಮಹಿಳೆಯರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment