Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆಗುಂಬೆ ಮತ್ತೊಂದು ವೈನಾಡಾಗುವುದು ಬೇಡ (ಸುರಂಗ ಮಾರ್ಗ ಬೇಡ – ಪ್ರಕೃತಿಯನ್ನು ಉಳಿಸೋಣ

ಜೀವನ ಅಂದ್ರೆ ಕೇವಲ ಓಟವಲ್ಲ

ಬಬಲಾದ ಸರಕಾರಿ ಆಸ್ಪತ್ರೆ & ಕ್ಷೇಮ ಕೇಂದ್ರಕ್ಕೆ ಸದಾ ಬೀಗ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆದರ್ಶ ಶಿಕ್ಷಕರ ವೇದಿಕೆಯ ಪೆನಲ್ ಅಭ್ಯರ್ಥಿಗಳಿಗೆ ಗೆಲುವು
(ರಾಜ್ಯ ) ಜಿಲ್ಲೆ

ಆದರ್ಶ ಶಿಕ್ಷಕರ ವೇದಿಕೆಯ ಪೆನಲ್ ಅಭ್ಯರ್ಥಿಗಳಿಗೆ ಗೆಲುವು

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಅಖಂಡ ಬಸವನಬಾಗೇವಾಡಿ ತಾಲೂಕಿನಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಬಸವನಬಾಗೇವಾಡಿ ತಾಲೂಕಾ ಪ್ರೈಮರಿ ಟೀಚರ್ಸ್ ಕೋ-ಆಪರೇಟಿವ್ ಕ್ರೆಡಿಟ್ ಸೊಸಾಯಿಟಿಗೆ ಭಾನುವಾರ ಜರುಗಿದ ಚುನಾವಣೆಯಲ್ಲಿ ಆದರ್ಶ ಶಿಕ್ಷಕರ ವೇದಿಕೆ, ಸಮಾನ ಮನಸ್ಕರ ವೇದಿಕೆ, ಹೊನ್ನಪ್ಪ ಗೊಳಸಂಗಿ ಅವರ ಪೆನಲ್‌ದ ಅಭ್ಯರ್ಥಿಗಳು ಒಟ್ಟು ೧೩ ಸದಸ್ಯ ಬಲದಲ್ಲಿ ೧೧ ಸದಸ್ಯರು ಆಯ್ಕೆಯಾಗುವ ಮೂಲಕ ಈ ಪೆನಲ್ ವಿಜಯೋತ್ಸವ ಆಚರಿಸುವ ಮೂಲಕ ಪಟಾಕ್ಷಿ ಸಿಡಿಸಿ ಪರಸ್ಪರ ಗುಲಾಲು ಎರಚಿಕೊಂಡು ಸಂಭ್ರಮಿಸಿದರು.
ಬಸವನಬಾಗೇವಾಡಿ ತಾಲೂಕಾ ಪ್ರೈಮರಿ ಟೀಚರ್ಸ್ ಕೋ-ಆಪರೇಟಿವ್ ಕ್ರೆಡಿಟ್ ಸೊಸಾಯಿಟಿಯು ೧೩ ಸದಸ್ಯ ಬಲಹೊಂದಿದೆ. ಐದು ವರ್ಷದ ಆಡಳಿತ ಮಂಡಳಿಗೆ ಭಾನುವಾರ ಚುನಾವಣೆ ನಿಗದಿಯಾಗಿತ್ತು. ೧೩ ಸ್ಥಾನಗಳಿಗೆ ಹಿರಿಯರ ಪೆನಲ್‌ದಿಂದ ೧೩ ಜನ ಶಿಕ್ಷಕ ಅಭ್ಯರ್ಥಿಗಳು, ಆದರ್ಶ ಶಿಕ್ಷಕರ ವೇದಿಕೆ, ಸಮಾನ ಮನಸ್ಕರ ವೇದಿಕೆ, ಹೊನ್ನಪ್ಪ ಗೊಳಸಂಗಿ ಅವರ ಪೆನಲ್‌ದಿಂದ ೧೩ ಶಿಕ್ಷಕ ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದರು. ಒಟ್ಟು ೭೮೦ ಮತದಾರರು ಇದ್ದರು. ಇದರಲ್ಲಿ ೭೬೧ ಮತದಾರರು ತಮ್ಮ ಮತ ಚಲಾಯಿಸಿದ್ದಾರೆ. ಇದರಲ್ಲಿ ಮಹೇಶ ಪೂಜಾರಿ, ಅಮರೇಶ ನಾಡಗೌಡ ಅವರು ಹಿರಿಯರ ಪೆನಲ್‌ದ ಆಯ್ಕೆಯಾದ ಅಭ್ಯರ್ಥಿಗಳಾದರೆ ಉಳಿದ ೧೧ ಸ್ಥಾನಗಳಿಗೆ ಆದರ್ಶ ಶಿಕ್ಷಕರ ವೇದಿಕೆ, ಸಮಾನ ಮನಸ್ಕರ ವೇದಿಕೆ, ಹೊನ್ನಪ್ಪ ಗೊಳಸಂಗಿ ಅವರ ಪೆನಲ್‌ದಿಂದ ೧೧ ಅಭ್ಯರ್ಥಿಗಳು ಆಯ್ಕೆಯಾಗುವ ಮೂಲಕ ಐದು ವರ್ಷದ ಆಡಳಿತ ಮಂಡಳಿಗೆ ಬಹುಮತ ಪಡೆದುಕೊಂಡಿದ್ದಾರೆ.
ಸಾಮಾನ್ಯ ಕ್ಷೇತ್ರದಿಂದ ಬಸವರಾಜ ಬಾಲಚಂದ್ರ ಚಿಂಚೋಳಿ, ಶಿವಪ್ಪ ಪರುತಪ್ಪ ಮಡಿಕೇಶ್ವರ, ಹೊನ್ನಪ್ಪ ಸಂಗಪ್ಪ ಗೊಳಸಂಗಿ, ಸಂಗಣ್ಣ ಸುಭಾಶಚಂದ್ರ ಹುನಗುಂದ, ನಿಂಗೇಶ ಸಿದ್ದಪ್ಪ ಕಾಳಗಿ, ಬಾಷಾಸಾಬ ಮಸ್ತಾನಸಾಬ ಮನಗೂಳಿ, ಅಮರೇಶ ಹಣಮಂತ್ರಾಯ ನಾಡಗೌಡ, ಮಹಿಳಾ ಕ್ಷೇತ್ರದಿಂದ ಶಂಕ್ರಮ್ಮ ಕುಡ್ಲಪ್ಪ ಕವಿಶೆಟ್ಟಿ, ಪಾರ್ವತೆವ್ವ ಸಂಗಯ್ಯ ಹೊಸಮಠ,ಹಿಂದುಳಿದ ಅ ವರ್ಗ ಕ್ಷೇತ್ರದಿಂದ ಮಹೇಶ ಸುಭಾಶ ಪೂಜಾರಿ, ಹಿಂದುಳಿದ ಬ ವರ್ಗ ಕ್ಷೇತ್ರದಿಂದ ಸುರೇಶ ಬಸವರಾಜ ಹುರಕಡ್ಲಿ, ಪರಿಶಿಷ್ಟ ಜಾತಿ ಕ್ಷೇತ್ರದಿಂದ ಕೃಷ್ಣಾ ಆನಂದ ರಜಪೂತ, ಮಲ್ಲಿಕಾರ್ಜನ ರಘುನಾಥ ರಾಜನಾಳ ಅವರು ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಸ್.ಎಂ.ಹಂಗರಗಿ ಘೋಷಿಸಿದರು.
ಬಸವನಬಾಗೇವಾಡಿ ತಾಲೂಕಾ ಪ್ರೈಮರಿ ಟೀಚರ್ಸ್ ಕೋ-ಆಪರೇಟಿವ್ ಕ್ರೆಡಿಟ್ ಸೊಸಾಯಿಟಿಗೆ ಜರುಗಿದ ಚುನಾವಣೆಯಲ್ಲಿ ನಮ್ಮ ಪೆನಲ್‌ದ ಅಭ್ಯರ್ಥಿಗಳು ಹೆಚ್ಚು ಆಯ್ಕೆಯಾಗಿದ್ದರೂ ಇದು ಅಖಂಡ ಬಸವನಬಾಗೇವಾಡಿ ತಾಲೂಕಿನ ಶಿಕ್ಷಕರ ಬಾಂಧವರ ಗೆಲುವು. ಈ ಗೆಲವು ಎಲ್ಲ ಶಿಕ್ಷಕರ ಬಾಂಧವರ ಶ್ರಮದ ಫಲವಾಗಿದೆ. ಎಲ್ಲ ಶಿಕ್ಷಕ ಬಾಂಧವರು ಒಂದಾಗಿ ಎಲ್ಲರ ಸಹಾಯ-ಸಹಕಾರೊಂದಿಗೆ ಅಖಂಡ ತಾಲೂಕಿನ ಈ ಸೊಸಾಯಿಟಿಯನ್ನು ಅಭಿವೃದ್ಧಿ ಪಥದತ್ತ ತೆಗೆದುಕೊಂಡು ಹೋಗಲಾಗುವುದು ಎಂದು ಆದರ್ಶ ಶಿಕ್ಷಕರ ವೇದಿಕೆಯ ಜಿಲ್ಲಾಧ್ಯಕ್ಷ ಉಮೇಶ ಕೌಲಗಿ ಸುದ್ದಿಗಾರರಿಗೆ ಹೇಳಿದರು.
ವಿಜಯೋತ್ಸವದಲ್ಲಿ ಆದರ್ಶ ವೇದಿಕೆಯ ಜಿಲ್ಲಾಧ್ಯಕ್ಷ ಉಮೇಶ ಕೌಲಗಿ, ಎಚ್.ಬಿ.ಬಾರಿಕಾಯಿ, ಎಂ.ಎನ್.ಯಾಳವಾರ, ಎಂ.ಎಸ್.ಅವಟಿ, ಸಲೀಂ ದಡೇದ, ಎಂ.ಎಸ್.ಮೂಕರ್ತಿಹಾಳ, ಅಶೋಕ ಗಿಡ್ಡಪ್ಪಗೋಳ, ಎಂ.ಎಂ.ಮುಲ್ಲಾ, ಗೋಪಾಲ ಲಮಾಣಿ, ಸಿದ್ದಪ್ಪ ಅವಜಿ, ಬಿ.ಪಿ.ನಾಗಾವಿ, ಎಂ.ವ್ಹಿ.ಗಬ್ಬೂರ, ಎಸ್.ಬಿ.ಮುತ್ತಗಿ, ಕೊಟ್ರೇಶ ಹೆಗ್ಡಾಳ, ಬಿ.ವ್ಹಿ.ಚಕ್ರಮನಿ, ಎಂ.ಆರ್.ಮಕಾನದಾರ, ಜಗದೀಶ ಚಿಕ್ಕಮಠ, ಎಸ್.ಎಸ್.ಕಮತ,ಸಂಗಮೇಶ ದುದಗಿ, ಆನಂದ ಪವಾರ, ಡಾ. ಮಹಾದೇವ ಗುಡಿ, ನಾಗು ಅರಳಚಂಡಿ, ಶ್ರೀಕಾಂತ ಬಡಿಗೇರ,ಜೆ.ಡಿ.ಪಾಟೀಲ, ಸಿ.ಎಂ.ಹೊರ್ತಿ, ವಿಜೇತ ಅಭ್ಯರ್ಥಿಗಳು ಸೇರಿದಂತೆ ಇತರರು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆಗುಂಬೆ ಮತ್ತೊಂದು ವೈನಾಡಾಗುವುದು ಬೇಡ (ಸುರಂಗ ಮಾರ್ಗ ಬೇಡ – ಪ್ರಕೃತಿಯನ್ನು ಉಳಿಸೋಣ

ಜೀವನ ಅಂದ್ರೆ ಕೇವಲ ಓಟವಲ್ಲ

ಬಬಲಾದ ಸರಕಾರಿ ಆಸ್ಪತ್ರೆ & ಕ್ಷೇಮ ಕೇಂದ್ರಕ್ಕೆ ಸದಾ ಬೀಗ

ಯು.ಕೆ.ಪಿ. ಭೂಮಾಪಕರ ವರ್ಗಾವಣೆ ರದ್ದಿಗೆ ರೈತ ಸಂಘ ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆಗುಂಬೆ ಮತ್ತೊಂದು ವೈನಾಡಾಗುವುದು ಬೇಡ (ಸುರಂಗ ಮಾರ್ಗ ಬೇಡ – ಪ್ರಕೃತಿಯನ್ನು ಉಳಿಸೋಣ
    In ವಿಶೇಷ ಲೇಖನ
  • ಜೀವನ ಅಂದ್ರೆ ಕೇವಲ ಓಟವಲ್ಲ
    In ಭಾವರಶ್ಮಿ
  • ಬಬಲಾದ ಸರಕಾರಿ ಆಸ್ಪತ್ರೆ & ಕ್ಷೇಮ ಕೇಂದ್ರಕ್ಕೆ ಸದಾ ಬೀಗ
    In (ರಾಜ್ಯ ) ಜಿಲ್ಲೆ
  • ಯು.ಕೆ.ಪಿ. ಭೂಮಾಪಕರ ವರ್ಗಾವಣೆ ರದ್ದಿಗೆ ರೈತ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಜು.೧೪ರೊಳಗೆ ಏತ ನೀರಾವರಿಗೆ ನೀರು ಹರಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಸಿಂದಗಿಯಲ್ಲಿ ಇಂದು ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಚಾಲಕರು ಸುರಕ್ಷತಾ ನೀಯಮ ಪಾಲಿಸಿ :ಪಿಎಸೈ ಖೋತ್
    In (ರಾಜ್ಯ ) ಜಿಲ್ಲೆ
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 09, 2026
    In ದಿನಪತ್ರಿಕೆ
  • ಮಾಧ್ಯಮ ಕಾರ್ಯದರ್ಶಿಗಳಿಗೆಕೆಯುಡಬ್ಲ್ಯೂಜೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.