Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರೀಡೆ ಕೇವಲ ಮನರಂಜನೆಯಲ್ಲ ಸದೃಢ ಬದುಕಿನ ದಾರಿ :ಸವದಿ

ಬಿಜೆಪಿಯ 50ಕ್ಕೂ ಹೆಚ್ಚು ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 02, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಲಮಿತಿಯಲ್ಲಿ ನಾಗಮೋಹನ್ ದಾಸ್ ಸಮಿತಿ ವರದಿ ನೀಡಲಿ
(ರಾಜ್ಯ ) ಜಿಲ್ಲೆ

ಕಾಲಮಿತಿಯಲ್ಲಿ ನಾಗಮೋಹನ್ ದಾಸ್ ಸಮಿತಿ ವರದಿ ನೀಡಲಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ-ರಾಜ್ಯ ಸಮಿತಿಯಿಂದ ಸುದ್ದಿಗೋಷ್ಠಿ | ಒಳ ಮೀಸಲಾತಿ ಹೋರಾಟಗಾರರ ಆಗ್ರಹ

ಬೆಂಗಳೂರು: ಸುಪ್ರೀಂ ಕೋರ್ಟ್ ತೀರ್ಪಿನಂತೆ ಕರ್ನಾಟಕ ಸರ್ಕಾರ ಒಳ ಮೀಸಲಾತಿ ಜಾರಿ ಮಾಡಬೇಕು. ಆದ್ದರಿಂದ, ಜಸ್ಟೀಸ್ ನಾಗಮೋಹನ್ ದಾಸ್ ಸಮಿತಿಯು ತನ್ನ ವರದಿಯನ್ನು ತುರ್ತಾಗಿ ನೀಡಬೇಕು ಎಂದು ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ-ರಾಜ್ಯ ಸಮಿತಿ’ ಒತ್ತಾಯಿಸಿದೆ.
ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, “ಸುಮಾರು ನಾಲ್ಕು ದಶಕಗಳ ಒಳಮೀಸಲಾತಿ ಹೋರಾಟವು ಕಳೆದ ಆಗಸ್ಟ್ 1, 2024 ರ ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಒಂದು ತಾರ್ಕಿಕ ಅಂತ್ಯ ಕಂಡಿದೆ. ಒಳಮೀಸಲಾತಿಯ ಪರ ವಿರೋಧದ ಚರ್ಚೆಗಳು ತಕ್ಕಮಟ್ಟಿಗೆ ಶಮನಗೊಂಡು ಒಳಮೀಸಲಾತಿ ಯಾರಿಗೆ ಎಷ್ಟೆಷ್ಟು ಸಿಗಬೇಕೆಂಬ ಚರ್ಚೆಗಳು ಹೆಚ್ಚಾದವು. ಈ ದಿಸೆಯಲ್ಲಿ ತುಸು ತಡವಾದರೂ ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಪ್ರಮಾಣವನ್ನು ನಿಗದಿಪಡಿಸಲು ಜಸ್ಟೀಸ್ ನಾಗಮೋಹನ್ ದಾಸ್ ಸಮಿತಿಯನ್ನು ರಚಿಸಿರುವುದು ಅಭಿನಂದನೀಯ” ಎಂದು ಹೇಳಿದ್ದಾರೆ.
“ಒಳ ಮೀಸಲಾತಿಗಾಗಿ ಇಷ್ಟು ವರ್ಷ ಕಾದಿರುವ ನಮಗೆ ಇನ್ನೆರಡು ತಿಂಗಳು ಕಾಯುವುದು ತ್ರಾಸದಾಯಕವಲ್ಲ. ಒಳಮೀಸಲಾತಿ ಜಾರಿಯಾಗುವವರೆಗೆ ಎಲ್ಲ ಸರ್ಕಾರಿ ನೇಮಕಾತಿಗಳನ್ನು ತಡೆ ಹಿಡಿದಿರುವುದು ಸ್ವಾಗತಾರ್ಹವೇ. ಆದರೂ, ಹೆಚ್ಚು ಕಾಲ ಹೀಗೆ ನೇಮಕಾತಿ ತಡೆಹಿಡಿಯುವುದರ ಮೂಲಕ ಇತರರಿಗೂ ತೊಂದರೆ ಕೊಡುವುದು ಅನ್ಯಾಯವಾಗುತ್ತದೆ. ಜೊತೆಗೆ, ಅತ್ಯಂತ ತಳಸಮುದಾಯದ ಬೇಡಿಕೆಗಳನ್ನು ಸತತವಾಗಿ ಮುಂದೂಡುವುದು ಸಹ ಅನ್ಯಾಯವೇ ಆಗುತ್ತದೆ. ಆದ್ದರಿಂದ, ತುರ್ತಾಗಿ ಜಸ್ಟೀಸ್ ನಾಗಮೋಹನ್ ದಾಸ್ ಸಮಿತಿಯು ತನ್ನ ವರದಿಯನ್ನು ನೀಡಬೇಕೆಂದು ಈ ಮೂಲಕ ಒತ್ತಾಯಿಸುತ್ತಿದ್ದೇವೆ” ಎಂದು ಮನವಿ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಪರವಾಗಿ ಬಸವರಾಜ್ ಕೌತಾಳ್, ಡಿ.ಟಿ ವೆಂಕಟೇಶ್, ಶಿವಣ್ಣ ಕನಕಪುರ, ವಿನಯ್ ಶ್ರೀನಿವಾಸ್, ಚಂದ್ರು ತರಹುಣಿಸೆ ಇದ್ದರು.

ಒಳ ಮೀಸಲಾತಿ ಹೋರಾಟಗಾರರ ಆಗ್ರಹಗಳು

“ಯಾವುದೇ ಕಾರಣಕ್ಕೂ, ಯಾವುದೇ ಸಮುದಾಯಕ್ಕೂ ಅನ್ಯಾಯವಾಗದ ಹಾಗೆ ಒಳಮೀಸಲಾತಿ ವರ್ಗೀಕರಣ ಮಾಡುವ ಜೊತೆಗೆ, ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ʼಪ್ರಾಯೋಗಿಕ ದತ್ತಾಂಶʼವನ್ನು ಮಾನದಂಡವನ್ನಾಗಿ ವಿಧಿಸಿರುವುದರಿಂದ ಮುಂದಿನ ಜನಗಣತಿಯವರೆಗೆ ಅವಶ್ಯಕವಿರುವ ಅಂಶಗಳಿಗೆಲ್ಲ ʼಸ್ಯಾಂಪಲ್ ಸಮೀಕ್ಷೆʼ ಕೈಗೊಳ್ಳಬೇಕು. ಇದಕ್ಕೆ ರಾಜ್ಯ ಸರ್ಕಾರ ಶೀಘ್ರ ಅನುದಾನ ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.
“ಉದ್ಯೋಗಗಳಲ್ಲಿ ಅತಿ ಕಡಿಮೆ ಆಯ್ಕೆ/ಅವಕಾಶಗಳಿದ್ದಾಗ, ಪ.ಜಾತಿಯ ಯಾವ ಗುಂಪಿಗೆ ಮೊದಲ ಆದ್ಯತೆ ನೀಡಬೇಕೆಂಬ ಶ್ರೇಣೀಕರಣವನ್ನು ನಿಗದಿಗೊಳಿಸಬೇಕು. ಬಡ್ತಿ ಮೀಸಲಾತಿಯಲ್ಲಿಯೂ ಒಳಮೀಸಲಾತಿಯನ್ನು ಪರಿಗಣಿಸಿ, ರಾಜಕೀಯ ಮತಕ್ಷೇತ್ರ ಮೀಸಲಾತಿಯಲ್ಲಿಯೂ ಒಳಮೀಸಲಾತಿಯನ್ನು ಕಡ್ಡಾಯಗೊಳಿಸಲು ಶಿಫಾರಸು ಮಾಡಬೇಕು” ಎಂದು ಹೇಳಿದ್ದಾರೆ.
“ಗುತ್ತಿಗೆ ನೌಕರಿಗಳಲ್ಲಿಯೂ ಒಳಮೀಸಲಾತಿ ಪರಿಗಣಿಸಲು ಸರ್ಕಾರ ಶಿಫಾರಸು ಮಾಡಬೇಕು. ಒಳಮೀಸಲಾತಿ ಅನುಷ್ಠಾನದಲ್ಲಿನ ಕುಂದುಕೊರತೆಗಳು ಹಾಗೂ ಪ್ರಗತಿಯ ಮೇಲ್ವಿಚಾರಣೆ ಮಾಡಲು ರಾಜ್ಯ ಪರಿಶಿಷ್ಟ ಆಯೋಗದಡಿಯಲ್ಲಿ ಒಂದು ಸ್ವತಂತ್ರ ಸಮಿತಿ ರಚಿಸಿ, ಇಂದಿರಾ ಸಹಾನಿ ತೀರ್ಪಿನನ್ವಯ ಮೀಸಲಾತಿಗೆ ವಿಧಿಸಿರುವ ಶೇ.50 ಮೀಸಲಾತಿ ಮಿತಿಯನ್ನು ರದ್ದುಪಡಿಸಲು ರಾಜ್ಯ ಸರ್ಕಾರವು ಅಗತ್ಯ ಕ್ರಮ ಕೈಗೊಳ್ಳುವಂತೆ ಶಿಫಾರಸು ಮಾಡಬೇಕು” ಎಂದು ಹೋರಾಟಗಾರರು ಆಗ್ರಹಿಸಿದ್ದಾರೆ.
“ಉದ್ಯೋಗಾಕಾಂಕ್ಷಿಗಳಿಗೆ ಸಮಸ್ಯೆಯಾಗದಂತೆ ನಿಗದಿತ ಗಡುವಿನೊಳಗೆ ಆಯೋಗವು ವರದಿ ನೀಡಬೇಕು.
ಈ ಮೇಲಿನ ಮನವಿಗಳನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟವು ಆಗ್ರಹಿಸುತ್ತದೆ. ಸಾಮಾಜಿಕ ನ್ಯಾಯವನ್ನು ಒಳಮೀಸಲಾತಿಯಲ್ಲಿಯೂ ಎತ್ತಿಹಿಡಿಯಬೇಕೆಂದು ಒತ್ತಾಯಿಸುತ್ತದೆ” ಎಂದು ಹೇಳಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರೀಡೆ ಕೇವಲ ಮನರಂಜನೆಯಲ್ಲ ಸದೃಢ ಬದುಕಿನ ದಾರಿ :ಸವದಿ

ಬಿಜೆಪಿಯ 50ಕ್ಕೂ ಹೆಚ್ಚು ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 02, 2026

ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರೀಡೆ ಕೇವಲ ಮನರಂಜನೆಯಲ್ಲ ಸದೃಢ ಬದುಕಿನ ದಾರಿ :ಸವದಿ
    In (ರಾಜ್ಯ ) ಜಿಲ್ಲೆ
  • ಬಿಜೆಪಿಯ 50ಕ್ಕೂ ಹೆಚ್ಚು ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 02, 2026
    In ದಿನಪತ್ರಿಕೆ
  • ಇಂಡಿ-ಚಡಚಣ ಕೈಬಿಟ್ಟಿರುವುದು ರೈತರಿಗೆ ಮಾಡಿದ ದ್ರೋಹ!
    In (ರಾಜ್ಯ ) ಜಿಲ್ಲೆ
  • ಗಣೇಶ ವಿಸರ್ಜನೆಗೆ ಶಾಶ್ವತ ಹೊಂಡ ನಿರ್ಮಾಣಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್: ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಸೆ.೨೩ ಕೊನೆಯ ದಿನ
    In (ರಾಜ್ಯ ) ಜಿಲ್ಲೆ
  • ಸಮಾಪನೆಗೊಂಡ ೮ ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಆಕ್ಷೇಪಣೆಗೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ನಿಷ್ಕ್ರಿಯ ಸಹಕಾರ ಸಂಘಗಳ ನೋಂದಣಿ ರದ್ದತಿ ಪ್ರಕ್ರಿಯೆ ಆರಂಭ
    In (ರಾಜ್ಯ ) ಜಿಲ್ಲೆ
  • ಕರಡು ಮತದಾರರ ಪಟ್ಟಿ ಪರಿಶೀಲಿಸಿಕೊಳ್ಳಿ :ಡಿಸಿ
    In (ರಾಜ್ಯ ) ಜಿಲ್ಲೆ
  • ಗರ್ಭಿಣಿಯರ ಆರೋಗ್ಯ ತಪಾಸಣೆ, ನೋಂದಣಿ ಕಡ್ಡಾಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.