ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ವಿದ್ಯಾರ್ಥಿಗಳ ಪ್ರಗತಿ ಹಾಗೂ ಸರ್ವಾಂಗೀಣ ಪ್ರಗತಿಗಾಗಿ ಅವರಲ್ಲಿ ಮೌಲ್ಯಯುತ ಶಿಕ್ಷಣದ ಅರಿವು ಮೂಡಿಸಬೇಕು ಎಂದು ಜಮಖಂಡಿಯ ಬಿಎಲ್ಡಿಇ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ, ನಿವೃತ್ತ ಪ್ರಾಚಾರ್ಯ ಎಸ್.ಎಚ್.ಲಗಳಿ ಹೇಳಿದರು.
ಸಿಂದಗಿ ಪಟ್ಟಣದ ರಾಂಪೂರ ರಸ್ತೆಯ ಹೊರವಲಯದಲ್ಲಿರುವ ಪಿಇಎಸ್ ಗಂಗಾಧರ ಎನ್ ಬಿರಾದಾರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪಪೂ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಂತ್ರಜ್ಞಾನದತ್ತ ಸಾಗುತ್ತಿರುವ ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳೆಡೆಗೆ ಗಮನ ಹರಿಸಬೇಕು. ಸದೃಡ ಸಮಾಜ ನಿರ್ಮಾಣ ವಾಗಬೇಕಾದರೆ ವಿದ್ಯಾರ್ಥಿಗಳಲ್ಲಿ ಮೌಲ್ಯಯುತ ಶಿಕ್ಷಣದ ಅರಿವು ಮೂಡಿಸುವುದು ಅತ್ಯಅವಶ್ಯಕ ಎಂದರು.
ಇದೇ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಬಿಎಲ್ಡಿಇ ಸ್ನಾತಕೋತ್ತರ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ವಿ.ಎಂ.ನುಚ್ಚಿ ಮಾತನಾಡಿದರು. ವಿಶ್ರಾಂತ ಉಪನ್ಯಾಸಕ ಎಸ್.ವಾಯ್. ಬೀಳಗಿ ಪ್ರಾಸಾವಿಕ ನುಡಿಗಳನ್ನಾಡಿದರು.
ಈ ವೇಳೆ ಪಿಇಎಸ್ ಸಂಸ್ಥೆಯ ಕಾರ್ಯದರ್ಶಿ ಬಿ.ಪಿ.ಕರ್ಜಗಿ ಸಮ್ಮುಖ ವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ಡಾ.ಸಂತೋಷಕುಮಾರ ಕರ್ಜಗಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಸಮಾರಂಭದಲ್ಲಿ ಪಿಯುಸಿಯಲ್ಲಿ ಪ್ರಥಮ ದ್ವಿತೀಯ ಹಾಗೂ ತೃತಿಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ೫೦೦ ರೂ. ನಗದು ಬಹುಮಾನ ಹಾಗೂ ವಿಷಯವಾರು ೧೦೦ಕ್ಕೆ ೧೦೦ಅಂಕ ಪಡೆದ ವಿದ್ಯಾರ್ಥಿಗಳಿಗೆ ತಲಾ ೧೦೦೦ ರೂ. ನಗದು ಬಹುಮಾನ ನೀಡಿ ಪುರಸ್ಕರಿಸಲಾಯಿತು..
ಈ ವೇಳೆ ಆಡಳಿತಾಧಿಕಾರಿ ಆಯ್.ಬಿ.ಬಿರಾದಾರ, ಪ್ರೇಮಾ ಕರ್ಜಗಿ, ಶಕುಂತಲಾ ಗಂಗಧಾರಗೌಡ ಬಿರಾದಾರ, ಕೆ.ಎಚ್. ಸೋಮಾಪೂರ, ಪಿ.ಎಂ.ಮಡಿವಾಳ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಜಿ.ಎಸ್.ಕಡಣಿ ವಿದ್ಯಾರ್ಥಿ ಪ್ರತಿನಿಧಿ ಮಲ್ಲಮ್ಮ ಸೊನ್ನದ ಸೇರಿದಂತೆ ಮಹಾವಿದ್ಯಾಲಯದ ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು. ಪ್ರಾಚಾರ್ಯ ಆರ್.ಬಿ.ಗೋಡಕರ ಸ್ವಾಗತಿಸಿದರು. ಅಮೀರ ಮೋಪಗಾರ ನಿರೂಪಿಸಿದರು. ಮಹಾಂತೆಶ ದಂಡವತ ವಂದಿಸಿದರು.

