Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ

ಮಾ.೩೦ ರಿಂದ ಲಿವರ್ ಸಮಸ್ಯೆ ಕುರಿತು ಉಚಿತ ತಪಾಸಣೆ & ಚಿಕಿತ್ಸೆ ಶಿಬಿರ

ರಾಷ್ಟ್ರಕವಿ ಶಿವರುದ್ರಪ್ಪನವರು ಕನ್ನಡದ ಅಸ್ಮಿತೆ :ಪ್ರೊ.ಮೇತ್ರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮನಗೂಳಿ ಪಟ್ಟಣ ಅಭಿವೃದ್ಧಿಯತ್ತ ದಾಪುಗಾಲು :ಸಚಿವ ಶಿವಾನಂದ
(ರಾಜ್ಯ ) ಜಿಲ್ಲೆ

ಮನಗೂಳಿ ಪಟ್ಟಣ ಅಭಿವೃದ್ಧಿಯತ್ತ ದಾಪುಗಾಲು :ಸಚಿವ ಶಿವಾನಂದ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಮನಗೂಳಿ ಪಟ್ಟಣದ ಉಕ್ಕಲಿ ರಸ್ತೆಯಲ್ಲಿರುವ ಕೆರೆ ಅಭಿವೃದ್ಧಿ, ಪಟ್ಟಣದ ಜನರಿಗೆ ಕುಡಿಯುವ ನೀರು ಪೂರೈಕೆ ಮಾಡಲು ಅಮೃತ ಯೋಜನೆ ೨.೦ ಅಡಿಯಲ್ಲಿ ಅಂದಾಜು ೩,೫೦೦ ನಲ್ಲಿ ಸಂಪರ್ಕ, ಭಜನಾ ಮಂಟಪದ ನವೀಕರಣ, ಅಗಸಿ ದ್ವಾರದ ಕಾಮಗಾರಿ ಸೇರಿದಂತೆ ಪಟ್ಟಣಕ್ಕೆ ಬೇಕಾಗಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿದೆ. ಈ ಮೂಲಕ ಪಟ್ಟಣವು ಅಭಿವೃದ್ಧಿಯತ್ತ ದಾಪುಗಾಲು ಹಾಕುತ್ತಿದೆ ಎಂದು ಜವಳಿ, ಕಬ್ಬು ಮತ್ತು ಸಕ್ಕರೆ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ತಾಲೂಕಿನ ಮನಗೂಳಿ ಪಟ್ಟಣದ ವಿಠ್ಠಲ ಮಂದಿರದ ಹತ್ತಿರ ಮನಗೂಳಿ ಪಟ್ಟಣ ಪಂಚಾಯಿತಿಯ ಸನ್ ೨೦೨೩-೨೪ ನೇ ಸಾಲಿನ ಎಸ್.ಎಫ್.ಸಿ ವಿಶೇಷ ಅನುದಾನದಲ್ಲಿ ಅಂದಾಜು ಮೊತ್ತ ೨೦ ಲಕ್ಷ ರೂ.ಯಲ್ಲಿ ಕೈಗೊಂಡಿರುವ ವಿಠ್ಠಲ ಮಂದಿರದ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭಾನುವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಪಟ್ಟಣದ ಉಕ್ಕಲಿ ರಸ್ತೆಯಲ್ಲಿರುವ ಕೆರೆ ಅಭಿವೃದ್ಧಿ ಮಾಡುವ ಜೊತೆಗೆ ಅಲ್ಲಿ ವಾಯು ವಿಹಾರ ಟ್ರ್ಯಾಕ್, ಮಕ್ಕಳಿಗೆ ಆಟಿಕೆ ಸಾಮಾನುಗಳ ಅಳವಡಿಕೆ, ಉದ್ಯಾನವನ ಸೇರಿದಂತೆ ಅದೊಂದು ಪ್ರವಾಸಿ ತಾಣವನ್ನಾಗಿ ಮಾಡುವ ಕಾಮಗಾರಿ ಅಂದಾಜು ರೂ. ೫.೫೦ ಕೋಟಿ ರೂ. ಅನುದಾನದಲ್ಲಿ ಈಗಾಗಲೇ ಆರಂಭವಾಗಿದೆ. ರೂ.೨೫ ಲಕ್ಷ ಅನುದಾನದಲ್ಲಿ ಆಕರ್ಷಕವಾದ ಪಟ್ಟಣದ ಅಗಸಿ ದ್ವಾರ ಬಾಗಿಲು ಕಾಮಗಾರಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮೈದಾನದ ಅಭಿವೃದ್ಧಿ ೧.೩೫ ಲಕ್ಷ ವೆಚ್ಚದಲ್ಲಿ, ಘನತ್ಯಾಜ್ಯ ವಿಲೇವಾರಿ ಘಟಕದ ಆವರಣಗೋಡೆ ಕಾಮಗಾರಿ ರೂ.೧.೪೦ ಲಕ್ಷ ವೆಚ್ಚದಲ್ಲಿ, ಪಟ್ಟಣದ ಭಜನಾ ಮಂಟಪದ ನವೀಕರಣಕ್ಕಾಗಿ ರೂ.೨೫ ಲಕ್ಷ ವೆಚ್ಚ ಸೇರಿದಂತೆ ಅನೇಕ ಕಾಮಗಾರಿಗಳು ಪ್ರಗತಿಯಲ್ಲಿವೆ. ಈಗಾಗಲೇ ಪಟ್ಟಣದಲ್ಲಿ ಅನೇಕ ಅಭಿವೃದ್ದಿ ಕಾಮಗಾರಿ ಮುಕ್ತಾಯವಾಗಿವೆ. ಮುಂಬರುವ ದಿನಗಳಲ್ಲಿ ಪಟ್ಟಣ ಪಂಚಾಯಿತಿಯ ನೂತನ ಕಟ್ಟಡವನ್ನು ವಿಜಯಪುರ ಮುಖ್ಯ ರಸ್ತೆಗೆ ಹೊಂದಿಕೊಂಡಂತೆ ಅಂದಾಜು ೫ ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು. ಈ ಕಟ್ಟಡದ ವಿನ್ಯಾಸದ ಅನುಮತಿಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಶೀಘ್ರದಲ್ಲಿಯೇ ಈ ಕಾಮಗಾರಿ ಆರಂಭವಾಗಲಿದೆ. ವಿಠ್ಠಲ ಮಂದಿರದ ಹತ್ತಿರ ನಿರ್ಮಾಣವಾಗುವ ಸಮುದಾಯ ಭವನವನ್ನು ನಿಗದಿತ ಅವಧಿಯಲ್ಲಿ ಗುತ್ತಿಗೆದಾರರು ಗುಣಮಟ್ಟದಿಂದ ನಿರ್ಮಿಸಬೇಕು. ಇಲ್ಲಿನ ಜನರ ಬೇಡಿಕೆಯಂತೆ ಮುಂದಿನ ದಿನಗಳಲ್ಲಿ ಇದರ ಮೇಲಂಸ್ತು ನಿರ್ಮಾಣ ಮಾಡಿಕೊಡುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಶಿವನಗೌಡ ಗುಜಗೊಂಡ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಸ್.ಐ.ರೇವೂಕರ, ಪಟ್ಟಣ ಪಂಚಾಯಿತಿ ಅಭಿಯಂತರ ಸೋಮಶೇಖರ ತುಪ್ಪದ, ಪಟ್ಟಣ ಪಂಚಾಯಿತಿ ಸದಸ್ಯರಾದ ಭಾಗ್ಯರಾಜ ಸೊನ್ನದ, ಡಾ.ರಾಮಣ್ಣ ಪತ್ತಾರ, ಪ್ರಕಾಶ ಮನಗೂಳಿ, ಅಜೀತ ಜಾನಕರ, ತಿಪ್ಪಣ್ಣ ಖ್ಯಾತನ್ನವರ, ಡಾ.ಎಂ.ಡಿ.ಮೇತ್ರಿ, ರಮೇಶ ಫಿರಗಾ, ಸಲೀಂ ಮಕಾನದಾರ, ಮುಖಂಡರಾದ ಜಿ.ಕೆ.ಕುಲಕರ್ಣಿ, ಪಿ.ಸಿ.ಕುಲಕರ್ಣಿ, ಜಿನೇಶ ಪವಾರ, ಬಸಗೊಂಡ ಚಿಮ್ಮಲಗಿ, ಶಿವಾಜಿ ಬೋಸ್ಲೆ, ಗುತ್ತಿಗೆದಾರ ರಾಜು ಯಾದವಾಡ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ

ಮಾ.೩೦ ರಿಂದ ಲಿವರ್ ಸಮಸ್ಯೆ ಕುರಿತು ಉಚಿತ ತಪಾಸಣೆ & ಚಿಕಿತ್ಸೆ ಶಿಬಿರ

ರಾಷ್ಟ್ರಕವಿ ಶಿವರುದ್ರಪ್ಪನವರು ಕನ್ನಡದ ಅಸ್ಮಿತೆ :ಪ್ರೊ.ಮೇತ್ರಿ

ಮುಂದುವರೆದ ಅಡುಗೆ ಅನಿಲ ಸಿಲಿಂಡರ್‌ಗಳ ಅಭಾವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಹಕರ ಕಾಯ್ದೆಯಿಂದ ನ್ಯಾಯಸಮ್ಮತ ಸೇವೆ, ಸುರಕ್ಷಿತ ಉತ್ಪನ್ನ ಲಭ್ಯ
    In (ರಾಜ್ಯ ) ಜಿಲ್ಲೆ
  • ಮಾ.೩೦ ರಿಂದ ಲಿವರ್ ಸಮಸ್ಯೆ ಕುರಿತು ಉಚಿತ ತಪಾಸಣೆ & ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರಕವಿ ಶಿವರುದ್ರಪ್ಪನವರು ಕನ್ನಡದ ಅಸ್ಮಿತೆ :ಪ್ರೊ.ಮೇತ್ರಿ
    In (ರಾಜ್ಯ ) ಜಿಲ್ಲೆ
  • ಮುಂದುವರೆದ ಅಡುಗೆ ಅನಿಲ ಸಿಲಿಂಡರ್‌ಗಳ ಅಭಾವ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಅಭ್ಯರ್ಥಿಗೆ 25 ಸಾವಿರ ಮತಗಳ ಅಂತರದ ಗೆಲುವು ಖಚಿತ
    In (ರಾಜ್ಯ ) ಜಿಲ್ಲೆ
  • ಮಾ.31ರಂದು ವಿಶ್ವ ಮಹಿಳಾ ದಿನಾಚರಣೆ & ಮುತ್ತೈದೆಯರಿಗೆ ಉಡಿ ತುಂಬುವಿಕೆ
    In (ರಾಜ್ಯ ) ಜಿಲ್ಲೆ
  • ರಾಮನ ಜೀವನದ ಮೌಲ್ಯಗಳು ಬದುಕಿಗೆ ಶಾಶ್ವತ ಪ್ರೇರಣೆ
    In ವಿಶೇಷ ಲೇಖನ
  • ಬಿರುಗಾಳಿ – ವರುಣನ ಅರ್ಭಟಕ್ಕೆ ನಲುಗಿದ ದ್ರಾಕ್ಷಿ ಬೆಳೆಗಾರರು
    In (ರಾಜ್ಯ ) ಜಿಲ್ಲೆ
  • ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.