ಉದಯರಶ್ಮಿ ದಿನಪತ್ರಿಕೆ
ಕಲಕೇರಿ:ಕಲಕೇರಿ ಗ್ರಾಮದ ಮಲ್ಲಿಕಾರ್ಜುನ ವಿಧ್ಯಾವರ್ಧಕ ಸಂಘದ ಅಡಿಯಲ್ಲಿ ನಡೆಯುತ್ತಿರುವ ಅನುಧಾನಿತ ಶ್ರೀ ಬಸವೇಶ್ವರ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ದ್ವಿತೀಯ ಪಿಯುಸಿ ವಿಧ್ಯಾರ್ಥಿಗಳಿಗೆ ಶುಭಕೋರುವ ಸಮಾರಂಭ ಮಂಗಳವಾರ ಫೆ ೧೧ ರಂದು ಬೆಳಿಗ್ಗೆ ೧೦ ಘಂಟೆಗೆ ವಿಜಯಪುರ ರಸ್ತೆಯಲ್ಲಿರುವ ಬಸವೇಶ್ವರ ಮಂಗಲ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಸಾನಿಧ್ಯವನ್ನು ಕಲಕೇರಿ ಹಿರೇಮಠದ ಸಿದ್ದರಾಮ ಶಿವಾಚಾರ್ಯರು ವಹಿಸಲಿದ್ದು, ಪ್ರಾಚಾರ್ಯ ಸಿ ಎಸ್ ಹಿರೇಮಠ ಅಧ್ಯಕ್ಷತೆ ವಹಿಸುವರು, ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಜೋಗುರ, ಸಂಸ್ಥೆಯ ಅಧ್ಯಕ್ಷ ಶಾಂತಗೌಡ ಪಾಟೀಲ,ನಿರ್ದೇಶಕ ಷಣ್ಮುಕಪ್ಪ ಝಳಕಿ ಗೌರವ ಅಧ್ಯಕ್ಷತೆ ವಹಿಸುವರು, ನಿರ್ದೇಶಕರಾದ ಎಸ್ ಎಂ ಕಡಕೋಳ, ಜಿ ಎಂ ಗುಮಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸುವರು, ಚಿಕ್ಕಸಿಂದಗಿಯ ಕಾಯಕ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ವೇ.ರವಿಸ್ವಾಮಿ ಹತ್ತರಕಿಹಾಳಮಠ ಮುಖ್ಯ ಅಥಿತಿಗಳಾಗಿ ಬಾಗವಹಿಸಿ ವಿಶೇಷ ಉಪನ್ಯಾಸವನ್ನು ನೀಡುವರು. ಸಂಸ್ಥೆಯ ಆಡಳಿತ ಮಂಡಳಿಯ ಸರ್ವ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.
ಇದೆ ವೇಳೆ ಸುಮಾರು ೩೫ ವರ್ಷಗಳ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಸಿ ಎಸ್ ಹಿರೇಮಠ ಹಾಗೂ ಎಸ್ ಎಸ್ ಕಲಶೇಟ್ಟಿ ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಗುವದು, ನಂತರ ಕಾಲೇಜಿನ ವಿಧ್ಯಾರ್ಥಿಗಳಿಂದ ಸೌಂಸ್ಕೃತಿಕ ಮನರಂಜನಾ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರಕಠಣೆಯಲ್ಲಿ ತಿಳಿಸಿದೆ.
