Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 04,2026

ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾಮಾಜಿಕ ನ್ಯಾಯ ಸಾಕಾರಗೊಳಿಸಲು ಬಿಜೆಪಿ ಬದ್ಧ
(ರಾಜ್ಯ ) ಜಿಲ್ಲೆ

ಸಾಮಾಜಿಕ ನ್ಯಾಯ ಸಾಕಾರಗೊಳಿಸಲು ಬಿಜೆಪಿ ಬದ್ಧ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಒಳಮೀಸಲಾತಿ, ಐತಿಹಾಸಿಕ ನಿರ್ಣಯ | ಕೇಂದ್ರ ಸಚಿವ ಎಲ್.ಮುರುಗನ್ ಹೇಳಿಕೆ

ವಿಜಯಪುರ: ಸಾಮಾಜಿಕ ನ್ಯಾಯದ ಬದ್ಧತೆಯೊಂದಿಗೆ ನ್ಯಾ.ಸದಾಶಿವ ಆಯೋಗದ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವ ಮೂಲಕ ರಾಜ್ಯ ಸರ್ಕಾರ ಐತಿಹಾಸಿಕ ನಿರ್ಣಯ ಸ್ವೀಕರಿಸಿದ್ದು, ಪಂ.ದೀನದಯಾಳ ಉಪಾಧ್ಯಾಯರ ಅಂತ್ಯೋದಯದ ಆಶಯವನ್ನು ಸಾಕಾರಗೊಳಿಸಿದೆ ಎಂದು ಕೇಂದ್ರ ಮೀನುಗಾರಿಕೆ, ವಾರ್ತಾ-ಪ್ರಸಾರ ಖಾತೆ ರಾಜ್ಯ ಸಚಿವ ಎಲ್. ಮುರುಗನ್ ಹೇಳಿದರು.
ಶುಕ್ರವಾರ ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಸಾಮಾಜಿಕ ನ್ಯಾಯದ ರಿಯಲ್ ಹೀರೋ ಬಸವರಾಜ ಬೊಮ್ಮಾಯಿ ಅವರ ಸಾಮಾಜಿಕ ನ್ಯಾಯ ಸಾಕಾರಗೊಳಿಸಲು ಬಿಜೆಪಿ ಬದ್ಧವಾಗಿದ್ದು, ಕೇಂದ್ರ ಸಚಿವ ಸಂಪುಟದಲ್ಲಿಯೂ ಸಹ ಮಾದಿಗ ಸಮುದಾಯಕ್ಕೆ ಪ್ರಾತಿನಿಧ್ಯ ದೊರಕಿದೆ ಎಂದರು.
ಬಿಜೆಪಿ ಎಸ್.ಸಿ.ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಮಾತನಾಡಿ, ಬಿಜೆಪಿ ದಲಿತ ಪರವಾದ ಪಕ್ಷವಾಗಿದ್ದು, ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಒಳಮೀಸಲಾತಿಯ ಕೂಗಿಗೆ ಸ್ಪಂದಿಸಿದ್ದು ಬಿಜೆಪಿ. ಜೇನು ಕಡಿಸಿಕೊಂಡು ಜೇನಿನ ಸವಿಯನ್ನು ದಲಿತ ಸಮುದಾಯಗಳಿಗೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಉಣಬಡಿಸಿದೆ ಎಂದರು.
ತೆಲಂಗಾಣ-ಆAಧ್ರಪ್ರದೇಶದ ಹಿರಿಯ ಹೋರಾಟಗಾರ ಮಂದಾಕೃಷ್ಣ ಮಾದಿಗ ಮಾತನಾಡಿ, ಬಿಜೆಪಿ ಗೆಲುವಿಗೆ ಮಾದಿಗ ಸಮುದಾಯ ಬೆನ್ನೆಲುಬಾಗಿ ನಿಲ್ಲಲ್ಲಿದ್ದು, ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡುವ ಮೂಲಕ ದಶಕಗಳ ಮಾದಿಗ ಸಮುದಾಯದ ಕೂಗಿಗೆ ಸ್ಪಂದಿಸಿದೆ. ಕೇಂದ್ರದಲ್ಲಿಯೂ ಬಿಜೆಪಿ ಸರ್ಕಾರವೇ ಇದ್ದು, ಒಳಮೀಸಲಾತಿ ಜಾರಿಗೆ ಬರುವುದಂತೂ ಸತ್ಯ ಎಂದರು.
ನ್ಯಾ.ಸದಾಶಿವ ಆಯೋಗ ವರದಿ ಜಾರಿಗೆ ಕಾಂಗ್ರೆಸ್, ಜೆಡಿಎಸ್ ಯಾವ ಪಕ್ಷಗಳೂ ಸ್ಪಂದನೆ ಮಾಡಿರಲಿಲ್ಲ, ಆದರೆ ಬಿಜೆಪಿ ಪಂ.ದೀನದಯಾಳ ಉಪಾಧ್ಯಾಯರ ಅಂತ್ಯೋದಯದ ಆಶಯದೊಂದಿಗೆ ಒಳಮೀಸಲಾತಿಯನ್ನು ಜಾರಿಗೊಳಿಸಿದೆ ಎಂದು ವಿವರಿಸಿದರು.
ದಲಿತರಲ್ಲಿಯೇ ಅತ್ಯಂತ ಹಿಂದುಳಿದ ಮಾದಿಗ ಸಮುದಾಯ ಶೈಕ್ಷಣಿಕವಾಗಿ, ರಾಜಕೀಯವಾಗಿ ತೀರಾ ಹಿಂದುಳಿದಿದ್ದು, ಈ ಒಳಮೀಸಲಾತಿ ಮೂಲಕ ಸಮುದಾಯ ಪ್ರಗತಿ ಕಾಣಲಿದೆ ಒಳಮೀಸಲಾತಿ ವಿಷಯವಾಗಿ ಬೊಮ್ಮಾಯಿ ನೇತೃತ್ವದ ಬಿಜೆಪಿ ಬದ್ಧತೆ ಪ್ರದರ್ಶಿಸಿದೆ ಎಂದರು.

ರಾಜ್ಯ ಕಾರ್ಯದರ್ಶಿ ವೆಂಕಟೇಶ, ಸಂಸದ ರಮೇಶ ಜಿಗಜಿಣಗಿ, ಬಿಜೆಪಿ ಹಿರಿಯ ಧುರೀಣರಾದ ಮಂದಾಕೃಷ್ಣ ಮಾದಿಗ, ಎಸ್. ವೆಂಕಟೇಶ, ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕುಚಬಾಳ, ಪ್ರಮುಖರಾದ ಡಾ.ಸುರೇಶ ಬಿರಾದಾರ, ಮಲ್ಲಿಕಾರ್ಜುನ ಜೋಗೂರ, ಉಮೇಶ ಕಾರಜೋಳ, ಶಂಕ್ರಪ್ಪ, ವಿವೇಕಾನಂದ ಡಬ್ಬಿ, ಸಂಜಯ ಪಾಟೀಲ ಕನಮಡಿ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

BIJAPUR NEWS bjp public news udaya rashmi
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 04,2026

ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ

ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 04,2026
    In ದಿನಪತ್ರಿಕೆ
  • ಹೊಯ್ಸಳ, ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಉತ್ತಮ ಸೇವೆಗೆ ಸಿದ್ರಾಮ ಇಟ್ಟಿಗೆ ಐಪಿಪಿಬಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ನಿಲ್ಲಿಸಿದ್ದ ಟಿಪ್ಪರ್‌ಗೆ ಬೈಕ್ ಡಿಕ್ಕಿ! ಸವಾರ ಸ್ಥಳದಲ್ಲೇ ಸಾವು
    In (ರಾಜ್ಯ ) ಜಿಲ್ಲೆ
  • ಪಿಎಸ್‌ಐ ತಿಪರೆಡ್ಡಿ ಗೆ ಚಕ್ರವರ್ತಿ ನ್ಯೂಸ್ ತಂಡದಿಂದ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಹೊಸ ಪಠ್ಯಕ್ರಮ: ಶಿಕ್ಷಕರಲ್ಲಿ ಬದಲಾವಣೆ ಮನೋಭಾವ ಬೆಳೆಸಬೇಕು
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಗೆಲುವು–ಸೋಲಿಗಿಂತ ಕ್ರೀಡಾಸ್ಫೂರ್ತಿಗೆ ಆದ್ಯತೆ
    In (ರಾಜ್ಯ ) ಜಿಲ್ಲೆ
  • ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕ್ರೀಡೆಗಳು ಪೂರಕ
    In (ರಾಜ್ಯ ) ಜಿಲ್ಲೆ
  • ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಪ್ರಭಾಿಯಾಗಿ ನಂದಗಾಂವಿ
    In (ರಾಜ್ಯ ) ಜಿಲ್ಲೆ
  • ನಿಮ್ಮೂರಲ್ಲೇ ಉದ್ಯೋಗ, ಗುಳೆ ಹೋಗುವ ಅಗತ್ಯವಿಲ್ಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.