ಉದಯರಶ್ಮಿ ದಿನಪತ್ರಿಕೆ
ಕೆಂಭಾವಿ: ಪದವಿ ಪರೀಕ್ಷೆ ಕೇಂದ್ರಗಳ ಸುತ್ತಮುತ್ತ (ಸೆಕ್ಷನ್ 144) ನಿಷೇಧಾಜ್ಞೆ ಜಾರಿಗೊಳಿಸಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸುವ ಮೂಲಕ ಅಕ್ರಮಗಳನ್ನು ತಡೆಯಲು, ಕ್ರಮವಹಿಸಲಾಗಿದೆ ಎಂದು ರಾಯಚೂರು ವಿಶ್ವವಿದ್ಯಾಲಯ ರಾಯಚೂರು ಕುಲಸಚಿವರು (ಆಡಳಿತಾತ್ಮಕ) ಡಾ. ಶಂಕರ ವಿ, ಹೇಳಿದರು.
ಪಟ್ಟಣದ ಶ್ರೀಮತಿ ಗಂಗೂಬಾಯಿ ಶಾಂತಗೌಡ ಪೋಲೀಸ್ ಪಾಟೀಲ್ ಮೆಮೋರಿಯಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸೋಮವಾರ ಭೇಟಿ ನೀಡಿ ಬಿಎ ಬಿಕಾಂ ಮತ್ತು ಬಿಎಸ್ಸಿ 3 ಮತ್ತು 5 ನೇ ಸೆಮಿಸ್ಟರ್ ಪರೀಕ್ಷೆಗಳನ್ನು ಖುದ್ದಾಗಿ ವೀಕ್ಷಿಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಿಯಮಗಳನ್ನು ತಿಳಿಸಿದವರು, ಮುಂಬರುವ ದಿನಗಳಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮರಾ ವೆಬ್ ಕಾಸ್ಟಿಂಗ್, ಅಳವಡಿಸಲು ಪ್ರಾಂಶುಪಾಲರಿಗೆ ಸೂಚನೆ ನೀಡಲಾಗುವುದು, ಯಾವುದೇ ಕಾರಣಕ್ಕೂ ಪ್ರಾಂಶುಪಾಲರನ್ನು ಜಾಗೃತ ದಳದ ವೀಕ್ಷಕರಾಗಿ ನಿಯೊಜಿಸಬಾರದು ಕಾಲೇಜಿನ ಪ್ರಾಂಶುಪಾಲರು ಕೇಂದ್ರ ಸ್ಥಾನ ಬಿಡದಂತೆ ಕ್ರಮ ಕೈಗೊಳ್ಳುವಂತೆ ಕುಲಸಚಿವರು (ಮೌಲ್ಯಮಾಪನ) ಇವರಿಗೆ ದೂರವಾಣಿ ಮೂಲಕ ಸೂಚನೆ ನೀಡಿ ಆಯಾ ಕಾಲೇಜುಗಳ ಪ್ರಾಂಶುಪಾಲರು ಕೇಂದ್ರ ಸ್ಥಳದಲ್ಲಿದ್ದು ಪರೀಕ್ಷೆಗಳನ್ನು ನಡೆಸಿ ಕೊಂಡು ಹೋಗಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಖಡಕ್ ಸಂದೇಶ ನೀಡುವ ಮೂಲಕ ಹಿರಿಯ ಆಂತರಿಕ ಪರೀಕ್ಷಾ ಮೇಲ್ವಿಚಾರಕರು ಹಾಗೂ ಜೂನಿಯರ್ ಸೂಪರ್ವೈಸರ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಿಯಮಗಳ ಬಗ್ಗೆ ಮೇಲಿಂದ ಮೇಲೆ ಮನವರಿಕೆ ಮಾಡಿಕೊಡಬೇಕು, ಇಷ್ಟಾದರೂ ವಿದ್ಯಾರ್ಥಿಗಳು ಅನುಚಿತವಾಗಿ ವರ್ತಿಸಿದರೆ ಯಾವುದೇ ಮುಲಾಜಿಲ್ಲದೆ ಅಂತವರ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಸ್ಥಳದಲ್ಲಿದ್ದು ಪೋಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

