Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು

ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಕಾಶವಾಣಿ ಕೇಂದ್ರದ ಬಳಿಯ ವೃತ್ತಕ್ಕೆ “ಬನಶಂಕರಿ ಸರ್ಕಲ್” ನಾಮಕರಣ
(ರಾಜ್ಯ ) ಜಿಲ್ಲೆ

ಆಕಾಶವಾಣಿ ಕೇಂದ್ರದ ಬಳಿಯ ವೃತ್ತಕ್ಕೆ “ಬನಶಂಕರಿ ಸರ್ಕಲ್” ನಾಮಕರಣ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಬನಶಂಕರಿ ದೇವಸ್ಥಾನದ ಲೋಕಾರ್ಪಣೆ, ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಯತ್ನಾಳ ಭರವಸೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಆಕಾಶವಾಣಿ ಕೇಂದ್ರದ ಎದುರಿನ ರಿಂಗ್ ರಸ್ತೆಗೆ ಬನಶಂಕರಿ ಸರ್ಕಲ್ ಎಂದು ನಾಮಕರಣ ಮಾಡುವ ಜತೆಗೆ ನೇಕಾರರು ಸಮುದಾಯ ಭವನ ನಿರ್ಮಿಸಲು ೧೧ ಲಕ್ಷ ರೂ., ಆರ್ಥಿಕ ನೆರವು ನೀಡುವುದಾಗಿ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಭರವಸೆ ನೀಡಿದರು.
ನಗರದ ವೇದಮಾತೆ ಗಾಯತ್ರಿ ಪ್ರತಿಷ್ಠಾನ ಟ್ರಸ್ಟ್ ವತಿಯಿಂದ ಆಕಾಶವಾಣಿ ಕೇಂದ್ರದ ಬಳಿ ನೂತನವಾಗಿ ನಿರ್ಮಿಸಿದ ಬನಶಂಕರಿ ದೇವಸ್ಥಾನದ ಲೋಕಾರ್ಪಣೆ, ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ನೇಕಾರರು ತಮ್ಮೊಳಗಿನ ಭಿನ್ನಾಭಿಪ್ರಾಯ ಮರೆತು ಸಂಘಟಿತರಾದಾಗ ಮಾತ್ರ ವಿವಿಧ ಕ್ಷೇತ್ರಗಳಲ್ಲಿ ಮುಂದೆ ಬರಲು ಸಾಧ್ಯ. ಎಲ್ಲರೂ ತಮ್ಮಲ್ಲಿನ ಒಡಕು ಮನೋಭಾವ ತೊರೆದು ಸನಾತನ ಧರ್ಮ ಮತ್ತು ದೇಶದ ಉಳಿವಿಗಾಗಿ ದುಡಿಯಬೇಕು. ರಾಜಕಾರಣಿಗಳು ಮಾಡುವ ಸಾಮೂಹಿಕ ವಿವಾಹ ಬರೀ ಚುನಾವಣೆಗಳಿಗಷ್ಟೇ ಸೀಮಿತವಾಗಿರುತ್ತವೆ. ಅದನ್ನೇ ಮಠಾಧೀಶರು ಮುಂದೆ ನಿಂತು ಬಡ ಮಕ್ಕಳ ಸಾಮೂಹಿಕ ವಿವಾಹ ನೆರವೇರಿಸಿದರೆ ನಿರಂತರವಾಗಿ ಸಾಗುವ ಜತೆಗೆ ಧರ್ಮ ಕಾಯಕ ಮಾಡಿದಂತಾಗುತ್ತದೆ ಎಂದರು. ವಿಪ ಸದಸ್ಯ ಕೇಶವ ಪ್ರಸಾದ ಮಾತನಾಡಿ, ಪ್ರಯಾಗರಾಜ್‌ದಲ್ಲಿ ಮಹಾಕುಂಭಮೇಳ ನಡೆದು ಇಡೀ ಜಗತ್ತೇ ಜಾಗೃತಗೊಂಡ ಕಾಲಘಟ್ಟದಲ್ಲಿ ವಿಜಯಪುರದಲ್ಲಿ ಬನಶಂಕರಿ ದೇವಸ್ಥಾನ ಲೋಕಾರ್ಪಣೆಗೊಂಡಿರುವುದು ಸಂತಸ ತಂದಿದೆ. ಇಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ತಾವೂ ಸಹ ೫ ಲಕ್ಷ ರೂ., ನೆರವು ನೀಡುವುದಾಗಿ ಘೋಷಿಸಿದರು. ಶಾಸಕ ವಿಠ್ಠಲ ಕಟಕಧೋಂಡ ಮಾತನಾಡಿ, ನೇಕಾರ ಸಮುದಾಯದ ತಾಯಂದಿರು ತಮ್ಮ ಮಕ್ಕಳಲ್ಲಿ ಹೆಣ್ಣು ಗಂಡೆಂಬ ಬೇಧಭಾವ ಮಾಡದೇ ಎಲ್ಲರಿಗೂ ಉನ್ನತ ಶಿಕ್ಷಣ ನೀಡಿ ಸಂಸ್ಕಾರವಂತರನ್ನಾಗಿ ಮಾಡಬೇಕೆಂದರು.
ಹಂಪಿ ಹೇಮಕೂಟ, ಗಾಯತ್ರಿಪೀಠ ಮಹಾಸಂಸ್ಥಾನದ ಪೀಠಾಧೀಶ ದಯಾನಂದಪುರಿ ಮಹಾಸ್ವಾಮೀಜಿ, ವಿಜಯಪುರ ಜ್ಞಾನಯೋಗಾಶ್ರಮದ ಬಸವಲಿಂಗ ಮಹಾಸ್ವಾಮೀಜಿ, ಮೈಂದರ್ಗಿ ಗೌರಿ ಕಟ್ಟಾ ಹಿರೇಮಠದ ಅಭಿನವ ರೇವಣಸಿದ್ದೇಶ್ವರ ಶ್ರೀ, ವಿರಕ್ತಮಠ ಸಿದ್ಧಾಶ್ರಮದ ಮೃತ್ಯುಂಜಯ ಶ್ರೀ ಆಶೀರ್ವಚನ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಗಾಯತ್ರಿ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಎಸ್.ದಡ್ಡೇನವರ, ಪ್ರಧಾನ ಕಾರ್ಯದರ್ಶಿ ಧನರಾಜ್ ಅಳ್ಳಿಕಟ್ಟಿ ಮಾತನಾಡಿದರು.
ವಿಜಯಪುರ-ಗದಗ ರಾಮಕೃಷ್ಣ ಆಶ್ರಮದ ನಿರ್ಭಯಾನಂದ ಸರಸ್ವತಿ ಶ್ರೀ ಸೇರಿದಂತೆ ವಿವಿಧ ಮಠಾಧೀಶರು ಸಾನಿಧ್ಯ ವಹಿಸಿದ್ದರು.
ಬಿಜೆಪಿ ಧುರೀಣ ವಿಜುಗೌಡ ಪಾಟೀಲ, ಮಹಾನಗರ ಪಾಲಿಕೆ ಸದಸ್ಯ ರಾಜಶೇಖರ ಕುರಿಯವರ, ಪ್ರಮುಖರಾದ ಎ.ಬಿ. ಅಂಕದ, ಎಸ್.ಜಿ.ಸುರಪುರ, ಬಸವರಾಜ ಚಿತ್ತರಗಿ, ಬಿ.ಎಂ. ನೂಲ್ವಿ, ಡಾ.ವಿ.ಜಿ. ತೊರವಿ, ಎನ್.ಎಂ. ಪ್ಯಾಟಿ, ಡಾ.ಎಸ್.ಆರ್.ಡೋಣಗಾಂವ, ಬಸವರಾಜ ಚಿಂಚೋಳಿ, ಅಶ್ವಿನಿಕುಮಾರ ಕೋಷ್ಠಿ, ಎನ್.ಎಸ್. ಬಾವಿಕಟ್ಟಿ, ಆನಂದ ಹುಲಮನಿ, ಈರಣ್ಣ ಕೊಪ್ಪಳ, ಡಾ.ಮನೋಹರ ಔರಸಂಗ ಮತ್ತಿತರರು ಇದ್ದರು.
ಡಾ.ಸಂಗಮೇಶ ಮೇತ್ರಿ ಸ್ವಾಗತಿಸಿದರು. ಚಂದ್ರಕಲಾ ಹಿಟ್ನಳ್ಳಿ, ಸಂತೋಷ ಬಂಡೆ ನಿರೂಪಿಸಿದರು. ಬಸವರಾಜ ಹುಬ್ಬಳ್ಳಿ ವಂದಿಸಿದರು.

“ವಿಜಯಪುರ ಬಹುದೊಡ್ಡ ನಗರವಾಗಿದ್ದರೂ ಕೂಡ ಒಂದು ಕುಲದೇವಿ ಬನಶಂಕರಿ ದೇವಸ್ಥಾನ ಇಲ್ಲಿ ಇಲ್ಲದೇ ಇರುವುದು ಜಿಲ್ಲೆಯ ನೇಕಾರರಿಗೆ ನೋವಿನ ಸಂಗತಿಯಾಗಿತ್ತು. ಇಂದು ಆ ಕನಸು ನನಸಾಗಿದೆ. ಭವಿಷ್ಯದಲ್ಲಿ ನಮ್ಮ ನೇಕಾರ ಜನಾಂಗ ಇನ್ನಷ್ಟು ಸಂಘಟಿತರಾಗಿ ಸದೃಡ ಸಮಾಜ ನಿರ್ಮಿಸಲು ಪಣ ತೊಡಬೇಕಿದೆ.”

– ದಯಾನಂದಪುರಿ ಮಹಾಸ್ವಾಮೀಜಿ
ದೇವಾಂಗ ಜಗದ್ಗುರು ಹಂಪಿ-ಹೇಮಕೂಟ ಗಾಯತ್ರಿ ಪೀಠ

ನೋಟೀಸ್‌ಗೆ ಗುರುವಾರ ಉತ್ತರ

ಬಿಜೆಪಿ ಕೇಂದ್ರ ವರಿಷ್ಠರು ಶಾಸಕ ಬಸನಗೌಡ ಪಾಟೀಲ (ಯತ್ನಾಳ) ರಿಗೆ ನೀಡಿದ ನೋಟೀಸಿಗೆ ಏನೆಂದು ಉತ್ತರಿಸಿದ್ದೀರಿ? ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಾಸಕ ಯತ್ನಾಳ, ಟೈಮ್ ಇನ್ನೂ ಇದೆ. ವರಿಷ್ಠರಿಗೆ ಗುರುವಾರ ಉತ್ತರಿಸುವುದಾಗಿ ಚುಟುಕಾಗಿ ಹೇಳಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು

ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ

ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ
    In (ರಾಜ್ಯ ) ಜಿಲ್ಲೆ
  • ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ
    In (ರಾಜ್ಯ ) ಜಿಲ್ಲೆ
  • ಶಾಸಕಾಂಗ ಸಭೆಯಲ್ಲಿ ‘ಕೈ’ ಮುಖಂಡರ ರಣತಂತ್ರ:
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿ ಬೋರಿ ಹಳ್ಳದಲ್ಲಿ ಪಕ್ಷಿಗಳ ಮಾರಣಹೋಮ :ಜನರಲ್ಲಿ ಆತಂಕ
    In (ರಾಜ್ಯ ) ಜಿಲ್ಲೆ
  • ಪಿಂಚಣಿ ಮಸೂದೆ ಜಾರಿಗೆ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ರಂಗಭೂಮಿಯು ಜೀವಂತ ಕಲೆಯ ತಾಣ
    In (ರಾಜ್ಯ ) ಜಿಲ್ಲೆ
  • ಶಿವಭಕ್ತಿಗೆ ಸಾಕ್ಷಿ ಗೋಲಗೇರಿ ಗೋಲ್ಲಾಳೇಶ್ವರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.