Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು

ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗೊಂದಲದ ಗೂಡಾದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ
(ರಾಜ್ಯ ) ಜಿಲ್ಲೆ

ಗೊಂದಲದ ಗೂಡಾದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಲುಷಿತ ನೀರಿನೊಂದಿಗೆ ಸಭೆಗೆ ಬಂದ ಕೆಸರಟ್ಟಿ ಮಹಿಳೆಯರು | ಅಧಿಕಾರಿಗಳ ಪ್ರತಿ ಹೇಳಿಕೆಗೆ ಕೆಡಿಪಿ ನೂತನ ಸದಸ್ಯರಿಂದ ಆಕ್ಷೇಪ | ಅಧಿಕಾರಿಗಳ ರಕ್ಷಣೆಗೆ ನಿಂತ ಶಾಸಕರು

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಕುಡಿಯುವ ನೀರಿನ ಸಮಸ್ಯೆಯಾಗದಂತೆ ಸಂಬಂಧಿಸಿದ ಪಂಚಾಯಿತಿ ಪಿಡಿಓ ಹಾಗೂ ಅಧ್ಯಕ್ಷರು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಶಾಸಕ ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ) ಹೇಳಿದರು.
ಪಟ್ಟಣದ ಪ್ರವಾಸಿಮಂದಿರದಲ್ಲಿ ಬುಧವಾರ ಜರುಗಿದ ೨೦೨೪-೨೫ನೇ ಸಾಲಿನ ಒಂದನೇ ತ್ರೆöÊಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗ್ರಾಮದ ಕುಡಿಯುವ ನೀರಿಗಾಗಿ ಗ್ರಾಮಸ್ಥರು ಶಾಸಕರಿಗೆ ದೂರವಾಣಿ ಕರೆ ಮಾಡುತ್ತಿದ್ದಾರೆ. ಒಂದು ಮೋಟಾರು ರಿಪೇರಿಗಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರೆ ನನಗೆ ಕರೆ ಮಾಡಿದರೆ ಹೇಗೆ? ೧೫ ನೇ ಹಣಕಾಸು ಅನುದಾನ ಬಳಸಿಕೊಂಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಾವುದೇ ಗ್ರಾಮದಲ್ಲಿ ನೀರಿನ ಸಮಸ್ಯೆ ತಲೆದೋರದಂತೆ ನೋಡಿಕೊಳ್ಳಬೇಕು. ಅಧಿಕಾರಿಗಳು ಸಭೆಯಲ್ಲಿ ಶಿಸ್ತಿನಿಂದ ವರ್ತಿಸುವುದನ್ನು ರೂಢಿಸಿಕೊಳ್ಳಬೇಕು ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಬೆಳಿಗ್ಗೆ ಒಂದು ಗಂಟೆ ವಿಳಂಬವಾಗಿ ಆರಂಭಗೊಂಡ ಸಭೆಗೆ ಕೆಡಿಪಿ ನೂತನ ಸದಸ್ಯರಿಗೆ ಗುರುತಿನ ಪತ್ರ ನೀಡುವುದರೊಂದಿಗೆ ಚಾಲನೆ ನೀಡಲಾಯಿತು. ನಂತರ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎಚ್.ವೈ.ಸಿಂಗೆಗೋಳ ಹವಾಮಾನ ವೈಪರಿತ್ಯದಿಂದ ಆದ ಕಡಿಮೆ ಇಳುವರಿ ಹಾಗೂ ಬೆಳೆ ವಿಮೆಯ ಕುರಿತು ಮಾಹಿತಿ ನೀಡಿದರು. ತೋಟಗಾರಿಕೆ ಇಲಾಖೆಯ ಅಧಿಕಾರಿ ತಾಳೆ ಮರ ಬೆಳವಣಿಗೆ, ನಿರ್ವಹಣೆ ಕುರಿತು ನೀಡಿದಾಗ ಶಾಸಕರು ತಾಳೆ ಮರ ಬೆಳೆದ ಮತಕ್ಷೇತ್ರದ ರೈತರ ಕುರಿತು ಮಾಹಿತಿ ನೀಡಲು ಸೂಚಿಸಿದರು.
ತಾಲ್ಲೂಕಿನ ಶೌಚಾಲಯಗಳ ಚರ್ಚೆ ಆರಂಭವಾದಾಗ ಕೆಡಿಪಿ ಸದಸ್ಯ ಪ್ರಕಾಶ ಗುಡಿಮನಿ ಆಕ್ಷೇಪ ವ್ಯಕ್ತಪಡಿಸಿ, ಶೌಚಾಲಯದ ವಿಷಯದಲ್ಲಿ ಪರಿಶಿಷ್ಟ ಜಾತಿಯನ್ನು ಕಡೆಗಣಿಸಲಾಗುತ್ತಿದೆ . ಅಧಿಕಾರಿಗಳು ಬೇಕಾಬಿಟ್ಟಿಯಾಗಿ ಕಾರ್ಯಯೋಜನೆ ರೂಪಿಸುತ್ತಾರೆ. ಇದರ ಕುರಿತು ಸ್ಪಷ್ಟಿಕರಣ ನೀಡುವಂತೆ ಪಟ್ಟು ಹಿಡಿದರು ನಂತರ ಜಿ.ಪಂ ಮುಖ್ಯ ಯೋಜನಾಧಿಕಾರಿ ಹಾಗೂ ತಾಲ್ಲೂಕು ಪಂಚಾಯಿತಿ ಇಓ ಮಧ್ಯೆ ಪ್ರವೇಶಿಸಿ ಸಮಜಾಯಿಷಿ ನೀಡಿ ಸಮಾಧಾನ ಪಡಿಸಿದರು.
ಗ್ರಾಮೀಣ ಕುಡಿಯುವ ನೀರು ಸರಬರಾಜು ಕುರಿತು ಮಾಹಿತಿ ನೀಡುವ ಸಂದರ್ಭದಲ್ಲಿ ಸಭೆಗೆ ಕಲುಷಿತ ನೀರಿನ ಬಾಟಲಿಯೊಂದಿಗೆ ಆಗಮಿಸಿದ ಕೆಸರಟ್ಟಿ ಗ್ರಾಮಸ್ಥರು ಗ್ರಾಮದಲ್ಲಿ ನೀರು ಸಿಗುತಿಲ್ಲ, ಪಿಡಿಓ ಸ್ಪಂದಿಸುತ್ತಿಲ್ಲ ಎಂದೂ ಶಾಸಕರಿಗೆ ದೂರು ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಶಾಸಕರು ತರಾಟೆಗೆ ತಗೆದುಕೊಂಡರು. ನಂತರ ಜೆಜೆಎಮ್ ಕಾಮಗಾರಿಗಳ ಕುರಿತು ಎಇಇ ತಾರಾನಾಥ ರಾಥೋಡ ಮಾಹಿತಿ ನೀಡುತಿದ್ದಂತೆಯೇ ಹಲವು ಗ್ರಾಮಗಳಲ್ಲಿ ಜೆಜೆಎಮ್ ಕಾಮಗಾರಿ ತೃಪ್ತಿಕರವಾಗಿಲ್ಲ ಈ ಬಗ್ಗೆ ದೂರುಗಳು ಬರುತ್ತಿವೆ ಎಂದು ಶಾಸಕರೇ ಹೇಳುವಂತಾಯಿತು.
ನಂತರ ಸಭೆಯಲ್ಲಿ ಅಂಗನವಾಡಿ ಸ್ವಂತ ಹಾಗೂ ಬಾಡಿಗೆ ಕಟ್ಟಡಗಳಲ್ಲಿ ಲಭ್ಯವಿರುವ ಕುಡಿಯುವ ನೀರು ಹಾಗೂ ಶೌಚಾಲಯ ವ್ಯವಸ್ಥೆ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಜಿ.ಪಂ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ದೇವರಹಿಪ್ಪರಗಿ ತಹಶೀಲ್ದಾರ ಪ್ರಕಾಶ ಸಿಂದಗಿ, ಬಸವನ ಬಾಗೇವಾಡಿ ತಹಶೀಲ್ದಾರ ವೈ.ಎಸ್.ಸೋಮನಕಟ್ಟಿ, ದೇವರಹಿಪ್ಪರಗಿ ತಾಲ್ಲೂಕು ಪಂಚಾಯಿತಿ ಇಓ ಭಾರತಿ ಚೆಲುವಯ್ಯ, ಬ.ಬಾಗೇವಾಡಿ ಇಓ ಪ್ರಶಾಂತ ದೇಸಾಯಿ ನಿಡಗುಂದಿ ಇಒ ವೆಂಕಟೇಶ. ವ್ಹಿ ತಾಳಿಕೋಟಿ ಇಓ ನಿಂಗಪ್ಪ ಮಸಳಿ, ದೇವರಹಿಪ್ಪರಗಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಸ್.ಎಸ್.ಬಾಗಲಕೋಟ ಸೇರಿದಂತೆ ನಾಲ್ಕು ತಾಲ್ಲೂಕುಗಳ ವಿವಿಧ ಇಲಾಖೆಗಳ ಅಧಿಕಾರಿಗಳು, ಕೆಡಿಪಿ ಸದಸ್ಯರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು

ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ

ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನಗಣತಿ ಸಿಬ್ಬಂದಿ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು
    In (ರಾಜ್ಯ ) ಜಿಲ್ಲೆ
  • ರೈತರ ಮೇಲಿನ ಕೇಸ್ ವಾಪಸ್ ಪಡೆಯಲು ಚಂದನ್ ಗೌಡ ಒತ್ತಾಯ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಮನೆ ಹಸ್ತಾಂತರ
    In (ರಾಜ್ಯ ) ಜಿಲ್ಲೆ
  • ದೇವಗಿರಿ ಯಾದವ ರಾಜರ ಗಜಪಡೆಯ ಉಬ್ಬು ಶಿಲ್ಪ ಪತ್ತೆ
    In (ರಾಜ್ಯ ) ಜಿಲ್ಲೆ
  • ಶಾಸಕಾಂಗ ಸಭೆಯಲ್ಲಿ ‘ಕೈ’ ಮುಖಂಡರ ರಣತಂತ್ರ:
    In (ರಾಜ್ಯ ) ಜಿಲ್ಲೆ
  • ಹತ್ತಳ್ಳಿ ಬೋರಿ ಹಳ್ಳದಲ್ಲಿ ಪಕ್ಷಿಗಳ ಮಾರಣಹೋಮ :ಜನರಲ್ಲಿ ಆತಂಕ
    In (ರಾಜ್ಯ ) ಜಿಲ್ಲೆ
  • ಪಿಂಚಣಿ ಮಸೂದೆ ಜಾರಿಗೆ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ರಂಗಭೂಮಿಯು ಜೀವಂತ ಕಲೆಯ ತಾಣ
    In (ರಾಜ್ಯ ) ಜಿಲ್ಲೆ
  • ಶಿವಭಕ್ತಿಗೆ ಸಾಕ್ಷಿ ಗೋಲಗೇರಿ ಗೋಲ್ಲಾಳೇಶ್ವರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.