Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಸಹಕಾರಿ

ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ

ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಾಂತಿ ಮತ್ತು ಸಮಾನತೆ ಸಾರುವ ಬೌದ್ಧ ಧರ್ಮ :ಜೆ.ಎಸ್.ಪಾಟೀಲ
(ರಾಜ್ಯ ) ಜಿಲ್ಲೆ

ಶಾಂತಿ ಮತ್ತು ಸಮಾನತೆ ಸಾರುವ ಬೌದ್ಧ ಧರ್ಮ :ಜೆ.ಎಸ್.ಪಾಟೀಲ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಕತ್ತಲೆ ಪ್ರತೀಕವಾದ ಅಮವಾಸ್ಯೆಯ ವಿರೋಧವಾಗಿ ಬೆಳಕಿನ ಪ್ರತೀಕವಾದ ಹುಣ್ಣಿಮೆಯು ಬೌದ್ಧ ಧರ್ಮದಲ್ಲಿ ಮಹತ್ವವನ್ನು ಪಡೆಯುತ್ತದೆ. ಗೌತಮ ಬುದ್ಧರ ಹುಟ್ಟಿನಿಂದ ಪರಿನಿಬ್ಬಾಣದವರೆಗೂ ಹುಣ್ಣಿಮೆಯು ಮಹತ್ವವನ್ನು ಪಡೆದಿದ್ದು, ಹುಣ್ಣಿಮೆಯು ಜ್ಞಾನದ ಮತ್ತು ಬೆಳಕಿನ ಸಂಕೇತ ಎಂದು ಪ್ರಗತಿಪರ ಚಿಂತಕ ಡಾ. ಜೆ.ಎಸ್. ಪಾಟೀಲ ಹೇಳಿದರು.
ಶುಕ್ರವಾರ ಬೌದ್ಧವಿಹಾರ ನಿರ್ಮಾಣ ಸಮಿತಿ, ಭಾರತೀಯ ಬೌದ್ಧ ಮಹಾಸಭಾದ ಆಶ್ರಯದಲ್ಲಿ ನಗರದ ಸಾರಿಪುತ್ರ ಬುದ್ಧವಿಹಾರದಲ್ಲಿ ಜರುಗಿದ 2546ನೇ ಬುದ್ಧ ಪೂರ್ಣಿಮೆ ಮಹೋತ್ಸವ ಸಮಾರಂಭದಲ್ಲಿ ವಿಶೇಷ ಉಪನ್ಯಾಸಕರಾಗಿ ಅವರು ಮಾತನಾಡಿದರು.
ಮಾನವ ಘನತೆಗೆ ಬೇಕಾದ ಬೋಧನೆಗಳನ್ನು ನೀಡಿದ ಭಗವಾನ ಬುದ್ಧರು ಸ್ವಾತಂತ್ರö್ಯ ಚಳುವಳಿಯನ್ನು ಹುಟ್ಟು ಹಾಕಿದರು. ಭಾರತದ ಪರಂಪರೆಯಲ್ಲಿ ವಾರದ ನಡುವೆ, ಜನಗಳ ಮಧ್ಯೆ, ನಕ್ಷತ್ರಗಳಲ್ಲಿ, ಆಹಾರ ಪದಾರ್ಥಗಳಲ್ಲಿ, ಕೀಳು-ಮೇಲು ಎಂಬ ಬೇಧ-ಭಾವವನ್ನು ಮಾಡಲಾಗಿದೆ. ಆದರೆ ಬೌದ್ಧ ಧರ್ಮವು ಶಾಂತಿ ಮತ್ತು ಸಮಾನತೆಯನ್ನು ನೀಡುವ ಮೂಲಕ ಜಗತ್ತಿನಲ್ಲಿಯೇ ಶ್ರೇಷ್ಠ ಧರ್ಮವಾಗಿದೆ ಎಂದು ಹೇಳಿದರು.

ಭಾರತದಲ್ಲಿನ ಬೌದ್ಧವಿಹಾರಗಳನ್ನು ಮಂದಿರಗಳನ್ನಾಗಿ ಪರಿವರ್ತಿಸಲಾಯಿತು. ಮಂದಿರಗಳ ಸಂಸ್ಕೃತಿ ಬುದ್ಧ ಪೂರ್ವದಲ್ಲಿರಲಿಲ್ಲ, ಆದರೆ ನಾವುಗಳಿಂದು ಅವರ ಸಿದ್ಧಾಂತಗಳೊAದಿಗೆ ಇದ್ದರೂ ಕೂಡಾ ಮಂದಿರಕ್ಕೆ ಹೋಗುವುದನ್ನು ಬಿಟ್ಟಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.
ವೈದಿಕ ಮೌಢ್ಯಗಳ ವಿರುದ್ಧ ತೊಡೆತಟ್ಟಿ ಹುಟ್ಟಿದ ಬೌದ್ಧ ಧರ್ಮದ ಆಚರಣೆಗಳನ್ನು ಮಾತ್ರ ಮಾಡುತ್ತೇವೆ ಎಂಬ ಪ್ರಮಾಣವನ್ನು ಇಂದಿನ ಬುದ್ಧ ಪೂರ್ಣಿಮೆ ದಿನ ಮಾಡೋಣ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಹಕಾರ ಸಂಘಗಳ ನಿವೃತ್ತ ಅಧಿಕಾರಿ ಬಿ.ಆರ್. ಬನಸೋಡೆ ಮಾತನಾಡಿ, ಬುದ್ಧ ಈ ಜಗದ ಬೆಳಕು. ಶಾಂತಿ ಮತ್ತು ಸಮಾನತೆಯ ತತ್ವವನ್ನು ವಿಶ್ವಕ್ಕೆ ಪರಿಚಯಿಸಿದ ಪ್ರಥಮ ಮಹಾಪುರುಷ. ವಿಶ್ವಕ್ಕೆ ಶಾಂತಿಯ ಸಂದೇಶವನ್ನು ನೀಡಿದ ಭಗವಾನ ಬುದ್ಧರು ಇಂದಿನ ಅಗತ್ಯ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಬೌದ್ಧವಿಹಾರ ನಿರ್ಮಾಣ ಸಮಿತಿಯ ಅಧ್ಯಕ್ಷ ರಾಜಶೇಖರ ಯಡಹಳ್ಳಿ ಅವರು, ಬುದ್ಧರ ಬೋಧನೆಗಳನ್ನು ಮತ್ತು ಬೌದ್ಧ ಧರ್ಮದ ಆಚರಣೆಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದ ಅವರು, ಬುದ್ಧವಿಹಾರ ಸಮಾಜದ ಆಸ್ತಿಯಾಗಿದ್ದು, ಜಿಲ್ಲೆಯ ಎಲ್ಲ ಬೌದ್ಧ ಉಪಾಸಕ, ಉಪಾಸಕಿಯರು ಹಾಗೂ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಅನುಯಾಯಿಗಳು ಸಂಘದ 2022-2023ನೇ ಸಾಲಿನ ಸದಸ್ಯರಾಗಬೇಕೆಂದು ವಿನಂತಿಸಿದರು.
ಇದೇ ಸಂದರ್ಭದಲ್ಲಿ ಬೌದ್ಧವಿಹಾರ ನಿರ್ಮಾಣ ಸಮಿತಿಗೆ 60 ಜನರು ಸದಸ್ಯರಾಗಲು ಸಹಮತವನ್ನು ನೀಡಿ ತಮ್ಮ ಹೆಸರನ್ನು ನಮೂದಿಸಿದರು. ಮನಗೂಳಿ ಅಗಸಿ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಭಾರತೀಯ ಬೌದ್ಧ ಮಹಾಸಭಾದ ಜಿಲ್ಲಾ ಕಾರ್ಯದರ್ಶಿ ಸಂತೋಷ ಶಹಾಪೂರ ಕಾರ್ಯಕ್ರಮವನ್ನು ನಿರೂಪಿಸಿದರು. ಸಂಘರ್ಷ ಹೊಸಮನಿ ವಂದಿಸಿದರು.
ಸಮಾರAಭದಲ್ಲಿ ಬೌದ್ಧವಿಹಾರ ನಿರ್ಮಾಣ ಸಮಿತಿಯ ಪ್ರಧಾನ ಕಾರ್ಯದರ್ಶಿ ನಾಗರಾಜ ಲಂಬು, ಉಪಾಧ್ಯಕ್ಷ ಶಶಿಕಾಂತ ಹೊನವಾಡಕರ, ಸದಸ್ಯರಾದ ಸಾಬು ಚಲವಾದಿ, ದಶವಂತ ಗುನ್ನಾಪೂರ, ಅಪ್ಪು ನಾಗಠಾಣ, ಮನೋಜ ಕೋಟ್ಯಾಳಕರ್, ಭಾರತೀಯ ಬೌದ್ಧ ಮಹಾಸಭಾದ ರಾಜ್ಯ ಕಾರ್ಯದರ್ಶಿ ವೆಂಕಟೇಶ ವಗ್ಯಾನವರ, ಬೌದ್ಧ ಉಪಾಸಕರಾದ ಅಶ್ವಿನಿ ಲಂಬು, ಸುಲೋಚನಾ ಚಲವಾದಿ, ಭಾಗ್ಯಶ್ರೀ ವಗ್ಯಾನವರ, ಸಿದ್ದಮ್ಮ ಚಲವಾದಿ, ರೇಣುಕಾ ಶಹಾಪೂರ, ಶಾರದಾ ಹೊಸಮನಿ, ಸವಿತಾ ಹೊಸಮನಿ, ಬಿ.ಎಚ್. ನಾಡಗಿರಿ, ವಾಯ್.ಎಚ್. ಲಂಬು, ಮಲ್ಲಿಕಾರ್ಜುನ ಕೆಳಗಡೆ, ಸುಭಾಸ್ ಗುಡಿಮನಿ, ರೋಹಿತ್ ಮಲಕನ್ನವರ, ಇಬ್ರಾಹಿಂಪೂರ ಮತ್ತು ಮನಗೂಳಿ ಅಗಸಿ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳು ಸೇರಿದಂತೆ ನಗರದ ವಿವಿಧ ಬಡಾವಣೆಯ ಡಾ. ಅಂಬೇಡ್ಕರ್ ಅನುಯಾಯಿಗಳು, ಪ್ರಗತಿಪರ ಚಿಂತಕರು ಇದ್ದರು.

BIJAPUR NEWS udaya rashmi
Share. Facebook Twitter Pinterest Email Telegram WhatsApp
  • Website

Related Posts

ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಸಹಕಾರಿ

ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ

ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ

ಪೊಲೀಸ್ ವೈಫಲ್ಯ ಖಂಡಿಸಿ ಸೆ.೧೯ಕ್ಕೆ ಕಾಲ್ನಡಿಗೆ ಜಾಥಾ :ಕೂಚಬಾಳ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಮಾನತೆ ಸ್ಥಾಪನೆಗೆ ಪ್ರಜಾಪ್ರಭುತ್ವ ತತ್ವ ಸಹಕಾರಿ
    In (ರಾಜ್ಯ ) ಜಿಲ್ಲೆ
  • ಅಕ್ರಮ ಪಡಿತರ ಸಾಗಾಟ: ಆಹಾರ ಇಲಾಖೆ ದಾಳಿ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಲೋಕ ಅದಾಲತ್:೩೭೭೬ ಪ್ರಕರಣಗಳು ಇತ್ಯರ್ಥ
    In (ರಾಜ್ಯ ) ಜಿಲ್ಲೆ
  • ಪೊಲೀಸ್ ವೈಫಲ್ಯ ಖಂಡಿಸಿ ಸೆ.೧೯ಕ್ಕೆ ಕಾಲ್ನಡಿಗೆ ಜಾಥಾ :ಕೂಚಬಾಳ
    In (ರಾಜ್ಯ ) ಜಿಲ್ಲೆ
  • ಇಂದು ಪಠ್ಯಪೂರಕ ಚಟುವಟಿಕೆಗಳ ಉದ್ಘಾಟನೆ
    In (ರಾಜ್ಯ ) ಜಿಲ್ಲೆ
  • ಮಳೆಯಿಂದ ಮನೆಯೊಳಗೆ ನೀರು ನುಗ್ಗಿ ವಸ್ತುಗಳ ಹಾನಿ!
    In (ರಾಜ್ಯ ) ಜಿಲ್ಲೆ
  • ಸಂಗೀತ ಲೋಕದ ಮೇರು ಶಿಖರ ಪಂ.ಪುಟ್ಟರಾಜ ಗವಾಯಿಗಳು
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಗೆ ಮತ್ತೆ ಅಪಾರ ಪ್ರಮಾಣದ ನೀರು!
    In (ರಾಜ್ಯ ) ಜಿಲ್ಲೆ
  • ಸಿದ್ದಸಿರಿ ಸೌಹಾರ್ದ ಸಹಕಾರಿಯಿಂದ ರೂ.25 ಲಕ್ಷ ದೇಣಿಗೆ
    In (ರಾಜ್ಯ ) ಜಿಲ್ಲೆ
  • ಮುಂಗಾರು ಬೆಳೆಹಾನಿಪುನಃ ಪರಿಶೀಲಿಸಿದ ಎಸಿ ವಸ್ತ್ರದ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.