ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಜಯಪುರ ಜಿಲ್ಲೆಯ ೧೩ ತಾಲೂಕುಗಳಲ್ಲಿ ಫೆ.೧೫ರಂದು ನಡೆಯಲಿರುವ ಕ್ರೆöÊಸ್ತ ಸಂಸ್ಥೆಗಳ ವಸತಿ ಶಾಲೆಗಳ ೬ನೇ ತರಗತಿಯ ಪ್ರವೇಶಾತಿಗೆ ಪ್ರವೇಶ ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನೋಡಿಕೊಳ್ಳಲು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರು ಅವರು ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಶುಕ್ರವಾರ ವಸತಿ ಶಾಲೆಗಳ ೬ನೇ ತರಗತಿಯ ಪ್ರವೇಶಾತಿಗೆ ನಡೆಯುವ ಪ್ರವೇಶ ಪರೀಕ್ಷೆಗಳ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ ಅವರು ಜಿಲ್ಲೆಯ ಆಲಮೇಲ, ಬಬಲೇಶ್ವರ, ಬಸವನ ಬಾಗೇವಾಡಿ, ವಿಜಯಪುರ, ಚಡಚಣ, ದೇವರಹಿಪ್ಪರಗಿ, ಇಂಡಿ, ಕೋಲ್ಹಾರ, ಮುದ್ದೇಬಿಹಾಳ, ನಿಡಗುಂದಿ, ಸಿಂದಗಿ, ತಾಳಿಕೋಟಿ ಹಾಗೂ ತಿಕೋಟಾ ತಾಲೂಕಿನಲ್ಲಿ ಒಟ್ಟು ೪೩ ಪರೀಕ್ಷಾ ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಯಲಿದ್ದು, ೧೫,೧೩೪ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಪರೀಕ್ಷೆಯಲ್ಲಿ ಯಾವುದೇ ಲೋಪವಾಗದೆ ವ್ಯವಸ್ಥಿತವಾಗಿ ಸುಸೂತ್ರವಾಗಿ ನಡೆಯುವಂತೆ ನೋಡಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಪರೀಕ್ಷೆ ಕೇಂದ್ರ ಹಾಗೂ ಕೊಠಡಿಗಳಲ್ಲಿ ಪರೀಕ್ಷಾ ನಿಯಮಗಳನ್ನು ಉಲ್ಲಂಘಿಸಿದ ಸಿಬ್ಬಂದಿಗಳ ಮೇಲೆ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳಲಾಗುವುದು. ಪರೀಕ್ಷಾರ್ಥಿಗಳು ಇಲೆಕ್ಟಾçನಿಕ್ ವಸ್ತುಗಳು, ಕ್ಯಾಲ್ಕುಲೇಟರ್, ಮೊಬೈಲ್ ಸೇರಿದಂತೆ ಇನ್ನಿತರ ಯಾವುದೇ ಇಲೆಕ್ಟ್ರಾನಿಕ್ ಸಲಕರಣೆ ಬಳಸದಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ಜಿಲ್ಲಾ ಖಜಾನೆಯಿಂದ ಪಡೆದುಕೊಂಡು ನಿಗದಿತ ಪಡಿಸಿದ ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಅವಧಿಯಲ್ಲಿ ತಲುಪಿಸಬೇಕು.
ಸಭೆಯಲ್ಲಿ ಖಜಾನೆ ಇಲಾಖೆಯ ಉಪನಿರ್ದೇಶಕರಾದ ಹನುಮಂತ ಕಾಲತಿಪ್ಪಿ, ಪದವಿ ಪೂರ್ವ ಶಿಕ್ಷಣದ ಉಪ ನಿರ್ದೇಶಕರಾದ ಸಿ.ಕೆ.ಹೊಸಮನಿ ತಹಶೀಲ್ದಾರರು, ಮಾರ್ಗಾಧಿಕಾರಿಗಳು, ಮೇಲ್ವಿಚಾರಕರು ಸೇರಿದಂತೆ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಉಪಸ್ಥಿತರಿದ್ದರು.
