Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»ವಿಶೇಷ ಲೇಖನ»ಶಿಕ್ಷಣಕ್ಕೆ ಮಹತ್ವ ನೀಡಿದ ಸೇವಾಲಾಲರು
ವಿಶೇಷ ಲೇಖನ

ಶಿಕ್ಷಣಕ್ಕೆ ಮಹತ್ವ ನೀಡಿದ ಸೇವಾಲಾಲರು

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಲೇಖನ- ಸ್ವಪ್ನಾ ಜೆ ರಾಥೋಡ್ಬಿಎ ಪತ್ರಿಕೋದ್ಯಮ ವಿದ್ಯಾರ್ಥಿನಿ ಎಸ್ ಬಿ ಕಲಾ ಮತ್ತು ಕೆಸಿಪಿ ವಿಜ್ಞಾನ ಕಾಲೇಜು ವಿಜಯಪುರ

ಉದಯರಶ್ಮಿ ದಿನಪತ್ರಿಕೆ

ಸೇವಾಲಾಲರು 1739ರ ಫೆಬ್ರವರಿ 15ರ ಸೋಮವಾರ ಬೆಳಗಿನ ಜಾವ 9 ಗಂಟೆಗೆ ಶಿವರಾತ್ರಿಯ ದಿನ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬೆಳಗುತ್ತಿಯ ಸೂರಗೊಂಡನ ಕೊಪ್ಪ (ಭಾಯಘಡ)ದಲ್ಲಿ ಜನಿಸಿದರು. ಸಂತ ಸೇವಾಲಾಲರ ಜಯಂತಿಯನ್ನು ಸರ್ಕಾರದಿಂದ ಪ್ರತಿವರ್ಷ ಫೆಬ್ರವರಿ 15 ರಂದು ಆಚರಿಸಲಾಗುತ್ತಿದೆ. ‘ರಾಭೇನಿತೋ ಚಾಬೇನ್ ಮಳೇನಿ’ ಅಂದರೆ ‘ಕೆಲಸ ಮಾಡದಿದ್ದರೆ ತಿನ್ನಲು ಸಿಗುವುದಿಲ್ಲ’ ಎಂಬುದು ಸೇವಾಲಾಲರ ನಾಣ್ಣುಡಿ.
‘ಹಾತೇಮ ಕಾಟಿರೆ ಝುಲನರೆ ಗೋರೂರ ತಾಂಡೆನ ಜಾರೋ ಫೆವನರ ತಾಂಡೋ ತಾಂಡೆಮ ಸೀಕವಾಡಿ ದೇವರ’ ಅಂದರೆ, ‘ಕೈಯಲ್ಲಿ ಧ್ವಜ ಹೀಡಿದು, ಬಂಜಾರರ ತಾಂಡಕ್ಕೆ ಹೋಗುವ ತಾಂಡ ತಾಂಡಗಳಲ್ಲಿ ಶಾಲೆ ನೀಡಲು’ ಎಂಬ ಲಾವಣಿ ಹಾಡು ಸೇವಾಲಾಲರು ಶಿಕ್ಷಣಕ್ಕೆ ನೀಡಿದ ಮಹತ್ವವನ್ನು ಸಾರುತ್ತದೆ. ಐದು ಸಾವಿರಕ್ಕೂ ಹೆಚ್ಚಿನ ಸಂಸ್ಥಾನಗಳಿಗೆ ರಸ್ತೆ ಇಲ್ಲದಿದ್ದಾಗ ಬಂಜಾರ ಸಮುದಾಯದ ಶ್ರಮಜೀವಿಗಳು ಕಾಡುಹಾದಿಯಲ್ಲಿ ವ್ಯಾಪಾರಕ್ಕಾಗಿ ಸಂಚಾರ ಮಾಡುತ್ತ, ಸರಕು, ಆಹಾರ, ಧಾನ್ಯ, ಉಪ್ಪು, ಬೆಳ್ಳಿ, ಬಂಗಾರದ ಆಭರಣ, ಯುದ್ಧ ಸಾಮಗ್ರಿಗಳನ್ನು ಸಾಗಿಸಿದರು. ಸ್ವಾತಂತ್ರ್ಯ ಹೋರಾಟದಲ್ಲೂ ಪಾತ್ರ ವಹಿಸಿರುವ ಈ ಸಮುದಾಯ ಅನೇಕ ಪ್ರಥಮಗಳನ್ನು ನಾಡಿಗೆ ನೀಡಿದೆ. ಮೊದಲ ಗೋಪಾಲಕರು, ಮೊದಲ ಕಸೂತಿ ಕಲೆ, ಕೃಷ್ಣನಿಗೆ ಮೊದಲು ಕೊಳಲು ಕೊಟ್ಟವರು, ಮೊದಲ ಬೇಟೆಗಾರರು, ಹೀಗೆ ನೂರಾರು ಪ್ರಥಮಗಳನ್ನು ಸಾಧಿಸಿದ ಶ್ರಮಿಕರು, ಪ್ರಾಮಾಣಿಕರು ಹಾಗೂ ನಂಬಿಗಸ್ಥ ಸಿಪಾಯಿಗಳು.


ಗುರು ಸಂತ ಸೇವಲಾಲರು ಸಮುದಾಯದ ಪಂಗಡಗಳಲ್ಲಿ ದೇವರಾಗಿ, ಮೋತಿವಾಳೋ | ಮುತ್ತಿನವನು| ಝಾರಿವಾಳೋ (ಜನರ ಜಂಗುಳಿಯವ), ಧೋಳೊ ಘೊಡೆವಾಳೋ (ಬಿಳಿ ಕುದುರೆಯ), ಬಳಿಪಗಡಿಯವ, ಗರಸ್ಯಾ ಎಂಬ ಎತ್ತಿನವನು, ಲಗ್ಗಿವಾಳೋ ಬಹುತೇಕರಿಗೆ ದೇವರ ನಾಟಿ ವೈದ್ಯ, ಬಾಮಣೀಯ (ಬ್ರಾಹ್ಮಣ), ಸಿಖ್, ಢಾಡಿ (ಮುಸ್ಲಿಂ) ಕಲಾವಿದ, ಢಾಲಿಯಾ, ಶಿಂಗಾಡಿಯಾ, ಭರವಾ, ಧನ್ಖೋಟ್, ಜೋಗಿ ಮತ್ತೆ ಕೆಲವರಿಗೆ ನಾಯಕ (ಯಜಮಾನ), ಭಾಯಾ (ಅಣ್ಣ), ವೇರಾಳು (ಸೇನಾನಿ), ಹತಾದಿಯಾ (ಗೋಪಾಲಕ). ಹೀಗೆ ಮುಂತಾಗಿ ಬಹು ಆಯಾಮಿಯಾಗಿದ್ದವರು.
ಸೇವಾಲಾಲರ ತಂದೆ ಭೀಮಾನಾಯ್ಕ ದೊಡ್ಡ ವ್ಯಾಪಾರಿಯಾಗಿದ್ದರು. ರಸ್ತೆ ಇಲ್ಲದ ಕಾಲದಲ್ಲಿ ಸರಕುಗಳು, ಆಹಾರ ಸಾಮಗ್ರಿಯನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಕಾಡಿನ ಮಾರ್ಗಗಳಲ್ಲಿ ನೂರಾರು ಎತ್ತುಗಳ ಮೇಲೆ ಸಾಗಿಸುವ ವೃತ್ತಿಯವರಾಗಿದ್ದರು. ಸೇವಾಲಾಲರು 3751 ಹಸುಗಳ ಒಡೆಯರಾಗಿದ್ದರು. ಇವರ ವಿವಿಧ ಸೇವಾ ಮನೋಭಾವದ ಬಗ್ಗೆ ಲಾವಣಿಯ ಮೂಲಕ, ಕಥೆಕಟ್ಟಿ ರಾತ್ರಿ ಇಡೀ ಹಾಡುತ್ತಾರೆ. ‘ಸೇವಾಲಾಲ ಭೀಮನ ಮಗನೆ, ನನ್ನ ಕುಲದ ತಾರೆಯೇ ಕುಲದ ನಗಾರಿಯೇ ಧ್ಯಾನ ಮಾಡುವೆ ನಿಮ್ಮ’ ಎಂದು. ‘ಸೀಕ್ ಸೀಕೋ ಸೀಕನ್ ಸೀಕಾವೋ ಸೀಕೋಜಕೋ ಸೇನಿ ಭಲಾನ್ ಆಂಗ್ ಚಾಲಚ್’ ಅಂದರೆ, ‘ಶಿಕ್ಷಣ ಕಲಿಯಿರಿ. ಕಲಿತು ಕಲಿಸಿರಿ. ಕಲಿತವನು ಸರ್ವರನ್ನೂ ಒಗ್ಗೂಡಿಸಿ ಮುಂದೆ ಸಾಗುತ್ತಾನೆ’ ಎನ್ನುವ ಸೇವಾಲಾಲರ ಮಾತುಗಳು ಈಗಲೂ ಬಡ ಸಮುದಾಯವಾಗಿ ಗುರುತಿಸಿಕೊಂಡ ಎಲ್ಲ ಸಮುದಾಯಗಳು ಅಕ್ಷರಶಃ ಪಾಲಿಸಬೇಕಾಗಿದೆ.
ಸೇವಾಲಾಲರು ಸಮುದಾಯಕ್ಕೆ ಒಂದು ಶಾಸನ, ಪದ್ಧತಿ, ಕರ್ತವ್ಯ, ಹಕ್ಕು, ನ್ಯಾಯಶೀಲತೆ (ಪಂಚಾಯತಿ), ಕಲ್ಪ, ಸತ್ಕಾರ್ಯ, ಕ್ರಿಯೆ, ಗುಣ, ದೈವ, ಧರ್ಮ ಬೃಹದ್ಸೂತ್ರವನ್ನು ಬೋಧಿಸಿದ್ದಾರೆ. ಬಂಜಾರರ ಹಾಗೂ ಸೇವಾಲಾಲರ ಧರ್ಮ: ಕ್ರಿ.ಪೂ 600-300ರ ಕಾಲದಲ್ಲಿಯೇ ಆರಂಭದಲ್ಲಿ ಧರ್ಮಶಾಸ್ತ್ರ ಗ್ರಂಥಗಳಿದ್ದವು. 2ನೇ ಶತಮಾನದಲ್ಲಿ ಅವು ಪ್ರಮಾಣ ಗ್ರಂಥಗಳಾದವು. ಮೇದಾತಿಥಿಯ ಪ್ರಕಾರ ಧರ್ಮವು ಐದು ವಿಧ ಹೊಂದಿದೆ. ಅವು 1. ವರ್ಣ ಧರ್ಮ 2. ಆಶ್ರಮ ಧರ್ಮ 3. ವರ್ಣಾಶ್ರಮ ಧರ್ಮ 4. ನೈಮಿತ್ತಿಕ ಧರ್ಮ 5. ಗುಣಧರ್ಮ. ಈ ಮೇಲಿನ ಧರ್ಮಗಳ ಪ್ರಕಾರ ಪರಿಸರ ಆರಾಧಕ ಸೇವಾಲಾಲರು ಗುಣಧರ್ಮ ಅಥವಾ ಹಳೆಯದಾದ ಬೌದ್ಧ ಧರ್ಮಗ್ರಂಥಗಳು (ಬೌದ್ಧಾಯನ ಧರ್ಮಸೂತ್ರ) ಹೇಳುವ ನಿರ್ದೇಶನಗಳು, ಆಕರಗಳ ಧರ್ಮವನ್ನು (ಪರಿಸರದ ಧರ್ಮ) ಬೋಧಿಸಿದ್ದಾರೆ ಎನ್ನಬಹುದು. ಬೌದ್ಧಾಯನ ಧರ್ಮ ಸೂತ್ರದ ಮೇಲೆ ಗೋವಿಂದಸ್ವಾಮಿ ಸಹ ವ್ಯಾಖ್ಯಾನ ಬರೆದಿದ್ದಾರೆ. ಸೇವಾಲಾಲರು ಎಲ್ಲ ಧರ್ಮಗಳನ್ನು ಸಮನಾಗಿ ಕಾಣಿರಿ ಎಂದರು. ಧರ್ಮ ಮತ್ತು ನೀತಿ ಒಂದೇ ಆಗಿರಬೇಕು ಎಂದು ಹೇಳಿ, ಧರ್ಮಗಳ ನಡುವೆ ಸಮಾನತೆಯನ್ನು ಸಾರಿದರು.
ಸೇವಾಲಾಲರ ಸಮಾಜಸೇವೆ: ಸೇವಾಲಾಲರು ನೋಂದವರ ಕಣ್ಣೀರು ಒರೆಸಿ, ಆತ್ಮಸ್ಥೈರ್ಯ ತುಂಬುತ್ತಿದ್ದರು. ಬಂಜಾರ ಸಮುದಾಯಕ್ಕೆ ಮಾತ್ರ ಸೇವೆ ಮಾಡದೆ ಇತರರಿಗೂ ಸೇವೆ ಸಲ್ಲಿಸುವ ಮಾನವೀಯತೆಯ ನೈಜ ಸೇವಕರಾಗಿದ್ದರು. ಅಲ್ಲದೆ, ಅಪ್ಪಟ ನಾಟಿ ವೈದ್ಯರಾಗಿ, ಅನೇಕರ ಪ್ರಾಣ ರಕ್ಷಣೆ ಮಾಡಿದರು. ಅಲೆಮಾರಿ ಬದುಕಿನಿಂದ ರೋಸಿ ಹೋಗಿದ್ದ ಬಂಜಾರರಿಗೆ ಒಂದೆಡೆ ನೆಲೆ ನಿಲ್ಲುವಂತೆ, ವ್ಯವಸಾಯ, ಪಶುಪಾಲನೆ ಮಾಡುವಂತೆ ಅರಿವು ತುಂಬಿದರು. ಸ್ತ್ರೀಯರಿಗೆ ಪುರುಷ ಸಮಾನವಾದ ಸ್ಥಾನಕ್ಕೆ ಆಗ್ರಹಿಸಿದರು. ಎಲ್ಲರೂ ಸಾಮೂಹಿಕವಾಗಿ ಸೇರಿ ಶುಭಕೋರುವುದು, ಹಬ್ಬ ಆಚರಿಸಲು ಹೇಳಿದರು. ಇಂಥ ಮಹಾಮಹಿಮ ಸೇವಾಲಾಲರು 1806ರ ಡಿಸೆಂಬರ್ 4ರಂದು ಇಹಲೋಕ ತ್ಯಜಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ
    In (ರಾಜ್ಯ ) ಜಿಲ್ಲೆ
  • ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ
    In (ರಾಜ್ಯ ) ಜಿಲ್ಲೆ
  • ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .
    In (ರಾಜ್ಯ ) ಜಿಲ್ಲೆ
  • ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ಮೈಸೂರು ಜಿಲ್ಲೆಗೆ 5 ಕೋಟಿ 19 ಲಕ್ಷ ಅನುದಾನ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಭಾವೈಕ್ಯತಾ ದಿನಾಚರಣೆ…
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಭೀಮ ಗಾಯನ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಪ್ರಧಾನ ಮಂತ್ರಿ ರಾಷ್ಟ್ರೀಯ ಶಿಶುಕ್ಷು ಮೇಳ
    In (ರಾಜ್ಯ ) ಜಿಲ್ಲೆ
  • ಹೋಳಿ ಹಬ್ಬ ಆಚರಣೆ: ವಿಶೇಷ ದಂಡಾಧಿಕಾರಿಗಳ ನೇಮಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಬೇಡಿಕೆಗಳ ಈಡೇರಿಕೆಗೆ ಮಾ.೧೧ ರಿಂದ ೧೫ವರೆಗೆ ಮುಷ್ಕರಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.