ನಿವರಗಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಆಚರಣೆಯಲ್ಲಿ ಬಿಇಓ ಸುಜಾತಾ ಹುನ್ನೂರ ಅಭಿಮತ
ಉದಯರಶ್ಮಿ ದಿನಪತ್ರಿಕೆ
ಚಡಚಣ: ವಿದ್ಯಾರ್ಥಿಗಳಿಗೆ ನಾವೀನ್ಯತೆ ಹಾಗೂ ಒಳಗೊಳ್ಳುವಿಕೆ ಭೋಧನೆಗೆ ಪ್ರೋತ್ಸಾಹ ನೀಡುವುದು. ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಕುತೂಹಲ ಮೂಡಿಸಿ ಅವರಲ್ಲಿ ಪ್ರಶ್ನೆ ಮೂಡುವಂತೆ ಮಾಡುವುದು. ಕಲಿಯುವ ಪ್ರಕ್ರಿಯೆಯನ್ನು ಸಂತಸದಾಯಕಗೊಳಿಸುವುದು, ವಿದ್ಯಾರ್ಥಿಗಳಿಗೆ ಆತ್ಮ ವಿಶ್ವಾಸ ಹೆಚ್ಚಿಸಲು ಈ ಯೋಜನೆ ಜಾರಿಗೆ ತರಲಾಗಿದೆ ಎಂದು ಚಡಚಣ ಬಿಇಓ ಶ್ರೀಮತಿ ಸುಜಾತಾ ಹುನ್ನೂರ ಹೇಳಿದರು.
ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕ್ಷೇತ್ರ ಸಮನ್ವಯ ಅಧಿಕಾರಿಗಳು ಕಾರ್ಯಾಲಯ ಚಡಚಣ ತಾಲೂಕು ಬುನಾದಿ ಸಾಕ್ಷರತೆ ಮತ್ತು ಸಂಖ್ಯಾ ಸಾಮರ್ಥ್ಯದ ಆಂದೋಲನ ನಿವರಗಿ ಕ್ಲಸ್ಟರ್ ವ್ಯಾಪ್ತಿಯ ಉಮರಜದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮಕ್ಕಳ ‘ಕಲಿಕಾ ಹಬ್ಬ’ವನ್ನು ಸರಸ್ವತಿ ಮಾತೆ ಭಾವಚಿತ್ರ ಪೂಜೆ ನೆರವೇರಿಸಿ ಮಾತನಾಡಿದ ಅವರು. ಮಕ್ಕಳು ಚಟುವಟಿಕೆ ಮೂಲಕ ಸಂತೋಷದಾಯಕ ಕಲಿಕೆಯನ್ನು ಮಕ್ಕಳು ಕಲಿಯಬೇಕು ಎಂಬ ಹಿನ್ನಲೆಯಿಂದ ಸರ್ಕಾರ ಚಿಂತನೆ ಮಾಡಿದ್ದು, ಈ ಚಿಂತನೆ, ಸಲಹೆ ಹಾಗೂ ಮಾರ್ಗದರ್ಶನದಡಿಯಲ್ಲಿ ನಾಡಿನಾದ್ಯಂತ ಕಲಿಕಾ ಹಬ್ಬದ ವಾತಾವರಣವನ್ನು ಉತ್ಸಾಹ, ಸಡಗರ ಸಂಭ್ರಮದಿAದ ಆಚರಣೆ ಮಾಡಲಾಗುತ್ತಿದೆ ಎಂದರು.
ನೌಕರರ ಸಹಕಾರಿ ಸಂಘದ ಅಧ್ಯಕ್ಷರಾದ ಎಸ್.ಎಸ್.ಪಾಟೀಲರವರು ಪ್ರಾಸ್ತಾವಿಕವಾಗಿ ಮಾತನಾಡುತ್ತ. ಮಕ್ಕಳ ಕಲಿಕಾ ಪ್ರಗತಿಯ ನಿಟ್ಟಿನಲ್ಲಿ ಕಲಿಕಾ ಹಬ್ಬ ಸಹಾಯಕಾರಿಯಾಗಿದ್ದು, ಮಕ್ಕಳ ಕಲಿಕೆಗೆ ಪ್ರೋತ್ಸಾಹ ಹಾಗೂ ಉತ್ತಮ ಭವಿಷ್ಯ ನಿರ್ಮಾಣ ಮಾಡಬೇಕಾಗಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಗಟ್ಟಿ ಓದು, ಕಥೆ ಹೇಳುವುದು, ಕೈ ಬರಹ, ರಸ ಪ್ರಶ್ನೆ ಕಾರ್ಯಕ್ರಮ ಮುಂತಾದ ಚಟುವಟಿಕೆಗಳ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೂರಂದಯ್ಯ ಹಿರೇಮಠರವರು ವಹಿಸಿದ್ದರು. ಈ ವೇಳೆ ಶಾಲಾ ಎಸ್ಡಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ನೌಕರರ ಸಂಘದ ಅಧ್ಯಕ್ಷರು ನೌಕರರ ಸಹಕಾರಿ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳು, ನಿವರಗಿ ಕ್ಲಸ್ಟರ್ದ ಶಾಲೆಗಳ ಮುಖ್ಯ ಗುಇರುಗಳು, ಶಿಕ್ಷಕ ಸಿಬ್ಬಂದಿ ವರ್ಗ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದ ಸ್ವಾಗತ ಶಾಲಾ ಮುಖ್ಯ ಗುರುಗಳಾದ ಎಂ.ಎಚ್.ಅಡಕೆ, ನಿರೂಪಣೆ ಎಂ.ಬಿ.ದೈವಾಡಿ, ವಂದನಾರ್ಪಣೆ ಸಿಆರ್ಪಿ ಟಿ.ಎನ್.ತಳವಾರ ನೆರವೇರಿಸಿದರು.

