Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತಿರ್ಮಾನ
(ರಾಜ್ಯ ) ಜಿಲ್ಲೆ

ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತಿರ್ಮಾನ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವರದಿಗಾರರಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಊಹಾಪೋಹಗಳ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸತ್ತದೆ ಎಂದು ಸೋಮವಾರ ಹೇಳಿದ್ದಾರೆ.
ರಾಜ್ಯದ ರಾಜಕೀಯ ವಲಯಗಳಲ್ಲಿ, ವಿಶೇಷವಾಗಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ, ಈ ವರ್ಷದ ಕೊನೆಯಲ್ಲಿ “ಪರ್ಯಾಯ ಮುಖ್ಯಮಂತ್ರಿ” ಅಥವಾ “ಅಧಿಕಾರ ಹಂಚಿಕೆ” ಸೂತ್ರದಡಿಯಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಮಾತುಕತೆಗಳು ನಡೆದಿವೆ.
ಸೋಮವಾರ ಈ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸಿದ ಸಿಎಂ, “ಅದನ್ನು ಹೈಕಮಾಂಡ್ ನಿರ್ಧರಿಸಬೇಕು” ಎಂದು ತಿಳಿಸಿದರು.
ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರಬಲ ಮುಖ್ಯಮಂತ್ರಿ ಆಕಾಂಕ್ಷಿಯಾಗಿದ್ದು, ಮುಖ್ಯಮಂತ್ರಿಯಾಗುವ ಮಹತ್ವಾಕಾಂಕ್ಷೆಯನ್ನು ಹಲವು ಬಾರಿ ಬಹಿರಂಗವಾಗಿಯೇ ಹೇಳಿದ್ದಾರೆ.
ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಒಂದು ವರ್ಗವು ಶಿವಕುಮಾರ್ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ಬಿಂಬಿಸಲು ಪದೇ ಪದೇ ಪ್ರಯತ್ನಗಳು ನಡೆಸುತ್ತಿದೆ.

ಸಿದ್ದರಾಮಯ್ಯ ಪಕ್ಷಕ್ಕೆ ಅನಿವಾರ್ಯ :ಡಿಕೆಶಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಪಕ್ಷಾತೀತ ನಾಯಕರಾಗಿದ್ದಾರೆ. ಅವರ ಹೆಸರನ್ನು ದುರುಪಯೋಗಪಡಿಸಿಕೊಂಡು ಯಾರೂ ಹೇಳಿಕೆ ನೀಡುವ ಅಗತ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಮುಂದಿನ ಚುನಾವಣೆಯಲ್ಲಿ ಅಧಿಕಾರ ಉಳಿಸಿಕೊಳ್ಳಬೇಕಾದರೆ ಸಿದ್ದರಾಮಯ್ಯ ಪಕ್ಷಕ್ಕೆ ಅನಿವಾರ್ಯ ಎಂಬ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ‘ಸಿದ್ದರಾಮಯ್ಯ ನಮ್ಮ ಮುಖ್ಯಮಂತ್ರಿ, ಅವರೇ ನಮ್ಮ ನಾಯಕರು, ಎಲ್ಲ ಚುನಾವಣೆಗಳಿಗೂ ಅವರೇ ಬೇಕು. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ವಿಧಾನಸಭೆ, ಸಂಸತ್ ಚುನಾವಣೆಗೆ ಅವರೇ ಬೇಕು. ಅವರೇ ನಮ್ಮ ನಾಯಕರು’ ಎಂದರು

ಡಿಸಿಎಂ ಡಿಕೆಶಿ ಗೆ ಸಚಿವ ರಾಜಣ್ಣ ತಿರುಗೇಟು

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಧಿಕಾರ ಹಂಚಿಕೆಯ ವಿಚಾರ ಚರ್ಚೆಗೆ ಗ್ರಾಸವಾಗುತ್ತಿದ್ದು, ಸಹಕಾರ ಸಚಿವ ಕೆಎನ್ ರಾಜಣ್ಣ ಅವರು ಸೋಮವಾರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರಿಗೆ ತಿರುಗೇಟು ನೀಡಿದ್ದಾರೆ. ಎಐಸಿಸಿ ಮತ್ತು ಪಕ್ಷದ ಹೈಕಮಾಂಡ್ ಹೆಸರನ್ನು ದುರ್ಬಳಕೆ ಮಾಡಿಕೊಳ್ಳಬೇಡಿ ಎಂದು ಒತ್ತಾಯಿಸಿದ್ದಾರೆ.
‘ಸಿದ್ದರಾಮಯ್ಯ ಅವರು ಕಾಂಗ್ರೆಸ್‌ನ ಪಕ್ಷಾತೀತ ನಾಯಕ. ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಯಾರೂ ಹೇಳಿಕೆ ನೀಡುವ ಅಗತ್ಯವಿಲ್ಲ’ ಎಂಬ ಡಿಕೆ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಮುಖ್ಯಮಂತ್ರಿ ಹೆಸರು ದುರ್ಬಳಕೆ ಮಾಡಿಕೊಳ್ಳಬಾರದು ಎಂಬುದಕ್ಕೆ ನನ್ನ ಸಹಮತವಿದೆ. ಆದರೆ, ಎಐಸಿಸಿ ಹಾಗೂ ಹೈಕಮಾಂಡ್ ಹೆಸರನ್ನು ದುರ್ಬಳಕೆ ಮಾಡಿಕೊಳ್ಳದಂತೆ ನಾವೂ ಅವರಿಗೆ (ಶಿವಕುಮಾರ್) ಹೇಳಬೇಕು. ಅವರು ಎಐಸಿಸಿ ಮತ್ತು ಹೈಕಮಾಂಡ್ ಅನ್ನು ಪದೇ ಪದೆ ಉಲ್ಲೇಖಿಸುತ್ತಾರೆ’ ಎಂದು ತಿರುಗೇಟು ನೀಡಿದ್ದಾರೆ.
ನಾವೆಲ್ಲರೂ ಹೈಕಮಾಂಡ್ ನಿರ್ದೇಶನವನ್ನು ಪಾಲಿಸುತ್ತೇವೆ ಮತ್ತು ಅದು ಬೇರೆ ವಿಷಯ. ರಾಜಕೀಯದಲ್ಲಿ ಜನರು ತಮ್ಮ ಅನುಕೂಲಕ್ಕೆ ಅನುಗುಣವಾಗಿ ವಿಚಾರಗಳನ್ನು ದುರುಪಯೋಗಪಡಿಸಿಕೊಳ್ಳುತ್ತಾರೆ’ ಎಂದರು.

BIJAPUR NEWS bjp congress patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ
    In (ರಾಜ್ಯ ) ಜಿಲ್ಲೆ
  • 1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ
    In (ರಾಜ್ಯ ) ಜಿಲ್ಲೆ
  • ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು
    In (ರಾಜ್ಯ ) ಜಿಲ್ಲೆ
  • ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು
    In (ರಾಜ್ಯ ) ಜಿಲ್ಲೆ
  • ಇಬ್ರಾಹಿಂಪುರದಲ್ಲಿ ಜಯರಾಮೇಶ್ವರ ಮಹಾರಾಜರ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಭಕ್ತರ ಭವಭೀತಿ ಪರಿಹರಿಸುವ ದತ್ತನ ಸ್ಥಳ ಸುಕ್ಷೇತ್ರ ಗಾಣಗಾಪುರ
    In ವಿಶೇಷ ಲೇಖನ
  • “ಡಿ.೫ ರಿಂದ ಸುವರ್ಣ ಮಹೋತ್ಸವ ಕಾರ್ಯಕ್ರಮ :ಗೊಳಸಂಗಿ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರು ಆತ್ಮವಿಶ್ವಾಸದಿಂದ ಜೀವನ ನಡೆಸಲು ಅವಕಾಶ ನೀಡಿ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಧ್ವನಿ 98.6 ಎಫ್‌.ಎಂ ರೇಡಿಯೋ ಕೇಂದ್ರ ಆರಂಭ
    In (ರಾಜ್ಯ ) ಜಿಲ್ಲೆ
  • ೫೧ ವರ್ಷಗಳ ಹೋರಾಟಕ್ಕೆ ದೊರಕಿದ ನ್ಯಾಯ :ಪಟ್ಟಣಶೆಟ್ಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.