ಡೊಳ್ಳು ಕುಣಿತ, ಕೋಲಾಟ ವಿವಿಧ ವಾದ್ಯ ವೈಭಗಳೊಂದಿಗೆ ಭವ್ಯ ಮೆರವಣಿಗೆ
ಉದಯರಶ್ಮಿ ದಿನಪತ್ರಿಕೆ
ಚಡಚಣ: ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಕುತೂಹಲ ಮೂಡಿಸಿ ಅವರಲ್ಲಿ ಪ್ರಶ್ನೆ ಮೂಡುವಂತೆ ಮಾಡುವುದು, ಸಂತಸದಾಯಕ ಕಲಿಕೆ ಪ್ರಕ್ರಿಯೆ, ಹಿಂಜರಿಕೆ ಹೋಗಲಾಡಿಸಿ ಆತ್ಮ ವಿಶ್ವಾಸ ಹೆಚ್ಚಿಸುವುದು, ವಿಭಿನ್ನ ವಾತಾವರಣ, ಗುಂಪಿನಲ್ಲಿ ಕಲಿಕೆ ಮೊದಲಾದ ಉದ್ದೇಶದಿಂದ ಕಲಿಕಾ ಹಬ್ಬ ಆಚರಣೆಗೆ ನಿರ್ಧರಿಸಲಾಗಿದೆ ಬಿಇಒ ಸುಜಾತಾ ಹುನ್ನೂರರವರು ಎಂದರು.
ಶಾಲಾ ಶಿಕ್ಷಣ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಚಡಚಣ ವಲಯ ಸಮೂಹ ಸಂಪನ್ಮೂಲ ಕೇಂದ್ರ ಚಡಚಣ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರದಂದು ಹಮ್ಮಿಕೊಂಡಿದ್ದ ‘ಕಲಿಕಾ ಹಬ್ಬ’ವನ್ನು ಸೋಮವಾರದಂದು ಉದ್ಘಾಟಿಸಿ ಮಾತನಾಡಿದ ಅವರು. ಕಲಿಕಾ ಹಬ್ಬ ಚಟುವಟಿಕೆ ಆಧಾರಿತವಾಗಿದ್ದು, ವಿದ್ಯಾರ್ಥಿಗಳು ಎಲ್ಲ ಚಟುವಟಿಕೆಗಳನ್ನು ಕಲಿಯಬೇಕು. ಆಟ ಆಡುವ ಮೂಲಕ ಪಾಠ ಕಲಿಯುವ ಕೆಲಸವಾಗಬೇಕು. ಸಮಯ ವ್ಯರ್ಥ ಮಾಡದೇ ಎಲ್ಲ ಮಕ್ಕಳು ಎರಡು ದಿನಗಳ ಕಾಲ ಕಲಿಕಾ ಹಬ್ಬದ ಚಟುವಟಿಕೆಗಳಾದ ಆಡು-ಹಾಡು, ಕಾಗದ-ಕತ್ತರಿ, ಊರು ತಿಳಿಯೋಣ, ಮಾಡು-ಹಾಡು ಎಂಬ ಗುಂಪುಗಳಲ್ಲಿ ಪೂರ್ಣವಾಗಿ ಭಾಗವಹಿಸಿ ಎಂದು ಹೇಳಿದರು.
ನೌಕರರ ಸಹಕಾರಿ ಸಂಘದ ಅಧ್ಯಕ್ಷರಾದ ಎಸ್.ಎಸ್.ಪಾಟೀಲರವರು ಮಾತನಾಡುತ್ತ. ತರಗತಿ ಕೊಠಡಿಯ ನಾಲ್ಕು ಗೋಡೆಗಳ ನಡುವೆ ನಡೆಯುವ ಕಲಿಕೆ ಮಕ್ಕಳಿಗೆ ಹೆಚ್ಚು ಸಂತಸವನ್ನು ನೀಡಲಾರದು. ತಾವು ಕಲಿತ ಪಾಠವನ್ನೇ ವಿಭಿನ್ನವಾಗಿ ಸ್ಪರ್ಧಾತ್ಮಕ ಚಟುವಟಿಕೆಗಳ ಮೂಲಕ ತೆರೆದಿಟ್ಟರೆ, ಮಕ್ಕಳಿಗೆ ಕಲಿಕೆಯೇ ಒಂದು ಹಬ್ಬವಾಗುತ್ತದೆ. ಮಕ್ಕಳಿಗೆ ‘ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾಜ್ಞಾನದ ಚಟುವಟಿಕೆಗಳ ಬಲವರ್ಧನೆಗೆ’ ‘ಕಲಿಕಾ ಹಬ್ಬ’ ನಡೆಸುತ್ತಿದೆ ಎಂದರು.
ಅದ್ಧೂರಿ ಮೆರವಣಿಗೆ: ಕಲಿಕಾ ಹಬ್ಬದ ನಿಮಿತ್ತ ಗ್ರಾಮದ ಪ್ರಮುಖ ಬೀದಿಗಳಲ್ಲಿ ಕಲಿಕಾ ಹಬ್ಬದ ಮಹತ್ವವನ್ನು ಸಾರುವ ರೂಪಕಗಳೊಂದಿಗೆ ಅರ್ಥಪೂರ್ಣ ಪ್ರಭಾತಪೇರಿಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಡೊಳ್ಳು ಕುಣಿತ, ಕೋಲಾಟ, ಲೇಝಿಮ್ನಂತ ನೃತ್ಯ ವೈಭದೊಂದಿಗೆ ಮೆರವಣಿಗೆ ಸಾಗಿತ್ತು.
ಈ ಕಾರ್ಯಕ್ರಮದಲ್ಲಿ ಬಿಆರ್ಸಿ ಬಿ.ಕೆ.ವಾಘಮೋರೆ, ಎಂ.ಜಿ.ತೇಲಿ, ಪಿ.ಎನ್.ತಳವಾರ, ಶಾಲಾ ಪ್ರಭಾರಿ ಮುಖ್ಯ ಗುರುಗಳಾದ ವಿಜಯಕುಮಾರ ಸಾತಪುತೆ ಸೇರಿದಂತೆ. ಎಸ್ಡಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ನೌಕರರ ಸಂಘದ ಅಧ್ಯಕ್ಷರು ನೌಕರರ ಸಹಕಾರಿ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳು, ನಿವರಗಿ ಕ್ಲಸ್ಟರ್ದ ಶಾಲೆಗಳ ಮುಖ್ಯ ಗುರುಗಳು, ಶಿಕ್ಷಕ ಸಿಬ್ಬಂದಿ ವರ್ಗ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

