Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತೆಲಂಗಾಣಕ್ಕೆ ನೀರು ಹರಿಸದಿರಲು ಆಗ್ರಹಿಸಿ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ತೆಲಂಗಾಣಕ್ಕೆ ನೀರು ಹರಿಸದಿರಲು ಆಗ್ರಹಿಸಿ ಪ್ರತಿಭಟನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ತೆಲಂಗಾಣ ರಾಜ್ಯಕ್ಕೆ 5 ಟಿಎಂಸಿ ಅಡಿ ನೀರನ್ನು ಯಾವುದೇ ಕಾರಣಕ್ಕೂ ಹರಿಸಬಾರದು ಎಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ಕಾರ್ಯಕರ್ತರು ಗುರುವಾರ, ಆಲಮಟ್ಟಿಯಲ್ಲಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಖಂಡ ಕರ್ನಾಟಕ ರೈತ ಸಂಘದ ವಿಜಯಪುರ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ತೆಲಂಗಾಣ ಸರ್ಕಾರ 5 ಟಿಎಂಸಿ ಅಡಿ ನೀರನ್ನು ಹರಿಸಿ ಎಂದು ರಾಜ್ಯ ಸರ್ಕಾರಕ್ಕೆ ಪತ್ರಬರೆದಿದೆ. ಎರಡೂ ರಾಜ್ಯಗಳಲ್ಲಿ ಒಂದೇ ಪಕ್ಷದ ಅಧಿಕಾರ ಇದೆ. ರಾಜಕೀಯ ಹಿತದೃಷ್ಠಿಯಿಂದ ರಾಜ್ಯದ ರೈತರ ಹಿತಾಸಕ್ತಿ ಕಡೆಗಣಿಸಿ ನೀರು ಹರಿಸಿದರೇ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಆಲಮಟ್ಟಿ, ನಾರಾಯಣಪುರ ಎರಡೂ ಜಲಾಶಯಗಳಲ್ಲಿ ಕುಡಿಯುವ ನೀರು, ಜಲಚರ, ನೀರು ಆವಿ ಆಗುವಿಕೆ, ಕೈಗಾರಿಕೆ, ವಿದ್ಯುತ್ ಸ್ಥಾವರಗಳು ಮತ್ತೀತರ ಬಳಕೆಗೆ ಕನಿಷ್ಠ 35 ಟಿಎಂಸಿ ಅಡಿ ನೀರು ಕಾಯ್ದಿರಿಸಬೇಕಾಗುತ್ತದೆ. ಬೇಸಿಗೆಯಲ್ಲಿ ಜಿಲ್ಲೆಯ ಎಲ್ಲಾ ಕೆರೆಗಳನ್ನು ಪೂರ್ಣ ಪ್ರಮಾಣದಲ್ಲಿ ಭರ್ತಿ ಮಾಡಬೇಕಾಗುತ್ತದೆ. ಆದರೆ ಸದ್ಯ ಸಂಗ್ರಹವಿರುವ ನೀರಿನಲ್ಲಿ ಹಿಂಗಾರು ಹಂಗಾಮಿಗೆ ನೀರು ಪೂರೈಸಿ ಅಷ್ಟು ಪ್ರಮಾಣದಲ್ಲಿ ನೀರು ಉಳಿಯುವುದೇ ಅನುಮಾನ. ಹೀಗಾಗಿ ಯಾವುದೇ ಕಾರಣಕ್ಕೂ ತೆಲಂಗಾಣಕ್ಕೆ ನೀರು ಹರಿಸಬಾರದು ಎಂದು ಅವರು ಆಗ್ರಹಿಸಿದರು.
ಒಂದು ವೇಳೆ ನೀರು ಹರಿಸಿದರೇ ಜಿಲ್ಲೆಯ ಜನ, ಜಾನುವಾರುಗಳು ಬೇಸಿಗೆಯಲ್ಲಿ ಕುಡಿಯುವ ನೀರಿಲ್ಲದೇ ಪರದಾಡಬೇಕಾಗುತ್ತದೆ ಎಂದರು. ಬೇಸಿಗೆ ಬಂತೆಂದರೇ ತೆಲಂಗಾಣ ಹಾಗೂ ಆಂಧ್ರ ರಾಜ್ಯಗಳಿಗೆ ಆಲಮಟ್ಟಿ ಅಣೆಕಟ್ಟಿನ ನೀರಿನ ನೆನಪಾಗುತ್ತದೆ. ಆದರೆ ಆಲಮಟ್ಟಿ ಜಲಾಶಯ ಎತ್ತರಕ್ಕೆ ಎರಡೂ ರಾಜ್ಯಗಳು ವಿರೋಧ ವ್ಯಕ್ತಪಡಿಸುತ್ತವೆ. ಮೊದಲು ಸುಪ್ರಿಂಕೋರ್ಟ್ ನಲ್ಲಿ ಆಲಮಟ್ಟಿ ಜಲಾಶಯ ಎತ್ತರವಾಗದಂತೆ ಹಾಕಿರುವ ವಿವಿಧ ಮೊಕದ್ದಮೆಗಳನ್ನು ಹಿಂದಕ್ಕೆ ಪಡೆದು ಜಲಾಶಯದ ಎತ್ತರಕ್ಕೆ ಸಮ್ಮತಿ ನೀಡಲಿ ಎಂದು ಅವರು ಆಗ್ರಹಿಸಿದರು.
ಒಂದು ವೇಳೆ ಯಾರಿಗೂ ಗೊತ್ತಾಗದಂತೆ ನೀರು ಹರಿಸದರೇ ಮುಖ್ಯ ಎಂಜಿನಿಯರ್ ಕಚೇರಿ ಎದುರು ಉಪವಾಸ ಸತ್ಯಾಗ್ರಹ ಆರಂಭಿಸಲಾಗುವುದು, ಆಲಮಟ್ಟಿ ಜಲಾಶಯದ ಹೊರಹರಿವಿನ ಮೇಲೆ ನಿರಂತರ ನಿಗಾ ಇಡಲಾಗುವುದು ಎಂದರು. ಸಂಘದ ಬಸವನಬಾಗೇವಾಡಿ ತಾಲ್ಲೂಕು ಘಟಕದ ಅಧ್ಯಕ್ಷ ಉಮೇಶ ವಾಲಿಕಾರ, ಹೊನಕೇರೆಪ್ಪ ತೆಲಗಿ, ಪ್ರಹ್ಲಾದ ನಾಗರಾಳ, ವಿಠ್ಠಲ ಬಿರಾದಾರ, ಲಾಲಸಾಬ್ ಹಳ್ಳೂರ, ಶೆಟ್ಟೆಪ್ಪ ಲಮಾಣಿ, ಹಣಮಂತ ಕಲಬುರ್ಕಿ, ರಾಮನಗೌಡ ಹಾದಿಮನಿ, ಯಮನಪ್ಪ ಸರೂತ ,ಸಾಹೇಬಗೌಡ ಹೊಸೂರ ಇದ್ದರು.
ಮುಖ್ಯ ಎಂಜಿನಿಯರ್ ಡಿ. ಬಸವರಾಜ ಮನವಿ ಸ್ವೀಕರಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026
    In ದಿನಪತ್ರಿಕೆ
  • ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ
    In (ರಾಜ್ಯ ) ಜಿಲ್ಲೆ
  • ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೨೬ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದ ಜಿಪಂ ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
  • ಸೇತುವೆ ಕಾರ್ಯ: ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆ ತಲೆದೋರದಂತೆ ಮುಂಜಾಗೃತೆವಹಿಸಿ
    In (ರಾಜ್ಯ ) ಜಿಲ್ಲೆ
  • ಕ್ಷಯರೋಗ ಗುಣವಾಗಬಹುದಾದ ಕಾಯಿಲೆ :ಡಾ.ರಾಜೇಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.