Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರಾಕೃತಿಕ ಸಮತೋಲನಕ್ಕೆ ಸಸ್ಯಗಳ ಕೊಡುಗೆ ಅಪಾರ :ಡಾ.ಸಜ್ಜನ
(ರಾಜ್ಯ ) ಜಿಲ್ಲೆ

ಪ್ರಾಕೃತಿಕ ಸಮತೋಲನಕ್ಕೆ ಸಸ್ಯಗಳ ಕೊಡುಗೆ ಅಪಾರ :ಡಾ.ಸಜ್ಜನ

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಿ.ಎಲ್ ಡಿ ಇ ಸಂಸ್ಥೆಯ ಎಸ್.ಬಿ.ಕಲಾ ಮತ್ತು ಕೆ ಸಿ ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸಸ್ಯಗಳು ಮಾನವನ ಅವಿಭಾಜ್ಯ ಅಂಗವಾಗಿದ್ದು ಪ್ರಾಕೃತಿಕ ಸಮತೋಲನ ಕಾಪಾಡುವುದರ ಜೊತಗೆ ಜೀವರಾಶಿಗಳಿಗೆ ಆಹಾರವನ್ನು ಪೂರೈಕೆ ಮಾಡುತ್ತವೆ ಹಾಗಾಗಿ ಜೈವಿಕ ಅಧ್ಯಯನ ಅತೀ ಮುಖ್ಯ ಎಂದು ಹಿಟ್ನಳ್ಳಿ ಕೃಷಿ ವಿವಿ ಡೀನ್ ಡಾ.ಅಶೋಕ ಸಜ್ಜನ ಹೇಳಿದರು.
ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ.ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿರುವ `ಜೈವಿಕ ವಿಜ್ಞಾನದ ಗಡಿಗಳು ; ಸಂಶೋಧನೆ, ನಾವೀನ್ಯತೆ ಮತ್ತು ಸಹಯೋಗ ಎಂಬ ವಿಷಯದ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ರೈತರ ಬೆಳೆಗಳ ಇಳುವರಿ ಹೆಚ್ಚಿಸಿ ಆರ್ಥಿಕ ಬೆಳವಣಿಗೆ ಕಾಣಬೇಕಾದರೆ ಸುಧಾರಿತ ಕೃಷಿ ಅಳವಡಿಸಿಕೊಳ್ಳುವುದು ಅನಿವಾರ್ಯವಾಗಿದೆ. ಹಾಗಾಗಿ ಸಸ್ಯಶಾಸ್ತ್ರವು ಆರ್ಥಿಕ ಉತ್ಪಾದನಾ ಕ್ಷೇತ್ರದಲ್ಲಿಯೂ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಭಾರತ ಹಸಿರು ಕ್ರಾಂತಿಯ ಪರಿಣಾಮವಾಗಿ ಆಹಾರ ಉತ್ಪಾದನೆಯಲ್ಲಿ ಸ್ವಾವಂಭಿಯಾಗಿದೆ. ಅದಕ್ಕೆ ಮೂಲ ಕಾರಣ ಕೃಷಿ ವಿಜ್ಞಾನಿ ಡಾ.ಎಂ.ಎಸ್.ಸ್ವಾಮೀನಾಥನ್. ೧೯೬೫-೬೮ ರಲ್ಲಿ ಸ್ವಾಮೀನಾಥನ ಅವರು ಅಧಿಕ ಇಳುವರಿ ಬರುವಂತಹ ಗೋಧಿ ಹಾಗೂ ಅಕ್ಕಿ ತಳಿಗಳನ್ನು ಸಂಶೋಧಿಸಿದ ಪರಿಣಾಮ ಅದೇ ತಳಿಗಳನ್ನು ರೈತರು ವ್ಯಾಪಕವಾಗಿ ಬೆಳೆಯಲು ಪ್ರಾರಂಭಿಸಿದಾಗ ಭಾರತದಲ್ಲಿ ಹಸಿವಿನ ಪ್ರಮಾಣ ಕಡಿಮೆಯಾಗತೊಡಗಿತು. ಹಾಗಾಗಿ ಅವರನ್ನು ಭಾರತದ ಹಸಿರು ಕ್ರಾಂತಿಯ ಪಿತಾಮಹಾ ಎನಿಸಿಕೊಂಡಿದ್ದಾರೆ ಎಂದರು.
ಜೈವಿಕ ತಂತ್ರಜ್ಞಾನದ ಭವಿಷ್ಯವು ನಿಖರವಾದ ಔಷಧ, ಜೀನ್ ಎಡಿಟಿಂಗ್, ಬಯೋಪ್ರಿಂಟಿಂಗ್ ಮತ್ತು ಜೈವಿಕ ಉತ್ಪಾದನೆಯನ್ನು ಒಳಗೊಂಡಿದೆ. ಈ ತಂತ್ರಜ್ಞಾನಗಳು ಆರೋಗ್ಯ, ಕೃಷಿ ಮತ್ತು ಆಹಾರ ಉತ್ಪಾದನೆಯನ್ನು ಸುಧಾರಿಸುತ್ತದೆ. ೨೧ ನೇ ಶತಮಾನದಲ್ಲಿ ನಾವು ಆಹಾರ, ಶಕ್ತಿ ಮತ್ತು ಪರಿಸರ ಎಂಬ ಮೂರು ಪ್ರಮುಖ ಸವಾಲುಗಳನ್ನು ಎದುರಿಸುತ್ತಿದ್ದೇವೆ. ಹವಾಮಾನ ಬದಲಾವಣೆ ಮತ್ತು ಮಾಲಿನ್ಯ ಮತ್ತು ಆವಾಸಸ್ಥಾನದ ನಷ್ಟದಿಂದಾಗಿ ಪರಿಸರ ಹಾನಿ ಸಂಭವಿಸುತ್ತಿದೆ. ನಮ್ಮ ಎಲ್ಲಾ ಆಹಾರ ಮತ್ತು ನಮ್ಮ ಶಕ್ತಿಯ ಬಹುಪಾಲು ಭಾಗ ದ್ಯುತಿಸಂಶ್ಲೇಷಕ ಸಸ್ಯಗಳಿಂದ ಉತ್ಪತ್ತಿಯಾಗುತ್ತದೆ. ಹವಾಮಾನ ಮತ್ತು ಕೃಷಿ ವಿಸ್ತರಣೆಯನ್ನು ನಿರ್ಧರಿಸುವಲ್ಲಿ ಸಸ್ಯಗಳು ಪ್ರಮುಖ ನಿರ್ವಹಿಸುತ್ತವೆ ಎಂದರು.
ಸಸ್ಯ ವಿಜ್ಞಾನವು ನಾವೀನ್ಯತೆಯಲ್ಲಿ ಮುಂಚೂಣಿಯಲ್ಲಿದೆ, ಪ್ರಪಂಚದ ಕೆಲವು ಸವಾಲುಗಳಿಗೆ ಪರಿಹಾರವನ್ನು ಒದಗಿಸುತ್ತದೆ. ಅತ್ಯಾಧುನಿಕ ತಂತ್ರಜ್ಞಾನಗಳಿಂದ ಸುಸ್ಥಿರ ಕೃಷಿ ತಂತ್ರಗಳವರೆಗೆ, ಕೃಷಿಯನ್ನು ಮರುರೂಪಿಸುತ್ತಿವೆ. ಅಲ್ಲದೇ ಹೆಚ್ಚು ಸುಸ್ಥಿರ ಭವಿಷ್ಯವನ್ನು ಸೃಷ್ಟಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ಪ್ರಕೃತಿಯಲ್ಲಿ ಮಣ್ಣು ಸಹಿತ ಅತೀ ಮುಖ್ಯವಾಗಿದ್ದು ನಾವು ಮಣ್ಣಿನ ಆರೋಗ್ಯ ಕಾಪಾಡಿಕೊಳ್ಳಬೇಕಿದೆ. ನಾವು ಸಾಂಪ್ರದಾಯಿಕ ಕೃಷಿ ಬದಲಾಗಿ ಸುಧಾರಿತ ಕೃಷಿ ಪದ್ಧತಿ ಅಳವಡಿಕೆ ಮಾಡಿಕೊಂಡು ನಿರಂತರವಾಗಿ ಬೆಳೆಗಳನ್ನು ಬದಲಾಯಿಸುವುದರಿಂದ. ಮಣ್ಣಿನಲ್ಲಿನ ಬ್ಯಾಕ್ಟಿರೀಯಾಗಳು ಸಸ್ಯಗಳಿಗೆ ಪೋಷಕಾಂಶಗಳನ್ನು ಒದಗಿಸುವುದರ ಮೂಲಕ ಇಳುವರಿ ಪ್ರಮಾಣ ಹೆಚ್ಚಾಗುವಂತೆ ಮಾಡಿ ಉತ್ಪಾದನಾ ಶಕ್ತಿ ಹೆಚ್ಚಿಸುತ್ತದೆ ಎಂದ ಹೇಳಿದರು.
ಬೀಜ ತಂತ್ರಜ್ಞಾನದಲ್ಲಿನ ಜೈವಿಕ ತಂತ್ರಜ್ಞಾನದ ಆವಿಷ್ಕಾರಗಳು ಸುಸ್ಥಿರ, ದಕ್ಷ ಮತ್ತು ಸ್ಥಿತಿಸ್ಥಾಪಕ ಕೃಷಿ ಪದ್ಧತಿಗಳನ್ನು ಉತ್ತೇಜಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಭಾರತೀಯ ಕೃಷಿ ಭವಿಷ್ಯ ಉಜ್ವಲಗೊಳ್ಳಲು ಹಾಗೂ ರಾಷ್ಟ್ರದ ಆಹಾರ ಭದ್ರತೆ ಮತ್ತು ಆರ್ಥಿಕ ಸಮೃದ್ಧಿಗೆ ಅನುಕೂಲ ಕಲ್ಪಿಸಲು ಜೈವಿಕ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವುದು ಅವಶ್ಯಕ. ಕರ್ನಾಟಕದ ರೈತರು ಎದುರಿಸುತ್ತಿರುವ ಕೆಲವು ಸಮಸ್ಯೆಗಳನ್ನು ನಿವಾರಿಸಲು ಧಾರವಾಡದ ಕೃಷಿ ವಿಶ್ವವಿದ್ಯಾಲಯವು ಕೆಲವು ತಂತ್ರಗಳನ್ನು ಬಿಡುಗಡೆ ಮಾಡಿದೆ. ಅದರಿಂದ ರಾಗಿ-ಜೋಳದ ಕೃಷಿಯಲ್ಲಿ ತೊಡಗಿರುವ ರೈತರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
ಬಿ.ಎಲ್.ಡಿ.ಇ ಡೀಮ್ಡ್ ವಿವಿ ಸಮಕುಲಾಧಿಪತಿ ಪ್ರೋ.ವಾಯ್.ಎಂ.ಜೈರಾಜ್ ಮಾತನಾಡಿ, ಡಾ.ಎಂ.ಬಿ.ಪಾಟೀಲ ಅವರು ಒಣ ಭೂಮಿಯನ್ನು ನೀರಾವರಿಗೆ ಒಳಪಡಿಸಿದ್ದರಿಂದ ಬಹಳಷ್ಟು ರೈತರ ಬದುಕು ಬದಲಾಗಿದೆ. ಕೃಷಿ ಪದ್ಧತಿಗಳು ಸುಧಾರಿತಗೊಂಡಿವೆ ಹಾಗಾಗಿಯೇ ಅವರನ್ನು ಆಧುನಿಕ ಭಗೀರಥ ಎಂದು ಕರೆಯಲಾಗುತ್ತಿದೆ ಎಂದರು.
ಭಾರತದಲ್ಲಿ ಆಹಾರ ಉತ್ಪಾದನಾ ಪ್ರಾಮಾಣ ಹೆಚ್ಚಿಸಲು ಡಾ.ಸ್ವಾಮೀನಾಥನ ೧೯೬೦ ಹೈಬ್ರಿಡ್ ತಳಿಗಳನ್ನು ಪರಿಚಯಿಸುವ ಮೂಲಕ ಭಾರತದ ಕೃಷಿ ಕ್ಷೇತ್ರಕ್ಕೆ ಹೊಸ ಆಯಾಮವನ್ನು ನೀಡಿದರು. ಹೈಬ್ರಿಡ್ ತಳಿಗಳಿಂದ ಬೆಳೆದ ಆಹಾರದಲ್ಲಿ ಉತ್ತಮ ಪೋಷಕಾಂಶಗಳು ಹಾಗೂ ಪೈಬರ್ ಪ್ರಮಾಣದ ಕೊರತೆ ಇದೆ. ಕಾಯಿಪಲ್ಲೆ ಹಾಗೂ ಹಣ್ಣುಗಳಲ್ಲಿ ಪೋಷಕಾಂಸಗಳ ಕೊರತೆ ಎದ್ದು ಕಾಣುತ್ತದೆ. ಆರ್ಗ್ಯಾನಿಕ್ ಪದ್ದತಿಯ ಕೃಷಿ ಅಳವಡಿಸಿಕೊಂಡು ಕೊಳಿ ಸಾಕಾಣಿಕೆ, ಜೇನು ಸಾಕಾಣಿಗೆಯಂತಹ ಕೃಷಿಗೆ ಪೂರಕವಾದ ಚಟುವಟಿಕೆಗಳತ್ತ ರೈತರು ಆಸಕ್ತಿ ತೋರಬೇಕು ಎಂದು ಸಲಹೆ ನೀಡಿದರು.
ಕೃಷಿ ಪುರುಷರಿಂದ ಪ್ರಾರಂಭವಾಗಿಲ್ಲ, ಅದು ಮಹಿಳೆಯರಿಂದ ಪ್ರಾರಂಭವಾಗಿದೆ. ಸಿಟಿಗಳಲ್ಲಿ ವಾತಾವರಣ ಕಲುಸಿತವಾಗುತ್ತಿದೆ. ದೆಹಲಿಯಲ್ಲಿ ಶುದ್ಧ ಗಾಳಿ ಇಲ್ಲ, ಶುದ್ಧ ಕುಡಿಯುವ ನೀರು ಸಿಗುತ್ತಿಲ್ಲ ಹಾಗಾಗಿ ನಾವು ನಮ್ಮ ವಾತಾವರಣವನ್ನು ಕಾಪಾಡಿಕೊಳ್ಳಲು ಪ್ರಯತ್ನ ಮಾಡಬೇಕು. ಕೊರೊನಾದಿಂದ ಜಗತ್ತು ತತ್ತರಿಸಿ ಎಲ್ಲ ವಲಯಗಳು ಕೆಲಸ ಮಾಡುವುದನ್ನು ನಿಲ್ಲಿಸಿದವು ಆದರೆ ಕೃಷಿ ಮಾತ್ರ ನಿರಂತರವಾಗಿ ಕಾರ್ಯ ನಿರ್ವಹಿಸಿತು. ಸರ್ಕಾರ ಎಲ್ಲರಿಗೂ ಉದ್ಯೋಗ ಕೊಡಲು ಸಾಧ್ಯವಿಲ್ಲ. ಕೃಷಿಯಲ್ಲಿ ಸಾಕಷ್ಟು ಉದ್ಯೋಗಗಳಿವೆ ಆದರೆ ನಾವು ಕೃಷಿಯಿಂದ ವಿಮುಖರಾಗುತ್ತಿದ್ದೇವೆ ಎಂದು ವಿಷಾದ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ರಾಮಚಂದ್ರ ನಾಯಕ ಅತಿಥಿಗಳನ್ನು ಪರಿಚಯಿಸಿದರು. ಎಸ್.ಬಿ.ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯೆ ಆರ್.ಎಂ.ಮಿರ್ದೆ ಅತಿಥಿಗಳನ್ನು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಕಲಬುರಗಿ ಖಾಜಾ ಬಂದೇನವಾಜ ವಿವಿಯ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಸೈಯ್ಯದ ಅಬ್ರಾರ್, ಬಿ.ಎಲ್.ಡಿ.ಇ ಸಂಸ್ಥೆ ಆಡಳಿತಾಧಿಕಾರಿ ವ್ಹಿ.ಎಸ್.ಬಗಲಿ, ಐಕ್ಯೂಎಸಿ ನಿರ್ದೇಶಕ ಡಾ.ಪಿ.ಎಸ್.ಪಾಟೀಲ, ಉಪಪ್ರಾಚಾರ್ಯ ಅನಿಲ ನಾಯಕ್, ಪ್ರೋ.ಕೃಷ್ಣಾ ಮಂಡ್ಲಾ, ಪ್ರೋ.ಆರ್.ಡಿ.ಜ್ಯೋಶಿ, ಪ್ರೋ.ಗೀರಿಜಾ ನಿಂಬಾಳ, ಪ್ರೋ.ಪವನಕುಮಾರ ಮಹೀಂದ್ರಕರ್, ಪ್ರೋ.ಸಂತೋಷ ವಂಭಾಸೆ, ಪ್ರೋ.ಶ್ವೇತಾ ಸವನೂರ, ಡಾ.ಶ್ರೀನಿವಾಸ ದೊಡ್ಡಮನಿ,ಪ್ರೊ.ಶ್ರೀಧರ್ ಜೋಶಿ,ಶ್ರೀ ಹೇರಲಗಿ.ಮಹೇಶ ಬೆಲ್ಲದ,
ಈ ಸಂದರ್ಭದಲ್ಲಿ ಐಕ್ಯೂಎಸಿ ನಿರ್ದೇಶಕ ಡಾ.ಪಿ ಎಸ್ ಪಾಟೀಲ ವಂದಿಸಿದರು. ಡಾ.ಸ್ವಾತಿ ಪಾಟೀಲ,ಪ್ರೊ ಸೌಮ್ಯ ಸಜ್ಜನ ಕಾರ್ಯಕ್ರಮ ನಿರೂಪಿಸಿದರು

BIJAPUR NEWS patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ
    In (ರಾಜ್ಯ ) ಜಿಲ್ಲೆ
  • 1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ
    In (ರಾಜ್ಯ ) ಜಿಲ್ಲೆ
  • ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು
    In (ರಾಜ್ಯ ) ಜಿಲ್ಲೆ
  • ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು
    In (ರಾಜ್ಯ ) ಜಿಲ್ಲೆ
  • ಇಬ್ರಾಹಿಂಪುರದಲ್ಲಿ ಜಯರಾಮೇಶ್ವರ ಮಹಾರಾಜರ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಭಕ್ತರ ಭವಭೀತಿ ಪರಿಹರಿಸುವ ದತ್ತನ ಸ್ಥಳ ಸುಕ್ಷೇತ್ರ ಗಾಣಗಾಪುರ
    In ವಿಶೇಷ ಲೇಖನ
  • “ಡಿ.೫ ರಿಂದ ಸುವರ್ಣ ಮಹೋತ್ಸವ ಕಾರ್ಯಕ್ರಮ :ಗೊಳಸಂಗಿ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರು ಆತ್ಮವಿಶ್ವಾಸದಿಂದ ಜೀವನ ನಡೆಸಲು ಅವಕಾಶ ನೀಡಿ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಧ್ವನಿ 98.6 ಎಫ್‌.ಎಂ ರೇಡಿಯೋ ಕೇಂದ್ರ ಆರಂಭ
    In (ರಾಜ್ಯ ) ಜಿಲ್ಲೆ
  • ೫೧ ವರ್ಷಗಳ ಹೋರಾಟಕ್ಕೆ ದೊರಕಿದ ನ್ಯಾಯ :ಪಟ್ಟಣಶೆಟ್ಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.