Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗುಣಮಟ್ಟದ ವಿದ್ಯುತ್ ಗೆ ಆಗ್ರಹಿಸಿ ರೈತರಿಂದ ಕೆ.ಇ.ಬಿ ವೃತ್ತ ಕಚೇರಿಗೆ ಮುತ್ತಿಗೆ
(ರಾಜ್ಯ ) ಜಿಲ್ಲೆ

ಗುಣಮಟ್ಟದ ವಿದ್ಯುತ್ ಗೆ ಆಗ್ರಹಿಸಿ ರೈತರಿಂದ ಕೆ.ಇ.ಬಿ ವೃತ್ತ ಕಚೇರಿಗೆ ಮುತ್ತಿಗೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬರಗಾಲದಿಂದ ತತ್ತರಿಸಿರುವ ರೈತರ ಜೀವನದ ಜೊತೆ ರಾಜ್ಯ ಸರ್ಕಾರ ಚೆಲ್ಲಾಟ |

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯ ರೈತರಿಗೆ ಗುಣಮಟ್ಟದ ಹಾಗೂ ಸಮರ್ಪಕ ವಿದ್ಯುತ್ ಪೂರೈಸುವುದು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ವಿಜಯಪುರದ ಹೆಸ್ಕಾಂನ ಕಾರ್ಯ ಮತ್ತು ಪಾಲನೆ ವೃತ್ತ ಕಚೇರಿಯ ಅಧೀಕ್ಷಕ ಅಭಿಯಂತರ ಸಿದಣ್ಣ ಬೆಂಜಿಗೇರಿ ಅವರ ಮೂಲಕ ಹುಬ್ಬಳ್ಳಿಯ ಹೆಸ್ಕಾಂ ಎಂ.ಡಿ, ರಾಜ್ಯದ ಮುಖ್ಯಮಂತ್ರಿಗಳಿಗೆ ಹಾಗೂ ರಾಜ್ಯದ ಇಂಧನ ಸಚಿವರಿಗೆ ಮನವಿ ಸಲ್ಲಿಸಿ ಬೇಸಿಗೆಯಲ್ಲಿ ರೈತರಿಗೆ ಯಾವುದೇ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಯಿತು.
ಹಸಿರು ಸೇನೆಯ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಅವರು ಮಾತನಾಡುತ್ತಾ, ಬಿರು ಬಿಸಿನ ಬರಗಾಲದಿಂದ ತತ್ತರಿಸಿರುವ ಜಿಲ್ಲೆಯ ರೈತರಿಗೆ ಒಂದೆಡೆ ನೀರಿನ ಸಮಸ್ಯೆಯಾದರೆ ಈಗ ವಿದ್ಯುತ್ ಇಲಾಖೆಯ ಕಣ್ಣಾಮುಚ್ಚಾಲೆ ಹಾಗೂ ಕಳಪೆಮಟ್ಟದ ವಿದ್ಯುತ್ ವಿತರಣೆಯಿಂದಾಗಿ ಅಡಚಣೆ ಉಂಟಾಗುತ್ತಿದೆ, ತೋಟದ ವಸ್ತಿಗಳಲ್ಲಿ ವಾಸಿಸುವ ರೈತರ ಮಕ್ಕಳಿಗೆ ಪರೀಕ್ಷೆಗಳು ಹತ್ತಿರ ಬಂದಿರುವುದರಿಂದ ಅಭ್ಯಾಸ ಮಾಡುವುದಾದರು ಹೇಗೆ, ಹುಳ ಹುಪ್ಪಡಿ, ಕಾಡು ಪ್ರಾಣಿಗಳಿಂದ ಜೀವ ಭಯದಲ್ಲಿ ರೈತರಿದ್ದಾರೆ. ರೈತರ ಪಂಪಸೆಟ್‌ಗಳಿಗೆ ಹಗಲು ೧೨ ಘಂಟೆ ತ್ರೀಫೆಸ್ ವಿದ್ಯುತ್ ನೀಡಬೇಕು ಹಾಗೂ ರಾತ್ರಿಯಿಡಿ ಮೊದಲಿನಂತೆ ಸಿಂಗಲ್ ಫೆಸ್ ವಿದ್ಯುತ್ ನೀಡಬೇಕು, ಈ ವೇಳೆ ಅವಶ್ಯಕತೆ ಇರುವ ರೈತರು ಕೃಷಿ ಪಂಪಸೆಟ್‌ಗಳನ್ನು ಪ್ರಾರಂಭಿಸುವಂತೆ ಅನುಕೂಲ ಮಾಡಿಕೊಡಬೇಕು,
ರೈತರ ಐ.ಪಿ ಸೆಟ್‌ಗಳಿಗೆ ಆಧಾರ ಕಾರ್ಡ ಜೋಡಣೆ, ಸ್ವಯಂ ವೆಚ್ಚ ಯೋಜನೆ ಜಾರಿ ಮಾಡುತ್ತಿರುವುದು ತೀರಾ ಖಂಡನೀಯ ವಿಷಯ ಒಬ್ಬ ಸಣ್ಣ ರೈತ ಐ.ಪಿ ಸೆಟ್‌ಗಗಿ ೩-೪ ಲಕ್ಷ ಹಣ ಖರ್ಚು ಮಾಡಬೇಕಾಗುತ್ತದೆ ರಾಜ್ಯ ಸರ್ಕಾರದ ಇದರ ಹಿಂದಿನ ಉದ್ದೇಶವೇ ವಿದ್ಯುತ್ ಇಲಾಖೆಯನ್ನು ಖಾಸಗಿಕರಣ ಮಾಡಿ ರೈತರನ್ನು ಒಕ್ಕಲೇಬ್ಬಿಸುವ ಹುನ್ನಾರವಾಗಿದೆ. ಇದನ್ನು ಕೂಡಲೇ ಕೈಬಿಡಬೇಕು, ಇದನ್ನು ಆಗಲು ರೈತರು ಬಿಡುವುದಿಲ್ಲ ಎಂದರು.
ಕೋಲಾರ ತಾಲೂಕಾ ಅಧ್ಯಕ್ಷ ಸೋಮು ಬಿರಾದಾರ ಮಾತನಾಡುತ್ತಾ ರೈತರೆಲ್ಲರು ಆರ್.ಆರ್ ನಂಬರ ಮಾಡಿಕೊಂಡು ಕೃಷಿ ಮಾಡುವ ಸ್ಥಿತಿಯಲ್ಲಿ ನಮ್ಮ ದೇಶದ ಯಾವ ರೈತರು ಸಿದ್ಧರಿಲ್ಲ ಅದು ಸಾಧ್ಯವೂ ಇಲ್ಲಾ, ನೆರೆಯ ಕೆಲವೊಂದು ರಾಜ್ಯದಲ್ಲಿ ರೈತರಿಗೆ ೨೪ ಘಂಟೆ ಉಚಿತ ವಿದ್ಯುತ್ ವಿತರಣೆ ಮಾಡುತ್ತಿರುವುದು ನೊಡಿಕೊಂಡು ನಮ್ಮ ರಾಜ್ಯದಲ್ಲಿ ೨೪ ಉಚಿತ ವಿದ್ಯುತ್ ಕೊಡಬೇಕು, ರಾಜ್ಯ ಸರ್ಕಾರ ರೈತ ವಿರೋಧಿ ನೀತಿಯನ್ನ ಅನುಸರಿಸುತ್ತಿದೆ ಇದು ಸರಿಯಲ್ಲ, ಈ ಕುರಿತು ಮುಖ್ಯಮಂತ್ರಿ ಹಾಗೂ ವಿದ್ಯುತ್ ಸಚಿವರು ಚರ್ಚೆ ಮಾಡಿ ರೈತಪರ ನಿರ್ಣಯ ಕೈಗೊಳ್ಳಬೇಕು, ರೈತರಿಗೆ ಸರಿ ವಿದ್ಯುತ್ ಬರದಿದ್ದರೆ ರಾಜ್ಯ ವ್ಯಾಪಿ ಹೋರಾಟ ಮಾಡಬೇಕಾಗುತ್ತದೆ ಎಂದರು.
ವಿಜಯಪುರ ತಾಲೂಕಾ ಅಧ್ಯಕ್ಷ ಮಹಾದೇವಪ್ಪ ತೇಲಿ ಮಾತನಾಡುತ್ತಾ, ಜಿಲ್ಲೆಯಲ್ಲಿ ಬಹುತೇಕ ಕಡೆಗಳಲ್ಲಿ ಇನ್ನು ಹಳೆಯ ವಿದ್ಯುತ್ ಕಂಬ, ವಾಯರ್, ಹಾಗೂ ಟಿ,ಸಿಗಳಿದ್ದು ಇದರಿಂದ ಅನೇಕ ಅವಘಡಗಳಾಗಿ ಸಾಕಷ್ಟು ರೈತರಿಗೆ ನಷ್ಟವಾಗಿವೆ, ಕೂಡಲೇ ಇವುಗಳನ್ನು ಹೊಸದಾಗಿ ಬದಲಾಯಿಸಬೇಕು ಎಂದರು.
ರೈತರ ಟಿ.ಸಿ ಸುಟ್ಟರೆ ನಗರಗಳಲ್ಲಿ ೨೪ ಘಂಟೆ ಹಾಗೂ ಗ್ರಾಮೀಣ ಭಾಗದಲ್ಲಿಯ ರೈತರಿಗೆ ೭೨ ಘಂಟೆಗಳಲ್ಲಿ ಬದಲಾವಣೆ ಮಾಡಿ ಕೊಡಬೇಕಾದ ಇಲಾಖೆಯ ಕೆಲವೊಂದು ಅಧಿಕಾರಿಗಳ ಹಣದ ಬೇಡಿಕೆ ಇಡುತ್ತಿದ್ದು, ಇದು ನಿಲ್ಲಬೇಕು, ಗುತ್ತಿಗೆದಾರರು ಟಿ.ಸಿಗಳನ್ನು ಸರಿಯಾಗಿ ತುಂಬದೇ ಕಳಪೆ ಮಟ್ಟದ ಸಾಮಗ್ರಿಗಳನ್ನು ಬಳಸುತ್ತಿದ್ದು ಇದರಿಂದ ಟಿ.ಸಿ.ಗಳು ಪದೇ ಪದೇ ಸುಡುತ್ತಿವೆ, ಇದರ ಬಗ್ಗೆ ತನಿಖೆ ಆಗಬೇಕು ಹಾಗೂ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.
ಮುಖಂಡರಾದ ಅನಮೇಶ ಜಮಖಂಡಿ, ರಾಮಸಿಂಗ ರಜಪೂತ, ಸಿದ್ಧನಗೌಡ ಪಾಟೀಲ, ರಾಜೇಸಾ ನದಾಫ ಸೇರಿದಂತೆ ಅನೇಕರು ಮಾತನಾಡುತ್ತಾ ರಸ್ತೆಯ ಪಕ್ಕದಲ್ಲಿ ವಿದ್ಯುತ್ ಕಂಬ ಹಾಗೂ ಅದರ ಕೆಳಗೆ ನೆಡಸಿರುವ ಅರಣ್ಯ ಇಲಾಖೆಯ ಮರಗಳು ಒಂದಕ್ಕೊಂದು ತಾಗಿ ಅವಘಡಗಳು ಉಂಟಾಗಿವೆ, ಹೆಸ್ಕಾಂ ಇಲಾಖೆಯ ಎಲ್ಲಾ ಅಧಿಕಾರಿಗಳು ರೈತರೊಂದಿಗೆ ಸೌಜನ್ಯಯುತವಾಗಿ ಮಾತನಾಡಬೇಕು ಎಂದು ಆಗ್ರಹಿಸಿದರು.
ಈ ವೇಳೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮನಗೌಡ ಪಾಟೀಲ, ತಾಳಿಕೋಟಿ ಅಧ್ಯಕ್ಷರಾದ ಶ್ರೀಶೈಲ ವಾಲಿಕಾರ, ಬಬಲೇಶ್ವರ ಅಧ್ಯಕ್ಷರಾದ ಮಕಬುಲ ಕೀಜಿ ಇಂಡಿ ಅಧ್ಯಕ್ಷರಾದ ಎಂ.ಹೆಚ್. ಪೂಜಾರಿ, ರಾಮಚಂದ್ರ ಪಾಟೀಲ, ರಾಮಚಂದ್ರ ಬಡಿಗೇರ, ಸಂಗಪ್ಪ ಟಕ್ಕೆ, ಬಸವರಾಜ ನ್ಯಾಮಗೊಂಡ, ಸಂಪತ್ತ ಜಮಾದಾರ, ಶಾನೂರ ನಂದರಗಿ, ನಜೀರ ನಂದರಗಿ, ಚನ್ನು ಜಮಖಂಡಿ, ಬಸವರಾಜ ಮಸೂತಿ, ಕಲ್ಲಪ್ಪ ಪಾರಶೆಟ್ಟಿ, ಮಹಾಂತೇಶ ಮಮದಾಪುರ, ಮಲ್ಲಿಕಾರ್ಜುನ ಘೋಡೆಕಾರ ಸೇರಿದಂತೆ ಅನೇಕರು ಇದ್ದರು.

BIJAPUR NEWS public public news udaya rashmi Udayarashmi today newspaper
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 26, 2026
    In ದಿನಪತ್ರಿಕೆ
  • ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ
    In (ರಾಜ್ಯ ) ಜಿಲ್ಲೆ
  • ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೨೬ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದ ಜಿಪಂ ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
  • ಸೇತುವೆ ಕಾರ್ಯ: ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆ ತಲೆದೋರದಂತೆ ಮುಂಜಾಗೃತೆವಹಿಸಿ
    In (ರಾಜ್ಯ ) ಜಿಲ್ಲೆ
  • ಕ್ಷಯರೋಗ ಗುಣವಾಗಬಹುದಾದ ಕಾಯಿಲೆ :ಡಾ.ರಾಜೇಶ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.