ಉದಯರಶ್ಮಿ ದಿನಪತ್ರಿಕೆ
ಅಫಜಲಪುರ: ತ್ರಿಪದಿಗಳ ಮೂಲಕ ಸಮಾಜದಲ್ಲಿರುವ ಅಂಕುಡೊಂಕುಗಳನ್ನು ತಿದ್ದುವ ಮೂಲಕ ಜನ ಸಾಮಾನ್ಯರನ್ನು ಎಚ್ಚರಿಸಿದ ಸರ್ವಜ್ಞ ಕವಿಯ ಅದರ್ಶಗಳು ಪ್ರತಿಯೊಬ್ಬರು ಪಾಲಿಸಬೇಕು ಎಂದು ಜ್ಞಾನ ಭಾರತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮಹಾಂತೇಶ ಡಿ.ಪಾಟೀಲ ಹೇಳಿದರು.
ಅವರು ತಾಲೂಕಿನ ಮಲ್ಲಾಬಾದ ಗ್ರಾಮದ ಸಿದ್ಧಾರ್ಥ ಪ್ರೌಢ ಶಾಲೆಯಲ್ಲಿ ತ್ರಿಪದಿ ಬ್ರಹ್ಮ ಸರ್ವಜ್ಞ ಕವಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸರ್ವಜ್ಞ ಕವಿಯಲ್ಲಿರುವ ಅಪಾರ ಪಾಂಡಿತ್ಯ ಹಾಗೂ ಜ್ಞಾನ ಭಂಡಾರದಿಂದ ಜಗತ್ತಿಗೆ ಪರಿಚಯಿಸಿಕೊಂಡಿದ್ದಾನೆ. ಹೀಗಾಗಿ ಸರ್ವಜ್ಞ ಕವಿಯ ಸಾಹಿತ್ಯವನ್ನು ಎಂಥಹವರು ಕೂಡಾ ಓದಿ ಅರ್ಥೈಸಿಕೊಳ್ಳುವ ಜೊತೆಗೆ ಎಂದೆಂದಿಗೂ ಮಾರ್ಗದರ್ಶಿಯಾಗಿರಲಿದೆ ಎಂದ ಅವರು ವಿದ್ಯಾರ್ಥಿಗಳು ಕೂಡಾ ನಿರಂತರ ಓದಿನ ಮೂಲಕ ತಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸುವ ಕೆಲಸ ಮಾಡಬೇಕು ಈ ನಿಟ್ಟಿನಲ್ಲಿ ಶಿಕ್ಷಕ ಸಿಬ್ಬಂದಿಗಳು ಸಾಧಕ ಮಹಾನ್ ವ್ಯಕ್ತಿಗಳ ಚರಿತ್ರೆ ಹೇಳಿಕೊಡುವ ಕೆಲಸ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಶ್ರೀ ಹರ್ಷವರ್ಧನ ಡಿಗ್ರಿ ಕಾಲೇಜಿನ ಪ್ರಾಚಾರ್ಯ ಡಾ.ಸಂಗಣ್ಣ ಎಂ.ಸಿಂಗೆ, ಸಿದ್ಧಾರ್ಥ ಪ್ರೌಢ ಶಾಲೆಯ ಮುಖ್ಯಗುರು ಸಿದ್ದರಾಮ ಪಾಟೀಲ ಸಿಬ್ಬಂದಿಗಳಾದ ಸಿದ್ದಯ್ಯ ಸ್ವಾಮಿ ಸಂಗಾಪುರ, ಪವನಕುಮಾರ ಪಾಟೀಲ, ಸಿದ್ದಯ್ಯ ಹಿರೇಮಠ, ಶೀವಲೀಲಾ ಖೈರಾಟ, ಸಾವಿತ್ರಿ ಪೋದ್ದಾರ, ಪ್ರೇಮಾ ಬೆಳಗೇರಿ, ಕಲ್ಪನಾ ಭಾವೆ, ಆಶಾರಾಣ ಗಂಗನಹಳ್ಳಿ, ಬಾಬುಗೌಡ ಪಾಟೀಲ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

