Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಂದಗಿ ಸಾರಂಗಮಠದ ಉತ್ತರಾಧಿಕಾರಿಯಾಗಿ ಡಾ.ವಿಶ್ವಪ್ರಭುದೇವ ಶ್ರೀ ನೇಮಕ
(ರಾಜ್ಯ ) ಜಿಲ್ಲೆ

ಸಿಂದಗಿ ಸಾರಂಗಮಠದ ಉತ್ತರಾಧಿಕಾರಿಯಾಗಿ ಡಾ.ವಿಶ್ವಪ್ರಭುದೇವ ಶ್ರೀ ನೇಮಕ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಪಟ್ಟಣದ ಸಾರಂಗ ಮಠದ ಮುಂದಿನ ಉತ್ತರಾಧಿಕಾರಿಯಾಗಿ
ಜಮಖಂಡಿ ತಾಲೂಕಿನ ಕೊಣ್ನೂರು ಗ್ರಾಮದ ಹೊರಗಿನ ಕಲ್ಯಾಣಮಠದ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ನೇಮಕಗೊಂಡಿದ್ದಾರೆ.
ಪಟ್ಟಣದ ಸಾರಂಗಮಠದಲ್ಲಿ ಶ್ರೀ ಗುಡ್ಡಾಪೂರ ದಾನಮ್ಮದೇವಿ ದೇವಸ್ಥಾನದ ಮೊದಲ ವರ್ಷದ ವರ್ಷಾಚರಣೆ ಕಾರ್ಯಕ್ರಮದಲ್ಲಿ ಅಫ್ಜಲಪೂರಿನ ಮಳೇಂದ್ರ ಶಿವಾಚಾರ್ಯರು ಈ ಘೋಷಣೆಯನ್ನು ಮಾಡಿದರು.
ಈ ವೇಳೆ ಅವರು ಮಾತನಾಡಿ, ಸಿಂದಗಿ ಸಾರಂಗಮಠಕ್ಕೆ ತನ್ನದೇ ಆದ ಭವ್ಯ ಇತಿಹಾಸವಿದೆ. ಗುರುಪರಂಪರೆಯ ಮಠವಾದ ಸಾರಂಗಮಠ ಜಾತಿಧರ್ಮವನ್ನು ಮಿರಿದ ಮಠಗಳಲ್ಲಿ ಒಂದಾಗಿದೆ. ಶಿಕ್ಷಣ, ಧರ್ಮ ಪ್ರಸಾರ, ಸಾಮಾಜಿಕ ಸೇವೆ, ಕೃಷಿ, ಆಧ್ಯಾತ್ಮವನ್ನು ನಿತ್ಯ ಸಮಾಜಕ್ಕೆ ನೀಡುವ ಮೂಲಕ ಸಾಮಾಜಿಕ ಸೇವೆ ಮೆರೆಯುತ್ತಿದೆ. ಲಿಂ. ಪೂಜ್ಯ ಚನ್ನವೀರ ಸ್ವಾಮಿಗಳು ಮಠವನ್ನು ಬೆಳೆಸುವುದರ ಜೊತೆಗೆ ಈ ಭಾಗದ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಶಿಕ್ಷಣ ಸಂಸ್ಥೆಯನ್ನು ಕಟ್ಟಿದವರು ಪ್ರಸ್ತುತ ಪೀಠಾಧಿಪತಿಯಾಗಿರುವ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಮಠವನ್ನು ಬೆಳೆಸುವುದು ಜೊತೆಗೆ ಶಿಕ್ಷಣ ಸಂಸ್ಥೆಯನ್ನು ಉತ್ತರ ಕರ್ನಾಟಕದಲ್ಲಿ ಗುರುತಿಸುವಂತೆ ಮಾಡಿದ್ದಾರೆ. ಕೋಣ್ಣೂರಿನ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಜ್ಞಾನಿಗಳು, ವಿದ್ಯಾವಂತರು, ಧರ್ಮನಿಷ್ಠರು, ಶ್ರಮಜೀವಿಗಳು ಅಂತವರನ್ನು ಸಾರಂಗಮಠದ ೧೮ ನೇ ಉತ್ತರಾಧಿಕಾರಿಗಳನ್ನಾಗಿ ಮಾಡಿದ್ದು ಈ ಭಾಗದ ಜನತೆಗೆ ಸಂತಸ ತಂದಿದೆ ಎಂದರು.
ಈ ಸಂದರ್ಭದಲ್ಲಿ ಶಾಸಕ ಅಶೋಕ ಮನಗೂಳಿ, ಜಮಖಂಡಿ ಶಾಸಕ ಜಗದೀಶ ಗುಡಗುಂಡಿಮಠ ಮಾತನಾಡಿ, ಕೊಣ್ಣೂರಿನ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಸಿಂದಗಿ ಸಾರಂಗಮಠಕ್ಕೆ ಉತ್ತರಾಧಿಕಾರಿಗಳಾಗಿದ್ದು ಸಂತಸ ತಂದಿದೆ. ಸಾರಂಗಮಠ ಇಂದು ಹೆಮ್ಮರವಾಗಿ ಬೆಳೆದಿದೆ. ಈ ಮಠಕ್ಕೆ ಸಮರ್ಥ ಮತ್ತು ಸದ್ಗುಣ ಸಂಪನ್ನರಾದಂತವರು ಬೇಕಿತ್ತು. ಆ ಎಲ್ಲ ಗುಣಗಳು ಕೊಣ್ಣೂರಿನ ಪೂಜ್ಯರಲ್ಲಿ ಇವೆ ಎಂದ ಅವರು, ಮಠದ ಸದ್ಬಕ್ತರು ಡಾ. ಪ್ರಭುಸಾರಂಗದೇವ ಶಿವಾಚಾರ್ಯರ ಮೇಲೆ ಇಟ್ಟಂತ ಗೌರವ ನೂತನ ಶ್ರೀಗಳ ಮೇಲೆಯೂ ಇಡಬೇಕು ಎಂದರು.
ವೇದಿಕೆ ಮೇಲೆ ಗಿರಿಸಾರಗ ಶ್ರೀಗಳು, ಪಾಳಾದ ಶ್ರೀಗಳು, ಬಂಥನಾಳದ ಶ್ರೀಗಳು, ಬಿಲಕೇರುರ ಶ್ರೀಗಳು, ಜಮಖಂಡಿ ಶ್ರೀಗಳು, ಬೀಳಗಿ ಶ್ರೀಗಳು, ಆಲಮೇಲ ಶ್ರೀಗಳು, ಯಂಕಂಚಿ ಶ್ರೀಗಳು, ಕೆರುಟಗಿ ಶ್ರೀಗಳು, ಸಿಂದಗಿ ಶ್ರೀಗಳು, ಕೊಕಟನೂರ ಶ್ರೀಗಳು, ನಾದ ಶ್ರೀಗಳು, ಬೋರಗಿ ಶ್ರೀಗಳು ಮತ್ತು ಅಶೋಕ ವಾರದ, ಗಂಗಾಧರ ಜೋಗೂರ, ಅಶೋಕ ಮಸಳಿ, ವಿಶ್ವನಾಥ ಜೋಗೂರ, ಡಾ. ಅರವಿಂದ ಮನಗೂಳಿ, ಡಾ. ಶರಣಬಸವ ಜೋಗೂರ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಂತರ ನೂರಾರು ಮುತೈದಿಯರಿಗೆ ಉಡಿತುಂಬವ ಕಾರ್ಯಕ್ರಮ ನೆರವೇರಿತು.

” ನಾನು ಸಿಂದಗಿಯ ಸಾರಂಗಮಠಕ್ಕೆ ಹೆಚ್ಚು ಸಂಪರ್ಕದಲ್ಲಿದ್ದವನು. ಶ್ರೀಮಠ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಸಮರ್ಥ ಗುರುಗಳು ಅನೇಕ ಮಠಾಧೀಶರಿಗೆ ಮಾದರಿಯಾದವರು. ನಾನು ಮಠದ ಆಸ್ತಿ ನೋಡಿ ಇಲ್ಲಿ ಬಂದಿಲ್ಲ ಸಾರಂಗಮಠದ ಸದ್ಬಕ್ತರು ಮತ್ತು ಸಿಂದಗಿಯ ಜನತೆಯ ಪ್ರೀತಿಗೆ ನಾನು ಬಂದಿದ್ದೇನೆ. ಶ್ರೀಗಳು ಕಂಡ ಕನಸನ್ನು ಭಕ್ತಿ ಮತ್ತು ಶ್ರದ್ದೆಯಿಂದ ಮಾಡುವ ಮೂಲಕ ಈ ಮಠವನ್ನು ಇನ್ನೂ ಹೆಚ್ಚು ಸಮರ್ಥವಾಗಿ ಎಲ್ಲರ ಸಹಕಾರದಿಂದ ನಡೆಸಿಕೊಂಡು ಹೊಗುತ್ತೇನೆ.”

– ಡಾ.ವಿಶ್ವಪ್ರಭುದೇವ ಶಿವಾಚಾರ್ಯರು
ಸಿಂದಗಿ ಸಾರಂಗಮಠದ ನೂತನ ಉತ್ತರಾಧಿಕಾರಿ

“ಮಠದ ಎಲ್ಲ ಭಕ್ತರ ಸಮಕ್ಷಮದಲ್ಲಿ ನೂತನ ಉತ್ತರಾಧಿಕಾರಿಗಳ ನೇಮಕವಾಗಿದ್ದು ನಾನು ಸಂತೋಷದಿಂದ ಸ್ವೀಕಾರ ಮಾಡುತ್ತೇನೆ. ಡಾ.ವಿಶ್ವಪ್ರಭುದೇವರು ಎಲ್ಲ ಜ್ಞಾನವನ್ನು ಬಲ್ಲವರು ಅವರು ಈ ಮಠವನ್ನು ಸರಿಯಾಗಿ ನಡೆಸಿಕೊಂಡು ಹೊಗುತ್ತಾರೆ. ಮಠದ ಭಕ್ತರು ನಮಹೆ ನೀಡಿದ ಸಹಕಾರ ಮತ್ತು ಪ್ರೀತಿಯನ್ನು ಅವರಿಗೂ ನೀಡಬೇಕು.”

– ಡಾ.ಪ್ರಭುಸಾರಂಗದೇವ ಶಿವಾಚಾರ್ಯರು
ಸಾರಂಗಮಠ, ಸಿಂದಗಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ

ಮಾ.೨೬ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ
    In (ರಾಜ್ಯ ) ಜಿಲ್ಲೆ
  • ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೨೬ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದ ಜಿಪಂ ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
  • ಸೇತುವೆ ಕಾರ್ಯ: ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆ ತಲೆದೋರದಂತೆ ಮುಂಜಾಗೃತೆವಹಿಸಿ
    In (ರಾಜ್ಯ ) ಜಿಲ್ಲೆ
  • ಕ್ಷಯರೋಗ ಗುಣವಾಗಬಹುದಾದ ಕಾಯಿಲೆ :ಡಾ.ರಾಜೇಶ
    In (ರಾಜ್ಯ ) ಜಿಲ್ಲೆ
  • ಕಾಲುವೆಗೆ ನೀರು ಬಿಡಲು ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.