ಉದಯರಶ್ಮಿ ದಿನಪತ್ರಿಕೆ
ಕೆಂಭಾವಿ: ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ಮೂಲಕ ಮಾದರಿ ಶಾಲೆಯನ್ನಾಗಿಸುವಲ್ಲಿ ಶಿಕ್ಷಕರ ಜೊತೆ ಜೊತೆಗೆ ಸಮುದಾಯದ ಸಹಭಾಗಿತ್ವ ಸಹಕಾರ ಅತ್ಯಗತ್ಯ ಎಂದು ಮಾಜಿ ಜಿಪಂ ಅಧ್ಯಕ್ಷೆ ಸಿದ್ದನಗೌಡ ಪೊಲೀಸ್ ಪಾಟೀಲ ಹೇಳಿದರು.
ಪಟ್ಟಣದ ಸರಕಾರಿ ಉರ್ದು, ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾಜ್ಞಾನ (ಎಫ್.ಎಲ್.ಎನ್) ಅಭಿಯಾನ ಮೇಳ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಭಾಗವಹಿಸಿ ಮಾತನಾಡಿದ ಅವರು ರಾಜ್ಯ ಸರ್ಕಾರ ಗುಣಮಟ್ಟದ ಶಿಕ್ಷಣ ಒದಗಿಸಲು ಸರಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ವಿಶೇಷ ಸೌಲಭ್ಯ ನೀಡುತ್ತಿದೆ ಎಂದವರು, ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸಲು ಪಾಲಕ ಪೋಷಕರು ಕೈಜೋಡಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಸ್. ಡಿ. ಎಮ್. ಸಿ ಅಧ್ಯಕ್ಷ ನೂರುದ್ದೀನ್ ನಾಶಿ ಸರ್ಕಾರಿ ಶಾಲೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಉಚಿತವಾಗಿ ಪಠ್ಯಪುಸ್ತಕ ಸಮವಸ್ತ್ರ, ಬೂಟು, ಮಧ್ಯಾಹ್ನದ ಬಿಸಿಯೂಟ ಅನುಷ್ಠಾನಕ್ಕೆ ತಂದಿದ್ದು, ಪಾಲಕರು ಸರ್ಕಾರಿ ಶಾಲೆಗಳ ಉಳಿಸಿ ಬೆಳೆಸಲು ಮುಂದಾಗಬೇಕು ಎಂದರು.
ಇದೇ ವೇಳೆ ಪುರಸಭೆ ಅಧ್ಯಕ್ಷ ರಹಿಮಾನ್ ಪಟೇಲ್ ಯಲ್ಗೋಡ್, ಉಪಾಧ್ಯಕ್ಷ ಶಿವಪ್ಪ ಕಂಬಾರ, ಪಿಎಲ್ ಡಿ ಬ್ಯಾಂಕ್ ನಿರ್ದೇಶಕ ವಾಮನರಾವ್ ದೇಶಪಾಂಡೆ, ಆಶ್ರಯ ಕಮಿಟಿ ಅಧ್ಯಕ್ಷ ಶರಣಬಸವ ಡಿಗ್ಗಾವಿ, ಖಾಜಾ ಪಟೇಲ್ ಕಾಚೂರ, ರಫೀಕ ಹುಸೇನ್, ಸಾಹೇಬಲಾಲ್ ಆಂದೆಲಿ, ಮಹಿಬೂಬ್ ದಫೇದಾರ್, ಸೈಯದ್ ಹುಸೇನ್, ಸಿ. ಆರ್. ಪಿ ಬಂದೇನವಾಜ್ ನಾಲತವಾಡ, ಅಜಿಮ್ ಪ್ರೇಮ್ ಜೀ ಫೌಂಡೇಶನ್ ಮುಖ್ಯಸ್ಥ ಇಲ್ಯಾಸ್, ಗಾಲೀಬಖಾನ, ನಯುಮ್ ಖಾಜಿ, ಬಂದೇನವಾಜ್ ಕಡಿಮನಿ, ಖಾಜಾಹುಸೇನ್ ನಾಶಿ, ಮುರ್ತುಜಾ ಹುಣಚ್ಯಾಳ, ಹಸನ್ ಮೇಸ್ತ್ರಿ, ಶಿಕ್ಷಕಿ ಸಮೀನಾ ಬೇಗಂ, ಅತಿಥಿ ಶಿಕ್ಷಕರು. ಹಾಗೂ ಶಾಲಾ ಮಕ್ಕಳು ಮತ್ತು ಪಾಲಕರು ಹಾಜರಿದ್ದರು.ತೈಸಿನ್ ನಾಲತವಾಡ ನಿರೂಪಿಸಿದರು, ಶಕೀಲಾ ಬೇಗಂ ವಂದಿಸಿದರು,
ನಂತರ ಮಕ್ಕಳಿಂದ ಮೂಡಿ ಬಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರ ಕಣ್ಮನ ಸೆಳೆದವು, ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಗಣ್ಯರು ಬಹುಮಾನ ವಿತರಿಸಿ ಅಭಿನಂದಿಸಿದರು.

