ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ತೋಟಗಾರಿಕೆ ಇಲಾಖೆ ವತಿಯಿಂದ ತೋಟಗಾರಿಕೆ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ೨೦೨೫-೨೬ನೇ ಸಾಲಿಗೆ ೧೦ ತಿಂಗಳ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಳಗಾವಿ ಜಿಲ್ಲೆಯ ಹಿಡಕಲ್ ಡ್ಯಾಂನ ತೋಟಗಾರಿಕಾ ತರಬೇತಿ ಕೇಂದ್ರದಲ್ಲಿ ತರಬೇತಿ ಆಯೋಜಿಸಲಾಗಿದೆ.
ಎಸ್ಎಸ್ಎಲ್ಸಿ ಉತ್ತೀರ್ಣರಾದ ಹಾಗೂ ಸ್ವಂತ ಜಮೀನು ಹೊಂದಿರುವ ಹಾಗೂ ತರಬೇತಿ ಪಡೆಯಲಿಚ್ಛಿಸುವವರು ಅರ್ಜಿಗಳನ್ನು ನಗರದ ಹಳೆಯ ಪ್ರವಾಸಿ ಮಂದಿರದಲಿÀ ಪ್ರವಾಸಿ ಪ್ಲಾಜಾದಲ್ಲಿರುವ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು (ರಾಜ್ಯ ವಲಯ) ಕಚೇರಿಗೆ ಅಥವಾ www.horticulture.kar.nic.in ªÉ¨ÉìöÊnಮೂಲಕ ಡೌನ್ಲೋಡ್ ಏಪ್ರಿಲ್ ೦೧ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಏಪ್ರಿಲ್ ೮ರಂದು ಬೆಳಿಗ್ಗೆ ೧೦ಗಂಟೆಗೆ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು (ರಾಜ್ಯ ವಲಯ) ಕಚೇರಿಯಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗುವಂತೆಯೂ, ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮೊ: ೮೯೭೧೫೧೨೨೮೬ ಮತ್ತು ೯೩೮೦೦೯೮೧೦೩ ಸಂಪರ್ಕಿಸುವಂತೆ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
