Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಲಸಂಪನ್ಮೂಲ ಸಚಿವ ಹಾಗೂ ಮುಖ್ಯಮಂತ್ರಿ ಪ್ರತಿಕೃತಿ ದಹಿಸಿ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಜಲಸಂಪನ್ಮೂಲ ಸಚಿವ ಹಾಗೂ ಮುಖ್ಯಮಂತ್ರಿ ಪ್ರತಿಕೃತಿ ದಹಿಸಿ ಪ್ರತಿಭಟನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತೆಲಂಗಾಣಕ್ಕೆ ಆಲಮಟ್ಟಿ ಜಲಾಶಯದಿಂದ ೧.೨೭ ಟಿ.ಎಂ.ಸಿ. ನೀರನ್ನು ಹರಿಬಿಟ್ಟ ರಾಜ್ಯ ಸರ್ಕಾರದ ನಡೆಗೆ ರೈತ ಸಂಘ ಖಂಡನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ತೆಲಂಗಾಣ ರಾಜ್ಯದ ರಂಗಾರೆಡ್ಡಿ ಜಿಲ್ಲೆಯ ಜುರಾಲಾ ಆಣೆಕಟ್ಟಿಗೆ ಆಲಮಟ್ಟಿ ಲಾಲಬಹಾದ್ದೂರ ಶಾಸ್ತ್ರಿ ಜಲಾಶಯದಿಂದ ೧.೨೭ ಟಿ.ಎಂ.ಸಿ. ನೀರನ್ನು ಹರಿಬಿಟ್ಟು ಅವಳಿ ಜಿಲ್ಲೆಯ ರೈತರ ಬದುಕನ್ನು ಹಾಳು ಮಾಡಲು ಹೊರಟಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಹಾಗೂ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿ ಶಂಖ ವಾದ್ಯ ಮೊಳಗಿಸಿದರು.
ಶುಕ್ರವಾರದಂದು ವಿಜಯಪುರ ನಗರದ ಅಂಬೇಡ್ಕರ ವೃತ್ತದಲ್ಲಿ ಜಮಾಯಿಸಿದ ಅಖಂಡ ಕರ್ನಾಟಕ ರೈತ ಸಂಘದ ಕಾರ್ಯಕರ್ತರು ರೈತ ವಿರೋಧಿ ರಾಜ್ಯ ಸರ್ಕಾರದ ಜಲಸಂಪನ್ಮೂಲ ಸಚಿವರ ವಿರುದ್ಧ ಹಾಗೂ ಮುಖ್ಯಮಂತ್ರಿ ವಿರುದ್ಧ ಘೋಷಣೆಗಳನ್ನು ಕೂಗುತ್ತ ಅವರ ಪ್ರತಿಕೃತಿಗಳನ್ನು ದಹಿಸಿ ಸರ್ಕಾರ ವಿರುದ್ಧ ಆಕ್ರೋಶ ಹೊರ ಹಾಕಿದರು.
ಈ ಸಂದರ್ಭದಲ್ಲಿ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಅವಳಿ ಜಿಲ್ಲೆಯ ರೈತರ ಬದುಕನ್ನು ಕಿತ್ತುಕೊಂಡು ತೆಲಂಗಾಣ ರಾಜ್ಯಕ್ಕೆ ನೀರು ಹರಿಸಿ ತೆಲಂಗಾಣ ರಾಜ್ಯದ ರೈತರಿಗೆ ಹಾಗೂ ಜನಸಾಮಾನ್ಯರಿಂದ ಶಬ್ಬಾಶಗಿರಿ ಪಡೆದುಕೊಳ್ಳಲು ನೀರು ಹರಿಬಿಟ್ಟಿದ್ದಾರೆ. ಇದನ್ನು ಖಂಡಿಸಿ ಪ್ರತಿಕೃತಿ ದಹಿಸಿದ ನಂತರ ನಮ್ಮ ರೈತರ ಪಾಲಿಕೆ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರು ಇಂದಿನಿಂದ ನಮ್ಮ ಪಾಲಿಗೆ ಸತ್ತು ಹೋಗಿದ್ದಾರೆ ಎಂದು ಆಕ್ರೋಶಭರಿತರಾಗಿ ಹೋಳಿ ಹಬ್ಬ ಇನ್ನು ಮುಂದೆ ಇರುವಾಗಲೇ ಈಗಲೇ ನಮಗೆ ಶಂಖವಾದ್ಯ ಮೊಳಗಿಸಲು ಸರ್ಕಾರ ಎಡೆಮಾಡಿಕೊಟ್ಟಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಶಂಖವಾದ್ಯ ಮೊಳಗಿಸಿದರು.
ನಮಗೆ ಕುಡಿಯಲು ನೀರಿಲ್ಲ. ಈ ಸದ್ಯ ಆಲಮಟ್ಟಿ ಆಣೆಕಟ್ಟಿನಲ್ಲಿ ಕೇವಲ ೩೩ ಟಿಎಂಸಿ ಮಾತ್ರ ನೀರು ಉಳಿದಿವೆ. ಇದರಲ್ಲಿ ಕೈಗಾರಿಕೆ ಉದ್ದೇಶಕ್ಕೆ ಜಲಚರ, ಜನ ಹಾಗೂ ಜಾನುವಾರುಗಳಿಗೆ ಹಾಗೂ ಜಿಲ್ಲೆಯ ರೈತರುಗಳಿಗೆ ನೀರು ಮೀಸಲಿರಿಸಬೇಕು. ತೆಲಂಗಾಣ ಸರ್ಕಾರವನ್ನು ಮೆಚ್ಚಿಸಲು ಒಂದೇ ಪಕ್ಷದ ಮುಖಾ ನೋಡಿ ನೀರು ಹರಿಸಿ ನಮ್ಮ ಜಿಲ್ಲೆಯ ರೈತರಿಗೆ ಘೋರಿ ತೋಡಲು ಹೊರಟಿದೆ. ಈ ಹಿಂದೆ ನ್ಯಾಯಮೂರ್ತಿ ಬ್ರಿಜೆಶ್ ಕುಮಾರ ನೇತೃತ್ವದ ನ್ಯಾಯಾಧೀಕರಣ ಆಲಮಟ್ಟಿ ಜಲಾಶಯದ ನೀರಿನ ಮಟ್ಟವನ್ನು ೫೨೪.೨೫೬ ಕ್ಕೆ ನೀರು ನಿಲ್ಲಿಸಲು ಅನುಮತಿ ಕೊಟ್ಟಾಗ ಸುಮ್ಮನಿರದ ತೆಲಂಗಾಣ ಸರ್ಕಾರ ಟ್ರಿಬ್ಯೂನಲ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿ ಆಣೆಕಟ್ಟಿನ ನೀರಿನ ಮಟ್ಟ ಎತ್ತರಿಸಲು ತಡೆಯಾಜ್ಞೆ ತಂದು ನಮ್ಮ ರೈತರನ್ನು ಹಾಳುಮಾಡಿದೆ. ಈಗ ಅವರಿಗೆ ಆಲಮಟ್ಟಿ ನೀರಿನ ನೆನಪಾಗಿದೆ ಎಂದರು.
ನಂತರ ಪ್ರತಿಕೃತಿ ದಹಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಅಲ್ಲಿ ಕೂಡ ಪ್ರತಿಭಟನೆ ನಡೆಸಿ, ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರಿಗೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ಪಾಂಡು ಹ್ಯಾಟಿ, ಬಸವನ ಬಾಗೇವಾಡಿ ತಾಲೂಕಾ ಅಧ್ಯಕ್ಷ ಉಮೇಶ ವಾಲೀಕಾರ, ವಿಠ್ಠಲ ಬಿರಾದಾರ, ರಾಜೇಸಾಬ ವಾಲಿಕಾರ, ಗುರಲಿಂಗಪ್ಪ ಪಡಸಲಗಿ, ದಾವಲಸಾಬ ನದಾಫ, ಚನಬಸಪ್ಪ ಸಿಂಧೂರ, ಗಿರಮಲ್ಲಪ್ಪ ದೊಡಮನಿ, ಹಣಮಂತರಾಯ ಕಲಬುರ್ಕಿ, ಬಸವರಾಜ ಮಾಡ್ಯಾಳ, ಲಾಲಸಾಬ ಹಳ್ಳೂರ, ಶಿವಶರಣ ನಾಗರೆಡ್ಡಿ, ಆನಂದ ನಾಗರೆಡ್ಡಿ, ಸಾಹೇಬಗೌಡ ಹೊಸೂರ, ಮುದಕಪ್ಪಗೌಡ ಸರೂರ, ಪರಶುರಾಮ ಹೊಸೂರ, ಹಣಮಂತ ವಾಲೀಕಾರ, ಬಸವರಾಜ ನಾಗರೆಡ್ಡಿ, ಯಮನೂರಪ್ಪ ಮಾದರ, ಮಾರುತಿ ಹೂಗಾರ, ಸೋಮೇಶ ನಾಗರೆಡ್ಡಿ, ಹಣಮಂತರಾಯ ಹೂಗಾರ, ಶೇಖಪ್ಪ ಮಾದರ, ಶರಣು ವಾಲಿಕಾರ, ಕಿರಣ ನಾಟೀಕಾರ, ಗುರಲಿಂಗಯ್ಯ ತೆಗ್ಗಿನಮಠ, ಕಾಸೀನಾಥ ಬಿರಾದಾರ, ಮಡಿವಾಳಪ್ಪ ನಾಗರೆಡ್ಡಿ, ಪರಸು ಹೊಸೂರ, ಮಲಿಗೆಪ್ಪ ಸಾಸನೂರ, ಮಂಜುನಾಥ ಸಜ್ಜನ, ಶ್ರೀಶೈಲ ಹೊಸೂರ, ಶಿವು ನಾಗರೆಡ್ಡಿ, ಮಾರುತಿ ಹೂಗಾರ ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ

ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ

ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ

ಮಾ.೨೬ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರೀಡೆಯಿಂದ ಶಿಸ್ತು ಮತ್ತು ನಾಯಕತ್ವ ಗುಣ ಅಭಿವೃದ್ಧಿ
    In (ರಾಜ್ಯ ) ಜಿಲ್ಲೆ
  • ಕೆಜಿಐಎಸ್ ೨.೦ ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯತೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತೋಟಗಾರಿಕೆ ತರಬೇತಿಗೆ ರೈತರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೨೬ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಭೇಟಿ, ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಪರೀಕ್ಷಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದ ಜಿಪಂ ಸಿಇಒ ರಿಷಿ ಆನಂದ
    In (ರಾಜ್ಯ ) ಜಿಲ್ಲೆ
  • ಸೇತುವೆ ಕಾರ್ಯ: ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರಿನ ಸಮಸ್ಯೆ ತಲೆದೋರದಂತೆ ಮುಂಜಾಗೃತೆವಹಿಸಿ
    In (ರಾಜ್ಯ ) ಜಿಲ್ಲೆ
  • ಕ್ಷಯರೋಗ ಗುಣವಾಗಬಹುದಾದ ಕಾಯಿಲೆ :ಡಾ.ರಾಜೇಶ
    In (ರಾಜ್ಯ ) ಜಿಲ್ಲೆ
  • ಕಾಲುವೆಗೆ ನೀರು ಬಿಡಲು ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.