ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಕನ್ನಡಿಗರ ತಂಟೆಗೆ ಬಂದರೆ ಎಂಇಎಸ್ ಪುಂಡರನ್ನು ಬಿಡುವುದಿಲ್ಲ. ಬೆಳಗಾವಿ ನಮ್ಮದು. ಅವರ ಪುಂಡಾಟಿಕೆ ನಮ್ಮ ಮುಂದೆ ನಡೆಯಲ್ಲ. ಸಿಂದಗಿ-ಪುಣೆ ಬಸ್ ಹಾಗೂ ಕಲ್ಯಾಣ ಕರ್ನಾಟಕ ಬಸ್ಗಳ ಚಾಲಕರ ಮತ್ತ ನಿರ್ವಾಹಕರ ಮೇಲೆ ಹಲ್ಲೆ ಮಾಡಿರುವುದಲ್ಲದೆ ಬಸ್ಗಳಿಗೆ ಹಾನಿ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ, ಹಾಗೂ ಗೃಹ ಸಚಿವ ಪರಮೇಶ್ವರ್ ಅವರು ಹಲ್ಲೆ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಕರ್ನಾಟಕ ರಣಧೀರ ಪಡೆಯ ಉತ್ತರ ವಲಯ ಅಧ್ಯಕ್ಷ ಸಂತೋಷ ಮಣಿಗಿರಿ ಆಗ್ರಹಿಸಿದ್ದಾರೆ.
ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಪ್ರತಿಭಟನೆ ನಡೆಸಿ ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿ ಎಂಇಎಸ್ ಪುಂಡರು ಹಾಗೂ ಹಲ್ಲೆ ಮಾಡಿದವರ ವಿರುದ್ಧ ಧಿಕ್ಕಾರ ಕೂಗಿ ಮಾತನಾಡಿದ ಅವರು, ರಾಜ್ಯ ಸರ್ಕಾರಕ್ಕೆ ಕನ್ನಡದ ಅಭಿಮಾನ, ನೈತಿಕತೆ ಇದ್ದರೆ ಬಸ್ ನಿರ್ವಾಹಕರ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ಹಿಂಪಡೆಯಬೇಕು. ಸಿಪಿಐ ಕಲ್ಯಾಣಕುಮಾರ ಶೆಟ್ಟಿ ಅವರನ್ನು ಕೂಡಲೇ ಅಮಾನತು ಮಾಡಬೇಕು. ಓಂದು ವೇಳೆ ಓಲೈಕೆ ರಾಜಕಾರಣ ಮಾಡಿದರೆ ಪ್ರಸ್ತುತ ಬಿಜೆಪಿಗಾಗಿರುವ ಪರಿಸ್ಥಿತಿ ಮುಂಬರುವ ೨೦೨೮ರಲ್ಲಿ ನಿಮಗೆ ಕನ್ನಡಿಗರು ಪಾಠ ಕಲಿಸುತ್ತಾರೆ ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ಹರ್ಷವರ್ಧನ ಪೂಜಾರಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಅವರ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಕರ್ನಾಟಕ ರಣಧೀರ ಪಡೆಯ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಹಿಬೂಬ ಆಳಂದ, ರಹೀಮ ಕೊಗಟನೂರ, ಸಿದ್ದು ತಮದೊಡ್ಡಿ, ರಾಮು ಗುತ್ತೇದಾರ, ರವಿ ಶಿರವಾಳ, ಆನಂದ ಕುರಡಿ, ತಿರುಪತಿ ಬಂಕಲಗಿ, ಬಸನಗೌಡ ಇಟಗಿ, ಅಪ್ಪು ದೊಡ್ಡಮನಿ, ಅಜೀಜ ಆಳಂದ, ಹಣಮಂತ ಕುಂಬಾರ, ಸಲೀಂ ಕನ್ನೊಳ್ಳಿ, ಮಲ್ಲು ಡಂಬಳ, ಲಾಳಮೇಶ್ವರ ಚಾಂದಕವಟೆ, ದೇವೇಂದ್ರ ಗೌಂಡಿ, ಮುತ್ತು ಗೌಂಡಿ ಸೇರಿದಂತೆ ಪದಾಧಿಕಾರಿಗಳು ಇದ್ದರು.

