Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರಜಾಪ್ರಭುತ್ವ ಹಬ್ಬದಲ್ಲಿ ಭಾಗಿಯಾಗಿ, ಕಡ್ಡಾಯವಾಗಿ ಮತದಾನ ಮಾಡಿ :ಡಿಸಿ ದಾನಮ್ಮನವರ
(ರಾಜ್ಯ ) ಜಿಲ್ಲೆ

ಪ್ರಜಾಪ್ರಭುತ್ವ ಹಬ್ಬದಲ್ಲಿ ಭಾಗಿಯಾಗಿ, ಕಡ್ಡಾಯವಾಗಿ ಮತದಾನ ಮಾಡಿ :ಡಿಸಿ ದಾನಮ್ಮನವರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ 120 ಮೀಟರ್ ಧ್ವಜ್ ಪ್ರದರ್ಶನ-ಮಾನವ ಸರಪಳಿ ನಿರ್ಮಿಸಿ ಜಾಗೃತಿ

ವಿಜಯಪುರ: ಪ್ರಜಾಪ್ರಭುತ್ವ ಹಬ್ಬಕ್ಕೆ ಇನ್ನೂ ಕೇವಲ ಮೂರು ದಿನ ಮಾತ್ರ ಬಾಕಿಯಿದ್ದು, ಎಲ್ಲ ಅರ್ಹ ಮತದಾರರು ತಮ್ಮ ಪರಿವಾರದ ಅರ್ಹ ಮತದಾರರೊಂದಿಗೆ ಕಡ್ಡಾಯವಾಗಿ ಮತದಾನ ಕೇಂದ್ರಕ್ಕೆ ತೆರಳಿ ಮತದಾನ ಮಾಡುವಂತೆ ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಮನವಿ ಮಾಡಿಕೊಂಡರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಜಿಲ್ಲಾ ಸ್ವೀಪ್ ಸಮಿತಿ, ಸಹಯೊಗದಲ್ಲಿ ರವಿವಾರ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಮತದಾನ ಜಾಗೃತಿಗಾಗಿ ಹಮ್ಮಿಕೊಂಡ ಮಾನವ ಸರಪಳಿ ನಿರ್ಮಾಣ ಹಾಗೂ ವಿನೂತನವಾದ ಬೃಹತ್ ಪ್ರಮಾಣದ ಪ್ರಜಾಪ್ರಭುತ್ವದ ಹಬ್ಬ ಮೇ.10 ಮತದಾನ ದಿನ ಎಂಬ ಶೀರ್ಷಿಕೆಯಡಿಯ 120 ಮೀಟರ್ ಧ್ವಜ ಪ್ರದರ್ಶನಕ್ಕೆ ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಮಾತನಾಡಿ ಪ್ರಜಾಪ್ರಭುತ್ವ ಹಬ್ಬಕ್ಕೆ ಇನ್ನೂ ಕೇವಲ ಮೂರು ದಿನ ಮಾತ್ರ ಬಾಕಿಯಿದ್ದು, ಈಗಾಗಲೇ ಮತದಾನಕ್ಕೆ ಬೇಕಾದ ಎಲ್ಲ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಜೊತೆಗೆ ಮತಗಟ್ಟೆಗಳನ್ನು ಶೃಂಗಾರ ಮಾಡಿ, ಮತದಾರರನ್ನು ಆಕರ್ಷಿಸುವಂತೆ ಸಿದ್ಧಪಡಿಸಲಾಗಿದೆ. ಎಲ್ಲ ಅರ್ಹ ಮತದಾರರರು ಪ್ರಜಾಪ್ರಭುತ್ವ ಹಬ್ಬದ ಸಡಗರದಲ್ಲಿ ಪಾಲ್ಗೊಂಡು ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸುವಂತೆ ಅವರು ಮನವಿ ಮಾಡಿಕೊಂಡರು.
ಜಿಲ್ಲಾ ಪೋಲಿಸ್ ವರೀಷ್ಠಾಧಿಕಾರಿಗಳಾದ ಹೆಚ್,ಡಿ,ಆನಂದಕುಮಾರ ಅವರು ಮಾತನಾಡಿ, ಮತದಾನದ ದಿನ ಹತ್ತಿರವಾಗಿದ್ದು ಎಲ್ಲ ಪ್ರಜೆಗಳು ನಿರ್ಭಿತಿಯಿಂದ ತಮ್ಮ ಪರಿವಾರದವರೊಡನೆ ಬಂದು ಮತ ಚಲಾಯಿಸಬೇಕು. ಮುಕ್ತ ನ್ಯಾಯಸಮ್ಮತ ಚುನಾವಣೆಗಾಗಿ ಎಲ್ಲ ಅಗತ್ಯ ವ್ಯವಸ್ಥೆ ಕೈಗೊಳ್ಳಲಾಗಿದ್ದು, ಯಾವುದೇ ಮತದಾರ ಮತದಾನದಿಂದ ವಂಚಿತವಾಗದೇ ಕಡ್ಡಾಯವಾಗಿ ಮತ ಚಲಾಯಿಸುವಂತೆ ಅವರು ಕರೆ ನೀಡಿದರು.

ನಗರದ ಗಾಂಧಿ ವೃತ್ತದಲ್ಲಿ ಮತದಾನ ಜಾಗೃತಿ ಕುರಿತು ಮಾನವ ಸರಪಳಿ ನಿರ್ಮಿಸಿ ಮತದಾರರನ್ನು ಆಕರ್ಷಿಸಲಾಯಿತು. ಒಂದು ಕಿಲೋ ಮೀಟರ್ ಉದ್ದದ ಧ್ವಜವನ್ನು ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಗಾಂಧಿ ವೃತ್ತದ ಮಾರ್ಗವಾಗಿ ಕಂದಗಲ್ಲ ಹಣಮಂತರಾಯ ರಂಗಮAದಿರದವರೆಗೆ ಸುಮಾರು 02 ಕಿಲೋ ಮೀಟರ್ ಜಾಥಾ ಸಂಚರಿಸಿ ಸಾರ್ವಜನಿಕರಿಗೆ ಮತದಾನದ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಸತ್ತಿಗೆ ಕುಣಿತ, ಕುದುರೆ ಕುಣಿತ, ನವಿಲು ಕುಣಿತ ಸೇರಿ ವಿವಿಧ ಕಲಾತಂಡಗಳು, ಮಹಿಳೆಯರ ಬೈಕ್ ರ‍್ಯಾಲಿ, ವಿದ್ಯುನ್ಮಾನ ಮತ ಯಂತ್ರಗಳ ಸ್ತಬ್ಧ ಚಿತ್ರ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಸೇರಿ 800ಕ್ಕೂ ಅಧಿಕ ಜನರು ಭಾಗವಹಿಸಿ, ಸಾರ್ವಜನಿಕರಿಗೆ ಮತದಾನ ಜಾಗೃತಿಯ ಕರ ಪತ್ರಗಳನ್ನು ಹಂಚುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲೆಯ ಎಂಟೂ ವಿಧಾನಸಭಾ ಮತಕ್ಷೇತ್ರಗಳ ಪೋಲಿಸ್ ವೀಕ್ಷಕರಾದ ಡಾ.ಬಿ.ನವೀನಕುಮಾರ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ ಸೇರಿದಂತೆ ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಸದಸ್ಯರು, ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ಸಮಾವೇಶ : ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಆರಂಭಗೊAಡ ಪ್ರಜಾಪ್ರಭುತ್ವದ ಹಬ್ಬ ಮೇ.10 ಮತದಾನ ದಿನ ಎಂಬ ಶೀರ್ಷಿಕೆಯಡಿಯ 120 ಮೀಟರ್ ಧ್ವಜ ಪ್ರದರ್ಶನ ಅಭಿಯಾನ ನಗರದ ಕಂದಗಲ್ ಹನುಮಂತರಾಯ ರಂಗಮAದಿರದ ಆವರಣದಲ್ಲಿ ಸಮಾವೇಶಗೊಂಡಿತು. ಈ ಸಂದರ್ಭದಲ್ಲಿ ಎಲ್ಲ ಅಧಿಕಾರಿ-ಸಿಬ್ಬಂದಿಗಳಿಗೆ ವಾರ್ತಾಧಿಕಾರಿ ಅಮರೇಶ ದೊಡಮನಿ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.

ಜಿಲ್ಲಾ ಪಂಚಾಯತ್ ಯೋಜನಾ ಉಪನಿರ್ದೇಶಕ ಎ.ಬಿ.ಅಲ್ಲಾಪುರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ್, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ರಾಜಶೇಖರ ಧೈವಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಸ್ವೀಪ್ ಸಮಿತಿ ಐಕಾನ್ ಸಹನಾ ಕೂಡಿಗನೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.

BIJAPUR NEWS dc danammanavar election udaya rashmi
Share. Facebook Twitter Pinterest Email Telegram WhatsApp
  • Website

Related Posts

ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!

ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ

ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ

ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಕಲಿ ಕ್ರಿಮಿನಾಶಕ ಔಷಧಿ ಉತ್ಪಾದಿಸುತ್ತಿದ್ದ ಈರ್ವರ ಬಂಧನ!
    In (ರಾಜ್ಯ ) ಜಿಲ್ಲೆ
  • ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ :ಬಿಜೆಪಿ ಮನವಿ
    In (ರಾಜ್ಯ ) ಜಿಲ್ಲೆ
  • ಸೆ.೧೪ ರಂದು ವಾರ್ಷಿಕ ಸರ್ವ ಸಾಧಾರಣ ಸಭೆ
    In (ರಾಜ್ಯ ) ಜಿಲ್ಲೆ
  • ಕ್ರೀಡಾಕೂಟ: ಬಾಲಭಾರತಿ ಶಾಲೆ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಕೀಳು ಮಟ್ಟದ ರಾಜಕೀಯಕ್ಕೆ ನಾಂದಿ ಹಾಡಿದ ಭೂಸನೂರ
    In (ರಾಜ್ಯ ) ಜಿಲ್ಲೆ
  • ಭಾರತ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿದ ಪ್ರಶಿಕ್ಷಣಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ನೆಚ್ಚಿನ ಶಿಕ್ಷಕಿಯ ವರ್ಗಾವಣೆಗೆ ಕಣ್ಣೀರಿಟ್ಟ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ರೈತರ ಬೇಡಿಕೆಯಂತೆ ಪರಿಹಾರ ದರ ನಿಗದಿಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಭೀಮಾ ನದಿಯಲ್ಲಿ ಮತ್ತೆ ಹೆಚ್ಚಾದ ಒಳ ಹರಿವು
    In (ರಾಜ್ಯ ) ಜಿಲ್ಲೆ
  • ಹಳ್ಳ ದಾಟಲು ಹರಸಾಹಸ ಪಟ್ಟ ಶಿಕ್ಷಕರು!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.