Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಇಒ ಆಗಿ ರಾಠೋಡ ಅಧಿಕಾರ ಸ್ವೀಕಾರ

ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯ ಮನವಿ

ಪಿಂಚಣಿಗೆ ಸಂಬಂಧಿಸಿದ ಬೇಡಿಕೆ ಈಡೇರಿಸಲು ನಿವೃತ್ತ ನೌಕರರ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನುಡಿದಂತೆ ನಡೆದ ಕಾಂಗ್ರೆಸ್ ಸರಕಾರ :ಕವಲಗಿ
(ರಾಜ್ಯ ) ಜಿಲ್ಲೆ

ನುಡಿದಂತೆ ನಡೆದ ಕಾಂಗ್ರೆಸ್ ಸರಕಾರ :ಕವಲಗಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ನುಡಿದಂತೆ ನಡೆದಿದೆ. ರಾಜ್ಯದ ಜನತೆ ಬದುಕು ಕಟ್ಟಿಕೊಳ್ಳಲಿ ಎಂಬ ಉದ್ದೇಶದಿಂದ ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದು ಸ್ವಾವಲಂಬಿ ಬದುಕು ಕಟ್ಟಿಕೊಳ್ಳುಲು ಸಹಕಾರಿಯಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶ್ರೀಶೈಲ ಕವಲಗಿ ಹೇಳಿದರು.
ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರಕಾರ ಅನುಷ್ಠಾನಗೊಳಿಸಿದ ಗ್ಯಾರಂಟಿ ಯೋಜನೆಗಳನ್ನು ಸಕಾಲದಲ್ಲಿ ಜನರಿಗೆ ತಲುಪುವಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಈ ವೇಳೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಂಭುಲಿಂಗ ಹಿರೇಮಠ ಮಾತನಾಡಿ, ಇಲಾಖೆಯಿಂದ ೨೭೨ ಪ್ರಕರಣಗಳು ಪೂರ್ಣಗೊಳಿಸಲಾಗಿದೆ. ೯ಪ್ರಕರಣ ಬಾಕಿಯಿವೆ. ಅವುಗಳನ್ನು ಈ ವಾರದಲ್ಲಿ ಪೂರ್ಣಗೊಳಿಸಲಾಗುವುದು ಎಂದರು. ಐಟಿ, ಜಿಎಸ್‌ಟಿ, ಹೊ ರೇಷನ್ ಕಾರ್ಡ್, ಆಧಾರ ಲಿಂಕ್ ಇಲ್ಲದೇ ಇರುವ ಒಟ್ಟು ೯ಅರ್ಜಿಗಳು ಬಾಕಿ ಉಳಿದಿವೆ. ಗೃಹಲಕ್ಷ್ಮೀಯಿಂದ ಬಂದ ಹಣದಿಂದ ಮಹಿಳೆಯರು ಹೂವಿನ ವ್ಯಾಪಾರ, ಚಹಾ ಅಂಗಡಿ, ಕಿರಾಣಿ ಅಂಗಡಿ, ಹೈನುಗಾರಿಕೆಗಳಂತಹ ಕಾರ್ಯಗಳಿಗೆ ಬಳಿಸಿಕೊಂಡು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ ಎಂದರು.
ಈ ವೇಳೆ ಸದಸ್ಯೆ ಸುನಂದಾ ಯಂಪೂರೆ ಮಾತನಾಡಿ, ಇಲ್ಲಿಯವರೆಗೆ ಅನೇಕ ಪ್ರಗತಿ ಪರಿಶೀಲನಾ ಸಭೆಗಳು ಜರುಗಿವೆ. ಪ್ರತಿ ಬಾರಿಯೂ ಎಲ್ಲ ಹಳ್ಳಿಗಳಲ್ಲಿ ಸರಿಯಾಗಿ ಅಕ್ಕಿ ಹಂಚಿಕೆಯಾಗುತ್ತಿಲ್ಲ. ಹಾಗೂ ಕೆಲವೇ ದಿನಗಳ ಅವಧಿಯಲ್ಲಿ ಮಾತ್ರ ಅಕ್ಕಿ ವಿತರಣೆ ಮಾಡುತ್ತಾರೆ. ಸರಿಯಾಗಿ ಸೂಚನಾ ಫಲಕ ಅಳವಡಿಸಿರುವದಿಲ್ಲ. ಆದ್ದರಿಂದ ಸರಕಾರದ ಆದೇಶದಂತೆ ೩೦ದಿನಗಳು ಸಹ ವಿತರಣೆ ಮಾಡಬೇಕು. ಆದರೆ ನ್ಯಾಯಬೆಲೆ ಅಂಗಡಿಕಾರರು ಮಾತ್ರ ಕಾಟಾಚಾರಕ್ಕೆ ಎರಡು ಮೂರು ದಿನಗಳ ಕಾಲ ಮಾತ್ರ ಹಂಚಿಕೆ ಮಾಡುತ್ತಿದ್ದಾರೆ. ಈ ಕುರಿತು ಪ್ರತಿ ಸಭೆಯಲ್ಲಿ ಅಧಿಕಾರಿಗಳಿಗೆ ನ್ಯಾಯಬೆಲೆಗಳಿಗೆ ಭೇಟಿ ನೀಡಬೇಕು ಎಂದು ಸೂಚಿಸಿದರು ಇಲಾಖೆಯ ಅಧಿಕಾರಿಗಳು ಭೇಟಿ ನೀಡದೆ ಸಭೆಯಲ್ಲಿ ಉಡಾಫೆ ಉತ್ತರ ನೀಡುತ್ತಿದ್ದಾರೆ. ಇದು ಸರಿಯಾದ ಕ್ರಮವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸದಸ್ಯ ಶರಣಬಸಪ್ಪ ಖಾನಾಪುರ, ರವೀಂದ್ರ ನಾಟೀಕಾರ ಹಾಗೂ ಮಹಮ್ಮದರಜತ ತಾಂಬೆ ಮಾತನಾಡಿ, ಆಹಾರ ಇಲಾಖೆಯಲ್ಲಿ ಆಗುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಈ ತಿಂಗಳು ೧೫ರೊಳಗಾಗಿ ನ್ಯಾಯಬೆಲೆ ಅಂಗಡಿಕಾರ ಸಭೆ ಕರೆಯಬೇಕು. ಇದಕ್ಕೆ ಪ್ರತಿಯಾಗಿ ಸದಸ್ಯರು ಆರಂಭವಾಗಿ ಎಷ್ಟು ದಿನಗಳು ಕಳೆದಿವೆ ಆದರೆ ನಿರೀಕ್ಷೆಗಗಿಂತ ನೋಂದಣಿ ಆಗದೆ ಇರುವುದು ಬೇಸರದ ಸಂಗತಿ. ಆದ್ದರಿಂದ ಗ್ರಾಮಗಳಲ್ಲಿ ಅಧಿಕಾರಿಗಳು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ವೇಳೆ ಸಾರಿಗೆ ಶಾಖಾ ವ್ಯವಸ್ಥಾಪಕ ರೇವಣಸಿದ್ದಪ್ಪ ಖೈನೂರ ಮಾತನಾಡಿ, ಶಕ್ತಿ ಯೋಜನೆ ೧೦೭ರಲ್ಲಿ ೧೦೨ ಬಸ್ ಗಳು ಕಾರ್ಯಾಚರಣೆ ಮಾಡುತ್ತಿವೆ. ಮಹಿಳಾ ಪ್ರಯಾಣಿಕರು ೩೭,೬೬,೨೧೧ ರೂ.ಗಳು ಜೀರೋ ಟಿಕೆಟ್‌ಲ್ಲಿ ದಾಖಲಾಗಿವೆ. ತಾಲೂಕಿನಲ್ಲಿ ೯ಹಳ್ಳಿಗಳಿಗೆ ಬಸ್ ಸಂಚಾರ ಇರಲಿಲ್ಲ. ಶಕ್ತಿ ಯೋಜನೆ ಜಾರಿಗೆ ಬಂದ ನಂತರ ಹೊಸದಾಗಿ ಬಸ್‌ಗಳು ಸಂಚರಿಸುತ್ತಿವೆ ಎಂದರು.
ಈ ವೇಳೆ ತಾಪಂ ಇಒ ರಾಮು ಅಗ್ನಿ, ಸದಸ್ಯರಾದ ಶಿವಾನಂದ ಹಡಪದ, ಮೋಹಸಿನ್ ಬೀಳಗಿ, ರುದ್ರಗೌಡ ಪಾಟೀಲ್, ಪರಶುರಾಮ ಗೌಂಡಿ, ಸಿದ್ದಲಿಂಗಪ್ಪ ಗುಂಡಾಪುರ, ಸಿದ್ರಾಮಪ್ಪ ಕಲ್ಲೂರ, ಶರಣಗೌಡ ಬಿರಾದಾರ ಸೇರಿದಂತೆ ಅನೇಕರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಇಒ ಆಗಿ ರಾಠೋಡ ಅಧಿಕಾರ ಸ್ವೀಕಾರ

ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯ ಮನವಿ

ಪಿಂಚಣಿಗೆ ಸಂಬಂಧಿಸಿದ ಬೇಡಿಕೆ ಈಡೇರಿಸಲು ನಿವೃತ್ತ ನೌಕರರ ಮನವಿ

ಖಾಯಂ ವೈದ್ಯರ ನೇಮಕಕ್ಕೆ ಆಗ್ರಹಿಸಿ ಕರ್ನಾಟಕ ಸೇನೆ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಇಒ ಆಗಿ ರಾಠೋಡ ಅಧಿಕಾರ ಸ್ವೀಕಾರ
    In (ರಾಜ್ಯ ) ಜಿಲ್ಲೆ
  • ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯ ಮನವಿ
    In (ರಾಜ್ಯ ) ಜಿಲ್ಲೆ
  • ಪಿಂಚಣಿಗೆ ಸಂಬಂಧಿಸಿದ ಬೇಡಿಕೆ ಈಡೇರಿಸಲು ನಿವೃತ್ತ ನೌಕರರ ಮನವಿ
    In (ರಾಜ್ಯ ) ಜಿಲ್ಲೆ
  • ಖಾಯಂ ವೈದ್ಯರ ನೇಮಕಕ್ಕೆ ಆಗ್ರಹಿಸಿ ಕರ್ನಾಟಕ ಸೇನೆ ಮನವಿ
    In (ರಾಜ್ಯ ) ಜಿಲ್ಲೆ
  • ನಿಮ್ಮ ಸಂಕಲ್ಪ ವಜ್ರದ ಹಾಗಿದ್ದರೆ..
    In ವಿಶೇಷ ಲೇಖನ
  • ಸರ್ಕಾರದ ಮೊಂಡುವಾದ ಜೇಡರ ದಾಸಿಮಯ್ಯಗೆ ದ್ರೋಹ ಮಾಡುವ ದಡ್ಡತನ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮಾರ್ಚ್ 25, 2026
    In ದಿನಪತ್ರಿಕೆ
  • ಆತ್ಮವಿಶ್ವಾಸ ಮತ್ತು ಧನಾತ್ಮಕ ಚಿಂತನೆಯಿಂದ ಭಯ ನಿವಾರಣೆ
    In (ರಾಜ್ಯ ) ಜಿಲ್ಲೆ
  • ನೂತನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಮಾ.26ಕ್ಕೆ ರಾಜ್ಯ ಬಜೆಟ್ ಅಧಿವೇಶನ ಮುಕ್ತಾಯ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.