ಬಂಜಾರಾ ಪ್ರೌಢ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ನಿಮಿತ್ತ ವಿಜ್ಞಾನ ವಸ್ತು ಪ್ರದರ್ಶನ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಕಸಿತ ಭಾರತಕ್ಕಾಗಿ ವಿಜ್ಞಾನ ಮತ್ತು ನಾವೀನ್ಯತೆಯಲ್ಲಿ ಜಾಗತಿಕ ನಾಯಕತ್ವಕ್ಕಾಗಿ ಭಾರತೀಯ ಯುವಕರನ್ನು ಸಬಲೀಕರಣಗೊಳಿಸುವುದು. ವಿದ್ಯಾರ್ಥಿಗಳನ್ನು ಪ್ರೇರೇಪಿಸಲು ಮತ್ತು ವೈಜ್ಞಾನಿಕ ಪ್ರಗತಿಯಲ್ಲಿ ಆಸಕ್ತಿಯನ್ನು ಉತ್ತೇಜಿಸಲು ವಿಜ್ಞಾನ ವಸ್ತು ಪ್ರದರ್ಶನ ಚಟುವಟಿಕೆಯನ್ನು ಆಯೋಜಿಸಲಾಗಿದೆ ಎಂದರು.
ನಗರದ ಬಂಜಾರಾ ಪ್ರೌಢ ಶಾಲೆಯಲ್ಲಿ ಶುಕ್ರವಾರದಂದು ಹಮ್ಮಿಕೊಂಡಿದ್ದ ‘ರಾಷ್ಟ್ರೀಯ ವಿಜ್ಞಾನ ದಿನ’ದ ನಿಮಿತ್ತ ಹಮ್ಮಿಕೊಂಡಿದ್ದ ‘ವಿಜ್ಞಾನ ವಸ್ತು ಪ್ರದರ್ಶನ’ ಕಾರ್ಯಕ್ರಮಕ್ಕೆ ಸಸಿಗೆ ನೀರನ್ನು ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು. ಭಾರತದ ರಾಷ್ಟ್ರೀಯ ವಿಜ್ಞಾನ ದಿನ ಒಂದು ವಿಶೇಷ ದಿನವಾಗಿದ್ದು, ವಿಜ್ಞಾನದ ವಿಸ್ಮಯಗಳ ಅನ್ವೇಷಣೆಗಳನ್ನು ಉತ್ತಮ ಪಡಿಸುವಲ್ಲಿ ವಿಜ್ಞಾನದ ಪಾತ್ರವನ್ನು ಸ್ಮರಿಸುವ ದಿನವಾಗಿದೆ ಎಂದರು.
ಈ ವೇಳೆ ಎಸ್.ಬಿ.ದ್ಯಾಬೇರಿಯವರು ಮಾತನಾಡುತ್ತ. ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸುವ ಮೂಲಕ ಆರೋಗ್ಯ ರಕ್ಷಣೆ, ಬಾಹ್ಯಾಕಾಶ ಸಂಶೋಧನೆ, ತಂತ್ರಜ್ಞಾನ ಮತ್ತು ಪರಿಸರದಂತಹ ಕ್ಷೇತ್ರಗಳಲ್ಲಿ ವೈಜ್ಞಾನಿಕ ಪ್ರಗತಿ ಮತ್ತು ಅವಿಷ್ಕಾರದಿಂದ ನಡೆಸಲ್ಪಡುವ ಭವಿಷ್ಯವನ್ನು ಖಚಿತಪಡಿಸುತ್ತೇವೆ. ಈ ದಿನವು ವಿಜ್ಞಾನ ಶಿಕ್ಷಣ ಮತ್ತು ಜಾಗೃತಿಯನ್ನು ಉತ್ತೇಜಿಸುತ್ತದೆ, ವ್ಯಕ್ತಿಗಳು ವೈಜ್ಞಾನಿಕ ವೃತ್ತಿಗಳನ್ನು ಅನ್ವೇಷಿಸಲು ಮತ್ತು ಸಮಾಜದ ಯೋಗಕ್ಷೇಮಕ್ಕೆ ಕೊಡುಗೆ ನೀಡಲು ಪ್ರೇರೇಪಿಸುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಎಸ್.ವ್ಹಿ.ದೇಶಪಾಂಡೆಯವರು ಮಾತನಾಡುತ್ತ. ೧೯೮೬ ರಿಂದ ಭಾರತವು ವೈಜ್ಞಾನಿಕ ಸಾಧನೆಗಳನ್ನು ಗುರುತಿಸಲು ಮತ್ತು ವಿಜ್ಞಾನದ ಪಾತ್ರದ ಬಗ್ಗೆ ಜಾಗೃತಿ ಮೂಡಿಸಲು ಈ ದಿನವನ್ನು ಆಚರಿಸಿಕೊಂಡು ಬರುತ್ತಿದೆ. ದೇಶದ ಅಭಿವೃದ್ಧಿಗೆ ವಿಜ್ಞಾನಿಗಳು ನೀಡಿದ ಕೊಡುಗೆಗಳನ್ನು ಇಂದು ಸ್ಮರಿಸಲಾಗುತ್ತದೆ. ಈ ಬಾರಿಯ ಅಂದರೆ ೨೦೨೫ರ ಧ್ಯೇಯವಾಕ್ಯವು ವಿಜ್ಞಾನದಲ್ಲಿ ಯುವ ಸಬಲೀಕರಣದ ಮೇಲೆ ಕೇಂದ್ರೀಕರಿಸುತ್ತದೆ ಎಂದರು.
ಈ ವೇಳೆಯಲ್ಲಿ ಶಾಲೆಯ ಶಿಕ್ಷಕರುಗಳುನ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಸ್ವಾಗತ ಆರ್.ಎನ್.ಬಕಾಟೆ, ವಂದನಾರ್ಪಣೆ ಪಿ.ಎಂ.ಕೌಲಗಿ, ನಿರೂಪಣೆ ಆರ್.ಎಸ್.ಹಿರೇಮಠ ನೆರವೇರಿಸಿದರು.

